ಚಾಮರಾಜನಗರ : ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಒಂದು ಮುಖ ದಲಿತಪರ ನಾಯಕ ಎಂದು ತೋರಿಸುತ್ತದೆ ಮತ್ತೊಂದು ಮುಖ ದಲಿತರನ್ನು ಅವನತಿಗೆ ದೂಡುವುದಾಗಿ ತೋರಿಸುತ್ತದೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದರು. ಅವರ ಎರಡನೇ ಮುಖ ಅರ್ಥಮಾಡಿಕೊಳ್ಳುವುದರಲ್ಲಿ ದಲಿತ ನಾಯಕರು ಹಿನ್ನಡೆ ಅನುಭವಿಸಿದ್ದೇವೆ. ಪರಿಶಿಷ್ಠರ ಅಭಿವೃದ್ದಿಗಾಗಿ ಬಜೆಟ್ನಲ್ಲಿ ಮೀಸಲಿಟ್ಟಿರುವ 11.50 ಸಾವಿರ ಕೋಟಿ ರೂ. ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿರುವ ಬಗ್ಗೆ ಯಾರು ಕೂಡ ಚಕಾರ ಎತ್ತಿಲ್ಲ. ನೈಜವಾಗಿ ದಲಿತರಿಗೆ ಅನ್ಯಾಯವಾಗಿರುವ ಬಗ್ಗೆ ಯಾರು ಕೂಡ ಕಾಳಜಿ ವಹಿಸಿಲ್ಲ. ಇದನ್ನು ಕಾಂಗ್ರೆಸ್ ಸಾಮಾಜಿಕ ಜಾಲತಾಣ ಬೇರೆಡೆ ಗಮನ ಸೆಳೆದು ನಮ್ಮನ್ನು ದಾರಿ ತಪ್ಪಿದೆ ಎಂದು ಮಾಜಿ ಶಾಸಕ ಎಸ್. ಬಾಲರಾಜು ದೂರಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಎಸ್ಸಿ ಎಸ್ಪಿ, ಟಿಎಸ್ಪಿ ಅನುದಾನ ದುರ್ಬಳಕೆ ಮಾಡಿಕೊಂಡಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉತ್ತರಿಸಬೇಕು ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಒತ್ತಾಯಿಸಿದರು. ನಗರದ ಡಾ.ರಾಜ್ಕುಮಾರ್ ರಂಗಮಂದಿರದಲ್ಲಿ ಸಾಮಾಜಿಕ ನ್ಯಾಯ ಸಬಲೀಕರಣ ವೇದಿಕೆ ವತಿಯಿಂದ ನಡೆದ ಕರ್ನಾಟಕ ಕಾಂಗ್ರೆಸ್ ಸರ್ಕಾರದಿಂದ ಎಸ್ಸಿಎಸ್ಪಿ, ಟಿಎಸ್ಪಿ ಅನುದಾನ ದುರ್ಬಳಕೆ ಬಗ್ಗೆ ಎಸ್ಸಿ, ಎಸ್ಟಿ ಜನಾಂದೋಲನ, ಜಿಲ್ಲಾ ಮಟ್ಟದ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ರವರು, ಆದಿಕವಿ ಶ್ರೀ ವಾಲ್ಮೀಕಿಯವರು ಸೂರ್ಯ, ಚಂದ್ರರಿರುವವರೆಗೂ ಶಾಶ್ವತವಾಗಿ ಇರುತ್ತಾರೆ. ಸಂವಿಧಾನದಡಿ ಆಯವ್ಯಯದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಎಸ್ಸಿ, ಎಸ್ಟಿ ಸಮುದಾಯಗಳಿಗೆಅನುದಾನವನ್ನು ಮೀಸಲಿಡುತ್ತದೆ. ಇಂತಹ ಅನುದಾನವನ್ನು ಕಸಿಯುವ ಕೆಲಸವನ್ನು ಯಾವುದೇ ಸರ್ಕಾರ ಮಾಡಬಾರದು ಎಂದರು.