• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದುಬೈನಲ್ಲಿ ನಡೆಯುತ್ತಿದೆ ವೀರ ಕಂಬಳ ಚಿತ್ರದ ಶೂಟಿಂಗ್.

ಪ್ರತಿಧ್ವನಿ by ಪ್ರತಿಧ್ವನಿ
February 20, 2025
in Top Story, ಕರ್ನಾಟಕ, ವಿಶೇಷ, ಸಿನಿಮಾ
0
ದುಬೈನಲ್ಲಿ ನಡೆಯುತ್ತಿದೆ ವೀರ ಕಂಬಳ ಚಿತ್ರದ ಶೂಟಿಂಗ್.
Share on WhatsAppShare on FacebookShare on Telegram

ದುಬೈನಲ್ಲೂ ನಡೆಯಿತು ದ್ವಿಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ “ವೀರ ಕಂಬಳ” ಚಿತ್ರದ ಚಿತ್ರೀಕರಣ .

ADVERTISEMENT

ಇದು ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಚಿತ್ರ

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ಅವರ ನಿರ್ದೇಶನದಲ್ಲಿ ಹಾಗೂ ಅರುಣ್ ರೈ ತೊಡರ್ ಅವರ ನಿರ್ಮಾಣದಲ್ಲಿ ಕನ್ನಡ ಹಾಗೂ ತುಳು ಭಾಷೆಗಳಲ್ಲಿ ಮೂಡಿಬರುತ್ತಿರುವ “ವೀರ ಕಂಬಳ” ಚಿತ್ರಕ್ಕೆ ದೂರದ ದುಬೈನಲ್ಲೂ ಚಿತ್ರೀಕರಣವಾಗಿದೆ. ಇತ್ತೀಚೆಗೆ ದುಬೈನಲ್ಲಿ ಚಿತ್ರೀಕರಣ ಮುಗಿಸಿದ ಚಿತ್ರತಂಡ ಬೆಂಗಳೂರಿಗೆ ವಾಪಸಾಗಿದೆ. ನಟ ಆದಿತ್ಯ, ನಿರ್ಮಾಪಕ ಅರುಣ್ ರೈ ತೊಡರ್, ಶೋಭ್ ರಾಜ್ ಮುಂತಾದವರು ದುಬೈ ಭಾಗದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು.

“ಕಂಬಳ” ದಕ್ಷಿಣ ಕನ್ನಡದ ಪ್ರಸಿದ್ಧ ಕ್ರೀಡೆ. ಇದನ್ನೇ ಮುಖ್ಯವಾಗಿಟ್ಟುಕೊಂಡು ರಾಜೇಂದ್ರ ಸಿಂಗ್ ಬಾಬು ಅವರು “ವೀರ ಕಂಬಳ” ಚಿತ್ರದ ಕಥೆ ಬರೆದಿದ್ದಾರೆ. ಈ ಚಿತ್ರ ಕನ್ನಡದಲ್ಲಿ “ವೀರ ಕಂಬಳ” ಎಂಬ ಹೆಸರಿನಿಂದ ಹಾಗೂ ತುಳುವಿನಲ್ಲಿ “ಬಿರ್ದುದ ಕಂಬಳ” ಎಂಬ ಹೆಸರಿನಲ್ಲಿ ಮೂಡಿ ಬರುತ್ತಿದೆ.

ಇನ್ನೂ ಈ ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಮಂಗಳೂರು, ಮೂಡುಬಿದಿರೆ ಹಾಗೂ ಬೆಂಗಳೂರಿನಲ್ಲಿ ಮಾತ್ರವಲ್ಲದೆ ದುಬೈನಲ್ಲೂ ಈ ಚಿತ್ರದ ಚಿತ್ರೀಕರಣವಾಗಿದೆ. ಕಂಬಳ ಆರಂಭವಾಗುವುದು ಒಂದು ಮನೆತನದಿಂದ. ಆ ಮನೆತನದವರು ದುಬೈನಲ್ಲಿ ನೆಲೆಸಿರುತ್ತಾರೆ. ಹಾಗಾಗಿ ಈ ಚಿತ್ರಕ್ಕೆ ದುಬೈನಲ್ಲೇ ಚಿತ್ರೀಕರಣ ಮಾಡಲಾಗಿದೆ. ಆದಷ್ಟು ಬೇಗ ಚಿತ್ರದ ಕೆಲಸಗಳನ್ನು ಪೂರ್ಣಗೊಳಿಸಿ ಏಪ್ರಿಲ್ ಮಧ್ಯದಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.

“ವೀರ ಕಂಬಳ” ಕ್ಕೆ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ. ಆರ್ ಗಿರಿ ಛಾಯಾಗ್ರಹಣ, ಶ್ರೀನಿವಾಸ್ ಪಿ ಬಾಬು ಸಂಕಲನ, ಮದನ್ – ಹರಿಣಿ ನೃತ್ಯ ನಿರ್ದೇಶನ, ಡಿಫರೆಂಟ್ ಡ್ಯಾನಿ, ಮಾಸ್ ಮಾದ ಸಾಹಸ ನಿರ್ದೇಶನ,‌ ಚಂದ್ರಶೇಖರ ಸುವರ್ಣ ಮುಲ್ಕಿ ಕಲಾ ನಿರ್ದೇಶನ ಹಾಗೂ ಬೆನಕ ಕೊಟ್ರೇಶ್, ಅಕ್ಷತ ವಿಟ್ಲ ಅಸೋಸಿಯೇಟ್ ಡೈರೆಕ್ಟರ್ ಆಗಿ ಕಾರ್ಯನಿರ್ವಹಿಸಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ರಾಜೇಶ್ ಕುಡ್ಲ.

ಆದಿತ್ಯ, ಪ್ರಕಾಶ್ ರೈ, ರವಿಶಂಕರ್, ಶೋಭ್ ರಾಜ್, ನವೀನ್ ಪಡಿಲ್, ಗೋಪಿನಾಥ್ ಭಟ್, ರಾಧಿಕಾ ಚೇತನ್, ಅರುಣ್ ರೈ ತೊಡರ್, ಭೋಜರಾಜ್ ವಾಮಂಜೂರ್, ಉಷಾ ಭಂಡಾರಿ, ಮೈಮ್ ರಮೇಶ್, ಗೀತಾ ಸುರತ್ಕಲ್, ಸುರೇಶ್ ಶೆಟ್ಟಿ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

Tags: aditya alva drug caseGopinath BhattNaveen Padilprakash raiRadhika ChetanRavi ShankarShobh RajSV Rajendra Singh BabuVeera Kambal
Previous Post

ಮೂಡ ಕೇಸ್ ನಲ್ಲಿ ಸಿಎಂ ಗೆ ಕ್ಲೀನ್ ಚಿಟ್ ..! ಡಿಸಿಎಂ ಡಿಕೆ ಹೇಳಿದ್ದೇನು..?! 

Next Post

ಎದ್ದೇಳು ಮಂಜುನಾಥ -2 ರಿಲೀಸ್ ಗೆ ಗುರು ಎರಡನೇ ಪತ್ನಿ ಕಿರಿಕ್ ..! ದುಡ್ಡಿಗಾಗಿ ಬೇಡಿಕೆಯಿಟ್ಟ ಡೈರೆಕ್ಟರ್ ಪತ್ನಿ..?! 

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
Next Post
ಎದ್ದೇಳು ಮಂಜುನಾಥ -2 ರಿಲೀಸ್ ಗೆ ಗುರು ಎರಡನೇ ಪತ್ನಿ ಕಿರಿಕ್ ..! ದುಡ್ಡಿಗಾಗಿ ಬೇಡಿಕೆಯಿಟ್ಟ ಡೈರೆಕ್ಟರ್ ಪತ್ನಿ..?! 

ಎದ್ದೇಳು ಮಂಜುನಾಥ -2 ರಿಲೀಸ್ ಗೆ ಗುರು ಎರಡನೇ ಪತ್ನಿ ಕಿರಿಕ್ ..! ದುಡ್ಡಿಗಾಗಿ ಬೇಡಿಕೆಯಿಟ್ಟ ಡೈರೆಕ್ಟರ್ ಪತ್ನಿ..?! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada