
ಜಮ್ಮು ಮತ್ತು ಕಾಶ್ಮೀರದ (Jammu and Kashmir)ಬಾರಾಮುಲ್ಲಾದಲ್ಲಿ (Baramulla)ಭಯೋತ್ಪಾದಕನೊಬ್ಬ (terrorist)ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಓಡಿಹೋಗುತ್ತಿದ್ದು ಆದರೆ ಸೇನಾ (Army )ಸಿಬ್ಬಂದಿಗಳು ಆತನನ್ನು ಕೊಂದಿದ್ದಾರೆ.(killed) ಬಾರಾಮುಲ್ಲಾದಲ್ಲಿ ಈ ಎನ್ಕೌಂಟರ್ (Encounter)ನಡೆದಿತ್ತು ರಾಷ್ಟ್ರೀಯ ರೈಫಲ್ಸ್ ಕಮಾಂಡರ್ ಬ್ರಿಗೇಡಿಯರ್ ಸಂಜಯ್ ಕನ್ನೋತ್ ಅವರು, ‘ಬಾರಾಮುಲ್ಲಾದ ಚಕ್ ಟಪ್ಪರ್ ಕ್ರಿಯರಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ.

ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಡ್ರೋನ್ ದೃಶ್ಯಗಳಲ್ಲಿ ಭಯೋತ್ಪಾದಕನೊಬ್ಬ ಮನೆಯಿಂದ ಹೊರಬಂದು ಓಡಿ ಹೋಗಲು ಯತ್ನಿಸುತ್ತಿದ್ದನು. ಈ ವೇಳೆ ಭಾರತೀಯ ಸೇನೆಯ ಯೋಧರು ಗುಂಡಿನ ದಾಳಿ ನಡೆಸಿದ್ದಾರೆ. ಭೀಕರ ಗುಂಡಿನ ದಾಳಿಯ ನಡುವೆ, ಉಗ್ರ ನೆಲದ ಮೇಲೆ ಬಿದ್ದು ಕೆಲವು ಮೀಟರ್ಗಳವರೆಗೆ ನೆಲದ ಮೇಲೆ ತೆವಳುತ್ತಾ ಹೋಗೆ ಗಿಡಗಳ ಕೆಳಗೆ ಅವಿತು ಕುಳಿತುಕೊಳ್ಳುತ್ತಾನೆ. ಆದರೆ ಸೇನಾ ಸಿಬ್ಬಂದಿಯ ಗುಂಡಿನ ದಾಳಿಯಲ್ಲಿ ಭಯೋತ್ಪಾದಕ ಸಾವನ್ನಪ್ಪಿದ್ದಾನೆ.
Baramulla encounter drone footage.Kabhi 🐖 ko m@ut ke Darr se bhagta dekha hai. Yaha Dekho. pic.twitter.com/8jKEkjQDld
— Baba Banaras™ (@RealBababanaras) September 15, 2024
ಭಯೋತ್ಪಾದಕರ ಚಟುವಟಿಕೆಯ ಬಗ್ಗೆ ಮಾಹಿತಿ ಪಡೆದ ನಂತರ, ಭದ್ರತಾ ಪಡೆಗಳು ಶುಕ್ರವಾರ ತಡರಾತ್ರಿ ಉತ್ತರ ಕಾಶ್ಮೀರ ಜಿಲ್ಲೆಯ ಪಟ್ಟಾನ್ ಪ್ರದೇಶದ ಚಕ್ ತಪ್ಪರ್ ಕ್ರಿರಿಯಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದವು ಎಂದು ರಾಷ್ಟ್ರೀಯ ರೈಫಲ್ಸ್ ಕಮಾಂಡರ್ ಬ್ರಿಗೇಡಿಯರ್ ಸಂಜಯ್ ಕನ್ನೋತ್ ಹೇಳಿದ್ದಾರೆ. ಖಾಲಿ ಕಟ್ಟಡದಲ್ಲಿ ಅಡಗಿಕೊಂಡಿದ್ದ ಭಯೋತ್ಪಾದಕರು ಭಾರತೀಯ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಬ್ರಿಗೇಡಿಯರ್ ಕಣ್ಣೋತ್ ತಿಳಿಸಿದ್ದಾರೆ.
⚡Exclusive drone footages 🎥
— Subcontinental Defender 🛃 (@Anti_Separatist) September 16, 2024
Chak Tappar Kreeri #Baramulla Encounter (14 Sep, 2024)#JammuKashmir #IndianArmy ⚔ https://t.co/fKgiFiUPla pic.twitter.com/nXVfh2yU9m