• Home
  • About Us
  • ಕರ್ನಾಟಕ
Tuesday, July 15, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕಾಂಗ್ರೆಸ್ನಲ್ಲಿ ಮತ್ತೆ ಶುರುವಾಯ್ತು ಮುಂದಿನ ಸಿಎಂ ವಾರ್; ಈ ಸಲ ಕಿಡಿ ಹಚ್ಚಿದ್ದೇ ಸಿದ್ದರಾಮಯ್ಯ; ಏನಿದು ಕಥೆ?

ನಚಿಕೇತು by ನಚಿಕೇತು
November 13, 2021
in ಕರ್ನಾಟಕ, ರಾಜಕೀಯ
0
ಇಡೀ ಸರ್ಕಾರ RSS ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ – ಸಿದ್ದರಾಮಯ್ಯ
Share on WhatsAppShare on FacebookShare on Telegram


ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತವರು ಜಿಲ್ಲೆಯಲ್ಲೇ ಗೆಲುವಿನ ನಗೆ ಬೀರುತ್ತಿದ್ದಂತೆ ಕಾಂಗ್ರೆಸ್ನಲ್ಲಿ ಮತ್ತೆ ಮುಂದಿನ ಸಿಎಂ ಜಪ ಆರಂಭವಾಗಿದೆ. ಪರೋಕ್ಷವಾಗಿ ಸಿಎಂ ಗಾದಿ ಮೇಲೆ ಆಸೆ ಇದೆ ಎಂದು ಸಂದೇಶ ರವಾನಿಸುವ ಮೂಲಕ ಮುಖ್ಯಮಂತ್ರಿ ವಿಚಾರದ ಶೀತಲ ಸಮರಕ್ಕೆ ತುಪ್ಪ ಸುರಿದಿದ್ದಾರೆ ಸಿದ್ದರಾಮಯ್ಯ.

ADVERTISEMENT

ಸಿದ್ದರಾಮಯ್ಯ ಆಸೆಯ ಸಂದೇಶ ನೀಡಿದ ಬೆನ್ನಲ್ಲೇ ವಿರೋಧಿ ಬಣಗಳು ಫುಲ್ ಅಲರ್ಟ್ ಆಗಿವೆ. ಹೌದು, ಕಾಂಗ್ರೆಸ್ನಲ್ಲಿ ಮತ್ತೆ ಮುಂದಿನ ಸಿಎಂ ಜಪ ಆರಂಭವಾಗಿದೆ. ಸಿಎಂ ಗಾದಿ ಮೇಲೆ ಆಸೆ ಇದೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಸಂದೇಶ ಹೊರಡಿಸಿದ್ದಾರೆ.

ಸಿದ್ದು ಸಿಎಂ ಸ್ಟೋರಿಗೆ ವಿರೋಧಿ ಬಣಗಳು ಎಚ್ಚೆತ್ತುಕೊಂಡಿದ್ದಾರೆ. ಹೇಗಾದರೂ ಸಿದ್ದರಾಮಯ್ಯರನ್ನು ಮುಂದಿನ ಸಿಎಂ ಮಾಡಬಾರದು ಎಂದು ರಣತಂತ್ರ ಹೆಣೆಯುತ್ತಿದ್ದಾರೆ. ಸಾಕಷ್ಟೂ ಸಂಚಲನ ಸೃಷ್ಟಿಸಿದ್ದ ಕಾಂಗ್ರೆಸ್ನ ಮುಂದಿನ ಸಿಎಂ ವಿಚಾರಕ್ಕೆ ಖುದ್ದು ಹೈಕಮಾಂಡ್ ತೆರೆ ಎಳೆದಿತ್ತು. ಈ ವಿಚಾರ ಚರ್ಚೆ ಮಾಡದಂತೆ ರಾಜ್ಯ ನಾಯಕರಿಗೆ ಖಡಕ್ ಸಂದೇಶ ರವಾನಿಸಿತ್ತು. ಆಗ ಕೊಂಚ ಸೈಲೆಂಟ್ ಆಗಿದ್ದ ಮುಂದಿನ ಸಿಎಂ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.

ಸಿಎಂ ತವರು ಜಿಲ್ಲೆಯಲ್ಲಿ ಕಾಂಗ್ರೆಸ್ ಗೆದ್ದ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಮುಂದಿನ ಸಿಎಂ ಚರ್ಚೆ ಶುರುವಾಗಿದೆ. ನನಗೆ ಇನ್ನೂ ಸಿಎಂ ಆಗುವ ಆಸೆ ಇದೆ ಎಂದು ಹೇಳಿದ ಸಿದ್ದರಾಮಯ್ಯ ಹೇಳಿಕೆ ಈಗ ಕೈ ಒಳಗಿನ ಸಿಎಂ ವಿಚಾರದ ಶೀತಲ ಸಮರಕ್ಕೆ ತುಪ್ಪ ಸುರಿದಂತಾಗಿದೆ.


ನಿಲ್ಲದ ಸಿದ್ದರಾಮಯ್ಯ ‘ಸಿಎಂ ಕಹಾನಿ’

ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಗಾದಿಗೇರುವ ರೇಸ್ ನಿಲ್ಲುವಂತೆ ಕಾಣ್ತಿಲ್ಲ. ಮತ್ತೆ ದಾಳ ಉರುಳಿಸಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿ ಸ್ಥಾನದ ಮೇಲಿನ ಆಸೆ ಜೀವಂತವಾಗಿಸಿದ್ದಾರೆ. ಹಾನಗಲ್ನಲ್ಲಿ ಗೆಲ್ಲುತ್ತಿದ್ದಂತೆ ಮತ್ತೆ ಸಿಎಂ ಕುರ್ಚಿ ಮೇಲೆ ಸಿದ್ದು ಕಣ್ಣುಹಾಕಿದ್ದು, ಪರೋಕ್ಷವಾಗಿ ಸಿಎಂ ಗಾದಿಯ ಮೇಲಿನ ಕನಸಿನ ಸಂದೇಶ ರವಾನಿಸಿದ್ದಾರೆ. ಇತ್ತ ಹೀಗೆ ಸಿದ್ದು ಸಿಎಂ ಕಹಾನಿ ಮುನ್ನೆಲೆಗೆ ಬರುತ್ತಿದ್ದಂತೆಯೇ ವಿರೋಧಿ ಬಣಗಳು ಫುಲ್ ಅಲರ್ಟ್ ಆಗಿವೆ. ತಂತ್ರ ರಣತಂತ್ರಕ್ಕೂ ಇದು ಸಾಕ್ಷಿಯಾಗ್ತಿದೆ. ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ ಸಿಎಂ ಸ್ಟೋರಿ ಮತ್ತೆ ಕಿಚ್ಚು ಹಚ್ಚಿದೆ.

ಶೀತಲ ಸಮರಕ್ಕೆ ಪೆಟ್ರೋಲ್ ಸುರಿದ ಸಿದ್ದು ನಡೆಯಿಂದ ಬಣಗಳು ಕಂಗಾಲಾಗಿವೆ. ಡಿಕೆಶಿ, ಖರ್ಗೆ, ಪರಮೇಶ್ವರ್, ಸಿದ್ದು ಬಣಗಳ ನಡುವೆ ಪೈಪೋಟಿ ಶುರುವಾಗಿದೆ. ಅದಕ್ಕೆ ಮುಂದೆ ನಾವೇ ಅಧಿಕಾರಕ್ಕೆ ಬರುತ್ತೇವೆ, 10 ಕೆಜಿ ಅಕ್ಕಿ ಕೊಡುತ್ತೇವೆ, ನಾನು ಸಿಎಂ ಆಸೆ ಬಿಟ್ಟಿದ್ದೇನಾ? ಅದನ್ನ ವರಿಷ್ಠರು ತೀರ್ಮಾನಿಸ್ತಾರೆ ಎಂದು ಸಿದ್ದರಾಮಯ್ಯ ನೀಡಿದ ಹೇಳಿಕೆ ಈಗ ಇದಕ್ಕೆ ಸಾಕ್ಷಿಯಾಗಿದೆ.

ಹೈಕಮಾಂಡ್ ಸೂಚನೆ ನಡುವೆಯೂ ಮುಂದಿನ ಸಿಎಂ ವಿಚಾರ ರಾಜ್ಯ ಕಾಂಗ್ರೆಸ್ ಮನೆಯಲ್ಲಿ ಪದೇ ಪದೇ ಪ್ರತಿಧ್ವನಿಸಿ ಕಿಚ್ಚು ಹಚ್ಚುತ್ತಿದೆ. ಭವಿಷ್ಯದ ಮುಖ್ಯಮಂತ್ರಿ ವಿಚಾರದಲ್ಲಿ ಮನೆಯೊಂದು ನಾಲ್ಕು ಬಾಗಿಲಾಗಿರುವ ಕೈ ಮನೆಯಲ್ಲಿ ಸಿದ್ದು ಸಂದೇಶ ಸಾಕಷ್ಟೂ ಸಂಚಲ ಸೃಷ್ಟಿಸಿದೆ.

ಈ ಹಿಂದೆ ಮುಖ್ಯಮಂತ್ರಿ ಹುದ್ದೆ ಕುರಿತ ಸಂಘರ್ಷಕ್ಕೆ ಅಂತ್ಯ ಹಾಡಬೇಕು. ಪಕ್ಷದ ಸಂಘಟನೆಗೆ ಒತ್ತು ಕೊಡುವುದರ ಜತೆಗೆ ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ ಪ್ರಬಲ ಹೋರಾಟ ನಡೆಸಬೇಕು ಎಂದು ರಾಜ್ಯ ಕಾಂಗ್ರೆಸ್‌ ನಾಯಕರಿಗೆ ಹೈಕಮಾಂಡ್ ತಾಕೀತು ಮಾಡಿತ್ತು. ಸಿದ್ದರಾಮಯ್ಯನವರೇ ಮುಂದಿನ ಮುಖ್ಯಮಂತ್ರಿ ಎಂದು ಹೇಳಿಕೆ ನೀಡಿದ್ದ ಜಮೀರ್ ಅಹಮದ್ ಖಾನ್ ಮತ್ತು ರಾಘವೇಂದ್ರ ಹಿಟ್ನಾಳ್ ಮತ್ತಿತರಿಗೆ ಪರೋಕ್ಷ ಎಚ್ಚರಿಕೆ ನೀಡಿತ್ತು.

ಹಾಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರೇ ಮುಂದಿನ ಸಿಎಂ ಆಗಬೇಕೆಂದು ಶಾಸಕರಾದ ಜಮೀರ್‌ ಅಹ್ಮದ್‌ ಖಾನ್‌, ರಾಘವೇಂದ್ರ ಹಿಟ್ನಾಳ್‌ ಹೇಳಿಕೆ ನೀಡಿದ್ದರು. ಸಿದ್ದರಾಮಯ್ಯ ಆಪ್ತ ವಲಯದ ಇನ್ನೂ ಕೆಲವರು ಇದಕ್ಕೆ ದನಿಗೂಡಿಸಿದ್ದರು. ಈ ಹಿನ್ನೆಲೆಯಲ್ಲಿ ಹೈಕಮಾಂಡ್‌ ಮಧ್ಯ ಪ್ರವೇಶಿಸಿದೆ.

ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ನಮ್ಮ ಪ್ರಥಮ ಆದ್ಯತೆಯಾಗಿದೆ, ಸಾಮೂಹಿಕ ನಾಯಕತ್ವದಲ್ಲಿ ನಾನು ನಂಬಿಕೆಯಿಟ್ಟಿದ್ದೇನೆ, ಮುಂದಿನ ಸಿಎಂ ಯಾರೂ ಎಂಬ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ, ನಮಗೆ ಪಕ್ಷದ ಶಿಸ್ತು ಪ್ರಾಥಮಿಕವಾಗಿದೆ, ಇದನ್ನು ಎಲ್ಲಾ ನಾಯಕರು ಅರ್ಥ ಮಾಡಿಕೊಳ್ಳಬೇಕೆಂದು ಹೇಳಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪರೋಕ್ಷವಾಗಿ ಸಿದ್ದರಾಮಯ್ಯ ಬಣದ ವಿರುದ್ಧ ಕೆಂಡಕಾರಿದ್ದರು.

Tags: BJPCongress PartyCovid 19internaldisputesnextcmಕರೋನಾಕೋವಿಡ್-19ಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಖಾಸಗಿ ಶಾಲೆಗಳಿಗೆ ಹೆಚ್ಚುವರಿ ಶುಲ್ಕ ವಾಪಸ್ ನೀಡಲು ಆದೇಶ : ಸರ್ಕಾರದ ಈ ಆದೇಶಕ್ಕೆ ಮಣಿಯುತ್ತಾ ಖಾಸಗಿ ಶಾಲೆಗಳು..!

Next Post

ಯಾವ ಕಾರಣಕ್ಕೂ ವಿಧಾನ ಪರಿಷತ್‌ ಚುನಾಚಣೆಗೆ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ : G.T.Devegowda

Related Posts

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ
Top Story

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

by ಪ್ರತಿಧ್ವನಿ
July 14, 2025
0

ಸರ್ಕಾರಿ ಸಹಾಯಧನ, ಪರಿಹಾರ ಧನ, ಆರ್ಥಿಕ ಸೌಲಭ್ಯಗಳನ್ನು ಸಾಲಕ್ಕೆ ಹೊಂದಾಣಿಕೆ ಮಾಡಿದರೆ, ಬ್ಯಾಂಕ್ ಮೇಲೆ ಕ್ರಮ ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ಯಾಂಕರ್ಸ್‍ಗಳೊಂದಿಗೆ ಸಚಿವ ಸಂತೋಷ ಲಾಡ್ ಸಭೆ...

Read moreDetails

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

July 14, 2025
B Sarojadevi: ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಡಿಸಿಎಂ ಸಂತಾಪ..!!

B Saroja Devi: ಮಲ್ಲಮ್ಮನ ಪವಾಡ ನಿಲ್ಲಿಸಿದ ಕಲಾ ಸರಸ್ವತಿ..

July 14, 2025

B Saroja Devi: ಡಾ‌ ರಾಜ್‌, ಎಂಜಿಆರ್, ಎನ್‌ಟಿ ಆರ್‌ ಜೊತೆ ನಟಿಸಿದ ಬಹುಭಾಷಾ ನಟಿಅಭಿನಯ ಸರಸ್ವತಿ ಬಿ. ಸರೋಜಾ ದೇವಿ ಇನ್ನಿಲ್ಲ..!

July 14, 2025

DK Shivakumar: ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ..

July 14, 2025
Next Post
ಯಾವ ಕಾರಣಕ್ಕೂ ವಿಧಾನ ಪರಿಷತ್‌ ಚುನಾಚಣೆಗೆ  ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ : G.T.Devegowda

ಯಾವ ಕಾರಣಕ್ಕೂ ವಿಧಾನ ಪರಿಷತ್‌ ಚುನಾಚಣೆಗೆ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ : G.T.Devegowda

Please login to join discussion

Recent News

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ
Top Story

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

by ಪ್ರತಿಧ್ವನಿ
July 14, 2025
Top Story

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

by ಪ್ರತಿಧ್ವನಿ
July 14, 2025
B Sarojadevi: ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಡಿಸಿಎಂ ಸಂತಾಪ..!!
Top Story

B Saroja Devi: ಮಲ್ಲಮ್ಮನ ಪವಾಡ ನಿಲ್ಲಿಸಿದ ಕಲಾ ಸರಸ್ವತಿ..

by ಪ್ರತಿಧ್ವನಿ
July 14, 2025
Top Story

B Saroja Devi: ಡಾ‌ ರಾಜ್‌, ಎಂಜಿಆರ್, ಎನ್‌ಟಿ ಆರ್‌ ಜೊತೆ ನಟಿಸಿದ ಬಹುಭಾಷಾ ನಟಿಅಭಿನಯ ಸರಸ್ವತಿ ಬಿ. ಸರೋಜಾ ದೇವಿ ಇನ್ನಿಲ್ಲ..!

by ಪ್ರತಿಧ್ವನಿ
July 14, 2025
Top Story

DK Shivakumar: ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ..

by ಪ್ರತಿಧ್ವನಿ
July 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

July 14, 2025

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

July 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada