• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಒಮೈಕ್ರಾನ್ ಪತ್ತೆಯಾದ ಬಳಿಕ ಬೆಂಗಳೂರಿನಲ್ಲಿ ಲಸಿಕೆಗೆ ಹೆಚ್ಚಾಯ್ತು ಭಾರೀ ಬೇಡಿಕೆ

ಕರ್ಣ by ಕರ್ಣ
December 11, 2021
in ಕರ್ನಾಟಕ, ರಾಜಕೀಯ
0
ಒಮೈಕ್ರಾನ್ ಪತ್ತೆಯಾದ ಬಳಿಕ ಬೆಂಗಳೂರಿನಲ್ಲಿ ಲಸಿಕೆಗೆ ಹೆಚ್ಚಾಯ್ತು ಭಾರೀ ಬೇಡಿಕೆ
Share on WhatsAppShare on FacebookShare on Telegram

ಮೊದಲ ಹಾಗೂ ಎರಡನೇ ಅಲೆಯಲ್ಲಿ ಲಸಿಕೆಗೆ ತುಂಬಾ ಡಿಮ್ಯಾಂಡ್ ಜೋರಾಗಿತ್ತು. ಕೊರೊನಾದಿಂದ ಪಾರಾಗಲು ರಾತ್ರಿಯಿಂದಲೇ ಜನರು ಕ್ಯೂ ನಿಂತು ತೆಗೆದುಕೊಳ್ಳುತ್ತಿದ್ದರು. ಬಳಿಕ ಕೊರೋನಾ ಕಮ್ಮಿಯಾಯ್ತು ಅಂತ ಬಹುತೇಕ ಜನರು ಎಡರು ಡೋಸ್ ನಿರ್ಲಕ್ಷ್ಯ ಮಾಡಿದ್ದರು. ಆದರೆ ಅದ್ಯಾವಾಗ ಒಮಿಕ್ರಾನ್ ಚೊಚ್ಚಲ ಕೇಸ್ ಬೆಂಗಳೂರಿನಲ್ಲಿ ಪತ್ತೆಯಾಯಿತೋ ಆ ಕ್ಷಣದಿಂದಲೇ ಬೆಂಗಳೂರು ನಗರದಲ್ಲಿ ಲಸಿಕೆಗೆ ಬೇಡಿಕೆ ಹೆಚ್ಚಾಗಿದೆ.

ADVERTISEMENT

ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮನೆ ಬಾಗಿಲಿಗೆ ಹೋಗಿ ಮನವಿ ಮಾಡಿದರೂ ಕೋವಿಡ್–19 ಲಸಿಕೆ ಹಾಕಿಸಿಕೊಳ್ಳಲು ತಾತ್ಸಾರ ತೋರುತ್ತಿದ್ದವರು ಈಗ ಲಸಿಕೆ ಹಾಕಿಸಿಕೊಳ್ಳಲು ಲಸಿಕಾ ಕೇಂದ್ರಗಳತ್ತ ಮುಗಿಬೀಳುತ್ತಿದ್ದಾರೆ. ಇದು ಕೋವಿಡ್ ರೂಪಾಂತರಿ ಒಮೈಕ್ರಾನ್ ವೈರಾಣು ಸೃಷ್ಟಿಸಿರುವ ಭೀತಿ. ಸೋಂಕಿನಿಂದ ಗರಿಷ್ಠ ಸುರಕ್ಷತೆ ಪಡೆಯಲು ಪ್ರತಿಯೊಬ್ಬರೂ 2 ಡೋಸ್ ಲಸಿಕೆ ಪಡೆಯುವುದು ಅಗತ್ಯ ಎಂದು ತಜ್ಞರು ಹೇಳುತ್ತಾ ಬಂದಿದ್ದರು. ಆದರೆ ಜನರು ಮಾತ್ರ ಉದಾಸಿನ ಮಾಡಿದ್ದರು. ಇದರ ನಡುವೆ ಸರ್ಕಾರದ ಆದೇಶದಂತೆ ಎಲ್ಲಾ ಮಾಲ್, ಶಾಲೆ ಮುಂತಾದ ಕಡೆ ಓಡಾಡ ಬೇಕು ಎಂದರೆ ಎರಡು ಡೋಸ್ ಲಸಿಕೆ ಕಡ್ಡಾಯ ಮಾಡಿದ್ದು ಜನರಲ್ಲಿ ಮತ್ತಷ್ಟು ತಳಮಳ ಸೃಷ್ಟಿಸಿತು. ಹಾಗೂ ಓಮಿಕ್ರಾನ್ ಕೂಡ ಕಾಣಿಸಿಕೊಂಡ ಹಿನ್ನೆಲೆ ಲಸಿಕೆ ಹಾಕಿಸಿಕೊಳ್ಳದವರ ನಿದ್ದೆ ಗೆಡಿಸಿದೆ. ಇದುವರೆಗೂ ಒಂದೂ ಡೋಸ್ ಲಸಿಕೆ ತೆಗೆದುಕೊಳ್ಳದವರು ಸ್ವಯಂಪ್ರೇರಿತರಾಗಿ ಲಸಿಕೆ ಹಾಕಿಸಿಕೊಳ್ಳಲು ಮುಂದಾಗುತ್ತಿದ್ದಾರೆ.

ಇನ್ನು ದೇಶದಲ್ಲೇ ಒಮಿಕ್ರಾನ್ ಕೇಸ್ ಪತ್ತೆಯಾಗಿದ್ದು ಬೆಂಗಳೂರಲ್ಲಿ, ಹೀಗಾಗಿ ಲಸಿಕೆ ಪಡೆಯುವವರ ಸಂಖ್ಯೆ ಹೆಚ್ಚಾಗಿದೆ . ಡಿಸೆಂಬರ್ 2 ಬಳಿಕ ಬಿಬಿಎಂಪಿ ವ್ಯಾಪ್ತಿಯಲ್ಲಿ ಲಸಿಕೆ ಪಡೆಯುವವರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಡಿಸೆಂಬರ್ 2ರ ನಂತರದ ಒಂಬತ್ತು ದಿನಗಳ ಅವಧಿಯಲ್ಲಿ ನಗರದಲ್ಲಿ ಒಟ್ಟು 5 ಲಕ್ಷಕ್ಕೂ ಅಧಿಕ ಡೋಸ್ ಬಿಬಿಎಂಪಿಯಿಂದ ವಿತರಣೆಯಾಗಿದೆ. ಈ ಪೈಕಿ ಲಸಿಕೆ ಪಡೆಯುವಲ್ಲಿ ಯುವ ಜನರದ್ದೇ ಸಿಂಹಪಾಲು ಆಗಿದ್ದು, ಶೇಕಡಾ 40 ರಷ್ಟು ಮಂದಿ ಯುವಜನರು ಲಸಿಕೆ ಈ ಅವಧಿಯಲ್ಲಿ ಪಡೆದಿದ್ದಾರೆ. ಇನ್ನೂ ಕೆಲವರು ಮಾಲ್ , ಪಾರ್ಕ್ ಹಾಗೂ ಕೆಲಸಕ್ಕೆ ಹೋಗಬೇಕು ಎಂದರೆ ವ್ಯಾಕ್ಸಿನ್ ಬೇಕು ಅಂತ ಪಡೆಯಲು ಮುಂದಾಗಿದ್ದಾರೆ. ಲಸಿಕೆ ಪಡೆಯಲು ಜನರ ಉತ್ಸಾಹ ನೋಡಿ ಬಿಬಿಎಂಪಿ ವ್ಯಾಪ್ತಿಯಲ್ಲಿ 390 ಸರ್ಕಾರಿ ಹಾಗೂ 93 ಖಾಸಗಿ ಲಸಿಕಾ ಕೇಂದ್ರಳನ್ನು ಪಾಲಿಕೆ ತೆರೆದಿದೆ.

ಲಸಿಕೆ ಪಡೆಯುವಂತೆ ಉತ್ತೇಜಿಸಲು ನಟರ & ಕ್ರಿಕೆಟಿಗರ ಮೊರೆ ಹೋದ ಬಿಬಿಎಂಪಿ

ಇನ್ನು ಮೊದಲ ಡೋಸ್ ಲಸಿಕೆಯನ್ನು ನಗರದ ಶೇಖಡ 80ಕ್ಕೂ ಅಧಿಕ ಮಂದಿ ಪಡೆದುಕೊಂಡಿದ್ದಾರೆ. ಅದರೆ ಎರಡನೇ ಡೋಸ್ ಲಸಿಕೆ ಇನ್ನೂ ನಿರೀಕ್ಷಿತ ಮಟ್ಟದಲ್ಲಿ ನೀಡಲು ಪಾಲಿಕೆಗೆ ಸಾಧ್ಯವಾಗಿಲ್ಲ. ಇದಕ್ಕೆ ಜನರ ನಿರ್ಲಕ್ಷ್ಯ ಕೂಡ ಒಂದು ಕಾರಣ. ಇದೀಗ ಜನರು ಓಮಿಕ್ರಾನ್ ಭೀತಿಯಿಂದ ಲಸಿಕೆ ಪಡೆಯಲು ಮುಂದೆ ಬಂದಿದ್ದರೂ, ಮತ್ತಷ್ಟು ಜನರನ್ನು ಲಸಿಕೆ ಪಡೆಯುವಂತೆ ಉತ್ತೇಜಿಸಲು ಪಾಲಿಕೆ ಸ್ಯಾಂಡಲ್ವುಡ್ನ ಸ್ಟಾರ್ ನಟರ ಹಾಗೂ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಮೊರೆ ಹೋಗಿದೆ. ವ್ಯಾಕ್ಸಿನ್ ತಗೋಳಿ ಜೀವ ಊಳಿಸಿಕೊಳ್ಳಿ, ಮಾಸ್ಕ್ ಧರಿಸಿ .ಸಮಾಜಿಕ ಅಂತರ ಕಾಪಾಡಿಕೊಂಡು ಜೀವ ರಕ್ಷಿಸಿಕೋಳ್ಳಿ, ಎರಡು ಡೋಸ್ ವ್ಯಾಕ್ಸಿನ್ ಪಡೆದು ವೈರಸ್ ನಿಂದ ಮುಕ್ತಿ ಪಡೆಯಿರಿ ಎಂಬ ಉದ್ದೇಶದಿಂದ ವೈರಸ್ ತಡೆಗಟ್ಟಲು ವ್ಯಾಕ್ಸಿನ್ ಒಂದೇ ದಾರಿ ಎಂಬ ಸ್ಲೋಗನ್ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನಕ್ಕೆ ಪಾಲಿಕೆ ಮುಂದಾಗಿದೆ. ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ಕಿಚ್ಚ ಸುದೀಪ್ ರವರಿಂದ ಜಾಗೃತಿ ಗೆ ಒಪ್ಪಿಗೆ ಬಿಬಿಎಂಪಿ ಪಡೆದಿದೆ. ಇದರ ಜೊತೆಗೆ ಟೀಂ ಇಂಡಿಯಾ ಮುಖ್ಯ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಗೂ ಈ ಬಗ್ಗೆ ಮನವಿ ಮಾಡಿಕೊಂಡಿದ್ದು, ಅವರ ಒಪ್ಪಿಗೆಗಾಗಿ ಪಾಲಿಕೆ ಕಾಯುತ್ತಿದೆ.

ಒಟ್ಟಾರೆ ಜನರು ಲಸಿಕೆ ಪಡೆಯಲೇ ಬೇಕು ಎಂಬ ಉದ್ದೇಶ ಹೊಂದಿರುವ ಬಿಬಿಎಂಪಿ ಮೂರನೇ ಅಲೆ ಬಂದರೂ ತೀವ್ರತೆ ಕಡಿಮೆ ಇರಲಿದೆ ಎಂಬ ಲೆಕ್ಕವನ್ನು ಹಾಕಿಕೊಂಡಿದೆ. ಇದರ ನಡುವೆ ಜನರೇ ಸ್ವಯಂ ಪ್ರೇರಿತವಾಗಿ ಲಸಿಕೆ ಹಾಕಿಸಿಕೊಳ್ಳಲು ಮುಂದೆ ಬರುತ್ತಿದ್ದು, ಒಮಿಕ್ರಾನ್ ಪತ್ತೆಯಾದ ಬಳಿಕ 40% ದಷ್ಟು ಜನರು ಮೊದಲ ಹಾಗೂ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ. ಒಮಿಕ್ರಾನ್ ಹಾಗೂ ಸರ್ಕಾರದ ಎರಡು ಡೋಸ್ ಪಡೆದವರಿಗೆ ಮಾತ್ರ ಎಂಟ್ರಿ ಆದೇಶ ಜನರ ನಿದ್ದೆಗೆಡಿಸಿದ್ದು ಹೀಗಾಗಿ ಜನರು ಲಸಿಕೆ ಪಡೆಯುವತ್ತ ಚಿತ್ತ ಹರಿಸುತ್ತಿದ್ದಾರೆ.

Tags: Covid 19ಒಮೈಕ್ರಾನ್ಕರೋನಾಕೋವಿಡ್-19ಬಿಜೆಪಿಬೆಂಗಳೂರಿ
Previous Post

ಬಿಜೆಪಿ ಪಾಲಿಗೆ ವೋಟ್ ಬ್ಯಾಂಕ್ ಆಗಿ ಉಳಿದ ಕಾಶ್ಮೀರಿ ಪಂಡಿತರು: ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಟೀಕೆ

Next Post

ಕೇರಳ ವಿಶ್ವವಿದ್ಯಾಲಯಗಳ ಕುಲಪತಿ ನೇಮಕದಲ್ಲಿ ರಾಜಕೀಯ ಹಸ್ತಕ್ಷೇಪ : ಪಿಣಾರಾಯ್ ಸರ್ಕಾರಕ್ಕೆ ಖಡಕ್ ಪತ್ರ ಬರೆದ ರಾಜ್ಯಪಾಲ ಆರಿಫ್!

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025
Next Post
ಕೇರಳ ವಿಶ್ವವಿದ್ಯಾಲಯಗಳ ಕುಲಪತಿ ನೇಮಕದಲ್ಲಿ ರಾಜಕೀಯ ಹಸ್ತಕ್ಷೇಪ : ಪಿಣಾರಾಯ್ ಸರ್ಕಾರಕ್ಕೆ ಖಡಕ್ ಪತ್ರ ಬರೆದ ರಾಜ್ಯಪಾಲ ಆರಿಫ್!

ಕೇರಳ ವಿಶ್ವವಿದ್ಯಾಲಯಗಳ ಕುಲಪತಿ ನೇಮಕದಲ್ಲಿ ರಾಜಕೀಯ ಹಸ್ತಕ್ಷೇಪ : ಪಿಣಾರಾಯ್ ಸರ್ಕಾರಕ್ಕೆ ಖಡಕ್ ಪತ್ರ ಬರೆದ ರಾಜ್ಯಪಾಲ ಆರಿಫ್!

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada