ಬೆಂಗಳೂರು : ಆಡಳಿತ ವ್ಯವಸ್ಥೆಯಲ್ಲಿ ಮತ್ತೊಮ್ಮೆ ಮೇಜರ್ ಸರ್ಜರಿ ಮಾಡಿರುವ ಸಿದ್ದು ಸರ್ಕಾರ 10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಪಶು ಸಂಗೋಪನಾ ಇಲಾಖೆ ಆಯುಕ್ತ ಡಾ.ವೆಂಕಟೇಶ್ ಎಂವಿ, ಸಕಾಲ ಮಿಷನ್ ಯೋಜನಾ ನಿರ್ದೇಶಕಿ ಪಲ್ಲವಿ ಅಕುರಾತಿ, ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಪಿ.ಎನ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂವಿ ಸೇರಿದಂತೆ ಒಟ್ಟು 10 ಮಂದಿ ಅಧಿಕಾರಿಗಳನ್ನು ಟ್ರಾನ್ಸಫರ್ ಮಾಡಿದೆ.

ಬಾಗಲಕೋಟೆ ಜಿಲ್ಲಾಧಿಕಾರಿ ಜಾನಕಿ ಕೆಎಂ, ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತ ಯೋಗೇಶ್ ಎಎಂ, ಮಂಗಳೂರು ಜಿಲ್ಲಾ ಪಂಚಾಯತ್ ಸಿಇಓ ಡಾ. ಕುಮಾರ್, ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಆಯುಕ್ತ ಪ್ರಭು ಜಿ, ತುಮಕೂರು ಜಿಲ್ಲಾಧಿಕಾರಿ ಶ್ರೀನಿವಾಸ್ ಕೆ, ವಸತಿ ಶಿಕ್ಷಣ ಸೊಸೈಟಿ ಇಡಿ ನವೀನ್ ಕುಮಾರ್ ರಾಜು ಇವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ಸೇಫ್ ಸಿಟಿ ನಮ್ಮ ಗುರಿ; ಗೃಹ ಸಚಿವ
You May Like






