
ಬೆಳಗಾವಿ: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಹೆಸರಿನಲ್ಲಿರುವ ಸೈಟ್ಗಳನ್ನು ಇಡಿ ಮುಟ್ಟುಗೋಲು ಹಾಕಿಕೊಂಡ ವಿಚಾರವಾಗಿ ಸಂಸದ ಜಗದೀಶ್ ಶೆಟ್ಟರ್ ಮಾತನಾಡಿ, ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪು ಮಾಡಿದ್ದಾರೆ. ಹಗರಣ ಬಂದ್ಮೇಲೆ ಎಷ್ಟೋ ದಿನಗಳ ನಂತರ ಮುಡಾ ಆಸ್ತಿಗಳು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಯಾವುದೇ ಕಂಡೀಷನ್ ಇಲ್ಲದೇ ಸಿದ್ದರಾಮಯ್ಯ ಆಸ್ತಿ ಹಸ್ತಾಂತರ ಮಾಡಿದ್ದಾರೆ. ಇಡಿ ಪ್ರಕಟಿಸಿದ ತನಿಖಾ ಮಾಹಿತಿಯಲ್ಲಿ ಸಿದ್ದರಾಮಯ್ಯ ಅಷ್ಟೇ ಅಲ್ಲದೇ ಬೇರೆ ಬೇರೆ ಸೈಟ್ಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ಇದರಲ್ಲಿ ರಾಜಕಾರಣ ಇಲ್ಲ, ಕಾನೂನು ಪ್ರಕಾರ ಜಾರಿ ನಿರ್ದೇಶನಾಲಯ ಕೆಲಸ ಮಾಡುತ್ತಿದೆ ಎಂದಿದ್ದಾರೆ.
ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಹೆದರಿ ಮುಡಾ ಆಸ್ತಿ ಮುಟ್ಟುಗೋಲು ವಿಚಾರ ಹೇಳಿದ್ದಾರೆ ಎಂದಿದ್ದ ಸುರ್ಜೇವಾಲಾ ಮಾತಿಗೆ ವ್ಯಂಗ್ಯವಾಡಿದ್ದು, ರಾಜ್ಯ ಸರ್ಕಾರದ ಹಣ ಖರ್ಚು ಮಾಡಿ ಗಾಂಧಿ ಭಾರತ ಸಮಾವೇಶ ಮಾಡ್ತಿದ್ದಾರೆ. ಸಮಾವೇಶದ ಬ್ಯಾನರ್ಗಳಲ್ಲಿ ಕಾಂಗ್ರೆಸ್ ಲೀಡರ್, ಮರಿ ಲೀಡರ್, ಯುವ ಲೀಡರ್ ರಾರಾಜಿಸುತ್ತಿದ್ದಾರೆ. ಬ್ಯಾನರ್ಗಳಲ್ಲಿ ಮಹಾತ್ಮ ಗಾಂಧಿಜಿ ಪೋಟೋ ದುರ್ಬಿನಿ ಹಿಡಿದು ನೋಡಬೇಕು. ಸರ್ಕಾರದ ದುಡ್ಡಿನಲ್ಲಿ ಕಾರ್ಯಕ್ರಮ, ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ ಮಾಡ್ತಿದ್ದಾರೆ. ಸುರ್ಜೇವಾಲಾ ಹೇಳಿದಂತೆ ಸಮಾವೇಶಕ್ಕೂ ಇಡಿ ವಿಚಾರಕ್ಕೆ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.

ಬಿಜೆಪಿ ಪಕ್ಷದ ಬಗ್ಗೆ ಆರೋಪ ಮಾಡೋ ಬದಲು ನಿಮ್ಮ ಮನೆಯನ್ನ ಸರಿ ಮಾಡಿಕೊಳ್ಳಿ ಎಂದಿರುವ ಶೆಟ್ಟರ್, ದಿನವೂ ಡಿನ್ನರ್ ಪಾರ್ಟಿ, ಲಂಚ್ ಪಾರ್ಟಿಗಳು ನಡೆಯುತ್ತಿವೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೇ ಯಾರನ್ನ ಏನು ಮಾಡಬೇಕು ಅನೋದು ನಮಗೆ ಬಿಟ್ಟಿದ್ದು. ಯಾರು ಏನು ಮಾತನಾಡೋ ಹಾಗಿಲ್ಲ ಅನ್ನೋ ಮಟ್ಟಿದೆ ಕಾಂಗ್ರೆಸ್ ಬಂದು ನಿಂತಿದೆ. ನಿಮ್ಮ ಮನೆ ಸರಿ ಮಾಡಿಕೊಳ್ಳಿ ಬೇರೆದವರ ಬಗ್ಗೆ ಮಾತನಾಡೋದನ್ನ ಬಿಡಿ ಎಂದಿದ್ದಾರೆ.
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ತಪ್ಪು ಇದೆ, ಸಿಬಿಐ ತನಿಖೆ ಮಾಡಲಿ. ರಾಜ್ಯ ಕಾಂಗ್ರೆಸ್ ಅಧೀನದಲ್ಲಿರೋ ಲೋಕಾಯುಕ್ತ ತನಿಖೆಯಲ್ಲಿ ಅರ್ಥ ಇಲ್ಲ. ಸಿಎಂ ಸಿದ್ದರಾಮಯ್ಯ ಇವತ್ತಲ್ಲ, ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪರಿಸ್ಥಿತಿ ಎದುರಾಗುತ್ತೆ. ಸಿದ್ದರಾಮಯ್ಯ ಯಾವಾಗ ಬೇಕಾದರೂ ರಾಜೀನಾಮೆ ಕೊಡುವ ಪರಿಸ್ಥಿತಿ ಬರಬಹುದು. ರಾಜ್ಯ ಕಾಂಗ್ರೆಸ್ನಲ್ಲಿ ಅರಾಜಕತೆ ಸೃಷ್ಟಿಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.