ಧಾರವಾಡದ ಸೃಜನಾ ರಂಗಮಂದಿರದಲ್ಲಿ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಇಂದು ಆಯೋಜಿಸಲಾಗಿದ್ದ ಭಾರತದ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಓದುವ ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಸನ್ಮಾನ್ಯ ಶ್ರೀ ಸಂತೋಷ್ ಲಾಡ್ ರವರು ಭಾಗವಹಿಸಿ ದೇಶದ ಸಂವಿಧಾನದ ಕುರಿತಾಗಿ ಹೆಮ್ಮೆಯಿಂದ ಮಾತನಾಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ದೇಶ ಸಮಗ್ರತೆ ಮತ್ತು ಐಕ್ಯತೆಯನ್ನು ಪ್ರತಿಪಾದಿಸುವ ಸಂವಿಧಾನದ ಪೀಠಿಕೆಯನ್ನು ಏಕಕಾಲಕ್ಕೆ ಸಾಮೂಹಿಕವಾಗಿ ಓದುವ ಮುಖಾಂತರ, ಇಡೀ ಜಗತ್ತಿಗೆ ಭಾರತದ ಸಂವಿಧಾನದ ಮಹತ್ವವನ್ನು ಸಾರಬೇಕು ಎಂದರು,

ಇನ್ನು ಈ ವಿಶೇಷ ಕಾರ್ಯಕ್ರಮದಲ್ಲಿ ವಿಧ್ಯಾರ್ಥಿಗಳು, ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕದ ದಿಗ್ಗಜರು ಹಾಗೂ ಜಿಲ್ಲಾ ಆಡಳಿತದ ಅಧಿಕಾರಿಗಳು ಮತ್ತು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಮುಖಂಡರು ಪಾಲ್ಗೊಂಡಿದ್ದರು.






