• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

DK Shivakumar: ಗುತ್ತಿಗೆದಾರಾರ ನೋವು ಅರ್ಥವಾಗುತ್ತದೆ, ಆದರೆ ಯಾರೂ ಸರ್ಕಾರಕ್ಕೆ ಬೆದರಿಕೆ ಹಾಕಲು ಸಾಧ್ಯವಿಲ್ಲ..!!

ಪ್ರತಿಧ್ವನಿ by ಪ್ರತಿಧ್ವನಿ
October 19, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಕಮಿಷನ್ ವಿಚಾರವಾಗಿ ದೂರು ದಾಖಲಿಸಲು ಹೇಳಿದ್ದೇನೆ. ಬೇರೆ ಇಲಾಖೆಗಳ ಬಗೆಗಿನ ಅಹವಾಲು ಸಲ್ಲಿಸಲು ಸಿಎಂ ಭೇಟಿಗೆ ಸಮಯ ಕೊಡಿಸುವೆ, ವಿಪಕ್ಷದಲ್ಲಿ ಇದ್ದಾಗಲೇ ಎಚ್ಚರಿಸಿದ್ದೆ.

ADVERTISEMENT

“ಗುತ್ತಿಗೆದಾರರ ನೋವು ನಮಗೆ ಅರ್ಥವಾಗುತ್ತದೆ, ಆದರೆ ಯಾರೂ ಸರ್ಕಾರಕ್ಕೆ ಬೆದರಿಕೆ ಹಾಕಲು ಸಾಧ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಡಿಸಿಎಂ ಡಿ ಕೆ ಶಿವಕುಮಾರ್ ಅವರು ಕುಮಾರಪಾರ್ಕ್ ಸರಕಾರಿ ನಿವಾಸದಲ್ಲಿ ಮಾಧ್ಯಮಗಳಿಗೆ ಶನಿವಾರ ರಾತ್ರಿ ಪ್ರತಿಕ್ರಿಯೆ ನೀಡಿದರು.

“ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರ ಸರ್ಕಾರದ ಅವಧಿಯಲ್ಲಿ ಬಜೆಟ್ ಮಿತಿಯನ್ನು ಮೀರಿ ಹೆಚ್ಚು ಕೆಲಸಗಳನ್ನು ಕೊಟ್ಟಿದ್ದಾದ್ದರು. ಇದರಿಂದ ಸಮಸ್ಯೆ ಹೆಚ್ಚಾಗಿದೆ. ನಾನು ನನ್ನ ಕೈಲಾದಷ್ಟು ಬಿಲ್ ಪಾವತಿಸಿದ್ದೇನೆ. ಗುತ್ತಿಗೆದಾರರು ಎಂದರೆ ಇಲ್ಲಿ ಬಂದಿರುವವರು ಮಾತ್ರ ಅಲ್ಲ. ರಾಜ್ಯದಾದ್ಯಂತ ಇದ್ದಾರೆ. ನಮ್ಮ ಇಲಾಖೆಯಲ್ಲಿ ಯೋಜನೆಗಳ ಬಿಲ್ ಬಾಕಿ ನೀಡಲು 50-100 ಕೋಟಿ ಇರುತ್ತದೆ. ಹಣಕಾಸು ಇಲಾಖೆ ನಮಗೆ ನೀಡುವ ಹಣವನ್ನು ನಿಮಗೆ ನೀಡುತ್ತೇವೆ, ನೀವೇ ಯಾವ ಗುತ್ತಿಗೆದಾರರಿಗೆ ಹಂಚಿ ಎಂದು ಹೇಳಿದೆ. ಅವರು ಆ ರೀತಿ ಆಗುವುದಿಲ್ಲ” ಎಂದು ತಿಳಿಸಿದರು.

“ಉದಾಹರಣೆಗೆ ನನ್ನದೇ ನೀರಾವರಿ ಇಲಾಖೆಯಲ್ಲಿ ಸುಮಾರು 200 ಕೋಟಿಯಷ್ಟು ಅನುದಾನವಿದೆ. ಆದರೆ 17, 000 ಕೋಟಿಯಷ್ಟು ಬಿಲ್ ಬಾಕಿಯಿದೆ. ನಮ್ಮ ಬಳಿ ಇರುವ 200 ಕೋಟಿ ಹಣದಲ್ಲಿ ಯಾರ ಬಾಕಿ ಬಿಲ್ ಗಳನ್ನು, ಯಾವ ಲೆಕ್ಕದಲ್ಲಿ ತೀರಿಸಲಿ. ಬಾಕಿ ಬಿಲ್ ಗಳನ್ನು ತೀರಿಸಿ ಎಂದು ಯಾವ ಅಧಿಕಾರಿಗೆ ಸೂಚನೆ ನೀಡಲಿ?” ಎಂದರು.

ನೂತನ ವ್ಯವಸ್ಥೆ ತರಲು ಮುಂದಾಗಿದ್ದೇನೆ

“ಸಣ್ಣಪುಟ್ಟ ಗುತ್ತಿಗೆದಾರರಿಗೆ 15 ಲಕ್ಷ 20 ಲಕ್ಷ ಒಂದು ಕೋಟಿ ಬಿಲ್ ನೀಡಬೇಕಾಗಿದೆ. ದೊಡ್ಡ ದೊಡ್ಡ ಗುತ್ತಿಗೆದಾರರಿಗೆ 2,000 ಕೋಟಿ ರೂಪಾಯಿಗಳಷ್ಟು ಬಿಲ್ ಬಾಕಿಯಿದೆ. ಇವರೆಲ್ಲಾ ಸಾಕಷ್ಟು ಒತ್ತಡ ತರುತ್ತಿದ್ದಾರೆ. ಎಲ್ಲರ ಬೇಡಿಕೆಗಳನ್ನು ಈಡೇರಿಸಲು ಆಗುತ್ತಿಲ್ಲ. ಆದ ಕಾರಣಕ್ಕೆ ನೂತನ ವ್ಯವಸ್ಥೆ ತರಲು ಹೊರಟಿದ್ದೇನೆ‌. ಇದರ ಬಗ್ಗೆ ಶೀಘ್ರದಲ್ಲೇ ತಿಳಿಸುತ್ತೇನೆ” ಎಂದು ಹೇಳಿದರು.

ಕಮಿಷನ್ ವಿಚಾರವಾಗಿ ದೂರು ನೀಡಿ ಎಂದಿದ್ದೇನೆ

“ಗುತ್ತಿಗೆದಾರರು ಕಮಿಷನ್ ವಿಚಾರವಾಗಿ ಕೇಳಿದರು. ಇದರ ಬಗ್ಗೆ ದೂರು ನೀಡಿ, ಇದರ ಬಗ್ಗೆ ತನಿಖೆ ನಡೆಸೋಣ ಎಂದು ಅವರಿಗೆ ಹೇಳಿದ್ದೇನೆ. ಬಿಲ್ ಗಳ ಬಿಡುಗಡೆಗೆ ಕಮಿಷನ್ ಬೇಡಿಕೆ ವಿಚಾರವಾಗಿ ಯಾರು ಸಹ ಸರ್ಕಾರಕ್ಕೆ ಬೆದರಿಕೆ ಹಾಕಲು ಸಾಧ್ಯವಿಲ್ಲ. ಕಮಿಷನ್ ವಿಚಾರದ ಬಗ್ಗೆ ಆರೋಪಿಸಿಲ್ಲ ಎಂದು ಗುತ್ತಿಗೆದಾರರು ಈಗ ಹೇಳುತ್ತಿದ್ದಾರೆ” ಎಂದು ಅವರು ಹೇಳಿದರು.

ಸಿಎಂ ಭೇಟಿಗೆ ಸಮಯ ಕೊಡಿಸುವೆ, ಬೇರೆ ಇಲಾಖೆಗಳ ಬಗ್ಗೆ ತಮ್ಮ ಅಹವಾಲು ಹೇಳಿಕೊಳ್ಳಲಿ:

“ಪಾಲಿಕೆ ವ್ಯಾಪ್ತಿಯಲ್ಲಿ ಶೇ.10 ರಷ್ಟು ಬಾಕಿ ಬಿಲ್ ಮೊತ್ತವನ್ನು ಬಿಡುಗಡೆ ಮಾಡಿ ಎಂದು ಮನವಿ ಮಾಡಿದ್ದಾರೆ. ಕಾನೂನಾತ್ಮಕವಾಗಿ ಹೇಗೆ ಕೆಲಸ ಮಾಡಬಹುದೆಂದು ನಾನು ಆಲೋಚಿಸುತ್ತೇನೆ. ಕಾಮಗಾರಿಗಳ ಬಗೆಗಿನ ದೂರುಗಳು ಹಾಗೂ ತನಿಖೆ ವರದಿಗಳನ್ನು ಆಧರಿಸಿ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಇವರುಗಳಿಗೆ ಏನೇನು ಸಹಾಯ ಮಾಡಿಕೊಂಡು ಬರಬೇಕು ಅದೆಲ್ಲವನ್ನು ನಾನು ಮಾಡಿದ್ದೇನೆ. ಇದರ ಬಗ್ಗೆ ಅವರಿಗೂ ಅರಿವಿದೆ. ಇತರೆ ಇಲಾಖೆಗಳಲ್ಲಿ ಒಂದಷ್ಟು ಸಮಸ್ಯೆಗಳಾಗಿವೆ ಎಂದು ಹೇಳುತ್ತಿದ್ದಾರೆ. ಮುಖ್ಯಮಂತ್ರಿಗಳ ಭೇಟಿಗೆ ಸೂಕ್ತ ದಿನಾಂಕವನ್ನು ನಿಗದಿ ಮಾಡಿ ಕೊಡುತ್ತೇನೆ. ಅವರ ಬಳಿಯೂ ಸಮಸ್ಯೆಗಳು ಹಾಗೂ ಮನವಿಗಳನ್ನು ತಿಳಿಸಲಿ” ಎಂದರು.

ವಿಪಕ್ಷದಲ್ಲಿದ್ದಾಗಲೇ ಗುತ್ತಿಗೆದಾರರಿಗೆ ಎಚ್ಚರಿಸಿದ್ದೆ

ವಿಪಕ್ಷದಲ್ಲಿದ್ದಾಗ ಬಜೆಟ್ ಮೊತ್ತಕ್ಕಿಂತ ಹೆಚ್ಚುವರಿ ಕಾಮಗಾರಿಗಳನ್ನ ತೆಗೆದುಕೊಳ್ಳಲಾಗುತ್ತಿದೆ ಎಂದು ನೀವು ಎಚ್ಚರಿಸಿದ್ದಿರಿ ಎಂದು ಕೇಳಿದಾಗ, “ನಾನು ವಿರೋಧ ಪಕ್ಷದಲ್ಲಿದ್ದಾಗ ಎಚ್ಚರಿಕೆ ನೀಡಿದ್ದೆ. ಬಜೆಟ್ ಇಲ್ಲ, ದುಡ್ಡಿಲ್ಲ, ಯಾವ ಗುತ್ತಿಗೆದಾರರು ಸಹ ಕೆಲಸಗಳನ್ನು ತೆಗೆದುಕೊಳ್ಳಬೇಡಿ. ಯಾರಿಗೂ ಸಹ ಹಣ ಸಿಗುವುದಿಲ್ಲ ಎಂದು ಎಚ್ಚರಿಸಿದ್ದೆ. ಜೊತೆಗೆ ನಾನು ಇದಕ್ಕೆ ಹೊಣೆಯಾಗುವುದಿಲ್ಲ ಎಂದೂ ತಿಳಿಸಿದ್ದೆ. ಮಾಧ್ಯಮಗಳು ಈ ಹೇಳಿಕೆಯನ್ನು ಬೇಕಾದರೆ ತೆಗೆದು ನೋಡಬಹುದು” ಎಂದರು.

ಜನವರಿ ವೇಳೆಗೆ ಬಾಕಿ ಬಿಲ್ ಮೊತ್ತಗಳನ್ನ ಬಿಡುಗಡೆ ಮಾಡುವುದಾಗಿ ನೀವು ಭರವಸೆ ನೀಡಿದ್ದೀರಿ ಎನ್ನುವ ಬಗ್ಗೆ ಕೇಳಿದಾಗ, “ನಮ್ಮ ಆರ್ಥಿಕ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಮಾಡಲಾಗುವುದು. ಕೆಲಸ ಮಾಡಿರುವವರಿಗೆ ಹಣ ನೀಡಲೇಬೇಕು. ಆರ್ಥಿಕ ಇಲಾಖೆಯಿಂದ ಹಣ ಬಂದಾಗ ಮಾತ್ರ ನಾವೇನಾದರೂ ಮಾಡಲು ಸಾಧ್ಯ” ಎಂದರು.

ಡಿಸೆಂಬರ್ ವೇಳೆಗೆ ಬಾಕಿ ಬಿಲ್ ಮೊತ್ತ ಬಿಡುಗಡೆಯಾಗದಿದ್ದರೆ ಹೈಕಮಾಂಡ್ ಭೇಟಿ ಮಾಡಿ ದೂರು ನೀಡುವ ಬಗ್ಗೆ ಗುತ್ತಿಗೆದಾರರ ಹೇಳಿಕೆ ಬಗ್ಗೆ ಕೇಳಿದಾಗ, “ನಾನೇ ಅವರಿಗೆ ಸಮಯ ನಿಗದಿ ಮಾಡಿ ಕೊಡುತ್ತೇನೆ, ದೂರು ನೀಡಲಿ” ಎಂದರು.

Tags: DCM DK ShivakumarDK Shivakumardk shivakumar bengalurudk shivakumar big stepdk shivakumar bookdk shivakumar cm newsdk shivakumar eventdk shivakumar in jp parkdk shivakumar interviewdk shivakumar jaildk shivakumar latestdk shivakumar memoriesdk shivakumar newsdk shivakumar on rssdk shivakumar potholesdk shivakumar rss songdk shivakumar speaksdk shivakumar speechdk shivakumar today newsdk shivakumar walkdk shivakumar wifedy cm dk shivakumar
Previous Post

DK Shivakumar: ಚಿತ್ರರಂಗದ ಉತ್ತೇಜನಕ್ಕೆ ಅಗತ್ಯ ನೆರವು ನೀಡಲು ಸರ್ಕಾರ ಬದ್ಧ

Next Post

ನೀಲಕಂಠ ಫಿಲಂಸ್ ಹಾಗೂ ಧರ್ಮಶ್ರೀ ಎಂಟರ್ ಪ್ರೈಸಸ್ ನಿರ್ಮಾಣದ ವಿಭಿನ್ನ ಶೀರ್ಷಿಕೆಯ “4.30 – 6 ಮುಹೂರ್ತ. ನಾಲ್ವರು ಕಾಣಿಸುತ್ತಿಲ್ಲ” ಚಿತ್ರಕ್ಕೆ ಚಾಲನೆ

Related Posts

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು
Top Story

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

by ಪ್ರತಿಧ್ವನಿ
November 19, 2025
0

ಉಡುಪಿ: ವಿದ್ಯಾರ್ಥಿಗಳ ಜನಿವಾರ ತೆಗೆಯುವಂತೆ ಒತ್ತಾಯಿಸಿ ಕಾರಣವಿಲ್ಲದೇ ಮನಸೋ ಇಚ್ಛೆ ಬಸ್ಕಿ ಹೊಡೆಸಿರುವ ಶಿಕ್ಷಕನನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಕಾರ್ಕಳದ ಮೊರಾರ್ಜಿ ದೇಸಾಯಿ ಇಂಗ್ಲಿಷ್ ಮಾಧ್ಯಮ ವಸತಿ...

Read moreDetails
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

November 19, 2025
ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ

ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ

November 19, 2025
ಚಳಿ ತಡಿಯೋಕೆ ಆಗ್ತಿಲ್ಲ ಕಂಬಳಿ ನೀಡಿ: ಕೋರ್ಟ್‌ಗೆ ನಟ ದರ್ಶನ್‌ ಮನವಿ..!

ಚಳಿ ತಡಿಯೋಕೆ ಆಗ್ತಿಲ್ಲ ಕಂಬಳಿ ನೀಡಿ: ಕೋರ್ಟ್‌ಗೆ ನಟ ದರ್ಶನ್‌ ಮನವಿ..!

November 19, 2025
ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

November 19, 2025
Next Post

ನೀಲಕಂಠ ಫಿಲಂಸ್ ಹಾಗೂ ಧರ್ಮಶ್ರೀ ಎಂಟರ್ ಪ್ರೈಸಸ್ ನಿರ್ಮಾಣದ ವಿಭಿನ್ನ ಶೀರ್ಷಿಕೆಯ "4.30 - 6 ಮುಹೂರ್ತ. ನಾಲ್ವರು ಕಾಣಿಸುತ್ತಿಲ್ಲ" ಚಿತ್ರಕ್ಕೆ ಚಾಲನೆ

Recent News

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು
Top Story

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

by ಪ್ರತಿಧ್ವನಿ
November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌
Top Story

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

by ಪ್ರತಿಧ್ವನಿ
November 19, 2025
ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ
Top Story

ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ

by ಪ್ರತಿಧ್ವನಿ
November 19, 2025
ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ
Top Story

ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

by ಪ್ರತಿಧ್ವನಿ
November 19, 2025
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು-ಪುರುಷೋತ್ತಮ ಬಿಳಿಮಲೆ
Top Story

ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು-ಪುರುಷೋತ್ತಮ ಬಿಳಿಮಲೆ

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬೆಂಗಳೂರಲ್ಲಿ ಎಟಿಎಂ ವಾಹನದ ಕೋಟ್ಯಾಂತರ ರೂ. ರಾಬರಿ

ಬೆಂಗಳೂರಲ್ಲಿ ಎಟಿಎಂ ವಾಹನದ ಕೋಟ್ಯಾಂತರ ರೂ. ರಾಬರಿ

November 19, 2025
ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada