• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ವಿದ್ಯಾರ್ಥಿಗಳಿಗೆ ಪ್ರಚೋದನೆ ನೀಡಿದವರ ವಿರುದ್ಧದ ಕ್ರಮಗಳು ಬಹಿರಂಗವಾಗಲಿ

ಪ್ರತಿಧ್ವನಿ by ಪ್ರತಿಧ್ವನಿ
February 9, 2022
in ಕರ್ನಾಟಕ, ರಾಜಕೀಯ
0
ಹಿಜಾಬ್ Vs ಕೇಸರಿ ವಿವಾದ | ಬೆಂಗಳೂರಿನ ಶಾಲಾ-ಕಾಲೇಜುಗಳಲ್ಲಿ ಪ್ರತಿಭಟನೆ ನಿಷೇಧಿಸಿದ ನಗರ ಪೊಲೀಸರು
Share on WhatsAppShare on FacebookShare on Telegram

ಹಿಜಾಬ್ ವಿವಾದ ರಾಜ್ಯದ ಮೂಲೆಮೂಲೆಗೆ ವ್ಯಾಪಿಸಿ ಶಾಲಾಕಾಲೇಜುಗಳು ರಣಾಂಗಣಗಳಾಗಿ ಬದಲಾದ ಬಳಿಕ ಇದೀಗ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಸರ್ಕಾರ ಕೈತೊಳೆದುಕೊಂಡಿದೆ.

ADVERTISEMENT

ಉಡುಪಿಯ ಒಂದು ಕಾಲೇಜಿನಲ್ಲಿ ಹಿಜಾಬ್ ವಿಷಯದಲ್ಲಿ ಕೆಲವು ಸಂಘಟನೆಗಳು ಮಧ್ಯಪ್ರವೇಶಿಸಿ ವಿದ್ಯಾರ್ಥಿಗಳು ಮತ್ತು ಕಾಲೇಜಿನ ಆಡಳಿತದ ನಡುವೆ ಹಸ್ತಕ್ಷೇಪ ನಡೆಸಿ ಪ್ರಾಂಶುಪಾಲರು ಮತ್ತು ವಿದ್ಯಾರ್ಥಿಗಳ ಮಾತುಕತೆಯಲ್ಲಿ ಮುಗಿದುಹೋಗಬಹುದಾಗಿದ್ದ ವಿಷಯವನ್ನು ದೊಡ್ಡದು ಮಾಡಿದ ಬಗ್ಗೆಯಾಗಲೀ, ಆ ಬಳಿಕ ಹಿಜಾಬ್ ಗೆ ಪ್ರತಿಯಾಗಿ ದಿಢೀರನೇ ಕೇಸರಿ ಶಾಲುಗಳನ್ನು ಧರಿಸಿ ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವಂತೆ ಪ್ರಚೋದನೆ ನೀಡಿದ ಶಕ್ತಿಗಳ ವಿಷಯದಲ್ಲಾಗಲೀ, ಇದೇ ವಿವಾದವನ್ನು ಮುಂದಿಟ್ಟುಕೊಂಡು ರಾಜ್ಯವ್ಯಾಪಿ ಮುಸ್ಲಿಂ ಹೆಣ್ಣುಮಕ್ಕಳು ಸಾಮೂಹಿಕವಾಗಿ ಹಿಜಾಬ್ ಧರಿಸಿ ಕಾಲೇಜಿಗೆ ಹೋಗುವಂತೆ ಕುಮ್ಮಕ್ಕು ನೀಡಿದ ಸಂಘಟನೆಗಳ ಬಗ್ಗೆಯಾಗಲೀ ಸರ್ಕಾರ ಯಾವ ಕ್ರಮಕೈಗೊಂಡಿದೆ ಎಂಬುದು ಈಗಲೂ ನಿಗೂಢವಾಗೇ ಇದೆ.

ಅದರಲ್ಲೂ ಮುಖ್ಯವಾಗಿ ಶಿವಮೊಗ್ಗ ಸರ್ಕಾರಿ ಪ್ರಥಮದರ್ಜೆ ಕಾಲೇಜು ಗಲಭೆ, ಮಂಡ್ಯದ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯನ್ನು ಸುತ್ತುವರಿದು ಕೇಸರಿ ಶಾಲು ಬೀಸಿ ನಡೆಸಿದ ದಬ್ಬಾಳಿಕೆ ಸೇರಿದಂತೆ ಮಂಗಳವಾರ ಗಲಭೆ ನಡೆದ ಬಹುತೇಕ ಕಾಲೇಜುಗಳಲ್ಲಿ ಆಯಾ ಕಾಲೇಜಿನ ವಿದ್ಯಾರ್ಥಿಗಳಿಗಿಂತ ಎಬಿವಿಪಿ, ಪಿಎಫ್ ಐ ಮತ್ತಿತರ ಸಂಘಟನೆಗಳ ಮಂದಿಯೇ ಹೆಚ್ಚಿದ್ದರು ಎಂಬುದು ವಿದ್ಯಾರ್ಥಿಗಳ ಹೇಳಿಕೆಗಳು ಮತ್ತು ವೈರಲ್ ಆಗಿರುವ ವೀಡಿಯೋ ತುಣುಕುಗಳಲ್ಲೇ ಗೊತ್ತಾಗುತ್ತಿದೆ. ಹೀಗೆ ಕಾಲೇಜು ಆವರಣದಲ್ಲಿ ಹೋಗಿ ವಿದ್ಯಾರ್ಥಿಗಳಿಗೆ ಪ್ರಚೋದನೆ ನೀಡಿ ಸಂಘರ್ಷಕ್ಕೆ ಇಳಿಸುವ ಅಧಿಕಾರ ಈ ಸಂಘಟನೆಗಳಿಗೆ ಕೊಟ್ಟವರು ಯಾರು? ಮತ್ತು ಇಂತಹ ಕಡಿಗೇಡಿ ಕೃತ್ಯದಲ್ಲಿ ಭಾಗಿಯಾಗಿರುವ ಸಂಘಟನೆಗಳು ಮತ್ತು ಹೊರಗಿನವರ ವಿರುದ್ಧ ರಾಜ್ಯ ಸರ್ಕಾರ ಯಾವ ಕಠಿಣ ಕ್ರಮಗಳನ್ನು ಕೈಗೊಂಡಿದೆ ಎಂಬುದು ಬಹಿರಂಗವಾಗಬೇಕಿರುವ ಸಂಗತಿ.

ಹಾಗೇ, ರಾಜ್ಯದ ಮೂಲೆಮೂಲೆಯ ಕಾಲೇಜು ವಿದ್ಯಾರ್ಥಿಗಳಿಗೆ ದಿಢೀರನೇ ಕೇಸರಿ ಶಾಲೆ, ಪಗಡಿ(ಪೇಟ)ಗಳನ್ನು ಸರಬರಾಜು ಮಾಡಿದ್ದು ಯಾರು? ಎಲ್ಲಿಂದ ಮತ್ತು ಹೇಗೆ ಅತ್ಯಂತ ಅಲ್ಪ ಅವಧಿಯಲ್ಲಿ ಚಿಕ್ಕ ಚಿಕ್ಕ ಊರುಗಳಲ್ಲಿಯೂ ಸಾವಿರಾರು ಶಾಲು ಮತ್ತು ಪಗಡಿಗಳು ಸರಬರಾಜಾದವು? ಅವುಗಳನ್ನು ಹಿಂದೂ ವಿದ್ಯಾರ್ಥಿಗಳನ್ನು ಗುರುತಿಸಿ ಸರಬರಾಜು ಮಾಡಿ ಅವರು ಅವುಗಳನ್ನು ತೊಟ್ಟು ವಿರೋಧಿ ಗುಂಪಿನತ್ತ ಪ್ರಚೋದನಕಾರಿಯಾಗಿ ಘೋಷಣೆ ಕೂಗುತ್ತಾ ನುಗ್ಗಲು ಕುಮ್ಮಕ್ಕು ನೀಡಿದವರು ಯಾರು? ಹೆಣ್ಣುಮಕ್ಕಳನ್ನು ಸುತ್ತುವರಿದು ಭಯಬೀಳಿಸುವಂತೆ ಕೇಸರಿ ಶಾಲು ಬೀಸಿ ದಬ್ಬಾಳಿಕೆ ನಡೆಸಲು ಯಾರು ಪ್ರಚೋದನೆ ನೀಡಿದ್ದು? ಮತ್ತು ಅಂತವರ ಪತ್ತೆ ಮಾಡಲು ಸರ್ಕಾರ ಪೊಲೀಸರಿಗೆ ಸೂಚನೆ ನೀಡಿದೆಯೇ? ಅಥವಾ ಅವರನ್ನು ರಕ್ಷಿಸಿ ಕೇವಲ ಅಮಾಯಕ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ಕಣ್ಣೊರೆಸುವ ಯತ್ನ ಮಾಡುತ್ತಿರುವುದೇಕೆ?

ಜೊತೆಗೆ, ಮಂಡ್ಯ ನಗರದ ಕೆಲವು ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘಟನೆಯವರು ವಿದ್ಯಾರ್ಥಿಗಳಿಗೆ ತಲಾ 300-500 ರೂ. ಹಣ ನೀಡಿ ಆಮಿಶವೊಡ್ಡಿ ಕೇಸರಿ ಶಾಲು ತೊಡಿಸಲಾಗಿದೆ ಎಂಬ ಮಾತುಗಳು ಸ್ವತಃ ವಿದ್ಯಾರ್ಥಿಗಳಿಂದಲೇ ಕೇಳಿಬಂದಿವೆ. ಅಂತಹ ಅನುಮಾನಗಳು ಕೇವಲ ಮಂಡ್ಯ ಮಾತ್ರವಲ್ಲದೆ ರಾಜ್ಯದ ವಿವಿಧ ಕಾಲೇಜುಗಳಲ್ಲಿಯೂ ಕೇಳಿಬಂದಿವೆ. ಶಿವಮೊಗ್ಗದ ಕಾಲೇಜೊಂದರಲ್ಲಿ ಅಲ್ಲಿನ ಉಪನ್ಯಾಸಕರೇ ವಿದ್ಯಾರ್ಥಿಗಳಿಗೆ ಕುಮ್ಮಕ್ಕು ನೀಡುವ ಗಂಭೀರ ಆರೋಪಗಳೂ ಕೇಳಿಬಂದಿವೆ. ಆ ಹಿನ್ನೆಲೆಯಲ್ಲಿ ಹೀಗೆ ವಿದ್ಯಾರ್ಥಿಗಳಿಗೆ ಕುಮ್ಮಕ್ಕು ನೀಡಿ, ಬೆದರಿಕೆ ಹಾಕಿ ಒಂದು ಧರ್ಮದ ಸಂಕೇತ ಎಂದು ಬಿಂಬಿಸಲಾಗುತ್ತಿರುವ ಶಾಲು ಧರಿಸುವಂತೆ ಒತ್ತಡ ಹಾಕಿದ ಬಗ್ಗೆ ಸರ್ಕಾರ ಏನು ಕ್ರಮಕೈಗೊಳ್ಳಲಿದೆ? ಎಂಬ ಪ್ರಶ್ನೆಗಳೂ ಇವೆ.

ಹಿಜಾಬ್ ವಿವಾದ ಕುರಿತು ಪ್ರಕರಣ ನ್ಯಾಯಾಲಯದಲ್ಲಿದೆ ಎಂಬುದು ನಿಜ. ಆದರೆ, ಅದು ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ಅಥವಾ ಅದನ್ನು ನಿರ್ಬಂಧಿಸಿ ಸಮವಸ್ತ್ರ ಕಡ್ಡಾಯಗೊಳಿಸುವ ಮಟ್ಟಿಗೆ ಮಾತ್ರ ಸೀಮಿತವಾದ ಪ್ರಕರಣ. ಹಾಗಾಗಿ ಆ ನ್ಯಾಯಾಲಯದ ಮುಂದಿದೆ ಎಂಬ ನೆಪವೊಡ್ಡಿ ಸರ್ಕಾರ, ಈ ಒಂದು ವಾರದಲ್ಲಿ ರಾಜ್ಯವ್ಯಾಪಿ ನಡೆದಿರುವ ಹುನ್ನಾರಗಳನ್ನು, ರಾಜಕೀಯ ಲಾಭದ ಲೆಕ್ಕಾಚಾರದ ಷಢ್ಯಂತ್ರಗಳನ್ನು ತಿಪ್ಪೆಸಾರಿಸಲಾಗದು. ಜೊತೆಗೆ ಕೆಲವೇ ಕೆಲವು ಮಂದಿಯ ರಾಜಕೀಯ ಲಾಭಕ್ಕಾಗಿ, ಒಂದು ಪಕ್ಷ ಮತ್ತು ಕೆಲವು ಸಂಘಟನೆಯ ದುರುದ್ದೇಶಕ್ಕಾಗಿ ಈವರೆಗೆ ನಡೆದಿರುವ ಹಿಂಸಾಚಾರ, ಆಗಿರುವ ನಷ್ಟ, ಸೃಷ್ಟಿಯಾಗಿರುವ ಭೀತಿ ಮತ್ತು ಆತಂಕದ ವಾತಾವರಣಕ್ಕೆ ಸರ್ಕಾರ ಯಾರನ್ನು ಹೊಣೆಗಾರರನ್ನಾಗಿ ಮಾಡುತ್ತದೆ?

ಈ ಎಲ್ಲಾ ಪ್ರಶ್ನೆಗಳ ಹಿನ್ನೆಲೆಯಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಸಂಘರ್ಷ ಮತ್ತು ಹಿಂಸಾಚಾರಗಳ ಕುರಿತು ತನಿಖೆಯಾಗಬೇಕು ಮತ್ತು ಸಾರ್ವಜನಿಕರಿಗೆ ಯಾವೆಲ್ಲಾ ವ್ಯಕ್ತಿಗಳು ಮತ್ತು ಶಕ್ತಿಗಳು ಆ ಹಿಂಸಾಚಾರಗಳ ಹಿಂದೆ ಇದ್ದರು? ಮತ್ತು ಅವರ ಅಂತಹ ಸಮಾಜದ್ರೋಹಿ ಕೆಲಸಗಳಿಗಾಗಿ ಅವರ ವಿರುದ್ಧ ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದನ್ನು ಜನರಿಗೆ ತಿಳಿಸಬೇಕಿದೆ. ಅದು ಸರ್ಕಾರದ ಹೊಣೆ. ಅಲ್ಲವೇ?

Tags: ಉಡುಪಿಎಬಿವಿಪಿಪಿಎಫ್ ಐಬಿಜೆಪಿಮಂಡ್ಯಶಿವಮೊಗ್ಗಸಿಎಂ ಬಸವರಾಜ ಬೊಮ್ಮಾಯಿ
Previous Post

ಅಜಾನ್‌ ವಿರುದ್ದ ಋಷಿಕುಮಾರ ಸ್ವಾಮೀಜಿಯಿಂದ ಅಭಿಯಾನ | Video Viral

Next Post

ಹಿಜಾಬ್ ವಿವಾದ : ಕೋರ್ಟ್ ನಲ್ಲಿ ನಡೆದ ವಾದ – ಪ್ರತಿವಾದದ ಪ್ರಮುಖ ಅಂಶಗಳು !

Related Posts

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
0

ನವದೆಹಲಿ: ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ(Union Budget 2026) ರಾಜ್ಯಗಳ ಅಭಿವೃದ್ಧಿಗೆ ಪೂರಕವಾಗುವಂತೆ ಕೇಂದ್ರ ಸರ್ಕಾರವು ಬೃಹತ್ ಮೊತ್ತದ ಅನುದಾನವನ್ನು ಘೋಷಿಸಿದೆ. 16ನೇ ಹಣಕಾಸು ಆಯೋಗದ ಶಿಫಾರಸುಗಳನ್ನು...

Read moreDetails
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

February 1, 2026
Next Post
ಹಿಜಾಬ್ ವಿವಾದ : ಕೋರ್ಟ್ ನಲ್ಲಿ ನಡೆದ ವಾದ – ಪ್ರತಿವಾದದ ಪ್ರಮುಖ ಅಂಶಗಳು !

ಹಿಜಾಬ್ ವಿವಾದ : ಕೋರ್ಟ್ ನಲ್ಲಿ ನಡೆದ ವಾದ – ಪ್ರತಿವಾದದ ಪ್ರಮುಖ ಅಂಶಗಳು !

Please login to join discussion

Recent News

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?
Top Story

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada