• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ವರ್ಣಾಶ್ರಮ ವ್ಯವಸ್ಥೆಯ ಪುನರ್ ಸ್ಥಾಪನೆಗೆ ಆರ್‌ಎಸ್‌ಎಸ್ ಪ್ರಯತ್ನಿಸುತ್ತಿದೆ: ಸಿದ್ದರಾಮಯ್ಯ ಕಿಡಿ

Any Mind by Any Mind
September 22, 2021
in ಕರ್ನಾಟಕ, ರಾಜಕೀಯ
0
ಮೇಲ್ಜಾತಿಗೆ ಮೀಸಲಾತಿ ಘೋಷಣೆಯಾದ್ದರಿಂದ ಮೀಸಲಾತಿ ಬಗ್ಗೆ RSS ಧೋರಣೆ ಬದಲಾದಂತಿದೆ -ಸಿದ್ದರಾಮಯ್ಯ
Share on WhatsAppShare on FacebookShare on Telegram

ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದಂತೆ ಸೆಂಡರ್ ಫಾರ್ ಎಜ್ಯುಕೇಷನ್ ಅಂಡ್ ಸೋಷಿಯಲ್ ಸ್ಟಡೀಸ್ ಸಂಸ್ಥೆಗೆ (ಸೆಸ್) ಕಡಿಮೆ ದರದಲ್ಲಿ ನೂರಾರು ಎಕರೆ ಭೂಮಿ ನೀಡುವ ತೀರ್ಮಾನವನ್ನು ಕೈ ಬಿಡುವಂತೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ADVERTISEMENT

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನೂರಾರು ಕೋಟಿ ರೂ. ಮೌಲ್ಯದ ಭೂಮಿಯನ್ನು ಕಡಿಮೆ ಬೆಲೆಗೆ ಪರಭಾರೆ ಮಾಡುವ ಸರ್ಕಾರದ ನಿರ್ಧಾರಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಸೆಸ್ ಸಂಸ್ಥೆಯಲ್ಲಿರುವವ ಎಲ್ಲರೂ ಆರ್.ಎಸ್.ಎಸ್ ಗೆ ಸೇರಿದವರು. ಇದೊಂದು ಮನುವಾದಿಗಳ ಸಂಸ್ಥೆಯಾಗಿದ್ದು, ಈ ಸಂಸ್ಥೆ ವರ್ಣಾಶ್ರಮ ವ್ಯವಸ್ಥೆಯ ಪುನರ್ ಸ್ಥಾಪನೆಗೆ ಪ್ರಯತ್ನಿಸಲಿದೆ.‌

ನಿನ್ನೆ ನಡೆದ ವಿಧಾನಸಭಾ ಅಧಿವೇಶನದಲ್ಲಿ ಬಿಜೆಪಿ ಸರ್ಕಾರ ಆತುರಾತುರವಾಗಿ ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದ ಮಸೂದೆಯನ್ನು ಚರ್ಚೆಗೆ ಅವಕಾಶ ನೀಡದೆ, ಧ್ವನಿಮತದ ಮೂಲಕ‌ ಅಂಗೀಕರಿಸಿದೆ.

ಈ ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪಿಸಲು ಉದ್ದೇಶಿಸಿರುವುದು ಸೆಸ್ (ಸೆಂಟರ್ ಫಾರ್ ಎಜುಕೇಶನ್ ಎಂಡ್ ಸೋಷಿಯಲ್ ಸ್ಟಡೀಸ್) ಎಂಬ ಸಂಸ್ಥೆ. ಈ ಸಂಸ್ಥೆಯಲ್ಲಿರುವ ಎಲ್ಲರೂ ಆರ್.ಎಸ್.ಎಸ್ ನವರು.

ಸೆಸ್ ಸಂಸ್ಥೆ ಈ ವರೆಗೆ ಯಾವುದೇ ಶೈಕ್ಷಣಿಕ ಸಂಸ್ಥೆಯನ್ನು ನಡೆಸಿಲ್ಲ, ಜೊತೆಗೆ ವಿಶ್ವವಿದ್ಯಾಲಯ ಆರಂಭಿಸಲು ಬೇಕಾದ ಮೂಲಸೌಕರ್ಯ ಇವರಲ್ಲಿ ಇಲ್ಲ. ಯಾವ ಆಧಾರ ಮತ್ತು ಅರ್ಹತೆಯ ಮೇರೆಗೆ ವಿಶ್ವವಿದ್ಯಾಲಯ ಆರಂಭಿಸಲು ರಾಜ್ಯ ಸರ್ಕಾರ ಇವರಿಗೆ ಭೂಮಿ ನೀಡಿದೆ ಎಂದು ಸ್ಪಷ್ಟಪಡಿಸಬೇಕು.

ರಾಜ್ಯ ಬಿಜೆಪಿ ಸರ್ಕಾರ 26-04-2021 ರಲ್ಲಿ ಸಚಿವ ಸಂಪುಟ ಸಭೆ ನಡೆಸಿ, ಆ ಮೂಲಕ ನಿರ್ಣಯ ಕೈಗೊಂಡು ದೇವನಹಳ್ಳಿ ಬಳಿಯ ಹರಳೂರು ಗ್ರಾಮದಲ್ಲಿ ಏರೋಸ್ಪೇಸ್ ಹಾಗೂ ಡಿಫೆನ್ಸ್ ಇಂಡಸ್ಟ್ರಿ ಸ್ಥಾಪನೆಯ ಉದ್ದೇಶಕ್ಕಾಗಿ ವಶಪಡಿಸಿಕೊಂಡಿದ್ದ ಕೆ.ಐ.ಎ.ಡಿ.ಬಿ ಗೆ ಸೇರಿದ 116 ಎಕರೆ 16 ಗುಂಟೆ  ಜಮೀನನ್ನು ಸೆಸ್ ಸಂಸ್ಥೆಗೆ ನೀಡಲು ಆದೇಶಿಸಿದೆ.

ಕೆ.ಐ.ಎ.ಡಿ.ಬಿ ಅವರು ರೈತರಿಂದ ಭೂಮಿ ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಎಕರೆಗೆ ರೂ. 1 ಕೋಟಿ 50 ಲಕ್ಷದಂತೆ ಒಟ್ಟು 116 ಎಕರೆಗೆ ರೂ.175 ಕೋಟಿ ಪರಿಹಾರ ನೀಡಿದ್ದಾರೆ. ಇದೇ ಜಮೀನನ್ನು ರಾಜ್ಯ ಸರ್ಕಾರ ಕೇವಲ ರೂ. 50 ಕೋಟಿಗೆ ಸೆಸ್ ಸಂಸ್ಥೆಗೆ ನೀಡಿದೆ. ಈ ಭೂಮಿಯ ಈಗಿನ ಮೌಲ್ಯ ಕನಿಷ್ಟ ರೂ. 300 ರಿಂದ 400 ಕೋಟಿಗಳಾಗುತ್ತದೆ.

ಅತ್ಯಧಿಕ ಮೌಲ್ಯದ ಭೂಮಿಯನ್ನು ಅತೀ ಕಡಿಮೆ ಬೆಲೆಗೆ ಸರ್ಕಾರ ಆರ್.ಎಸ್.ಎಸ್ ಗೆ ಬಳುವಳಿ ರೂಪದಲ್ಲಿ ನೀಡಿದೆ. ಖಾಸಗಿ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದ ನಿಬಂಧನೆಗಳನ್ನು ಗಾಳಿಗೆ ತೂರಿ, ಶಿಕ್ಷಣ ಸಂಸ್ಥೆಯೇ ಇಲ್ಲದ ಸಂಸ್ಥೆಗೆ ಭೂಮಿ ನೀಡಿರುವುದು ಅಪರಾಧವಷ್ಟೇ ಅಲ್ಲ, ನನ್ನ ಪ್ರಕಾರ ಇದೊಂದು ದೊಡ್ಡ ಹಗರಣ ಕೂಡ ಹೌದು.

ಕೊರೊನಾ ಎರಡನೇ ಅಲೆಯ ಭೀತಿಯಿದ್ದ ವೇಳೆ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರ್ಕಾರ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆ ಆತುರಾತುರವಾಗಿ ಜಮೀನನ್ನು ಸೆಸ್ ಸಂಸ್ಥೆಗೆ ನೀಡಿದೆ.

ಇದು ಮನುವಾದಿಗಳ ವಿಶ್ವವಿದ್ಯಾಲಯ, ಚಾಣಕ್ಯ ಕೂಡ ಮನುವಾದಿ ಕುಟುಂಬಕ್ಕೆ ಸೇರಿದವರು. ಈ ಶಿಕ್ಷಣ ಸಂಸ್ಥೆ ಚತುರ್ವರ್ಣ ವ್ಯವಸ್ಥೆಯ ಪುನರ್ ಸ್ಥಾಪನೆ ಮಾಡುವ ದುರುದ್ದೇಶ ಹೊಂದಿದೆ ಎಂಬುದು ನನ್ನ ಊಹೆ.

ಚಾಣಕ್ಯ ವಿಶ್ವವಿದ್ಯಾಲಯ ಮಸೂದೆಯ ಬಗ್ಗೆ ಗೌರವಾನ್ವಿತ ಸಭಾಧ್ಯಕ್ಷರು ಕೂಡ ಪಕ್ಷಪಾತಿಯಂತೆ ನಡೆದುಕೊಂಡಿದ್ದಾರೆ. ಅಗತ್ಯವಾಗಿ ಚರ್ಚಿಸಬೇಕಿದ್ದ ಪ್ರಮುಖ ವಿಚಾರಗಳನ್ನು ಚರ್ಚೆಯಿಂದ ಕೈಬಿಟ್ಟು, ಈ ಮಸೂದೆಗೆ ಹೆಚ್ಚಿನ ಮಹತ್ವ ನೀಡಿ, ಮಂಡಿಸಲು ಅವಕಾಶ ನೀಡಿದರು.

ಚರ್ಚೆಗೆ ಅವಕಾಶ ನೀಡುವಂತೆ ಸಭಾಧ್ಯಕ್ಷರಲ್ಲಿ ಎಷ್ಟು ಬಾರಿ ಮನವಿ ಮಾಡಿದರು ಅವರು ನನ್ನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಚರ್ಚೆಗೆ ಅವಕಾಶವನ್ನೇ ನೀಡದೆ ಮಸೂದೆಗೆ ತರಾತುರಿಯಲ್ಲಿ ಅನುಮೋದನೆ ಪಡೆಯುವ ಅಗತ್ಯವೇನಿತ್ತು? ಇದೇನು ಸಾರ್ವಜನಿಕ ತುರ್ತು ವಿಷಯವಾಗಿತ್ತೇ?

ಕೆ.ಐ.ಎ.ಡಿ.ಬಿ ಜಮೀನನ್ನು ಕಡಿಮೆ ಬೆಲೆಗೆ ಸೆಸ್ ಸಂಸ್ಥೆಗೆ ನೀಡುವುದರಿಂದ ಸರ್ಕಾರಕ್ಕೆ ಹೆಚ್ಚಿನ ನಷ್ಟವಾಗಲಿದೆ. ಅಂದರೆ ಇದು ರಾಜ್ಯದ ಜನರಿಗಾದ ನಷ್ಟ. ಯಾರೋ ಮನುವಾದಿಗಳು ಶಿಕ್ಷಣ ಸಂಸ್ಥೆ ಆರಂಭಿಸಲು ರಾಜ್ಯದ ಜನರು ಏಕೆ ನಷ್ಟ ಅನುಭವಿಸಬೇಕು ಎಂಬುದು ನನ್ನ ವಾದ.

ಇದು ರಾಜ್ಯ ಸರ್ಕಾರದ ಸ್ವಜನಪಕ್ಷಪಾತಿ ನಿರ್ಣಯವಾಗುತ್ತದೆ ಹಾಗಾಗಿ ಸರ್ಕಾರ ಕೂಡಲೇ ಭೂಮಿ ನೀಡುವ ನಿರ್ಣಯವನ್ನು ರದ್ದುಪಡಿಸಬೇಕು ಹಾಗೂ ಸೆಸ್ ಸಂಸ್ಥೆಗೆ ವಿಶ್ವವಿದ್ಯಾಲಯ ಆರಂಭಿಸಲು ಯಾವ ಅರ್ಹತೆಯೂ ಇಲ್ಲದಿರುವುದರಿಂದ, ವಿಶ್ವವಿದ್ಯಾಲಯ ಸ್ಥಾಪನೆಗೆ ಅವಕಾಶ ನೀಡಬಾರದು ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದರು.

ನಮ್ಮ ಅವಧಿಯಲ್ಲಿ ಯಾವುದೇ ಸಂಸ್ಥೆಗೆ ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆಗೆ ಭೂಮಿ ನೀಡಿಲ್ಲ. ಈ ಸರ್ಕಾರ ಕೈಗೊಂಡ ತೀರ್ಮಾನ ಪ್ರಶ್ನಿಸುತ್ತೇವೆ. ಕಾನೂನು ಹೋರಾಟ ನಡೆಸುತ್ತೇವೆ ಎಂದರು.

ಕೈಗಾರಿಕೆ ಭೂಮಿಯಲ್ಲಿ ವಿಶ್ವವಿದ್ಯಾಲಯ ಯಾಕೆ : ಡಿ.ಕೆ. ಶಿವಕುಮಾರ್ ಪ್ರಶ್ನೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತನಾಡಿ, ಖಾಸಗಿ ವಿಶ್ವವಿದ್ಯಾಲಯ ಸ್ಥಾಪನೆಗೆ ಇರುವ ನಿಯಮಾವಳಿ ಪರಿಶೀಲನೆ ಮಾಡಿದಾಗ ಈ ಸಂಸ್ಥೆಗೆ ನೀಡಿದ ಪರವಾನಗಿಯಲ್ಲಿ ಅದೆಲ್ಲದರ ಉಲ್ಲಂಘನೆ ಆಗಿದೆ. ಒಂದು ಸಂಸ್ಥೆಯೇ ಇಲ್ಲ. ಜಮೀನು ಕಡಿಮೆ ಬೆಲೆಗೆ ನೀಡುತ್ತಾರೆ ಎಂದು ಪಡೆಯುವುದು ಸರಿಯಲ್ಲ.

ಏರ್ ಪೋರ್ಟ್ ಪಕ್ಕ ಏರೋಸ್ಪೇಸ್ ಗೋಸ್ಕರ ಕೊಂಡುಕೊಂಡ ಭೂಮಿಯನ್ನು ಶಿಕ್ಷಣ ಸಂಸ್ಥೆಗೆ ನೀಡಿದ್ದು ಸರಿಯಲ್ಲ. ಇಲ್ಲಿ ಒಂದು ಎಕರೆಭೂಮಿಗೆ 10 ಕೋಟಿ ರೂ.ವರೆಗೂ ಮಾರುಕಟ್ಟೆ ಮೌಲ್ಯ ಇದೆ.

ಮಾಗಡಿ ಬಳಿ ಸಂಸ್ಕೃತ ವಿಶ್ವವಿದ್ಯಾಲಯ ಕ್ಕೆ ಭೂಮಿ ನೀಡಿದ್ದೀರಿ ಅದರ ಪಕ್ಕದಲ್ಲೇ ಸರ್ಕಾರಿ ಭೂಮಿ ಇದ್ದರೆ ಈ ವಿವಿಗೆ ನೀಡಿ. ಕೈಗಾರಿಕೆಗಳು ಬಂದರೆ ನೀಡಬೇಕೆಂದು‌ಕೊಂಡು ವಶಪಡಿಸಿಕೊಂಡ ಭೂಮಿಯಲ್ಲಿ ಆರ್ ಎಸ್ ಎಸ್ ವಿಶ್ವವಿದ್ಯಾಲಯ ಸ್ಥಾಪನೆ ಏಕೆ? ನಾವು ಸಹ ಸಾಕಷ್ಟು ಭೂಮಿ ನೀಡಿದ್ದೇವೆ. ಸರ್ಕಾರಿ ಭೂಮಿ ರಾಜ್ಯದ ಯಾವುದೇ ಭಾಗದಲ್ಲಿದ್ದರೆ ನೀಡಿ. ಕೈಗಾರಿಕಾ ಭೂಮಿ ಬಳಕೆ ಸರಿಯಲ್ಲ ಎಂದರು.

Tags: Basavaraj BommaiBJPCongress PartyCovid 19DK Shivakumarಕರೋನಾಕೋವಿಡ್-19ಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಲಸಿಕಾ ಮೇಳ ನಂತರ ದಿನನಿತ್ಯ ಲಸಿಕೆಗಳಲ್ಲಿ 90 ಪ್ರತಿಶತದಷ್ಟು ಇಳಿಕೆ: ಆರೋಗ್ಯ ಸಚಿವರಿಂದಿಲ್ಲ ಪ್ರತಿಕ್ರಿಯೆ !

Next Post

ಕೊಪ್ಪಳ ಹನುಮಾನ್ ದೇವಸ್ಥಾನಕ್ಕೆ ದಲಿತ ಮಗು ಪ್ರವೇಶ: ದಂಡ ವಿಧಿಸಲು ಮುಂದಾದ ಐವರ ಬಂಧನ

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ಕೊಪ್ಪಳ ಹನುಮಾನ್ ದೇವಸ್ಥಾನಕ್ಕೆ ದಲಿತ ಮಗು ಪ್ರವೇಶ: ದಂಡ ವಿಧಿಸಲು ಮುಂದಾದ ಐವರ ಬಂಧನ

ಕೊಪ್ಪಳ ಹನುಮಾನ್ ದೇವಸ್ಥಾನಕ್ಕೆ ದಲಿತ ಮಗು ಪ್ರವೇಶ: ದಂಡ ವಿಧಿಸಲು ಮುಂದಾದ ಐವರ ಬಂಧನ

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada