• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ತಮಿಳುನಾಡಿನಲ್ಲಿ ಆಗಸದಲ್ಲೇ ಹಾರಾಡಿದ ವಿಮಾನ..! 141 ಜೀವ ಸದ್ಯ ಸೇಫ್‌

ಕೃಷ್ಣ ಮಣಿ by ಕೃಷ್ಣ ಮಣಿ
October 11, 2024
in Top Story, ದೇಶ, ವಿಶೇಷ
0
ತಮಿಳುನಾಡಿನಲ್ಲಿ ಆಗಸದಲ್ಲೇ ಹಾರಾಡಿದ ವಿಮಾನ..! 141 ಜೀವ ಸದ್ಯ ಸೇಫ್‌
Share on WhatsAppShare on FacebookShare on Telegram

ತಮಿಳುನಾಡಿನಲ್ಲಿ ಒಂದೇ ದಿನ ಮಹಾನ್‌ ದುರಂತಕ್ಕೆ ಸಾಕ್ಷಿಯಾಗುವ ಸಂದರ್ಭ ಎದುರಾಗಿತ್ತು. ತಮಿಳುನಾಡಿನ ತಿರುಚಿ ಏರ್‌ಪೋರ್ಟ್‌ನಿಂದ ದುಬೈನಾ ಶಾರ್ಜಾಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಆತಂಕಕ್ಕೆ ಕಾರಣವಾಗಿತ್ತು. ಸಂಜೆ 5.45ರ ಸುಮಾರಿಗೆ ಟೇಕ್‌ ಆಫ್‌ ಆದ ಬಳಿಕ ಕೆಲವೇ ನಿಮಿಷಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. 141 ಜನರನ್ನು ಹೊತ್ತು ಸಾಗುತ್ತಿದ್ದ ಏರ್‌ ಇಂಡಿಯಾ ವಿಮಾನದಲ್ಲಿ ಟೆಕ್ನಿಕಲ್‌ ಸಮಸ್ಯೆ ಕಾಣಿಸಿಕೊಂಡ ಬಳಿಕ ಸುಮಾರು 3 ಗಂಟೆಗಳ ಕಾಲ ತಿರುಚಿ ಏರ್‌ಪೋರ್ಟ್‌ ಮೇಲೆಯೇ ಸುತ್ತಾಡಿತ್ತು.

ADVERTISEMENT

20ಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳನ್ನು ಏರ್‌ಪೋರ್ಟ್‌ ಬಳಿ ಸಿದ್ಧ ಮಾಡಲಾಯ್ತು. 18 ಅಗ್ನಿಶಾಮಕ ವಾಹನಗಳನ್ನು ವಿಮಾನ ನಿಲ್ದಾಣದಲ್ಲಿ ನಿಲ್ಲಿಸಿಕೊಳ್ಳಲಾಯ್ತು. ಮತ್ತೊಂದು ಕಡೆ ವಿಮಾನ ಅಪಘಾತಕ್ಕೆ ಒಲಗಾದರು ಹೆಚ್ಚಿನ ಹಾನಿಯಾಗದಂತೆ ಆಕಾಶದಲ್ಲೇ ಸುತ್ತುವ ಮೂಲಕ ಎಲ್ಲಾ ಇಂಧನ ಖಾಲಿ ಮಾಡುವ ನಿರ್ಧಾರ ಮಾಡಲಾಯ್ತು. ತಿರುಚಿಗೆ ಬರುವ ವಿಮಾನಗಳನ್ನು ತಡೆದು AXB613 ಬೋಯಿಂಗ್‌ 737ನಲ್ಲಿ ವಿಮಾನ ಗಸ್ತು ತಿರುವಂತೆ ಮಾಡಲಾಯ್ತು. ಅಂತಿಮವಾಗಿ ಹೈಡ್ರೋಲಿಕ್‌ ಗೇರ್‌ ಸಮಸ್ಯೆಯನ್ನು ಸರಿ ಮಾಡುವ ಯತ್ನವೂ ಜೊತೆ ಜೊತೆಗೆ ನಡೀತಿತ್ತು. ಬಳಿಕ ಪೈಲಟ್‌ ಎದೆಗುಂದದೆ ವಿಮಾನವನ್ನ ಲ್ಯಾಂಡ್‌ ಮಾಡುವ ನಿರ್ಧಾರಕ್ಕೆ ಬಂದು ಯಶಸ್ಸು ಸಾಧಿಸಿದ್ರು.

ಏರ್‌ ಇಂಡಿಯಾ ವಿಮಾನದಲ್ಲಿ ಬರೋಬ್ಬರಿ 141 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ATC ( Air Traffic Control ) ಜೊತೆಗೆ ನಿರಂತರವಾಗಿ ಸಂಪರ್ಕದಲ್ಲಿದ್ದ ವಿಮಾನದ ಪೈಲಟ್‌ ಬೆಲ್ಲಿ ಲ್ಯಾಂಡಿಂಗ್‌ ಮಾಡುವುದಕ್ಕೆ ಪರ್ಮಿಷನ್ ಕೊಡಲಾಗಿತ್ತು. ಆದರೆ ಕೊನೇ ಕ್ಷಣದಲ್ಲಿ ಆದ ಚಮತ್ಕಾರ ಎನ್ನುವಂತೆ ಬೆಲ್ಲಿ ಡ್ಯಾನ್ಸ್‌ ಬದಲಿಗೆ ಸಾಮಾನ್ಯ ಲ್ಯಾಂಡಿಂಗ್‌ ಮಾಡುವುದಕ್ಕೆ ಪೈಲಟ್‌ ಯಶಸ್ವಿ ಆಗಿದ್ದಾರೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಮಾಹಿತಿ ನೀಡಿದೆ. ಆತಂರಿಕ ತನಿಖೆಗೆ ಕೇಂದ್ರ ಸರ್ಕಾರ ಆದೇಶ ಮಾಡಿದೆ.

ಸಂಜೆ 5.45ಕ್ಕೆ ಟೇಕ್‌ ಆಫ್‌ ಆಗಿದ್ದ ವಿಮಾನ ರಾತ್ರಿ 8.15ಕ್ಕೆ ಸುರಕ್ಷಿತವಾಗಿ ಲ್ಯಾಂಡ್‌ ಆಗಿದೆ. ಈ ಮೂಲಕ ತಿರುಚಿರಾಪಳ್ಳಿ ವಿಮಾನ ನಿಲ್ದಾಣದಲ್ಲಿ ಎದುರಾಗಿದ್ದ ಆತಂಕ ನಿವಾರಣೆ ಆಗಿದೆ. ಇನ್ನು ಬೆಲ್ಲಿ ಲ್ಯಾಂಡಿಂಗ್‌ ಮಾಡಲು ನಿರ್ಧಾರ ಮಾಡಿದ್ದ ಕಾರಣಕ್ಕೆ ಫೈರ್‌ ಎಂಜಿನ್ ಹಾಗು ಆಂಬ್ಯುಲೆನ್ಸ್‌ಗಳನ್ನು ಮೊಕ್ಕಾಂ ಮಾಡಲಾಗಿತ್ತು. ತಮಿಳುನಾಡು ಸರ್ಕಾರ ತುರ್ತು ರಕ್ಷಣಾ ಕಾರ್ಯಕ್ಕೆ ಸಜ್ಜಾಗಿತ್ತು. ಸಿಎಂ ಎಂ.ಕೆ ಸ್ಟಾಲಿನ್‌ ತುರ್ತು ಸಭೆ ನಡೆಸಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸುವಂತೆ ಸೂಚನೆ ಕೊಡಲಾಗಿತ್ತು. ಅದೃಷ್ಟವಶಾತ್‌ ಯಾವುದೇ ಸಮಸ್ಯೆ ಆಗದಂತೆ ಸಾಮಾನ್ಯ ಲ್ಯಾಂಡಿಂಗ್‌ ಮಾಡಿದ್ದು ನೂರಾರು ಜನರ ಮೊಗದಲ್ಲಿ ಸಂತಸ ಮನೆ ಮಾಡುವಂತೆ ಆಯ್ತು.

Tags: ChennaiChennai airportchennai airport flight landingchennai airport flight take offchennai airport night landingchennai airport night plane spottingchennai airport night take offchennai airport night viewchennai airport videochennai flightchennai international airportchennai plane spottingchennai rain today liveflightflight landing in chennaiflight services in chennaiIndigo Flight
Previous Post

ಮೈಸೂರು-ದರ್ಬಾಂಗ ರೈಲು ಅಪಘಾತ ! ಎರಡು ಬೋಗಿಗಳಿಗೆ ಬೆಂಕಿ – ಹಲವು ಪ್ರಯಾಣಿಕರಿಗೆ ಗಾಯ !

Next Post

ರಾಜ್ಯಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ಮಾಡುತ್ತಿರುವವರೇ ದುಷ್ಟಶಕ್ತಿಗಳು:ಡಿಸಿಎಂ ಡಿ.ಕೆ. ಶಿವಕುಮಾರ್

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post

ರಾಜ್ಯಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ಮಾಡುತ್ತಿರುವವರೇ ದುಷ್ಟಶಕ್ತಿಗಳು:ಡಿಸಿಎಂ ಡಿ.ಕೆ. ಶಿವಕುಮಾರ್

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada