• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಂದನವನದ ಗಣ್ಯರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು ಬಹು ನಿರೀಕ್ಷಿತ “UI” ಚಿತ್ರದ ಪ್ರೀ ರಿಲೀಸ್ ಇವೆಂಟ್ .

ಪ್ರತಿಧ್ವನಿ by ಪ್ರತಿಧ್ವನಿ
December 17, 2024
in Top Story, ಅಂಕಣ, ಇದೀಗ, ಕರ್ನಾಟಕ, ಜೀವನದ ಶೈಲಿ, ದೇಶ, ವಾಣಿಜ್ಯ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ವರ್ಣರಂಜಿತ ಸಮಾರಂಭದಲ್ಲಿ ಶಿವರಾಜಕುಮಾರ್, ದುನಿಯಾ ವಿಜಯ್, ಡಾಲಿ ಧನಂಜಯ್ ಸೇರಿದಂತೆ ಅನೇಕ ಗಣ್ಯರು ಭಾಗಿ .

ADVERTISEMENT

ಜಿ.ಮನೋಹರನ್ ಮತ್ತು ಕೆ.ಪಿ.ಶ್ರೀಕಾಂತ್ ನಿರ್ಮಿಸಿರುವ, ಒಂಭತ್ತು ವರ್ಷಗಳ ಬಳಿಕ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ “UI” ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚಿಗೆ ಅದ್ದೂರಿಯಾಗಿ ನೆರವೇರಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ದುನಿಯಾ ವಿಜಯ್, ಡಾಲಿ ಧನಂಜಯ, ಪ್ರಿಯಾಂಕಾ ಉಪೇಂದ್ರ, ನಿರ್ಮಾಪಕರಾದ ಉದಯ್ ಕೆ ಮೆಹ್ತಾ, ರಮೇಶ್ ರೆಡ್ಡಿ, ಕಾರ್ತಿಕ್ ಗೌಡ, ಯೋಗಿ ಜಿ ರಾಜ್, ಜಗದೀಶ್, ನಿರ್ದೇಶಕರಾದ ಪವನ್ ಒಡೆಯರ್, ಡಾ||ಸೂರಿ, ವೀರೇಶ ಚಿತ್ರಮಂದಿರದ ಕುಶಾಲ್ ಮುಂತಾದ ಗಣ್ಯರು ಪ್ರೀ ರಿಲೀಸ್ ಇವೆಂಟ್ ನಲ್ಲಿ ಭಾಗಿಯಾಗಿ “UI” ಗೆ ಶುಭ ಕೋರಿದರು.

ನಾನು “ಶ್” ಚಿತ್ರದ ಪ್ರೀಮಿಯರ್ ಶೋ ಅನ್ನು ಪಲ್ಲವಿ ಚಿತ್ರಮಂದಿರದಲ್ಲಿ ನೋಡಿದ್ದೆ. ಆನಂತರ “ಓಂ” ಚಿತ್ರದ ಚಿತ್ರೀಕರಣ ಸಮಯದಲ್ಲಿ ಉಪೇಂದ್ರ ಅವರ ಕಾರ್ಯವೈಖರಿ ನೋಡಿ, ನೀವು ಭಾರತ ಚಿತ್ರರಂಗದ ಮಹಾನ್ ನಿರ್ದೇಶಕರಲ್ಲೊಬ್ಬರಾಗುತ್ತಾರೆ ಎಂದು ಹೇಳಿದ್ದೆ. ಆಗಿನಿಂದಲೂ ನನಗೆ ಉಪೇಂದ್ರ ಅವರ ಕಂಡರೆ ವಿಶೇಷ ಪ್ರೀತಿ. ನಾನು ಕೂಡ “UI” ಚಿತ್ರವನ್ನು ನೋಡುವ ಕಾತುರದಲ್ಲಿದ್ದೇನೆ ಎಂದು ಶಿವರಾಜಕುಮಾರ್ ತಿಳಿಸಿದರು.

ನಾವು ಉಪೇಂದ್ರ ಅವರ ನಿರ್ದೇಶನಕ್ಕೆ ಅಭಿಮಾನಿಗಳು. ಅವರ ಚಿತ್ರಗಳನ್ನು ನೋಡಿ ಬೆಳೆದವರು ನಾವು. ಒಂಭತ್ತು ವರ್ಷಗಳ ನಂತರ ಉಪೇಂದ್ರ ಅವರು ನಿರ್ದೇಶಿಸಿರುವ ಈ ಚಿತ್ರವನ್ನು ನೋಡಲು ಕಾಯುತ್ತಿರುವುದಾಗಿ ದುನಿಯಾ ವಿಜಯ್ ಹಾಗೂ ಡಾಲಿ ಧನಂಜಯ್ ಹೇಳಿದರು.

ಇಂದು ನಮ್ಮ ಚಿತ್ರಕ್ಕೆ ಪ್ರೋತ್ಸಾಹ ನೀಡಲು ಬಂದಿರುವ ಶಿವಣ್ಣ, ವಿಜಯ್, ಧನಂಜಯ್ ಸೇರಿದಂತೆ ಎಲ್ಲಾ ಗಣ್ಯರಿಗೆ ಧನ್ಯವಾದ ಎಂದು ಮಾತನಾಡಿದ ನಾಯಕ ಹಾಗೂ ನಿರ್ದೇಶಕ ಉಪೇಂದ್ರ, ಈ ಚಿತ್ರ ಆರಂಭವಾಗಲು ಕಾರಣ ಕೆ.ಪಿ.ಶ್ರೀಕಾಂತ್. ಐವತ್ತು ವರ್ಷಗಳ ಇತಿಹಾಸವಿರುವ ಲಹರಿ ಸಂಸ್ಥೆ ಈ ಚಿತ್ರ ನಿರ್ಮಾಣ ಮಾಡಿದ್ದು, ಮನೋಹರನ್ ಹಾಗೂ ಶ್ರೀಕಾಂತ್ ಅವರು ನಿರ್ಮಾಪಕರಾಗಿದ್ದಾರೆ. ನವೀನ್, ಲಹರಿ ವೇಲು, ನಾಗೇಂದ್ರ ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ. ಇದು ನನ್ನೊಬ್ಬನ ಚಿತ್ರವಲ್ಲ. ನನ್ನ ತಂಡದ ಚಿತ್ರ. ಈ ಚಿತ್ರ ಉತ್ತಮವಾಗಿ ಮೂಡಿಬರಲು ಇವರೆಲ್ಲರ ಸಹಕಾರವೇ ಕಾರಣ. ಈ ಸಮಯದಲ್ಲಿ ಚಿತ್ರತಂಡದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸುತ್ತೇನೆ. ಇದೇ ಡಿಸೆಂಬರ್ 20ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ಎಲ್ಲರೂ ನೋಡಿ ಎಂದರು.

ಇಂದು ಆಗಮಿಸಿರುವ ಎಲ್ಲಾ ಗಣ್ಯರಿಗೂ ಹಾಗೂ ಚಿತ್ರತಂಡದವರಿಗೆ ಧನ್ಯವಾದ. ಇದೇ ಇಪ್ಪತ್ತರಂದು ವಿಶ್ವದಾದ್ಯಂತ ಕನ್ನಡ ಸೇರಿದಂತೆ ಅನೇಕ ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ “UI” ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಈಗಾಗಲೇ ಮುಂಗಡ ಬುಕ್ಕಿಂಗ್ ಆರಂಭವಾಗಿದ್ದು, ಆಲ್ ಮೋಸ್ಟ್ ಫುಲ್ ಆಗಿದೆ. ಆರಂಭದಲ್ಲೇ ನಮ್ಮ ಚಿತ್ರಕ್ಕೆ ಸಿಗುತ್ತಿರುವ ಬೆಂಬಲಕ್ಕೆ ಮನ ತುಂಬಿ ಬಂದಿದೆ ಎಂದರು ನಿರ್ಮಾಪಕ ಕೆ.ಪಿ.ಶ್ರೀಕಾಂತ್ ಹಾಗೂ ಸಹ ನಿರ್ಮಾಪಕ ನವೀನ್.

ಚಿತ್ರದ ನಾಯಕಿ ರೀಷ್ಮಾ ನಾಣಯ್ಯ, ಕಲಾವಿದರಾದ ರವಿಶಂಕರ್, ಕಾಕ್ರೋಜ್ ಸುಧೀ, ನಿಧಿ ಸುಬ್ಬಯ್ಯ, ನೀತು, ಕಾರ್ಯಕಾರಿ ನಿರ್ಮಪಕ ಲಹರಿ ವೇಲು ಹಾಗೂ ವಿತರರಕರಾದ ಕೆ.ವಿ.ಎನ್ ಸಂಸ್ಥೆಯ ಸುಪ್ರೀತ್ ಮುಂತಾದವರು “UI” ಕುರಿತು ಮಾತನಾಡಿದರು.

Tags: Cockroach SudhiDaali Dananjaykiccha sudeepKVN MoviesLahari VeluNeethuNidhi SubbayyaPan India MovieravishankarReal Star UpendraReeshma Nanayyashivaraj kumarSudheepui kannada movie
Previous Post

ಆರ್‌ ಎಸ್‌ ಎಸ್‌ ಬಳಿ ಇರುವ ಸರ್ಕಾರಿ ಜಮೀನುಗಳ ಬಗ್ಗೆ ಯಾಕೆ ಚರ್ಚೆ ಇಲ್ಲ..!!

Next Post

ಕಡೆಯ ಕ್ರಮಾಂಕದಲ್ಲಿ ದಾಖಲೆ ಬರೆದ ಬುಮ್ರಾ ಮತ್ತು ಆಕಾಶ್ ದೀಪ್!

Related Posts

ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ
Top Story

ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ

by ಪ್ರತಿಧ್ವನಿ
August 8, 2026
0

ಸ್ಯಾಂಡಲ್‌ವುಡ್ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಕರ್ನಾಟಕದಲ್ಲಿ ಹೊಸ ಪ್ರಾದೇಶಿಕ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಸಮಾನ ಮನಸ್ಕರು ಹಾಗೂ ವಿವಿಧ ಜನಪರ...

Read moreDetails
*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*

*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*

August 8, 2026
‘ರಾಮಾಯಣ’ ಸಿನಿಮಾ ಬಿಡುಗಡೆ ದಿನಾಂಕ ಬದಲಾವಣೆ; ಭಾರತದಲ್ಲಿ ಯಾವಾಗ ತೆರೆಗೆ ಬರಲಿದೆ?

‘ರಾಮಾಯಣ’ ಸಿನಿಮಾ ಬಿಡುಗಡೆ ದಿನಾಂಕ ಬದಲಾವಣೆ; ಭಾರತದಲ್ಲಿ ಯಾವಾಗ ತೆರೆಗೆ ಬರಲಿದೆ?

August 8, 2026
ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

August 8, 2026
ಗೃಹ ಜ್ಯೋತಿ ಪರಿಷ್ಕರಣೆ: ಫಲಾನುಭವಿಗಳ ಆತಂಕಕ್ಕೆ ಬ್ರೇಕ್‌ ಹಾಕಿದ ಸಚಿವ ಕೆ.ಜೆ ಜಾರ್ಜ್

ಕೆಪಿಟಿಸಿಎಲ್‌ನ ‘ಡಾರ್ಕ್ ಫೈಬರ್’ ವಾಣಿಜ್ಯ ಬಳಕೆಗೆ: ₹130 ಕೋಟಿ ಹೆಚ್ಚುವರಿ ಆದಾಯದ ನಿರೀಕ್ಷೆ

August 8, 2026
Next Post

ಕಡೆಯ ಕ್ರಮಾಂಕದಲ್ಲಿ ದಾಖಲೆ ಬರೆದ ಬುಮ್ರಾ ಮತ್ತು ಆಕಾಶ್ ದೀಪ್!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada