• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
February 2, 2026
in Top Story, ಕರ್ನಾಟಕ, ಜೀವನದ ಶೈಲಿ
0
ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Share on WhatsAppShare on FacebookShare on Telegram

 

ADVERTISEMENT

ಬೆಂಗಳೂರು: ಭಾರತದ ಕೃಷಿ ತಂತ್ರಯೋಜನೆ ಕೇವಲ ಉತ್ಪಾದನೆಯಿಂದ ಲಾಭದಾಯಕತೆಯತ್ತ ಮಾತ್ರವಲ್ಲದೆ ಇತ್ತೀಚೆಗೆ ಮಹತ್ವದ ಬದಲಾವಣೆಯನ್ನು ಕಂಡಿದ್ದು, ರೈತರನ್ನು ಉದ್ಯಮಿಗಳಾಗಿ ರೂಪಿಸುವ ಉದ್ದೇಶದಿಂದ ಮೌಲ್ಯವರ್ಧನೆ, ಬ್ರಾಂಡಿಂಗ್ ಮತ್ತು ಮಾರುಕಟ್ಟೆ ಸಂಪರ್ಕಗಳ ಮೇಲೆ ಹೆಚ್ಚು ಗಮನ ಹರಿಸಲಾಗುತ್ತಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ( Minister N. Chaluvarayaswamy) ಹೇಳಿದ್ದಾರೆ.

PM Modi on Videoviral :  ಮೋದಿ ಹೆಗಲ ಮೇಲೆ ಕೈ ಹಾಕಿದ ಈ ವ್ಯಕ್ತಿ ಯಾರು..? #pmnarendramodi

ಇಂದು ಕಬ್ಬನ್‌ಪಾರ್ಕ್‌ನಲ್ಲಿರುವ ಬ್ಯಾಂಡ್ ಸ್ಟ್ಯಾಂಡ್‌ನಲ್ಲಿ ಅಗ್ರಿ ವಾಕ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕೃಷಿ ಸಚಿವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರಂತರ ಪ್ರಯತ್ನಗಳಿಂದ ಕೃಷಿ ಉತ್ಪಾದನೆ ಸ್ಥಿರವಾಗಿ ಇತ್ತೀಚೆಗೆ ಹೆಚ್ಚಾಗಿದೆ. ಇದರಿಂದ ದೇಶವು ಇತರೆ ರಾಷ್ಟ್ರಗಳನ್ನು ಮೀರಿ ಮುನ್ನಡೆಯಲು ಸಾಧ್ಯವಾಗಿದೆ ಎಂದು ಅವರು ತಿಳಿಸಿದರು.

May be an image of one or more people and text

 

ಈಗ ನಮ್ಮ ಮುಂದಿರುವ ಸವಾಲುಗಳು ಕೇವಲ ಕೃಷಿ ಉತ್ಪಾದನೆ ಹೆಚ್ಚಳ ಮಾತ್ರವಲ್ಲ, ರೈತರು ತಮ್ಮ ಉತ್ಪನ್ನಗಳನ್ನು ಸಂಸ್ಕರಿಸಿ ಮೌಲ್ಯವರ್ಧನೆ ಮಾಡಿ ನೇರವಾಗಿ ಮಾರುಕಟ್ಟೆಗೆ ತಲುಪುವ ಮೂಲಕ ಹೆಚ್ಚು ಆದಾಯ ಗಳಿಸುವಂತಾಗಬೇಕು ಎಂದು ಹೇಳಿದರು.

May be an image of ‎one or more people and ‎text that says '‎= Nutio ಅಂತರಗಾಡ್ೀಯ ಅಂತರಗ್ಗಲೂ ಿಷೀಯ ತ್ಿಯರವಾಳ. ಮೈ್ಾಣ م ឆក ಅಲಾಜೆ ေ రెజ్య ಮೇಳ 2026, ಉತ್ಪಾದನೋತ್ತರ ಕ್ೃಷಿ ಏಿನಾಂ 로은 ય TiWalk ri Walk 2026 順 ನಡಿಗೆ ರೈತರ ನತ 02 as event Wal Farmers ಎಟೆ INTERNATIONAL TRADE TRADEFAIR-2026 IR-2026 ಫೆಬ್ರವರಿ .美. mok k التالن ODO FEBRUA ODO‎'‎‎

ಯುವ ರೈತರನ್ನು ಕೃಷಿ ಉದ್ಯಮಿಗಳಾಗಿ ಸಬಲೀಕರಿಸುವುದು ಸರ್ಕಾರದ ನೀತಿ ಚೌಕಟ್ಟಿನ ಪ್ರಮುಖ ಆದ್ಯತಾ ವಿಷಯವಾಗಿದೆ. ಈ ದೃಷ್ಟಿಕೋನದಿಂದ ಇದೇ ಫೆಬ್ರವರಿ 6ರಿಂದ ಫೆಬ್ರವರಿ 8ರವರೆಗೆ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿ ಗೇಟು ಮೈದಾನದಲ್ಲಿ ನಡೆಯಲಿರುವ ಕೃಷಿ ಮೇಳ ಆಯೋಜಿಸಲಾಗುತ್ತಿದೆ ಎಂದರು.

Special Session: ನೂರು ಜನ್ಮ ಎತ್ತಿದರೂ ವಾಲ್ಮೀಕಿ ಜನಾಂಗದ ನಾಯಕ ಆಗಲ್ಲನಾಗೇಂದ್ರ ವಿರುದ್ಧ ರೆಡ್ಡಿ ಆಕ್ರೋಶ

ಮೂರು ದಿನಗಳ ಈ ಕಾರ್ಯಕ್ರಮವು ರೈತರಿಗೆ ತಂತ್ರಜ್ಞಾನ, ಬ್ರಾಂಡಿಂಗ್ ಅವಕಾಶಗಳು ಮತ್ತು ರಾಷ್ಟ್ರೀಯ ಮಾರುಕಟ್ಟೆಗಳೊಂದಿಗೆ ಸಂಪರ್ಕ ಸಾಧಿಸುವ ವೇದಿಕೆಯಾಗಲಿದೆ. ರೈತ ಉತ್ಪಾದಕ ಸಂಸ್ಥೆಗಳು (FPOs) ಸೇರಿದಂತೆ 300ಕ್ಕೂ ಹೆಚ್ಚು ಮಳಿಗೆಗಳು ಆಧುನಿಕ ಯಂತ್ರೋಪಕರಣಗಳು, ಸಂಸ್ಕರಣಾ ತಂತ್ರಗಳು ಮತ್ತು ಕೃಷಿ ಮೌಲ್ಯ ಸರಪಳಿಯ ಸಂಪೂರ್ಣ ವ್ಯಾಪ್ತಿಯನ್ನು ಒಳಗೊಂಡ ನವೀನತೆಗಳನ್ನು ಪ್ರದರ್ಶಿಸಲಿವೆ ಎಂದರು.

May be an image of one or more people and text

ಈ ಕೃಷಿ ಮೇಳವನ್ನು ಫೆಬ್ರವರಿ 6ರಂದು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದು, ಸಮಾರೋಪ ಸಮಾರಂಭದಲ್ಲಿ ಕೇಂದ್ರ ಸಚಿವರು ಭಾಗವಹಿಸುವ ನಿರೀಕ್ಷೆಯಿದೆ. ಹಲವು ಸಚಿವರು, ಹಿರಿಯ ಅಧಿಕಾರಿಗಳು, ಕೃಷಿ ತಜ್ಞರು ಮತ್ತು ವಿಜ್ಞಾನಿಗಳು ಭಾಗವಹಿಸಿ, ಸಮಕಾಲೀನ ಕೃಷಿ ಪದ್ಧತಿಗಳು ಮತ್ತು ಮಾರುಕಟ್ಟೆ ಆಧಾರಿತ ಕೃಷಿಯ ಕುರಿತು ಮಾರ್ಗದರ್ಶನ ನೀಡಲಿದ್ದಾರೆ.

HD Kumaraswamy on Union Budget 2026ಕೇಂದ್ರ ಬಜೆಟ್‌ ಬಗ್ಗೆ ಕುಮಾರಸ್ವಾಮಿ ಖಡಕ್‌ ರಿಯಾಕ್ಷನ್‌..! #pratidhvani

ರೈತರಿಗೆ ವಿವಿಧ ಹವಾಮಾನ ಪರಿಸ್ಥಿತಿಗಳಲ್ಲಿ ವರ್ಷಪೂರ್ತಿ ಎದುರಾಗುವ ಸವಾಲುಗಳನ್ನು ಎದುರಿಸಲು ಹಾಗೂ ಮಾರುಕಟ್ಟೆ ಬೇಡಿಕೆಗೆ ಅನುಗುಣವಾಗಿ ಉತ್ಪಾದನೆಯನ್ನು ಹೊಂದಾಣಿಕೆ ಮಾಡಲು ಅಗತ್ಯ ಜ್ಞಾನ ಒದಗಿಸುವುದು ಕೃಷಿ ಇಲಾಖೆಯ ಉದ್ದೇಶವಾಗಿದೆ. ಈ ಕಾರ್ಯಕ್ರಮದಲ್ಲಿ ಎಲ್ಲ ಸಂಬಂಧಪಟ್ಟ ಹಿತಾಸಕ್ತಿದಾರರು ಭಾಗವಹಿಸಿ ಮೇಳವನ್ನು ಯಶಸ್ವಿಗೊಳಿಸಬೇಕೆಂದು ಸಚಿವ ಎನ್ ಚಲುವರಾಯ ಸ್ವಾಮಿ ಅವರು ಮನವಿ ಮಾಡಿದರು.

May be an image of tennis and text that says 'modca&eab ತತెಪೀయ ವಾಡಕ್ಮಳ20 ವಾಡೆಬ್ನು ಮೇಖ 2026 na 6D00 Cemeecn actctad "ន្នលពន india ಶ್ರೀ ಸಿದ್ದರಾಮಯ್ಯು ခမက ธตพช: ಕರ್ಕಾರ ತರಗ ទែកន្ Nutriio Te Flearch Heunich ಇಲಾಟೆ ಆಂ ಆಯಜಿಸು ಜಿಸು ೇಳ ၁ δ ಖ ತೆಜ್ಯ ಜೆಂಗಳುತ 이 6, 26,ಉತ ಉತ ರುವಾಗಿ 2 i For'

ಅಗ್ರಿ ವಾಕ್ ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತ ವೈ‌ಎಸ್.ಪಾಟೀಲ್, ಕೃಷಿ ಬೆಲೆ ಆಯೋಗದ ಆಯುಕ್ತ ಅರವಿಂದ ದಳವಾಯಿ, ಕೃಷಿ ಇಲಾಖೆ ನಿರ್ದೇಶಕ ಡಾ.ಜಿ.ಟಿ.ಪುತ್ರ, ಜಲಾನಯನ ಅಭಿವೃದ್ಧಿ ಇಲಾಖೆ ನಿರ್ದೇಶಕ ಬಂಥನಾಳ್, ಸೆಕಂಡರಿ ಅಗ್ರಿಕಲ್ಚರ್ ನಿರ್ದೇಶಕ ವೆಂಕಟರಮಣರೆಡ್ಡಿ ಸೇರಿದಂತೆ ಇತರೆ ಗಣ್ಯರು ಭಾಗವಹಿಸಿದ್ದರು.

Tags: FarmersKannadakannada newsKarnatakaKarnataka FarmersMinister N. Chaluvarayaswamyn chaluvarayaswamyPolitics
Previous Post

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

Next Post

Chakravarthy Chandrachud: ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು: ಆಗಿದ್ದೇನು..?

Related Posts

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?
Top Story

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

by ಪ್ರತಿಧ್ವನಿ
August 29, 2026
0

ಬೆಂಗಳೂರು, ಆ. 28: ಪಕ್ಷಕ್ಕೆ ಮುಜುಗರ ಉಂಟಾಗಬಾರದು ಎಂಬ ಕಾರಣಕ್ಕೆ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ಜತೆ ಚರ್ಚಿಸಿ...

Read moreDetails
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

August 29, 2026
ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

August 29, 2026
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
Next Post
Chakravarthy Chandrachud: ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು: ಆಗಿದ್ದೇನು..?

Chakravarthy Chandrachud: ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು: ಆಗಿದ್ದೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada