ಬೆಂಗಳೂರು: ವರ್ತೂರು ಎಸ್ಎಸ್ಎಸ್ ಬಾರ್ ನಲ್ಲಿ ನಡೆದಿದ್ದ ಮುನಿಯಪ್ಪ ಕೊಲೆ ಪ್ರಕರಣ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಕುಡಿದ ಅಮಲಿನಲ್ಲಿ ಶ್ರೀಧರ್ ಮತ್ತು ಮುನಿಯಪ್ಪ ಎಂಬವರು ಕುಡಿದು ಗಲಾಟೆ ಮಾಡುತ್ತಿದ್ದರು. ಈ ವೇಳೆ ಕೋಪಗೊಂಡ ಶ್ರೀಧರ್, ಮಚ್ಚಿನಿಂದ ಹೊಡೆದು ಮುನಿಯಪ್ಪ(45) ಅವರನ್ನು ಕೊಲೆಗೈದಿದ್ದ.
ಶ್ರೀಧರ್ ಮತ್ತು ಮೃತ ಮುನಿಯಪ್ಪ ಇಬ್ಬರ ಪರಿಚಿತರಾಗಿದ್ದು, ಒಂದೇ ಏರಿಯಾದಲ್ಲಿ ವಾಸಿಸುತ್ತಿದ್ದರು. ಶ್ರೀಧರ್ ಬಗ್ಗೆ ಆತನ ತಂದೆಗೆ ಮುನಿಯಪ್ಪ ಮಾಹಿತಿ ನೀಡಿದ್ದ ಅನ್ನೊ ಕಾರಣಕ್ಕೆ ಶ್ರೀಧರ್ ಕೊಲೆ ಮಾಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಘಟನೆಯು ಶುಕ್ರವಾರ ತಡರಾತ್ರಿ ವರ್ತೂರು ಠಾಣಾ ವ್ಯಾಪ್ತಿಯ ಆಲಸಹಳ್ಳಿ ಮುಖ್ಯ ರಸ್ತೆಯಲ್ಲಿರುವ ಎಸ್’ಎಸ್’ಎಸ್ ಬಾರ್’ನಲ್ಲಿ ನಡೆದಿತ್ತು.
ಪ್ರಕರಣ ಸಂಬಂಧ ವರ್ತೂರು ಪೊಲೀಸ್ ಠಾಣೆ ಯಲ್ಲಿ ಕೇಸ್ ದಾಖಲಾಗಿದ್ದು, ಆರೋಪಿ ಶ್ರೀಧರ್ ನನ್ನು ವರ್ತೂರು ಪೊಲೀಸರು ಬಂಧಿಸಿದ್ದಾರೆ.