• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

ಪ್ರತಿಧ್ವನಿ by ಪ್ರತಿಧ್ವನಿ
June 27, 2025
in Top Story, ಜೀವನದ ಶೈಲಿ, ಸೌಂದರ್ಯ
0
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Share on WhatsAppShare on FacebookShare on Telegram

ಮೆದುಳು ಮನುಷ್ಯನ ಪ್ರಮುಖ ಅಂಗಗಳಲ್ಲಿಯೇ ಒಂದಾಗಿದ್ದು ಈ ಅಂಗಕ್ಕೆ ಸ್ವಲ್ಪ ಧಕ್ಕೆಯಾದರೂ ಅನಾರೋಗ್ಯಕ್ಕೆ ತುತ್ತಾಗುವ ಮನುಷ್ಯನ ಬದುಕು ದುಸ್ತರವಾಗಿರುತ್ತದೆ. ಮೆದುಳು ಒಂದು ಸೂಕ್ಷ್ಮ ಅಂಗವಾಗಿದ್ದು ಇದರ ಕುರಿತು ತಿಳಿಸುವ ಉದ್ದೇಶದಿಂದ ಸಂಬಂಧ ಪಟ್ಟ ಪುಸ್ತಕಗಳನ್ನು ಅಧ್ಯಯನ ಮಾಡಿ ಮಾಹಿತಿಯನ್ನು ಸಂಗ್ರಹಿಸಿ ಈ ಲೇಖನವನ್ನು ರಚಿಸಿದ್ದೇನೆ
ಮೆದುಳು ಮನುಷ್ಯನ ದೇಹದ ಅಂಗಗಳಲ್ಲಿ ಪ್ರಮುಖ ಅಂಗವಾಗಿದ್ದು ಇದರ ಬಗ್ಗೆ ಬಹಳಷ್ಟು ಜನರಿಗೆ ಅಲ್ಪ ಮಾಹಿತಿಯು ಮಾತ್ರ ತಿಳಿದಿದೆ. ಅದ್ಭುತಗಳಲ್ಲಿ ಮೆದುಳು ಉನ್ನತ ಸ್ಥಾನದಲ್ಲಿದ್ದು ಕೇವಲ ಅರ್ಧ ಕಿಲೋ ಗ್ರಾಂ ಇರುವ ಅಂಗದ ರಚನೆ ಮತ್ತು ಕಾರ್ಯವೈಖರಿ ಊಹಿಸಲಾರದಷ್ಟು ರೋಚಕವಾಗಿದೆ. ಹತ್ತು ಸಾವಿರ ಕೋಟಿ ನರಕೋಶಗಳಗೆ ನಡೆಯುವ ರಾಸಾಯನಿಕ ಕ್ರಿಯೆಗಳು, ಈ ರಾಸಾಯನಿಕ ಕ್ರಿಯೆಗಳಿಗೆ ಕಾರಣವಾಗುವ ನರವಾಹಕಗಳು ನಮ್ಮ ನಡೆ,ನುಡಿ ಮತ್ತು ಭಾವನೆಗಳನ್ನು ನಿರ್ಧರಿಸುತ್ತವೆ.

ADVERTISEMENT
DK Shivakumar : ಹೇಮಾವತಿ ಲಿಂಕ್ ಕೆನಾಲ್ ಫೈನಲ್ ಸಭೆ ಬಗ್ಗೆ ಡಿಕೆಶಿ ಹೇಳಿದ್ದೇನು? #pratidhvani

ತನ್ನ ಬಗ್ಗೆ ಆಲೋಚಿಸುವ ತನ್ನ ರಚನೆ, ಕಾರ್ಯ ವಿಧಾನ ಮತ್ತು ತನ್ನ ಸಾಮರ್ಥ್ಯವನ್ನು ಹೆಚ್ಚಿಸುವ ಶಕ್ತಿಯು ಮೆದುಳಿಗೆ ಮಾತ್ರ ಇದೆ. ಕೆಲವೊಮ್ಮೆ ಹತೋಟಿಗೆ ಸಿಗುವ, ಮತ್ತೊಮ್ಮೆ ಹತೋಟಿಗೆ ಸಿಗದ ನಮ್ಮ ಮನಸ್ಸಿನ ಕೇಂದ್ರವು ಮೆದುಳು ಆಗಿದ್ದು ಅದೇ ಮೆದುಳಿಗೆ ಸ್ವಲ್ಪ ಹಾನಿಯಾದರೂ ಮನುಷ್ಯನು ಅನಾರೋಗ್ಯಕ್ಕೆ ತುತ್ತಾಗುತ್ತಾನೆ. ಹೃದಯ ಬಡಿತ, ಉಸಿರಾಟ ಮತ್ತು ದೇಹದ ತಾಪಮಾನದಲ್ಲಿ ಏರುಪೇರಾಗುತ್ತದೆ. ನಮ್ಮ ಮೆದುಳಿನಲ್ಲಿರುವ ಹತ್ತು ಸಾವಿರ ಕೋಟಿಗೂ ಹೆಚ್ಚು ನರಕೋಶಗಳು ಸದಾ ಚುರುಕಾಗಿ ಕೆಲಸ ಮಾಡುವ ಸಾಮರ್ಥ್ಯಯಿದ್ದರೂ ಅಷ್ಟೇ ಸೂಕ್ಷ್ಮವಾಗಿದೆ. ತಲೆಗೆ ಪೆಟ್ಟು ಬಿದ್ದ ಸಂಧರ್ಭದಲ್ಲಿ ಮೆದುಳಿಗೆ ಹಾನಿಯುಂಟಾದರೆ ಸರಿಯಾಗಲು ಬಹಳ ಸಮಯವು ಹಿಡಿಯುತ್ತದೆ. ಕಾರಣ ಮೆದುಳಿನ ನರಕೋಶಗಳಿಗೆ ಸರಿ ಮಾಡಿಕೊಳ್ಳುವ ಸಾಮರ್ಥ್ಯವು ತುಂಬ ಕಡಿಮೆಯಿದ್ದು ಸರಿ ಹೋಗಲು ಸಹಾಯಕವಾಗುವ ಯಾವುದೇ ಔಷಧಿಗಳಿಲ್ಲ. ಈ ಮೆದುಳು ಎಷ್ಟು ಚುರುಕಾಗಿದೆಯೆಂದರೆ ದೇಹದ ಅಂಗಾಂಗಳಿಗೆ ತಮ್ಮ ಕೆಲಸದ ಸಂದೇಶವನ್ನು ತಿಳಿಸುತ್ತದೆ. ಭಾರತೀಯರು ಮನಸ್ಸು ಮತ್ತು ಆತ್ಮದ ಕುರಿತು ತಿಳಿಸಿದರೆ ಗ್ರೀಕರು ಮೆದುಳಿನ ಕುರಿತು ತಿಳಿಸುವ ಪ್ರಯತ್ನವನ್ನು ಮಾಡಿದರು. ಕೆಲವು ಜನರು ತಲೆ ದಪ್ಪವಿದ್ದರೆ ಹೆಚ್ಚು ಬುದ್ಧಿವಂತರು ಎಂಬ ತಪ್ಪು ಭಾವನೆಯನ್ನು ಹೊಂದಿದ್ದಾರೆ. ಪ್ರತಿಭಾವಂತರ ಮೆದುಳನ್ನು ಸಾಮಾನ್ಯ ಜನರ ಮೆದುಳಿಗೆ ಹೋಲಿಸಿದರೆ ಅಂತಹ ವಿಶೇಷತೆ ಏನು ಇಲ್ಲ.

ಅತ್ಯಂತ ಸೂಕ್ಷ್ಮವಾದ, ಅಷ್ಟೇ ಭದ್ರತೆಯನ್ನು ಬಯಸುವ, ಸ್ವಲ್ಪ ಹಾನಿಯಾದರೂ ತಡೆದುಕೊಳ್ಳದ ನಮ್ಮ ಮೆದುಳು ಜೀವಂತವಿರುವಾಗ ಬಹಳ ಮೃದುವಾಗಿರುತ್ತದೆ. ಅತ್ಯಂತ ಪ್ರಭಾವಶಾಲಿಯಾದರೂ ತುಂಬ ದುರ್ಬಲವಾಗಿರುವ ನಮ್ಮ ಮೆದುಳನ್ನು ಪೃಕೃತಿಯು ತಲೆಯ ಮೇಲಿನ ಕೂದಲು ರಾಶಿ, ಚರ್ಮ, ಸ್ನಾಯುವಿನ ಸೆಳೆತ,ತಲೆ ಬುರುಡೆ, ಮೂರು ಪೊ ರೆಗಳಿಂದ ಸುತ್ತುವರೆದಿರುವ ಏಳು ಸುತ್ತಿನ ಕೋಟೆಯನ್ನು ನಿರ್ಮಿಸಿದೆ. ಅಪಾರ ಪ್ರಮಾಣದ ಸಾಮರ್ಥ್ಯವನ್ನು ಹೊಂದಿರುವ ನಮ್ಮ ಮೆದುಳು ಕೂಡ ಒಂದೇ ಜೀವಕೋಶದಿಂದ ತನ್ನ ಬೆಳವಣಿಗೆಯನ್ನು ಪ್ರಾರಂಭಿಸುತ್ತದೆ. ಆದರೂ ಪುರುಷರ ಮತ್ತು ಸ್ತ್ರೀಯರ ಮೆದುಳಿಗೆ ಏನಾದರೂ ವ್ಯತ್ಯಾಸವಿದೆಯೇ ಎನ್ನುವ ಪ್ರಶ್ನೆಯು ಇನ್ನೂ ಹಲವರ ಮನಸ್ಸಿನಲ್ಲಿ ಇಂದಿಗೂ ಪ್ರಶ್ನೆಯಾಗಿದೆ. ಆದರೆ ಇದು ತಪ್ಪು ಕಲ್ಪನೆಯಾಗಿದ್ದು ಪುರುಷರ ಮತ್ತು ಸ್ತ್ರೀಯರ ಮೆದುಳಿನಲ್ಲಿ ಯಾವ ವ್ಯತ್ಯಾಸವೂ ಇಲ್ಲ. ಬುದ್ಧಿವಂತಿಕೆಯಲ್ಲಿ ಸ್ತ್ರೀ ಪುರುಷರು ಇಬ್ಬರೂ ಸಮಾನವಾಗಿದ್ದಾರೆ. ಸಾಧಾರಣ ಬುದ್ಧಿವಂತರ ಮತ್ತು ಮೇಧಾವಿಗಳ ಮೆದುಳಿನ ಗಾತ್ರದಲ್ಲಿ ಯಾವ ವ್ಯತ್ಯಾಸವೂ ಇರುವುದಿಲ್ಲ. ಮೇಧಾವಿಗಳ ಮೆದುಳನ್ನು ಮತ್ತು ಸಾಮಾನ್ಯ ಜನರ ಮೆದುಳನ್ನು ಒಂದು ಕಡೆ ಸೇರಿಸಿದರೆ ಯಾರ ಮೆದುಳು ಯಾವುದು ಎಂದು ಹೇಳುವುದು ಕಷ್ಟವಾಗುತ್ತದೆ. ಮೇಧಾವಿಗಳ ಮೆದುಳಿನ ಯಾವುದೇ ಭಾಗವು ವಿಶೇಷವಾಗಿ ಬೆಳೆದಿರುವುದಿಲ್ಲ. ಬುದ್ಧಿ, ಶಕ್ತಿ, ಸಾಮರ್ಥ್ಯಗಳ ಆಧಾರದ ಮೇಲೆ ಮೇಲೆ ಮೇಧಾವಿತನ ನಿರ್ಧಾರವಾಗುತ್ತದೆ. ನಾವುಗಳೆಲ್ಲರೂ ಸ್ಥಿರವಾಗಿ ಒಂದು ಕೆಲಸದಲ್ಲಿ ನಮ್ಮ ದೈನಂದಿನ ಚಟುವಟಿಕೆಗಳಿಗೆ ಹೊಂದಿ ಕೊಂಡ ನಂತರ ನಮ್ಮ ಮೆದುಳಿಗೆ ಹೆಚ್ಚು ಕೆಲಸವನ್ನು ಕೊಡುವುದಿಲ್ಲ.

ಸ್ವಲ್ಪ ರಮ್ ಹಾಕಿದರೆ ನನ್ನ ಮೆದುಳು ಚುರುಕಾಗಿರುತ್ತದೆ ಎನ್ನುವರು ಕೆಲವರಾದರೆ,ವಿಸ್ಕಿ ತೆಗೆದುಕೊಂಡರನೇ ನನಗೆ ಕಥೆ, ಕವನಗಳನ್ನು ಬರೆಯಲು ಸಾಧ್ಯವಾಗುತ್ತದೆ ಎನ್ನುವವರು ಇದ್ದಾರೆ. ಆಲ್ಕೋಹಾಲ್ ಆಗಲಿ, ಇತರೆ ಮಾದಕ ಪದಾರ್ಥಗಳು ಮೆದುಳು ಮತ್ತು ಮನಸ್ಸನ್ನು ಪ್ರಚೋದಿಸುತ್ತವೆ ಎಂಬ ನಂಬಿಕೆ ಹಲವಾರು ಜನರ ಮನಸ್ಸಿನಲ್ಲಿ ಇದೆ. ಆದರೆ ಇದು ತಪ್ಪು ಕಲ್ಪನೆಯಾಗಿದ್ದು ವಾಸ್ತವದಲ್ಲಿ ಅಲ್ಕೋಹಾಲ್,ಇತರೆ ಮಾದಕ ಪದಾರ್ಥಗಳಾಗಲಿ ಮೆದುಳನ್ನು ಕುಗ್ಗಿಸುವ ರಾಸಾಯನಿಕವಾಗಿದ್ದು ದೀರ್ಘಕಾಲದಲ್ಲಿ ಅದು ಮೆದುಳಿಗೆ ಮಾರಕವಾಗುತ್ತದೆ. ಮೀನು, ಬೆಂಡೆಕಾಯಿ, ಪ್ರೋಟೀನ್, ವಿಟಮಿನ್ ಇರುವ ಯಾವುದೇ ಆಹಾರ ಪದಾರ್ಥಗಳ ಸೇವನೆಯಿಂದ ಮೆದುಳಿನ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಮೆದುಳಿನ ಶಕ್ತಿಯನ್ನು ಹೆಚ್ಚಿಸುವುದಾಗಲಿ, ಆದ ಹಾನಿಯನ್ನು ಸರಿಪಡಿಸುವ ಯಾವುದೇ ಔಷಧಗಳಿಲ್ಲ. ಇಂತಹ ಅಸಂಖ್ಯ ಕಾರ್ಯ ಚಟುವಟಿಕೆಗಳನ್ನು ಹೊಂದಿರುವ ನಮ್ಮ ಮೆದುಳನ್ನು ಕಾಪಾಡಿಕೊಳ್ಳುವುದು ಪ್ರಮುಖ ಕರ್ತವ್ಯವಾಗಿದೆ. ಏಕೆಂದರೆ ಮೆದುಳಿಗೆ ತನ್ನನ್ನು ತಾನು ರಿಪೇರಿ ಮಾಡಿಕೊಳ್ಳುವ ಶಕ್ತಿ ಕಡಿಮೆ ಇರುತ್ತದೆ. ಆದ್ದರಿಂದ ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶದಿಂದ ನಮ್ಮ ದೇಶದ, ರಾಜ್ಯ ಸರ್ಕಾರ ಮತ್ತು ಪೋಲಿಸ್ ಇಲಾಖೆಯ ಅಧಿಕಾರಿಗಳು ದ್ವೀಚಕ್ರ ವಾಹನ ಸವಾರರಿಗೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸಲು ಹೇಳುತ್ತಿದ್ದಾರೆ.

ಆದ್ದರಿಂದ ಇನ್ನಾದರೂ ಎಚ್ಚೆತ್ತು ಕೊಳ್ಳುವುದು ಒಂದೇ ಮಾರ್ಗವಾಗಿದೆ.
ನಾನು ಕೂಡ ಹೆಲ್ಮೆಟ್ ಧರಿಸಿ ನನ್ನ ದ್ವೀಚಕ್ರ ವಾಹನವನ್ನು ಚಲಾಯಿಸುತ್ತಿದ್ದೇನೆ. ನೀವು ಕೂಡ ನಿಮ್ಮ ಸುರಕ್ಷತೆಗಾಗಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನವನ್ನು ಚಲಾಯಿಸಿ. ನಿಮ್ಮ ಸ್ನೇಹಿತರಿಗೆ, ಸಂಬಂಧಕರಿಗೂ ಕೂಡ ಅವರ ಸುರಕ್ಷತೆಗಾಗಿ ಅವರಿಗೂ ಕೂಡ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನವನ್ನು ಚಲಾಯಿಸಲು ಸೂಚಿಸಿ. ಎಲ್ಲರೂ ಟ್ರಾಫಿಕ್ ನಿಯಮಗಳನ್ನು ಪಾಲಿಸುತ್ತ ಟ್ರಾಫಿಕ್ ಪೋಲಿಸರಿಗೆ ಸಹಕಾರವನ್ನು ಕೊಡೋಣ ನಮ್ಮ ಆರೋಗ್ಯ ನಮ್ಮ ಕೈಯಲ್ಲಿ ಸುರಕ್ಷಿತವಾಗಿ ಇರೋಣ

ನವೀನ ಹೆಚ್ ಎ ಅಂಕಣಕಾರರು ಲೇಖಕರು
ಹನುಮನಹಳ್ಳಿ
ಕೆ ಆರ್ ನಗರ

Tags: brainbrain damagebrain healthbrain injuriesbrain injuryclosed head injurydefense and veterans brain injury centerhead injuryhead injury preventionmild brain injurypower to preventprimary and secondary brain injuryprimary vs secondary brain injurysecondary brain injurysevere brain injurytraumatic brain injurytraumatic brain injury (disease or medical condition)traumatic brain injury nursing
Previous Post

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

Next Post

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

Related Posts

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
0

ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂಬ ಸಚಿವ ಕೆ‌. ಎನ್. ರಾಜಣ್ಣ (KN Rajanna) ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ (Dcm Dk...

Read moreDetails
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
Next Post
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ - ವಿಷ ಹಾಕಿ ಹುಲಿ ಕೊಂದ್ರಾ..?! 

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada