ಕೇರಳ ರಾಜ್ಯ ಕೇರಳಂ ಆಗಿ ಮರುನಾಮಕರ ಮಾಡಲಾಗುತ್ತಿದೆ. ಇದರ ಬೆನ್ನಲ್ಲೇ ಇನ್ನೂ ಮೂರು ನಗರದ ಹೆಸರು ಬದಲಾವಣೆಗೆ ಘೋಷಣೆ ಮಾಡಲಾಗಿದೆ.ರಾಜಸ್ಥಾನ ಮುಖ್ಯಮಂತ್ರಿ ಭಜನ್ಲಾಲ್ ಶರ್ಮಾ ಮೂರು ನಗರಗಳ ಬದಲಾವಣೆ ಘೋಷಣೆ ಮಾಡಿದ್ದಾರೆ. ರಾಜಸ್ಛಾನದ ಮೂರು ನಗರಗಳ ಹೆಸರು ಬದಲಾವಣೆ ಮಾಡಲಾಗುವುದು ಎಂದಿದ್ದಾರೆ.

ಈ ಮೂರು ನಗರಗಳೆಂದರೆ:ಮೌಂಟ್ ಅಬು,ಜಹಝಪುರ್ ,ಕಾಮ.
ರಾಜಸ್ಥಾನದಲ್ಲಿರುವ ಏಕೈಕ ಪರ್ವತ ಪ್ರದೇಶಗಳ ಪ್ರವಾಸಿ ತಾಣ ಮೌಂಟ್ ಅಬು.ಮೌಂಟ್ ಅಬು ಹೆಸರನ್ನು ಅಬು ರಾಜ್ ಎಂದು ಮರುನಾಮಕರಣ ಮಾಡಲು ರಾಜಸ್ಥಾನ ಸರ್ಕಾರ ಮುಂದಾಗಿದೆ.

ಜಹಝಪುರ ರಜಪೂತರ ರಾಜರ ಪ್ರಮುಖ ಸ್ಥಳವಾಗಿತ್ತು. ರಾಜ ಮಹಾರಾಜರ ಕಾಲದಲ್ಲೇ ಇದು ರಜಪೂತರ ಆಳ್ವಿಕೆಯ ಪ್ರದೇಶವಾಗಿತ್ತು.ಇದೀಗ ರಾಜಸ್ಥಾನ ಸರ್ಕಾರ ಯಗ್ಯಾಪುರ್ ಎಂದು ಮರುನಾಮಕರಣ ಮಾಡುತ್ತಿದೆ. ಇನ್ನು ಕಾಮಾ ನಗರ, ಈ ನಗರದ ಹೆಸರನ್ನು ಕಾಮವನ ಎಂದು ಮರುನಾಮಕರಣ ಮಾಡಲಾಗುತ್ತಿದೆ.






