• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯಕ್ಕೆ ನೂತನ ಶಿಕ್ಷಣ ನೀತಿ ಅವಶ್ಯಕತೆ ಇಲ್ಲ, ಇದರ ಜಾರಿಗೆ ನಾವು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್ ಎಚ್ಚರಿಕೆ

Any Mind by Any Mind
September 24, 2021
in ಕರ್ನಾಟಕ
0
ರಾಜ್ಯಕ್ಕೆ ನೂತನ ಶಿಕ್ಷಣ ನೀತಿ ಅವಶ್ಯಕತೆ ಇಲ್ಲ, ಇದರ ಜಾರಿಗೆ ನಾವು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್ ಎಚ್ಚರಿಕೆ
Share on WhatsAppShare on FacebookShare on Telegram
ADVERTISEMENT

‘ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ವಿಚಾರವಾಗಿ ಸದನದಲ್ಲಿ ಚರ್ಚೆಗೆ ಅವಕಾಶ ನೀಡಿ ಎಂದು ಮನವಿ ಮಾಡಿದರೂ ಅದಕ್ಕೆ ಅವಕಾಶ ಕೊಟ್ಟಿಲ್ಲ. ಶಿಕ್ಷಣ ನೀತಿ ರಾಜ್ಯಕ್ಕೆ ಸಂಬಂಧಿಸಿದ ವಿಚಾರ. ಇದರ ಜಾರಿಗೆ ನಾವು ಅವಕಾಶ ನೀಡುವುದಿಲ್ಲ. ಒಂದೊಮ್ಮೆ ರಾಜ್ಯ ಸರ್ಕಾರ ಇದನ್ನು ಜಾರಿಗೊಳಿಸಿದ್ದೇ ಆದರೆ, ಮುಂದೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ನಾವಿದನ್ನು ಹಿಂಪಡೆಯುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದ್ದಾರೆ.

ವಿಧಾನಸೌಧದಲ್ಲಿ ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು ‘ರಾಜ್ಯ ಸರ್ಕಾರ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಕ್ಕೆ ತರುತ್ತಿದೆ. ಬಿಜೆಪಿ ಆಡಳಿತದಲ್ಲಿರುವ ಯಾವ ರಾಜ್ಯದಲ್ಲೂ ಇದು ಅನುಷ್ಠಾನಗೊಳ್ಳುತ್ತಿಲ್ಲ. ನಮ್ಮ ರಾಜ್ಯದ ಪ್ರಾಥಮಿಕ ಶಿಕ್ಷಣ ಸಚಿವರು ಈ ನೀತಿಯ ಅನುಷ್ಠಾನ ಕ್ಲಿಷ್ಟವಾಗಿದ್ದು, ಅದರ ಅಧ್ಯಯನ ನಡೆಯಬೇಕು ಎಂದು ಹೇಳಿದ್ದಾರೆ. ಸದನದಲ್ಲಿ ಈ ಬಗ್ಗೆ ಚರ್ಚೆ ಮಾಡೋಣ, ಇದರಲ್ಲಿ ಏನೆಲ್ಲಾ ಪ್ರಯೋಜನವಾಗಲಿದೆ ಎಂಬುದನ್ನು ಸ್ಪಷ್ಟಪಡಿಸಿ ಎಂದೆವು. ಅದನ್ನು ಬಿಟ್ಟು ಜಾರಿಗೆ ಮುಂದಾಗಿದ್ದಾರೆ. ಇವರು ಆರ್ ಎಸ್ಎಸ್ ಅಜೆಂಡಾ, ನಾಗ್ಪುರ ಅಜೆಂಡಾಗಳನ್ನು ತಮ್ಮ ಮನೆಗಳಲ್ಲಿ ಇಟ್ಟುಕೊಳ್ಳಲಿ. ಬೇಕಾದರೆ ತಮ್ಮದೇ ಸ್ವಂತ ಸಂಸ್ಥೆಗಳನ್ನು ಮಾಡಿಕೊಂಡು ಬೋಧನೆ ಮಾಡಿಕೊಳ್ಳಲಿ. ಇದು ನಮ್ಮ ಮಕ್ಕಳ ಶಿಕ್ಷಣದ ಪ್ರಶ್ನೆ.

ಈಗ ಇರುವ ಶಿಕ್ಷಣ ನೀತಿಯನ್ನು ಜಾರಿಗೆ ತರುವಾಗ ವಾಜಪೇಯಿ ಅವರು ಯಾಕೆ ವಿರೋಧ ಮಾಡಲಿಲ್ಲ? ಬೇರೆ ಮಾಜಿ ಪ್ರಧಾನಿಗಳು ಯಾಕೆ ವಿರೋಧ ವ್ಯಕ್ತಪಡಿಸಲಿಲ್ಲ. ಇಷ್ಟು ದಿನ ನೀವು, ನಿಮ್ಮ ಮಕ್ಕಳು ಇದೇ ಶಿಕ್ಷಣ ನೀತಿಯಲ್ಲಿ ವಿದ್ಯಾಭ್ಯಾಸ ಮಾಡಿದ್ದು, ಇದನ್ನು ಬದಲಾವಣೆ ಮಾಡುವುದು ಸರಿಯಲ್ಲ. ಇದು ರಾಜ್ಯಗಳಿಗೆ ಸಂಬಂಧಿಸಿದ ವಿಚಾರ. ಕೇಂದ್ರ ಸರ್ಕಾರ ಮಕ್ಕಳು ಸಂಸ್ಕೃತ ಓದಬೇಕು. ಹಿಂದಿ ಕಲಿಯಬೇಕು ಎಂದು ಹೇಳುವುದು ಸರಿಯಿಲ್ಲ. ಇವರು ಈ ಶಿಕ್ಷಣ ನೀತಿ ಜಾರಿಗೆ ತಂದರೆ ಮುಂದೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ನಾವು ಇವುಗಳನ್ನು ಹಿಂಪಡೆಯುತ್ತೇವೆ ಎಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಹೇಳುತ್ತೇನೆ.

ಸದನದಲ್ಲಿ ಈ ಬಗ್ಗೆ ಚರ್ಚೆ ಮಾಡಬೇಕು ಎಂದು ಕೇಳಿದೆವು, ಆದರೆ ಇದಕ್ಕೆ ಅವಕಾಶ ಕೊಟ್ಟಿಲ್ಲ. ಈ ನೀತಿ ಜಾರಿಗೆ ತರಲು ಆ ಮಂತ್ರಿ ಡೋಂಗಿ ಕೆಲಸ ಮಾಡುತ್ತಿದ್ದಾನೆ. ಈ ಶಿಕ್ಷಣ ನೀತಿ ಜಾರಿಗೆ ತರಲು ಅವರದೇ ಸಂಪುಟದ ಸಚಿವರಿಗೆ, ಸರ್ಕಾರಕ್ಕೆ ಇಷ್ಟವಿಲ್ಲ. ಕೇವಲ ಹೈಕಮಾಂಡ್ ನಾಯಕರನ್ನು ಮೆಚ್ಚಿಸಲು ಹೊರಟಿದ್ದಾರೆ. ಬಿಜೆಪಿ ಅಧಿಕಾರದಲ್ಲಿರುವ ಮಧ್ಯಪ್ರದೇಶ, ಗುಜರಾತ್ ನಲ್ಲಿ ಈ ಶಿಕ್ಷಣ ನೀತಿ ಜಾರಿಗೊಳಿಸಲಿ. ನಮ್ಮ ರಾಜ್ಯದಲ್ಲಿ ಈ ನೀತಿ ಜಾರಿಗೆ ಅವಕಾಶ ನೀಡುವುದಿಲ್ಲ. ಇದು ನಮ್ಮ ಮಕ್ಕಳ ಭವಿಷ್ಯದ ವಿಚಾರ, ನಾವಿದನ್ನು ವಿರೋಧಿಸುತ್ತೇವೆ. ಈ ಶಿಕ್ಷಣ ನೀತಿ ನಮ್ಮ ರಾಜ್ಯಕ್ಕೆ ಅವಶ್ಯಕತೆ ಇಲ್ಲ.

ಈಗ ಇರುವುದು ಇಟಲಿ ಶಿಕ್ಷಣ ನೀತಿಯಾಗಿದ್ದರೆ, ವಾಜಪೇಯಿ ಅವರು ಬದಲಾವಣೆ ಮಾಡಬಹುದಿತ್ತಲ್ಲ. ಯಾಕೆ ಮಾಡಲಿಲ್ಲ? ಈಗ ಇರುವ ಶಿಕ್ಷಣ ನೀತಿ ಸರಿ ಇಲ್ಲವೇ? ಇಲ್ಲಿ ಶಿಕ್ಷಣ ಪಡೆದ ಇಂಜಿನೀಯರ್, ಡಾಕ್ಟರ್ ಗಳು ವಿಶ್ವ ವಿಖ್ಯಾತಿ ಪಡೆದಿಲ್ಲವೇ? ಈ ರೀತಿ ಶಕ್ತಿ ತುಂಬಿರುವ ಶಿಕ್ಷಣ ನೀತಿ ನಮ್ಮ ಬಳಿ ಇದೆ. ಹೀಗಾಗಿ ಸರ್ಕಾರ ಕೂಡಲೇ ಹಿಂಪಡೆಯಬೇಕು.’ ಎಂದು ಆಗ್ರಹಿಸಿದ್ದಾರೆ.

ರಾಜ್ಯಕ್ಕೆ ನೂತನ ಶಿಕ್ಷಣ ನೀತಿ ಅವಶ್ಯಕತೆ ಇಲ್ಲ, ಇದರ ಜಾರಿಗೆ ನಾವು ಬಿಡುವುದಿಲ್ಲ: DKShivakumar ಎಚ್ಚರಿಕೆ
Tags: BJPCongress PartyNEPNEP 2020NEP2020ಎಚ್ ಡಿ ಕುಮಾರಸ್ವಾಮಿಡಿ.ಕೆ. ಶಿವಕುಮಾರ್ನರೇಂದ್ರ ಮೋದಿನೂತನ ಶಿಕ್ಷಣ ನೀತಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಾವು ಸೈಕಲ್, ಎತ್ತಿನಗಾಡಿ, ಟಾಂಗಾ ಸವಾರಿ ಮೂಲಕ ಪ್ರತಿಭಟನೆ ನಡೆಸಿರುವುದು ಮನೋರಂಜನೆಗಲ್ಲ: ಸಿದ್ದರಾಮಯ್ಯ

Next Post

ಅಮಾನುಷತೆಯ ನಡುವೆ ಸಂವೇದನೆಯ ಹುಡುಕಾಟ

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ಅಮಾನುಷತೆಯ ನಡುವೆ ಸಂವೇದನೆಯ ಹುಡುಕಾಟ

ಅಮಾನುಷತೆಯ ನಡುವೆ ಸಂವೇದನೆಯ ಹುಡುಕಾಟ

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada