• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Congress vs BJP : ಕಾಂಗ್ರೆಸ್ ಕುಟುಂಬಕ್ಕೆ ಬೆಂಕಿ ಹಾಕಲು ಕೇಸರಿ ಪಾಳಯ ಸಿದ್ಧತೆ..!

ಕೃಷ್ಣ ಮಣಿ by ಕೃಷ್ಣ ಮಣಿ
May 17, 2023
in Top Story, ಇದೀಗ, ಕರ್ನಾಟಕ
0
Congress vs BJP : ಕಾಂಗ್ರೆಸ್ ಕುಟುಂಬಕ್ಕೆ ಬೆಂಕಿ ಹಾಕಲು ಕೇಸರಿ ಪಾಳಯ ಸಿದ್ಧತೆ..!
Share on WhatsAppShare on FacebookShare on Telegram

ಕಾಂಗ್ರೆಸ್ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿ. ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ (siddaramaiah) ಹಾಗು ಡಿ.ಕೆ ಶಿವಕುಮಾರ್ (d.k.Shivakumar) ಪೈಪೋಟಿ ನಡೆಸುತ್ತಿದ್ದಾರೆ. ಆದರೆ ಇದರ ನಡುವೆ ಮಾಜಿ ಸಚಿವ ಡಾ ಸುಧಾಕರ್ (Dr.K.Sudhakar) ಕಾಂಗ್ರೆಸ್ ಬಗ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಹಿಂದೆ 2018 ರಲ್ಲಿ ಕಾಂಗ್ರೆಸ್ ಹಾಗು‌ ಜೆಡಿಎಸ್ ಮೈತ್ರಿ ಸರ್ಕಾರ ಮುರಿದು ಬೀಳಲು ಸಿದ್ದರಾಮಯ್ಯ ಅವರೇ ಕಾರಣ ಎಂದು ಟ್ವೀಟ್ ಮಾಡಿದ್ದಾರೆ.

ADVERTISEMENT

ಮಾನ್ಯ ಸಿದ್ದರಾಮಯ್ಯನವರು ಸಮ್ಮಿಶ್ರ ಸರ್ಕಾರದ ದಿನಗಳಲ್ಲಿ ಶಾಸಕರಲ್ಲಿ ತೋಡಿಕೊಳ್ಳುತ್ತಿದ್ದ ಅಸಹಾಯಕತೆ, ಕೊಡುತ್ತಿದ್ದ ಆಶ್ವಾಸನೆ ಇದೇ ಎಂಬುದು ಸತ್ಯ.

ಸಿದ್ದರಾಮಯ್ಯನವರ ಅಸಹಾಯಕತೆ ಸಹ ನಾವು ಪಕ್ಷ ಬಿಡಲು ಒಂದು ಪ್ರೇರಣೆಯಾಯಿತು ಎಂದರೆ ಅದು ತಪ್ಪಾಗಲಾರದು.

— S T Somashekar Gowda (@STSomashekarMLA) May 17, 2023

2018ರಲ್ಲಿ ಜೆಡಿಎಸ್-ಕಾಂಗ್ರೆಸ್ (congress-jds) ಸಮ್ಮಿಶ್ರ ಸರ್ಕಾರದಲ್ಲಿ ನಮಗೆ ಆಗುತ್ತಿದ್ದ ಅನ್ಯಾಯದ ಬಗ್ಗೆ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯ ಬಳಿ ಹೇಳಲು ಹೋದಾಗ ”ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ“ ಎಂದು ಹೇಳುತ್ತಿದ್ದರು. ”2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿನವೂ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ“ ಎಂದು ಶಾಸಕರಿಗೆ ಸಮಾಧಾನ ಮಾಡುತ್ತಿದ್ದರು ಎಂದಿದ್ದಾರೆ. ಆ ಬಳಿಕ ನಾವು ರಾಜೀನಾಮೆ ಕೊಟ್ಟು ಬಿಜೆಪಿ ಸೇರಿದೆವು. ನಮ್ಮ ನಿರ್ಧಾರದ ಹಿಂದೆ ಪರೋಕ್ಷವಾಗಿ ಸಿದ್ದರಾಮಯ್ಯ ಅವರ ಪ್ರೇರಣೆ ಇದೆ ಎಂದಿದ್ದಾರೆ. ಇದೇ ಮಾತಿಗೆ ಮಾಜಿ ಸಚಿವ ಎಸ್.ಟಿ ಸೋಮಸೇಖರ್ ಕೂಡ ಸಮ್ಮತಿ ಸೂಚಿಸಿದ್ದಾರೆ.

ಸಿದ್ದರಾಮಯ್ಯ ಕಾಲು ಎಳೆದಿದ್ದು ಲಾಭವೋ ನಷ್ಟವೋ..?

ಜೆಡಿಎಸ್ ಕಾಂಗ್ರೆಸ್ ಸರ್ಕಾರ ಬೀಳಿಸಿ, ಬಿಜೆಪಿ ಸೇರಿದ್ದ ಸುಧಾಕರ್ ಹಾಗು ಎಸ್.ಟಿ ಸೋಮಶೇಖರ್, ನಮ್ಮ ನಿರ್ಧಾರದ ಹಿಂದೆ ಸಿದ್ದರಾಮಯ್ಯ ಇಲ್ಲ ಎಂದು ಸಾಕಷ್ಟು ಬಾರಿ ಬಹಿರಂಗ ಹೇಳಿಕೆ ನೀಡಿದ್ದರು. ಆದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟು ಹೈಕಮಾಂಡ್ ಜೊತೆಗೆ ಚರ್ಚೆ ನಡೆಸುತ್ತಿರುವ ಸಮಯದಲ್ಲಿ ಹೇಳುವ ಮೂಲಕ ಸಿದ್ದರಾಮಯ್ಯ ಕುತಂತ್ರಿ ಎಂದು ಬಿಂಬಿಸಲು ಹೊರಟಿದ್ದಾರೆ. ವಿಶೇಷ ಅಂದ್ರೆ ಮಾಜಿ ಸಚಿವರ ಲೆಕ್ಕಾಚಾರ ಹಳಿ ತಪ್ಪಿದೆ. ಒಂದು ವೇಳೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗದೆ ಇದ್ದರೆ ಮುಂದೆ ಕಾಂಗ್ರೆಸ್‌ನಿಂದ ಯಾರೇ ಮುಖ್ಯಮಂತ್ರಿ ಆದರೂ ಅಧಿಕಾರ ಉಳಿಸಿಕೊಳ್ಳಲು ಸಾಧ್ಯವಿಲ್ಲ ಅನ್ನೋ ಸಂದೇಶವನ್ನು ಕಳಿಸಿದಂತಿದೆ. ಸಿದ್ದರಾಮಯ್ಯ ನಿರ್ಲಕ್ಷ್ಯ ಅಸಾಧ್ಯ ಎಂದು ಟ್ವೀಟ್ ಸಾರಿ ಹೇಳ್ತಿದೆ.

ಡಿ.ಕೆ.ಶಿವಕುಮಾರ್ ಸಿಎಂ ಆಗಲಿ ಅನ್ನೋ ಕೂಗು..

ಬಿಜೆಪಿ ನಾಯಕರು ಈಗಾಗಲೇ ಕಾಂಗ್ರೆಸ್ ವಿರುದ್ಧ ಹೋರಾಟಕ್ಕೆ ಸಂಚು ರೂಪಿಸುತ್ತಿದ್ದಾರೆ. D K ಶಿವಕುಮಾರ್​ ಸಿಎಂ ಆಗಲಿ ಎಂದು ಕುಮ್ಮಕ್ಕು ನೀಡುತ್ತಿರುವುದೇ ಬಿಜೆಪಿ ಹಾಗು ಬಿಜೆಪಿ ಕಾರ್ಯಕರ್ತ ಪಡೆ. ಸಾಮಾಜಿಕ ಜಾಲತಾಣದಲ್ಲಿ ಡಿ.ಕೆ ಶಿವಕುಮಾರ್​ ಪರವಾಗಿ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಆದರೆ ಇದು ಸಂಘ ಪರಿವಾರದ ನಿಲುವು, ಕಾಂಗ್ರೆಸ್​ ಪಕ್ಷವನ್ನು ಹಳ್ಳಕ್ಕೆ ಬೀಳಿಸಲು ತೋಡಿರುವ ಹಳ್ಳ ಎನ್ನುವುದನ್ನು ಕಾಂಗ್ರೆಸ್​ ಅರ್ಥ ಮಾಡಿಕೊಳ್ತಿಲ್ಲ. ಒಂದು ವೇಳೆ ಡಿ.ಕೆ ಶಿವಕುಮಾರ್​ ರಾಜ್ಯದ ಮುಖ್ಯಮಂತ್ರಿ ಆದರೆ, ಭ್ರಷ್ಟ ಸಿಎಂ ಅನ್ನೋ ಆರೋಪದ ಜೊತೆಗೆ ಕಾನೂನು ಕುಣಿಕೆಯಲ್ಲಿ ಸಿಲುಕಿಸುವ ತಯಾರಿಯೂ ನಡೆದಿದೆ.

‘ಬಲಪಂಥೀಯ ತಂತ್ರ ಗೊತ್ತಿಲ್ಲ’ ಮಾಜಿ ಸಚಿವ ಕೌಂಟರ್!

2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು.

1/3

— Dr Sudhakar K (Modi ka Parivar) (@DrSudhakar_) May 17, 2023

ಡಾ ಸುಧಾಕರ್​ ಟ್ವೀಟ್​ ಮಾಡಿದ್ದರ ಹಿಂದೆ ಸಂಘ ಪರಿವಾರದ ಸಂಚು ಅಡಗಿದೆ ಎಂದು ಯಾರಾದರೂ ಊಹೆ ಮಾಡಬಹುದು. ಆದರೆ ಸಂಘ ಪರಿವಾರದ ಈ ಲೆಕ್ಕಾಚಾರ ತಿಳಿಯದ ಮಾಜಿ ಸಚಿವ ಎಂಟಿಬಿ ನಾಗರಾಜ್​, ಸುಧಾಕರ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಸುಧಾಕರ್​​ ಹೇಳುತ್ತಿರೋದು ಸುಳ್ಳು, ಹಾಗಿದ್ದರೆ ಇಷ್ಟು ದಿನ ಸುಧಾಕರ್​ ಸುಮ್ಮನಿದ್ದಿದ್ದು ಯಾಕೆ..? ಎಂದು ಪ್ರಶ್ನೆ ಮಾಡಿದ್ದಾರೆ. ಇನ್ನು ನಾವು ಬಿಜೆಪಿ ಸೇರಿದ್ದರ ಹಿಂದೆ ಸಿದ್ದರಾಮಯ್ಯ ತಂತ್ರಗಾರಿಕೆ ಮಾಡಿರಲಿಲ್ಲ. ಸುಧಾಕರ್​ ಸೋಲಿನಿಂದ ಭ್ರಮನಿರಸನಗೊಂಡು ಹೀಗೆ ಹೇಳ್ತಿದ್ದಾರೆ. ಒಂದು ಸಿದ್ದರಾಮಯ್ಯ ಕಾರಣ ಅನ್ನೋದೇ ಸತ್ಯವಾದ್ರೆ ಮನೆ ದೇವರ ಮೇಲೆ ಆಣೆ ಮಾಡಲಿ ಹೇಳಲಿ ಎಂದು ಸವಾಲು ಹಾಕಿದ್ದಾರೆ.

ಕಾಂಗ್ರೆಸ್ ಒಡಕು ಬಿಜೆಪಿ ಪಾಳಯಕ್ಕೆ ಲಾಭವೇನು..?

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿ ಅನ್ನೋದು ಬಹುತೇಕ ಕಾಂಗ್ರೆಸ್​ ಶಾಸಕರ ಅಭಿಪ್ರಾಯ. ಆದರೂ ಡಿ.ಕೆ ಶಿವಕುಮಾರ್​ಗೆ ತಲೆಯಲ್ಲಿ ಹುಳ ಬಿಡುವ ಮೂಲಕ ಕಾಂಗ್ರೆಸ್​ನಲ್ಲಿ ಗೊಂದಲ ಸೃಷ್ಟಿಯಾಗುವಂತೆ ಮಾಡಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಡಿ.ಕೆ ಶಿವಕುಮಾರ್​ ಬಗ್ಗೆ ತೋರಿಸುತ್ತಿರುವ ಅನುಕಂಪ ಪರಿಪೂರ್ಣವಾದದ್ದು ಅಲ್ಲ. ಆದರೂ ಗೊಂದಲ ಸೃಷ್ಟಿಸಿ, ರಾಜ್ಯದ ಜನರ ಎದುರು ಕಾಂಗ್ರೆಸ್​ ಮಾನ ಹರಾಜು ಹಾಕುವುದು ಈ ಸಂಚಿನ ಉದ್ದೇಶ. ಸಚಿವ ಸುಧಾಕರ್​, ಎಸ್​.ಟಿ ಸೋಮಶೇಖರ್​ ಒಂದು ರೀತಿಯಲ್ಲಿ ಹೇಳಿದ್ರೆ ಎಂಟಿಬಿ ನಾಗರಾಜ್​ ಉಲ್ಟಾ ಹೊಡೆದಿರುವುದರಲ್ಲೇ ಇದೆಲ್ಲಾ ದುರುದ್ದೇಶ ಕೃತ್ಯ ಅನ್ನೋದು ಬಯಲಾಗ್ತಿದೆ.

ಕೃಷ್ಣಮಣಿ

Tags: #soniyagandhibasavarajbommaiBJPBreaking NewsbsyediyurappaCongress PartyDr SudhakarHD KumaraswamyjdskarnatakalaetstnewslivenewsmallikarjunkhargeMTBNagarajPMModirahulgandhisiddaramaiahsoniyagandhist somashekharಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಸಂಪೂರ್ಣ ಬಹುಮತವಿದ್ದರೂ ಕಾಂಗ್ರೆಸ್ ಸರ್ಕಾರ ರಚಿಸುತ್ತಿಲ್ಲ : ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ‌

Next Post

Karnataka CM Race : ಸಿಎಂ ಆಯ್ಕೆಗೆ 48 ಗಂಟೆ ಡೆಡ್ ಲೈನ್‌ ; ಡಿಕೆಶಿ ಬಿಗಿ ಪಟ್ಟು, ಸಿದ್ದರಾಮಯ್ಯಗೆ ತಾತ್ಕಾಲಿಕ ಹಿನ್ನಡೆ

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
Next Post
Karnataka CM Race : ಸಿಎಂ ಆಯ್ಕೆಗೆ 48 ಗಂಟೆ ಡೆಡ್ ಲೈನ್‌ ;  ಡಿಕೆಶಿ ಬಿಗಿ ಪಟ್ಟು, ಸಿದ್ದರಾಮಯ್ಯಗೆ ತಾತ್ಕಾಲಿಕ ಹಿನ್ನಡೆ

Karnataka CM Race : ಸಿಎಂ ಆಯ್ಕೆಗೆ 48 ಗಂಟೆ ಡೆಡ್ ಲೈನ್‌ ; ಡಿಕೆಶಿ ಬಿಗಿ ಪಟ್ಟು, ಸಿದ್ದರಾಮಯ್ಯಗೆ ತಾತ್ಕಾಲಿಕ ಹಿನ್ನಡೆ

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada