• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಏನೇ ನೋವಾಗಿದ್ದರೂ ವ್ಯಕ್ತಿಗಿಂತ ಪಕ್ಷ‌ ಮುಖ್ಯ: ಡಿ.ಕೆ.ಶಿವಕುಮಾರ್

Any Mind by Any Mind
February 23, 2024
in Top Story, ಕರ್ನಾಟಕ, ರಾಜಕೀಯ
0
D.K ಶಿವಕುಮಾರ್​ ರಾಡಾರ್​ನಲ್ಲಿ ಯಾರೆಲ್ಲಾ ನಾಯಕರಿದ್ದಾರೆ..?
Share on WhatsAppShare on FacebookShare on Telegram

ಬೆಂಗಳೂರು (Bengaluru) : ನಮಗೆ ಏನೇ ನೋವಾಗಿದ್ದರೂ ವ್ಯಕ್ತಿಗಿಂತ ಪಕ್ಷ ಮುಖ್ಯ. ಮಹಾತ್ಮಾ ಗಾಂಧಿ ಅವರಿಂದ ನೆಹರೂ ಕುಟುಂಬ ಮಾಡಿರುವ ತ್ಯಾಗದ ಮುಂದೆ ನಮ್ಮ ತ್ಯಾಗ ಗೌಣ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DKShivakumar) ಹೇಳಿದರು.‌

ADVERTISEMENT

ಇಂದು ಕೆ.ಪಿ.ಸಿ.ಸಿ. ಕಚೇರಿಯಲ್ಲಿ ತುಮಕೂರಿನ ಮಾಜಿ ಸಂಸದ ಮುದ್ದಹನುಮೇಗೌಡ ಅವರ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೆಹರೂ ಹಾಗೂ ಅವರ ತಂದೆ ತಮ್ಮ ಆಸ್ತಿಪಾಸ್ತಿಗಳನ್ನೆಲ್ಲಾ ದೇಶಕ್ಕಾಗಿ ತ್ಯಾಗ ಮಾಡಿದರು. ಇಂದು ಸೋನಿಯಾ ಗಾಂಧಿ ಅವರಿಗೆ ಒಂದು ಮನೆ ಇಲ್ಲ. ಕಾಂಗ್ರೆಸ್ ನಾಯಕರು ದೇಶಕ್ಕಾಗಿ ಎಲ್ಲಾ ತ್ಯಾಗ ಮಾಡಿದ್ದಾರೆ. ನೀವೆಲ್ಲರೂ ಪಕ್ಷದ ಸದಸ್ಯತ್ವ ನೋಂದಣಿ ಸಮಯದಲ್ಲಿ ಕೊಟ್ಟ 10 ರೂಪಾಯಿ ಶುಲ್ಕದ ಹಣವನ್ನು ಇಂದು ಐಟಿ, ಇಡಿ ಅವರು ಮುಟ್ಟುಗೋಲು ಹಾಕಿಕೊಂಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.‌

ಗ್ಯಾರಂಟಿಗಳ ಮೂಲಕ ಜನರ ಮುಂದೆ ಹೋಗಲು ಶಕ್ತಿ:

ತ್ರಿವರ್ಣ ಧ್ವಜವನ್ನು ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಕಾಂಗ್ರೆಸಿಗರು ಮಾತ್ರ ಧರಿಸಲು ಸಾಧ್ಯ. ಈ ತ್ರಿವರ್ಣ ಧ್ವಜವನ್ನು ಬಿಜೆಪಿಯಲ್ಲಿ, ಜೆಡಿಎಸ್ ಪಕ್ಷದಲ್ಲಿ ಧರಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗದವರು ಅಧಿಕಾರಕ್ಕೆ ಬಂದಂತೆ. ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಒಂದು ಜಾತಿ, ವರ್ಗ ಅಥವಾ ಪಕ್ಷಕ್ಕೆ ಸೀಮಿತವಾಗಿದೆಯೇ? ಇದು ಕಾಂಗ್ರೆಸ್ ಪಕ್ಷದ ಬದ್ಧತೆ. ಈ ಕಾರ್ಯಕ್ರಮಗಳ ಮೂಲಕ ಚುನಾವಣೆಗೂ ಮುನ್ನ ಜನರ ಬಳಿ ಹೋಗಲು ನಾವು ನಿಮಗೆ ಶಕ್ತಿ ನೀಡಿದ್ದೇವೆ‌ ಎಂದು ಹೇಳಿದರು.

ಕಳೆದ 45 ವರ್ಷಗಳಿಂದ ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿರಲಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ನಮ್ಮ ವಿರುದ್ಧ ಅಭ್ಯರ್ಥಿ ಹಾಕಿದ್ದರು. ನಮ್ಮ ಅಭ್ಯರ್ಥಿ ಒಂದೂವರೆ ಸಾವಿರ ಮತಗಳ ಅಂತರದಿಂದ ಗೆದ್ದಿದ್ದಾರೆ. ಬಿಜೆಪಿ ಹಾಗೂ ದಳದ ನಾಯಕರೇ ಈ ಚುನಾವಣೆ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದು ಬಣ್ಣಿಸಿದ್ದರು. ಅವರು ಈಗಲೂ ತಮ್ಮ ಮಾತಿಗೆ ಬದ್ಧರಾಗಿದ್ದಾರೆ ಎಂದು ಭಾವಿಸುತ್ತೇನೆ.

ಮುಂದಿನ ಅವಧಿಗೂ ಕಾಂಗ್ರೆಸ್ ಸರ್ಕಾರ:

ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. ಕೇವಲ ಈ ಐದು ವರ್ಷ ಮಾತ್ರವಲ್ಲ. ಮುಂದಿನ ಐದು ವರ್ಷಕ್ಕೂ ನಮ್ಮದೇ ಸರ್ಕಾರ ಅಧಿಕಾರದಲ್ಲಿರಲಿದೆ. ರಾಜಕಾರಣ ಹೇಗೆ ಮಾಡಬೇಕು ಎಂದು ಗೊತ್ತಿದೆ. ಧೈರ್ಯವಾಗಿ ಲೋಕಸಭೆ ಚುನಾವಣೆ ಬಗ್ಗೆ ಗಮನಹರಿಸಿ. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆ ಪ್ರತಿ ಕುಟುಂಬ ತಿಂಗಳಿಗೆ 5 ಸಾವಿರದಷ್ಟು ಉಳಿತಾಯ ಮಾಡಲು ನೆರವಾಗುತ್ತಿದೆ. ಬಿಜೆಪಿಗೆ ಅಧಿಕಾರ ಇದ್ದಾಗ ಇಂತಹ ಒಂದು ಕಾರ್ಯಕ್ರಮ ನೀಡಲಿಲ್ಲ. ಅವರು ಭಾವನೆ ಬಗ್ಗೆ ರಾಜಕಾರಣ ಮಾಡಿದರೆ ನಾವು ಜನರ ಬದುಕಿನ ಬಗ್ಗೆ ಆಲೋಚಿಸಿ ಜನರ ಕಷ್ಟಕ್ಕೆ ಸ್ಪಂದಿಸುವ ಕಾರ್ಯಕ್ರಮ ನೀಡಿದ್ದೇವೆ ಎಂದು ಹೇಳಿದರು‌.‌

ನೀವೆಲ್ಲರೂ ಪ್ರತಿ ಬೂತ್ ನಲ್ಲಿ ಜನರನ್ನು ಸಂಪಾದಿಸಬೇಕು. ದಳ ಹಾಗೂ ಬಿಜೆಪಿಯವರಿಗೆ ಮನವರಿಕೆ ಮಾಡಿಕೊಡಿ. ಮುದ್ದಹನುಮೇಗೌಡರೇ ತಮ್ಮ ಬಳಿ ಹೆಚ್ಚು ಕ್ರಿಯಾಶೀಲ ರಾಜಕಾರಣ ಉಳಿದಿಲ್ಲ ಎಂದು ಒಪ್ಪಿಕೊಂಡಿದ್ದಾರೆ. ಹೀಗಾಗಿ ಬೇರೆ ಪಕ್ಷದ ನಾಯಕರನ್ನು ಕಾಂಗ್ರೆಸ್ ಪಕ್ಷದತ್ತ ಕರೆಯಿರಿ ಎಂದು ಸಲಹೆ ನೀಡಿದರು.‌

ಮುಖ್ಯಮಂತ್ರಿಗಳು ಜನಪರ ಬಜೆಟ್ ಮಂಡಿಸಿದ್ದಾರೆ. ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಗಂಡ ಹೆಂಡತಿ, ಅತ್ತೆ ಸೊಸೆ ಮಧ್ಯೆ ತಂದಿಟ್ಟಿದ್ದಾರೆ, ರಾಜ್ಯ ದಿವಾಳಿಯಾಗುತ್ತದೆ ಎಂದು ಬಿಜೆಪಿಯವರು ಟೀಕೆ ಮಾಡಿದರು. ಅದೆಲ್ಲವೂ ಸುಳ್ಳಾಗಿದೆ. ನೀವು ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಬೂತ್ ಮಟ್ಟದಲ್ಲಿ ಕೆಲಸ ಮಾಡಬೇಕು. ಬೂತ್ ಗಳಲ್ಲಿ ನಮಗೆ ಮುನ್ನಡೆ ತಂದುಕೊಡುವವರೇ ನಮ್ಮ ನಾಯಕರು ಎಂದು ಹೇಳಿದರು.‌

ಮುದ್ದಹನುಮೇಗೌಡರು ಇಂದು ಪಕ್ಷ ಸೇರ್ಪಡೆಗೊಂಡಿದ್ದಾರೆ. ಅವರನ್ನು ಸ್ವಾಗತಿಸುತ್ತೇನೆ.‌ ನಾವು ಯಾರಿಗೆ ಟಿಕೆಟ್ ನೀಡುತ್ತೇವೋ ಅವರ ಪರವಾಗಿ ಕೆಲಸ ಮಾಡಬೇಕು. ಇದು ಕಾಂಗ್ರೆಸ್ ಪಕ್ಷದ ಶಿಸ್ತು. ಮುದ್ದಹನುಮೇಗೌಡರ ಪಕ್ಷ ಸೇರ್ಪಡೆ ವಿಚಾರವಾಗಿ ರಾಜಣ್ಣ, ವಾಸು ಸೇರಿದಂತೆ ಜಿಲ್ಲೆಯ ಎಲ್ಲಾ ನಾಯಕರು ನಮ್ಮ ಜತೆ ಚರ್ಚೆ ಮಾಡಿ ಈ ತೀರ್ಮಾನಕ್ಕೆ ಬಂದಿದ್ದೇವೆ. ನಮ್ಮ ಪಕ್ಷಕ್ಕೆ ಮಾಜಿ ಶಾಸಕ ಗೌರಿಶಂಕರ್ ಅವರನ್ನು ಸೇರಿಸಿಕೊಂಡಿದ್ದೇವೆ. ತುಮಕೂರು ಜಿಲ್ಲೆಯಲ್ಲಿ ಅನೇಕರು ನಮ್ಮ ಪಕ್ಷ ಸೇರಲು ಉತ್ಸುಕರಾಗಿದ್ದಾರೆ. ನೀವೆಲ್ಲರೂ ಸೇರಿ ಲೋಕಸಭೆ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಬೇಕು ಎಂದು ಹೇಳಿದರು.‌

#karnataka #bengaluru #dkshivakumar #congress #congressparty #political

Previous Post

ನಾವು 20 ಲೋಕಸಭಾ ಸ್ಥಾನಗಳನ್ನು ಗೆಲ್ಲುವುದು ಖಚಿತ : ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ರಾಜ್ಯಸಭೆ ಚುನಾವಣೆಗೆ ಲೆಕ್ಕಚಾರ ಮಾಡಿದ ಬಿಜೆಪಿ

Related Posts

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
0

ಮಕ್ಕಳ ಯೋಗ ಕ್ಷೇಮ ವಿಚಾರಿಸಿದ ಸಚಿವರು ಬೀದರ್ ಪ್ರವಾಸದಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಇಂದು ದಿಢೀರ್ ಅಂಗನವಾಡಿ ಹಾಗೂ ಬಾಲಕಿಯರ ಬಾಲಮಂದಿರಕ್ಕೆ ಭೇಟಿ ನೀಡಿ, ಪರಿಶೀಲನೆ...

Read moreDetails

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Next Post
ರಾಜ್ಯಸಭೆ ಚುನಾವಣೆಗೆ ಲೆಕ್ಕಚಾರ ಮಾಡಿದ ಬಿಜೆಪಿ

ರಾಜ್ಯಸಭೆ ಚುನಾವಣೆಗೆ ಲೆಕ್ಕಚಾರ ಮಾಡಿದ ಬಿಜೆಪಿ

Please login to join discussion

Recent News

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada