• Home
  • About Us
  • ಕರ್ನಾಟಕ
Tuesday, October 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಹು ನಿರೀಕ್ಷಿತ “45” ಚಿತ್ರದ ಚಿತ್ರೀಕರಣ ಮುಕ್ತಾಯ

ಪ್ರತಿಧ್ವನಿ by ಪ್ರತಿಧ್ವನಿ
September 29, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಕರುನಾಡ ‌ಚಕ್ರವರ್ತಿ ಡಾ||ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ ಬಹು ನಿರೀಕ್ಷಿತ “45” ಚಿತ್ರ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಚಿತ್ರ. ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ಮೂಡಿಬಂದಿರುವ ಈ ಪ್ಯಾನ್ ಇಂಡಿಯಾ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿ, ಕುಂಬಳಕಾಯಿ ಒಡೆಯಲಾಗಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಪತ್ರಿಕಾಗೋಷ್ಠಿಗೂ ಮುನ್ನ ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅವರನ್ನು ನಿರ್ಮಾಪಕ ರಮೇಶ್ ರೆಡ್ಡಿ ಅವರು ಸನ್ಮಾನಿಸಿದರು.

ADVERTISEMENT

ಮೊದಲು ಮಾತನಾಡಿದ ಶಿವರಾಜಕುಮಾರ್ ಅವರು, “45” ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದು ಬಹಳ ಖುಷಿಯಾಗಿದೆ. ಈ ಚಿತ್ರದಲ್ಲಿ ನಾವು ಮೂವರು ನಟಿಸಿದ್ದೇವೆ. ಅವರು ಮುಂದು. ಇವರು ಮುಂದು ಅಂತ ಇಲ್ಲ. ಇಲ್ಲಿ ಎಲ್ಲರು ಒಂದೇ. ಉಪೇಂದ್ರ ಅವರ ಜೊತೆ ನಟಿಸಲು ನಾನು ಯಾವಾಗಲೂ ಸಿದ್ದ. ರಾಜ್ ಬಿ ಶೆಟ್ಟಿ ಅವರ ಜೊತೆಗೆ ನಟಿಸಿದ್ದು ಸಂತೋಷವಾಗಿದೆ. ಅರ್ಜುನ್ ಜನ್ಯ ಅವರ ಮೊದಲ ನಿರ್ದೇಶನದ ಚಿತ್ರ ಅಂತ ಹೇಳಲಿಕ್ಕೆ ಆಗಲ್ಲ. ಅಷ್ಟು ಅದ್ಭುತ ನಿರ್ದೇಶನ ಅವರದು. ಅಷ್ಟೇ ಅದ್ದೂರಿಯಾಗಿ ರಮೇಶ್ ರೆಡ್ಡಿ ನಿರ್ಮಾಣ ಮಾಡಿದ್ದಾರೆ. ರವಿವರ್ಮ ಅವರ ಸಾಹಸ ನಿರ್ದೇಶನದಲ್ಲಿ ಮೂಡಿಬಂದಿರುವ ಸಾಹಸ ಸನ್ನಿವೇಶಗಳು ಸೂಪರ್. “45” ಇಡೀ ಭಾರತೀಯರೆ ಮೆಚ್ಚುವಂತಹ ಆಕ್ಷನ್ ಚಿತ್ರವಾಗಲಿದೆ ಎಂದರು.

ಕಥೆಯನ್ನು ಅನಿಮೇಷನ್‌ ಮೂಲಕ ಹೇಳಿದ್ದನ್ನು ನಾನು ಹಾಲಿವುಡ್ ನಲ್ಲಿ ಕೇಳಿದ್ದೆ. ಆದರೆ ಅರ್ಜುನ್ ಜನ್ಯ ಅವರು ಕನ್ನಡದಲ್ಲೇ ಅದನ್ನು ಮಾಡಿ ತೋರಿಸಿದ್ದಾರೆ. ಅಷ್ಟೇ ಅಲ್ಲದೇ ಅನಿಮೇಷನ್‌ ಮೂಲಕ ಕಥೆ ಹೇಳಿದ ರೀತಿಯಲ್ಲೇ ಚಿತ್ರವನ್ನೂ ಮಾಡಿದ್ದಾರೆ. ಅರ್ಜುನ್ ಜನ್ಯ ಅವರು ಅಂದುಕೊಂಡಂತೆ ಚಿತ್ರ ಮಾಡಲು ನಿರ್ಮಾಪಕ ರಮೇಶ್ ರೆಡ್ಡಿ ಸಾಥ್ ನೀಡಿದ್ದಾರೆ. ಶಿವಣ್ಣ ಹಾಗೂ ರಾಜ್ ಬಿ ಶೆಟ್ಟಿ ಅವರ ಜೊತೆಗೆ ಅಭಿನಯಿಸಿದ್ದು ಸಂತಸವಾಗಿದೆ ಎಂದು ತಿಳಿಸಿದ ನಟ ಉಪೇಂದ್ರ, ಚಿತ್ರೀಕರಣ ಮುಗಿದಿದೆ. ಚಿತ್ರವನ್ನು ಅದಷ್ಟು ಬೇಗ ತೆರೆಯ ಮೇಲೆ ನೋಡಲು ಕಾತುರದಿಂದ ಕಾಯುತ್ತಿದ್ದೇನೆ ಎಂದರು.

ಶಿವಣ್ಣ ಅವರ ಚಿತ್ರಗಳನ್ನು ನೋಡುತ್ತಾ ವಿಷಲ್ ಹೊಡೆಯುತ್ತಿದ್ದೆ. ಉಪೇಂದ್ರ ಅವರ “A” ಚಿತ್ರದ ಪೋಸ್ಟರನ್ನು ಬೆರಗಾಗಿ ನೋಡುತ್ತಿದ್ದೆ. ಅವರಿಬ್ಬರ ಅಭಿಮಾನಿ ನಾನು. ಇಂದು ಅವರ ಜೊತೆಗೆ ನಟಿಸಿರುವುದು ನನ್ನ ಭಾಗ್ಯ. ಇನ್ನು “45”, ಕನ್ನಡಿಗರು ಹೆಮ್ಮೆಯ ಪಡುವ ಸಿನಿಮಾ ಅಂತ ಕನ್ನಡಿಗನಾಗಿ ಹೇಳುತ್ತೇನೆ. ಈ ಸಿನಿಮಾದಲ್ಲಿ ನಟಿಸಿದ್ದು ನನಗೂ ಹೆಮ್ಮೆಯಿದೆ ಎಂದರು ರಾಜ್ ಬಿ ಶೆಟ್ಟಿ.

“45” ಚಿತ್ರವನ್ನು ದೇವಸ್ಥಾನವೆಂದು ಮಾತು ಆರಂಭಿಸಿದ ನಿರ್ದೇಶಕ ಅರ್ಜುನ್ ಜನ್ಯ, ಶಿವರಾಜಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ಈ ಮೂವರು ಬ್ರಹ್ಮ ವಿಷ್ಣು ಮಹೇಶ್ವರ ಇದ್ದ ಹಾಗೆ. ರಮೇಶ್ ರೆಡ್ಡಿ ಅವರು ಈ ದೇವಸ್ಥಾನ ಕಟ್ಟಿದವರು. ಛಾಯಾಗ್ರಾಹಕ ಸತ್ಯ ಹೆಗಡೆ ಪ್ರಧಾನ ಪುರೋಹಿತರು. ಹೀಗೆ ಇವರೆಲ್ಲರ ಸಹಕಾರದಿಂದ 106 ದಿನಗಳ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯವಾಗಿದೆ. ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದ. ಮುಂದೆ ಸಿಜಿ ವರ್ಕ್ ಆರಂಭವಾಗಲಿದೆ ಎಂದರು.

ಅರ್ಜುನ್ ಜನ್ಯ ಅವರು ಕಥೆ ಹೇಳಿದರು. ಆನಂತರ ಈ ಕಥೆಯನ್ನು ಅನಿಮೇಷನ್‌ ನಲ್ಲಿ ಚಿತ್ರ ಮಾಡಿಕೊಂಡು ಬಂದು ತೋರಿಸುತ್ತೇನೆ ಎಂದರು. ಅನಿಮೇಷನ್‌ ನಲ್ಲಿ ಈ ಚಿತ್ರ ನೋಡಿದಾಗ ತುಂಬಾ ಇಷ್ಟವಾಯಿತು. ಅರ್ಜುನ್ ಜನ್ಯ ಅವರು ಸಂಗೀತ ನಿರ್ದೇಶಕರಾಗಿ ಗೆದ್ದಿದ್ದಾರೆ. ನಿರ್ದೇಶಕರಾಗಿ ಮೊದಲ ಚಿತ್ರ ಹೇಗೆ ಮಾಡುತ್ತಾರೆ? ಎಂದು ಸಾಕಷ್ಟು ಜನ ಕೇಳಿದರು. ನನಗೂ ಆತಂಕ ಇತ್ತು. ಆದರೆ ಚಿತ್ರೀಕರಣ ಶುರುವಾದ ಮೇಲೆ ಅವರು ಪ್ರತಿಯೊಂದು ಸನ್ನಿವೇಶಗಳನ್ನು ನನಗೆ ಕಳುಹಿಸುತ್ತಿದ್ದರು. ಅದನ್ನು ನೋಡಿ ನನಗೆ ತುಂಬಾ ಖುಷಿಯಾಯಿತು. ಇನ್ನೂ ಶಿವರಾಜಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ಮೂರು ಜನರು ನನ್ನ ಚಿತ್ರದಲ್ಲಿ ನಟಿಸಿರುವುದು ನನ್ನ ಭಾಗ್ಯ.ಈ ಚಿತ್ರ ಬರೀ ಕರ್ನಾಟಕದಲ್ಲಷ್ಟೇ ಅಲ್ಲ. ಇಡೀ ಭಾರತದಲ್ಲೇ ಹೆಸರು ಮಾಡುವ ನಂಬಿಕೆಯಿದೆ ಎಂದು ನಿರ್ಮಾಪಕ ರಮೇಶ್ ರೆಡ್ಡಿ ತಿಳಿಸಿದರು. ಛಾಯಾಗ್ರಾಹಕ ಸತ್ಯ ಹೆಗಡೆ “45” ಚಿತ್ರದ ಬಗ್ಗೆ ಮಾತನಾಡಿದರು.

Tags: Arjun JanyaProducer Ramesh ReddySivarajkumarThe shooting of the much awaited film "45"Upendra and Raj B Shetty
Previous Post

ರಾಜೀನಾಮೆ ನೀಡದಂತೆ ರಕ್ತದಲ್ಲಿ ಸಿ.ಎಂ.ಗೆ ಅಭಿಮಾನಿಯಿಂದ ರಕ್ತ ಪತ್ರ‌.

Next Post

ಬೀದರ್|ಸೋಯಾ ರಾಶಿ ಮಾಡುವಾಗ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

Related Posts

Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

by ಪ್ರತಿಧ್ವನಿ
October 13, 2025
0

ಜ್ವರ ಹಾಗೂ ಯೂರಿನ್ ಸೋಂಕಿನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ್ರು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮುಂದಿನ ಕೆಲವು ದಿನಗಳ...

Read moreDetails

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

October 13, 2025

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

October 13, 2025

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025
Next Post

ಬೀದರ್|ಸೋಯಾ ರಾಶಿ ಮಾಡುವಾಗ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

Recent News

Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

by ಪ್ರತಿಧ್ವನಿ
October 13, 2025
Top Story

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
October 13, 2025
Top Story

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

by ಪ್ರತಿಧ್ವನಿ
October 13, 2025
Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

October 13, 2025

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada