ಮೈಸೂರು : ವಿಶ್ವ ವಿಖ್ಯಾತ ದಸರಾದ ಕೇಂದ್ರ ಬಿಂದುವಾಗಿದ್ದ ನಾಡದೇವತೆ ಚಾಮುಂಡೇಶ್ವರಿಯ ಅಂಬಾರಿಯನ್ನು ಬರೋಬ್ಬರಿ 14 ಬಾರಿ ಹೊತ್ತು ಸಾಗಿದ್ದ ಬಲರಾಮ ಇನ್ನು ನೆನಪು ಮಾತ್ರ. 67 ವರ್ಷ ಪ್ರಾಯದ ಬಲರಾಮ ಭಾನುವಾರ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದು ಬಲರಾಮನ ನಿಧನಕ್ಕೆ ಕರುನಾಡು ಕಂಬನಿ ಮಿಡಿದಿದೆ.

ಇನ್ನು ಪ್ರಧಾನಿ ನರೇಂಧ್ರ ಮೋದಿ ಕೂಡ ಕನ್ನಡದಲ್ಲಿಯೇ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಹಲವು ವರ್ಷಗಳಿಂದ ಗಜರಾಜ ಬಲರಾಮ ಮೈಸೂರಿನ ಸಾಂಪ್ರದಾಯಿಕ ದಸರಾ ಆಚರಣೆಯ ಪ್ರಮುಖ ಭಾಗವಾಗಿದ್ದರು. ಅವನು ಚಾಮುಮಡೇಶ್ವರಿ ಮಾತೆಯ ಮೂರ್ತಿಯನ್ನು ಹೊತ್ತಿದ್ದನ್ನು ಜನರು ನೆನಪಿಸಿಕೊಳ್ಳುತ್ತಾರೆ. ಅವನು ಅಸಂಖ್ಯಾತ ಜನರಿಗೆ ಪ್ರೀತಿಪಾತ್ರನಾಗಿದ್ದ. ಈಗ ಅವನ ಅಗಲಿಕೆಯಿಂದ ದುಖವಾಗಿದೆ. ಆತ್ಮಕ್ಕೆ ಶಾಂತಿ ಸಿಗಲಿ. ಓಂ ಶಾಂತಿ ಎಂದು ಬರೆದಿದ್ದಾರೆ .
ಹಲವು ವರ್ಷಗಳಿಂದ, ಗಜರಾಜ ಬಲರಾಮ ಮೈಸೂರಿನ ಸಾಂಪ್ರದಾಯಿಕ ದಸರಾ ಆಚರಣೆಯ ಪ್ರಮುಖ ಭಾಗವಾಗಿದ್ದನು. ಅವನು ಚಾಮುಂಡೇಶ್ವರಿ ಮಾತೆಯ ಮೂರ್ತಿಯನ್ನು ಹೊತ್ತಿದ್ದನ್ನು ಜನರು ನೆನಪಿಸಿಕೊಳ್ಳುತ್ತಾರೆ. ಅವನು ಅಸಂಖ್ಯಾತ ಜನರಿಗೆ ಪ್ರೀತಿಪಾತ್ರನಾಗಿದ್ದನು. ಅವನ ಅಗಲಿಕೆಯಿಂದ ದುಃಖವಾಗಿದೆ. ಓಂ ಶಾಂತಿ. pic.twitter.com/lUfqXE0WR6
— Narendra Modi (@narendramodi) May 8, 2023
14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಕಳೆದ ಕೆಲವು ದಿನಗಳಿಂದ ಆಹಾರವನ್ನು ಸೇವಿಸಲು ಸಾಧ್ಯವಾಗದಷ್ಟರ ಮಟ್ಟಿಗೆ ಅನಾರೋಗ್ಯಕ್ಕೀಡಾಗಿದ್ದ. ನಾಗರಹೊಳೆ ಉದ್ಯಾನವನದ ಹುಣಸೂರು ರೇಂಜ್ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರ ತಂಡ ಆನೆ ಬಲರಾಮನಿಗೆ ನಿರಂತರ ಚಿಕಿತ್ಸೆ ನೀಡಿದ್ದರೂ ಸಹ ಫಲಕಾರಿಯಾಗದೇ ಭಾನುವಾರ ಮೃತಪಟ್ಟಿದ್ದ.