• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಬಿಜೆಪಿ ಶಕ್ತಿ ಬಗ್ಗೆ ತಿಳಿಯದಿರುವುದೇ ರಾಹುಲ್‌ ಸಮಸ್ಯೆ, ಜನರ ಕೋಪ ಬಿಜೆಪಿಯನ್ನು ಸೋಲಿಸಲು ಸಾಕಾಗುವುದಿಲ್ಲ– ಪ್ರಶಾಂತ್‌ ಕಿಶೋರ್

ಪ್ರತಿಧ್ವನಿ by ಪ್ರತಿಧ್ವನಿ
October 28, 2021
in ದೇಶ, ರಾಜಕೀಯ
0
ಬಿಜೆಪಿ ಶಕ್ತಿ ಬಗ್ಗೆ ತಿಳಿಯದಿರುವುದೇ ರಾಹುಲ್‌ ಸಮಸ್ಯೆ, ಜನರ ಕೋಪ ಬಿಜೆಪಿಯನ್ನು ಸೋಲಿಸಲು ಸಾಕಾಗುವುದಿಲ್ಲ– ಪ್ರಶಾಂತ್‌ ಕಿಶೋರ್
Share on WhatsAppShare on FacebookShare on Telegram

ಮುಂದಿನ ಕೆಲವು ದಶಕಗಳವರೆಗೆ ಬಿಜೆಪಿ (ಕೇಂದ್ರ ರಾಜಕಾರಣದಿಂದ) ಎಲ್ಲಿಗೂ ಹೋಗುವುದಿಲ್ಲ, ಆದರೆ ರಾಹುಲ್‌ ಗಾಂಧಿ ಅವರ ಸಮಸ್ಯೆ ಏನೆಂದರೆ ಅವರು ಈ ಸತ್ಯವನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ ಎಂದು ಚುನಾವಣಾ ಪ್ರಚಾರ ತಂತ್ರಜ್ಞ ಪ್ರಶಾಂತ್‌ ಕಿಶೋರ್‌ ಹೇಳಿದ್ದಾರೆ.

ADVERTISEMENT

ಗೋವಾದಲ್ಲಿ ಬುಧವಾರ ಮಾತನಾಡಿದ ಪ್ರಶಾಂತ್ ಕಿಶೋರ್ ಅವರ ಈ ಹೇಳಿಕೆಯು ಕಾಂಗ್ರೆಸ್ ಮತ್ತು ಗಾಂಧಿ ಕುಟುಂಬದ ಸದಸ್ಯರೊಂದಿಗೆ ಅವರುೀ ಹಿಂದೆ ನಡೆಸಿದ ಮಾತುಕತೆಗಳು ಸಫಲವಾಗಿಲ್ಲ ಎಂಬ ಅನುಮಾನ ಹುಟ್ಟುವಂತೆ ಮಾಡಿದೆ.

ಭಾರತದ ರಾಜಕೀಯದಲ್ಲಿ ಇನ್ನು ಹಲವು ದಶಕಗಳ ಕಾಲ ಬಿಜೆಪಿ ಅಧಿಕಾರ ಮುಂದುವರೆಯಲಿದ್ದು, ಕೇಂದ್ರ ಬಿಂದುವಾಗಿ ಪಕ್ಷ ಇರಲಿದೆ. ಚುನಾವಣೆಯಲ್ಲಿ ಗೆಲ್ಲಲಿ, ಬಿಡಲಿ, ಬಿಜೆಪಿ ಭಾರತದ ರಾಜಕೀಯ ಪ್ರಮುಖ ಪಕ್ಷವಾಗಿ ಹೊರ ಹೊಮ್ಮಲಿದೆ. ಹೇಗೆಂದರೆ ಸ್ವಾಂತಂತ್ರ್ಯದ ಬಳಿಕ 40 ವರ್ಷಗಳ ಕಾಲ ಭಾರತದ ರಾಜಕೀಯದಲ್ಲಿ ಕಾಂಗ್ರೆಸ್ ಸಾಧಿಸಿದ ಹಿಡಿತದಂತೆ ಬಿಜೆಪಿ ಕೂಡ ಮುಂದಿನ ದಶಕಗಳ ಕಾಲ ತನ್ನ ಪ್ರಾಬಲ್ಯ ಮೆರೆಯಲಿದೆ. ಭಾರತದಲ್ಲಿ ಒಂದು ಸಲ ಶೇ 30 ರಷ್ಟು ಮತವನ್ನು ಪಡೆದರೆ ಸಾಕು, ಅಂತಹ ಪಕ್ಷಗಳು ರಾಜಕೀಯ ಪುಟದಿಂದ, ಜನರ ಮನಸ್ಸಿನಿಂದ ಅಷ್ಟು ಬೇಗ ಹೊರ ಹೋಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಬಿಜೆಪಿ ಸರ್ಕಾರದ ಕೆಲವು ನೀತಿಗಳ ಬಗ್ಗೆಗ್ಗೆ ಜನರು ಕೋಪಗೊಂಡಿದ್ದಾರೆ ಎಂಬ ಮಾತ್ರಕ್ಕೆ ಬಿಜೆಪಿ ರಾಜಕೀಯದಿಂದ ಹೊರಗುಳಿಯಲಿದೆ ಎಂಬ ಭ್ರಮೆಗೆ ಸಿಲುಕಬೇಡಿ. ಜನರ ಅಸಮಾಧಾನದಿಂದ ಮೋದಿ ಅವರು ಅಧಿಕಾರ ಕಳೆದುಕೊಳ್ಳಬಹುದು. ಆದರೆ, ಬಿಜೆಪಿ ರಾಜಕೀಯ ಅಸ್ತಿತ್ವದಲ್ಲಿ ಇರಲಿದೆ. ಈ ಸತ್ಯವನ್ನು ರಾಹುಲ್ ಗಾಂಧಿ ಅರ್ಥ ಮಾಡಿಕೊಂಡಿಲ್ಲ. ಜನರು ನರೇಂದ್ರ ಮೋದಿಯವರನ್ನು ದೂರ ತಳ್ಳುತ್ತಾರೆ. ಮೋದಿ ಬಗ್ಗೆ ಜನರಿಗೆ ಕೋಪ ಇದೆ ಎಂದು ರಾಹುಲ್‌ ಗಾಂಧಿ ಭಾವಿಸಿಕೊಂಡಿದ್ದಾರೆ. ಆದರೆ, ಆ ರೀತಿ ಎಂದಿಗೂ ಆಗುವುದಿಲ್ಲ ಎಂದು ಕಿಶೋರ್‌ ಅಭಿಪ್ರಾಯಪಟ್ಟಿದ್ದಾರೆ.

ಮೋದಿ ಮತ್ತು ಬಿಜೆಪಿಯ ಶಕ್ತಿಯನ್ನು ಪರೀಕ್ಷಿಸಿ, ಅರ್ಥಮಾಡಿಕೊಳ್ಳಿ. ಅದನ್ನು ಅರಿಯದಿದ್ದರೆ, ಅವರನ್ನು ಸೋಲಿಸಲು ಎಂದಿಗೂ ಪ್ರತಿತಂತ್ರ ಹೂಡಲು ಸಾಧ್ಯವಾಗುವುದಿಲ್ಲ ಎಂದು ಅವರು ಸಲಹೆ ನೀಡಿದ್ದಾರೆ.

ಪ್ರಶಾಂತ್ ಕಿಶೋರ್ ಅವರ ಹೇಳಿಕೆ ಸಾಕಷ್ಟು ಕುತೂಹಲ ಕೆರಳಿಸಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಹಾಗೂ ತಮಿಳೂನಾಡಿನಲ್ಲಿ ಎಂಕೆ ಸ್ಟಾಲಿನ್ ಅವರ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದ ಕಿಶೋರ್, ಕಾಂಗ್ರೆಸ್ ಸೇರುವ ಬಗ್ಗೆ ವದಂತಿಗಳು ಹಬ್ಬಿದ್ದವು. ಪ್ರಶಾಂತ್‌ ಅವರು ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಪಕ್ಷದ ಇತರೆ ನಾಯಕರ ಜತೆ ಹಲವು ಬಾರಿ ಮಾತುಕತೆ ನಡೆಸಿರುವುದು ಈ ವದಂತಿಗಳಿಗೆ ಪುಷ್ಟಿ ನೀಡಿದ್ದವು. ಆದರೆ ಅದರಲ್ಲಿ ಯಾವುದೇ ಫಲ ಕಂಡಿಲ್ಲ ಅನ್ನುವ ಅನುಮಾನ ಪ್ರಶಾಂತ್‌ ಅವರ ಈ ಹೇಳಿಕೆಯಿಂದ ವ್ಯಕ್ತವಾಗಿದೆ.

ಸುದೀರ್ಘ ರೈತ ಹೋರಾಟ, ನಿರಂತರ ಬೆಲೆ ಏರಿಕೆ, ನಿರುದ್ಯೋಗ ಮೊದಲಾದ ಜ್ವಲಂತ ಸಮಸ್ಯೆಗಳು ನರೇಂದ್ರ ಮೋದಿ ಅಲೆಯನ್ನು ಕುಗ್ಗಿಸಿದೆ ಹಾಗೂ ಮುಂದಿನ ಬಾರಿ ಬಿಜೆಪಿಗೆ ಇದರಿಂದ ಹಿನ್ನಡೆಯಾಗಲಿದೆ ಎಂಬ ಪ್ರತಿಪಕ್ಷಗಳ ನಂಬಿಕೆಯನ್ನೇ ಪ್ರಶಾಂತ್‌ ಕಿಶೋರ್‌ ಅವರ ಈ ಹೇಳಿಕೆ ಬುಡಮೇಲುಗೊಳಿಸಿದೆ.

Tags: BJPCongress Partyಕೋವಿಡ್-19ನರೇಂದ್ರ ಮೋದಿಪ್ರಶಾಂತ್‌ ಕಿಶೋರ್ಬಿಜೆಪಿರಾಹುಲ್‌ ಗಾಂಧಿ
Previous Post

ರಾಜಕೀಯ ಸಭ್ಯತೆಯೂ ಸಾಮಾಜಿಕ ಪ್ರಜ್ಞೆಯೂ : ಸಭ್ಯತೆ ಸೌಜನ್ಯ ಮತ್ತು ಪ್ರಾಮಾಣಿಕತೆಯ ಹುಡುಕಾಟದಲ್ಲಿ ಜನತೆ

Next Post

ಸವಾಲಿನ ಸಮರಕ್ಕೆ ಮುಂದಾದ ಸಮೀರ್ ವಾಂಖೆಡೆ ಮತ್ತು ನವಾಬ್ ಮಲಿಕ್

Related Posts

ದೇವಾಲಯಗಳ ಹುಂಡಿ ಎಣಿಸುವ ಜಾಗದಲ್ಲಿ ಸಿಸಿಟಿವಿ ಕಡ್ಡಾಯ: ಸಿಎಂ ಖಡಕ್‌ ಸೂಚನೆ
Top Story

ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಸಿಎಂ ಡಿ.ಕೆ ಶಿವಕುಮಾರ್  ಕೃತಜ್ಞತೆ

by ಪ್ರತಿಧ್ವನಿ
August 13, 2026
0

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಇಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದವು. ಬಳಿಕ ಕೆಲವು ಪ್ರಮುಖ ಹೋರಾಟಗಾರರ ತಂಡ ಮುಖ್ಯಮಂತ್ರಿ ಡಿ.ಕೆ....

Read moreDetails
ಎಸ್ಐಆರ್ ಪ್ರಕ್ರಿಯೆ: ಪ್ರಜಾಪ್ರಭುತ್ವ ಮತ್ತು ಸಮಾಜದ ಮೇಲೆ ಪರಿಣಾಮ

ರಿಹಾಬ್ ಕೇಂದ್ರದ ರೋಗಿಗಳನ್ನು SIR ಪ್ರಕ್ರಿಯೆಯಲ್ಲಿ ಸೇರಿಸಿ: ಮೋಹನ್ ಕುಮಾರ್ ದಾನಪ್ಪ ಆಗ್ರಹ

August 13, 2026
ವಾಲ್ಮೀಕಿ ಸಮಾಜದ ಬಗ್ಗೆ ಗೌರವ ಇದ್ರೆ ಬಿ.ನಾಗೇಂದ್ರ ರಾಜೀನಾಮೆ ಕೊಡಲಿ- ಬಿ.ವೈ ವಿಜಯೇಂದ್ರ

ವಾಲ್ಮೀಕಿ ಸಮಾಜದ ಬಗ್ಗೆ ಗೌರವ ಇದ್ರೆ ಬಿ.ನಾಗೇಂದ್ರ ರಾಜೀನಾಮೆ ಕೊಡಲಿ- ಬಿ.ವೈ ವಿಜಯೇಂದ್ರ

August 13, 2026
ವಿರೋಧ ಪಕ್ಷಗಳಿಗೆ ಮಾತಿನಲ್ಲೇ ಚಡಿ ಏಟು ಕೊಟ್ಟ ಪ್ರಿಯಾಂಕ್​ ಖರ್ಗೆ..

RSS ಕೇಂದ್ರ ಕಚೇರಿಯಿಂದಲೇ ‘ಹರ್ ಘರ್ ತಿರಂಗಾ’ ಆರಂಭಿಸಿ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಸವಾಲು

August 13, 2026
ಮೊಬೈಲ್ ಪತ್ತೆ ಕೇಸ್: ಪ್ರಜ್ವಲ್ ರೇವಣ್ಣ VIP ಸೆಲ್‌ನಿಂದ ಸಾಮಾನ್ಯ ಸೆಲ್‌ಗೆ ಶಿಫ್ಟ್

ಮೊಬೈಲ್ ಪತ್ತೆ ಕೇಸ್: ಪ್ರಜ್ವಲ್ ರೇವಣ್ಣ VIP ಸೆಲ್‌ನಿಂದ ಸಾಮಾನ್ಯ ಸೆಲ್‌ಗೆ ಶಿಫ್ಟ್

August 13, 2026
Next Post
ಸವಾಲಿನ ಸಮರಕ್ಕೆ ಮುಂದಾದ ಸಮೀರ್ ವಾಂಖೆಡೆ ಮತ್ತು ನವಾಬ್ ಮಲಿಕ್

ಸವಾಲಿನ ಸಮರಕ್ಕೆ ಮುಂದಾದ ಸಮೀರ್ ವಾಂಖೆಡೆ ಮತ್ತು ನವಾಬ್ ಮಲಿಕ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada