• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಧಾರ್ಮಿಕ ಮತಾಂತರದ ವಿರುದ್ಧ ಕಾನೂನು ರೂಪಿಸಲು ಮುಂದಾದ ರಾಜ್ಯ ಸರ್ಕಾರ

Any Mind by Any Mind
September 21, 2021
in ಕರ್ನಾಟಕ, ರಾಜಕೀಯ
0
ಧಾರ್ಮಿಕ ಮತಾಂತರದ ವಿರುದ್ಧ ಕಾನೂನು ರೂಪಿಸಲು ಮುಂದಾದ ರಾಜ್ಯ ಸರ್ಕಾರ
Share on WhatsAppShare on FacebookShare on Telegram

ಗೃಹ ಸಚಿವ ಅರಗ ಜ್ಞಾನೇಂದ್ರ ಧಾರ್ಮಿಕ ಮತಾಂತರವನ್ನು ನಿಯಂತ್ರಿಸುವ ಕಾನೂನನ್ನು ಸರ್ಕಾರ ಪರಿಗಣಿಸುತ್ತದೆ ಎಂದು ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಬಿಜೆಪಿ ಶಾಸಕರ ತಾಯಿಯೊಬ್ಬರು ಪ್ರೇರಣೆಯಿಂದ ಕ್ರೈಸ್ತ ಸಮುದಾಯಕ್ಕೆ ಮತಾಂತರಗೊಂಡಿದ್ದಾರೆ ಎಂದು ಶಾಸಕರು ತಿಳಿಸಿದ ನಂತರ ಈ ಕಾನೂನನ್ನು ರೂಪಿಸಿರುವುದಾಗಿ ಅವರು ಹೇಳಿದ್ದಾರೆ. ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್, ಶೂನ್ಯ ವೇಳೆಯಲ್ಲಿ ಸಮಸ್ಯೆಯನ್ನು ಪ್ರಸ್ತಾಪಿಸಿ, “ಬಲವಂತ” ಧಾರ್ಮಿಕ ಮತಾಂತರಗಳು ರಾಜ್ಯದಲ್ಲಿ ವ್ಯಾಪಕವಾಗಿ ನಡೆಯುತ್ತಿವೆ.

ADVERTISEMENT

ನನ್ನ ತಾಯಿ ಕ್ರೈಸ್ತ ಸಮುದಾಯಕ್ಕೆ ಮತಾಂತರಗೊಂಡಿದ್ದಾರೆ ಅವರು, ಹಣೆಯ ಮೇಲೆ ಸಿಂಧೂರವನ್ನು ಇಡದೆ, ಮೂರ್ತಿ ಪೂಜೆಯನ್ನು ತ್ಯಜಿಸಿದ್ದಾರೆ, ಪೋನ್ನ ರಿಂಗ್ಟೋನ್ ಅನ್ನು ಕ್ರಿಶಿಯನ್ ಹಾಡನ್ನು ಇಟ್ಟಿಕೊಂಡಿದ್ದಾರೆ. ಅವರ, ಬ್ರೈನ್ ವಾಶ್ ಮಾಡಲಾಗಿದೆ ಇದರಿಂದ ನಮ್ಮ ಕುಟುಂಬಕ್ಕೆ ತೀವ್ರ ಮುಜುಗರವಾಗಿದೆ ಎಂದು ಶಾಸಕ ಗೂಳಿಹಟ್ಟಿ ಶೇಖರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಹೊಸದುರ್ಗ ವಿಧಾನಸಭೆಯಲ್ಲಿ ಸುಮಾರು 20 ಸಾವಿರ ಜನ ಕ್ರೈಸ್ತ ಸಮುದಾಯಕ್ಕೆ ಮತಾಂತರಗೊಂಡಿದ್ದಾರೆ. ಮೂಢ ನಂಬಿಕೆ ವಿರೋಧಿ ಕಾನೂನು ಬರುವ ಮೊದಲು, ಗ್ರಾಮೀಣ ಪ್ರದೇಶದಲ್ಲಿರುವ ಜನರು ಸ್ಥಳೀಯ ದೇವತೆಗಳ ಬಳಿಗೆ ಹೋಗಿ ರೋಗಗಳಿಗೆ ಪರಿಹಾರ ಕಂಡುಕೊಳ್ಳುತ್ತಿದ್ದರು. ಆದರೆ, ಅದು ಈಗ ನಿಂತುಹೋಗಿದೆ ಕ್ರಿಶಿಯನ್ ಮಿಷಿನರಿಗಳು ಚಿಕಿತ್ಸೆ ಮತ್ತು ಇತರೆ ಪ್ರಯೋಜನಗಳನ್ನು ನೀಡುವ ಮೂಲಕ ಕ್ರೈಸ್ತ ಸಮುದಾಯಕ್ಕೆ ಮತಾಂತರಗೊಳುವುದಕ್ಕೆ ಪ್ರೇರಣೆ ನೀಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ದಲಿತರು, ಒಬಿಸಿ ಮತ್ತು ಮುಸ್ಲಿಮರನ್ನು ಸಹ ಮತಾಂತರ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. ಪ್ರತಿಯೊಬ್ಬರೂ ತಮ್ಮ ಆಯ್ಕೆಯ ನಂಬಿಕೆಯನ್ನು ಅನುಸರಿಸಲು ಸ್ವತಂತ್ರರು ಎಂಬುದನ್ನು ನಾನು ಒಪ್ಪುತ್ತೇನೆ. ಆದರೆ ಯಾರಾದರೂ ಕ್ರಿಶ್ಚಿಯನ್ ಧರ್ಮವನ್ನು ಸ್ವೀಕರಿಸಿದರೆ, ಆ ವ್ಯಕ್ತಿಯು SC/ST ಪ್ರಯೋಜನಗಳನ್ನು ಬಿಟ್ಟುಬಿಡಬೇಕು” ಎಂದು ಅವರು ಹೇಳಿದ್ದಾರೆ.

ಮಾಜಿ ಸ್ಪೀಕರ್ ಕೆಜಿ ಬೋಪಯ್ಯ ಮಾತನಾಡಿ, ರಾಜ್ಯಾದ್ಯಂತ ವಿಶೇಷವಾಗಿ ಎಸ್ಸಿ/ಎಸ್ಟಿ ವಸತಿ ಪ್ರದೇಶಗಳಲ್ಲಿ ಧಾರ್ಮಿಕ ಪರಿವರ್ತನೆ ಗಂಭೀರ ಸಮಸ್ಯೆಯಾಗಿದೆ. “ನಮಗೆ ಧಾರ್ಮಿಕ ಮತಾಂತರದ ವಿರುದ್ಧ ಉತ್ತರ ಪ್ರದೇಶದಂತಹ ಕಾನೂನು ಬೇಕು” ಎಂದು ಈ ವೇಳೆ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ನಾಗಠಾನ್ ಶಾಸಕ ದೇವಾನಂದ್ ಫುಲಾಸಿಂಗ್ ಚವಾಣ್ ಅವರು ವಿಜಯಪುರ ಜಿಲ್ಲೆಯು ಬಂಜಾರ ಸಮುದಾಯಕ್ಕೆ ಸೇರಿದ 3.5 ಲಕ್ಷ ಜನರಿಗೆ ನೆಲೆಯಾಗಿದೆ ಎಂದು ಹೇಳಿದ್ದಾರೆ. “ಚರ್ಚುಗಳು ಬರುತ್ತಿವೆ ಮತ್ತು ಜನರು ತಾಂಡಾಗಳಲ್ಲಿನ ಜನರು ಮತಾಂತರಗೊಳ್ಳುತ್ತಿದ್ದಾರೆ, ಇದು ಸಮುದಾಯದ ವಿಭಜನೆಗೆ ಕಾರಣವಾಗುತ್ತಿದೆ” ಎಂದು ಹೇಳಿದ್ದಾರೆ.

ಶಾಸಕರಿಗೆ ಉತ್ತರಿಸಿದ ಗೃಹ ಸಚಿವರು ಸರ್ಕಾರಕ್ಕೆ ಧಾರ್ಮಿಕ ಮತಾಂತರಗಳ ಬಗ್ಗೆ ತಿಳಿದಿದೆ, ಪ್ರೇರಣೆಯ ಮೂಲಕ ಜನರು ಧರ್ಮಕ್ಕೆ ಮತಾಂತರಗೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ರಾಜ್ಯದಲ್ಲಿ ಮಾತ್ರವಲ್ಲ, ದೇಶಾದ್ಯಂತ ಇದರ ವ್ಯಾಪಕ ಜಾಲವಿದೆ. ನಾವು ಮಸೂದೆಯನ್ನು ಮಂಡಿಸಬೇಕೇ ಅಥವಾ ಇನ್ನೇನಾದರೂ ಮಾಡಬೇಕೇ … ಇದನ್ನು ಹೇಗೆ ತಡೆಯಬೇಕು ಎಂದು ನಾವು ಚರ್ಚಿಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಒಂದು ನಿರ್ದಿಷ್ಟ ಸಮುದಾಯದ ಸಂಖ್ಯೆಯನ್ನು ಹೆಚ್ಚಿಸಲು ಮತಾಂತರಗಳು ನಡೆಯುತ್ತವೆ ಎಂದು ಹೇಳಿದ್ದಾರೆ. ಒಬ್ಬ ವ್ಯಕ್ತಿಯು ಸ್ವಇಚ್ಛೆಯಿಂದ ಧರ್ಮವನ್ನು ಅಳವಡಿಸಿಕೊಳ್ಳುವುದು ಒಂದು ವಿಷಯ. ಆದರೆ, ಅನಾರೋಗ್ಯಕ್ಕೆ ಮದ್ದು ನೀಡುವುದು ಅಥವಾ ಧರ್ಮವನ್ನು ಬೇರೆ ರೀತಿಯಲ್ಲಿ ದುರ್ಬಳಕೆ ಮಾಡುವುದು ಸರಿಯಲ್ಲ. ಇದು ಕೋಮು ಸಾಮರಸ್ಯಕ್ಕೆ ಕಾರಣವಾಗಬಹುದು, ”ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಇತರ ರಾಜ್ಯಗಳು ಕಾನೂನನ್ನು ತಂದಿವೆ. ಅದನ್ನು ಇಲ್ಲಿಯೂ ಮಾಡಿದರೆ ಬಹುಶಃ ಇದು ಉಪಯೋಗವಾಗುತ್ತದೆ ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿರವರು ಸರ್ಕಾರಕ್ಕೆ ಸೂಚಿಸಿದರು.

Tags: anti-conversionAraga JnanendraBasavaraj BommaiBJPConversionಬಿಜೆಪಿ
Previous Post

ಸದನದಲ್ಲಿ ವಸತಿ ಸಚಿವ ಸೋಮಣ್ಣರನ್ನು ತರಾಟೆಗೆ ತೆಗೆದುಕೊಂಡ : Siddaramaiah

Next Post

ಒಕ್ಕಲಿಗರ ಸಂಘದ ಜಾಗವನ್ನು ಹಿಂಪಡೆಯದಂತೆ ಆಗ್ರಹಿಸಿ ಸಂಘದ ಸದಸ್ಯರಿಂದ ಹೋರಾಟ

Related Posts

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?
Top Story

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

by ಪ್ರತಿಧ್ವನಿ
April 14, 2026
0

ಬೆಂಗಳೂರು : ಪಂಚಮಸಾಲಿ ಸಮಾಜದ ಎರಡು ಟ್ರಸ್ಟ್ ಸ್ವಂತ ಆಸ್ತಿಯಾಗಿವೆ, ಇದರಿಂದ ಸಮಾಜ ಹಾಗೂ ಜನರಿಂದ ನಂಬಿಕೆಗೆ ಅನರ್ಹವಾಗಿವೆ. ವಚನಾನಂದ ಶ್ರೀಗಳ ಉಚ್ಚಾಟನೆ ಅಷ್ಟೇನೂ ವಿಶೇಷ ಎಂದು...

Read moreDetails
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

April 14, 2026
ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪ ಭೂ ವಿವಾದ ತೀವ್ರ; ಸರ್ವೆ ವೇಳೆ ಗಲಾಟೆ

ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪ ಭೂ ವಿವಾದ ತೀವ್ರ; ಸರ್ವೆ ವೇಳೆ ಗಲಾಟೆ

April 14, 2026
Next Post
ಒಕ್ಕಲಿಗರ ಸಂಘದ ಜಾಗವನ್ನು ಹಿಂಪಡೆಯದಂತೆ ಆಗ್ರಹಿಸಿ ಸಂಘದ ಸದಸ್ಯರಿಂದ ಹೋರಾಟ

ಒಕ್ಕಲಿಗರ ಸಂಘದ ಜಾಗವನ್ನು ಹಿಂಪಡೆಯದಂತೆ ಆಗ್ರಹಿಸಿ ಸಂಘದ ಸದಸ್ಯರಿಂದ ಹೋರಾಟ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada