• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಟ್ರೇಲರ್ ನಲ್ಲಿ ಮೋಡಿ ಮಾಡಿದ “ನಿಂಬಿಯಾ ಬನಾದ ಮ್ಯಾಗ ಚಿತ್ರ ..

ಪ್ರತಿಧ್ವನಿ by ಪ್ರತಿಧ್ವನಿ
April 1, 2025
in Top Story, ಇತರೆ / Others, ಇದೀಗ, ಕರ್ನಾಟಕ, ಜೀವನದ ಶೈಲಿ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಏಪ್ರಿಲ್ 4 ರಂದು ಬಿಡುಗಡೆಯಾಗಲಿದೆ ಡಾ||ರಾಜಕುಮಾರ್ ಮೊಮ್ಮಗ ಷಣ್ಮುಖ ಗೋವಿಂದರಾಜ್ ಅಭಿನಯದ ಚಿತ್ರ .

ADVERTISEMENT

ಮೇರು ನಟ ಡಾ||ರಾಜಕುಮಾರ್ ಅವರ ಮೊಮ್ಮಗ(ಮಗಳ ಮಗ) ಷಣ್ಮುಖ ಗೋವಿಂದರಾಜ್ ನಾಯಕನಾಗಿ ನಟಿಸಿರುವ “ನಿಂಬಿಯಾ ಬನಾದ ಮ್ಯಾಗ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಡಾ|ರಾಜಕುಮಾರ್ ಮಗಳು,‌ ಅಳಿಯ ಹಾಗೂ ನಾಯಕ ಷಣ್ಮುಖ ಅವರ ತಾಯಿ – ತಂದೆ ಲಕ್ಷ್ಮೀ ಹಾಗೂ ಗೋವಿಂದರಾಜು ಅವರು ಟ್ರೇಲರ್ ಅನಾವರಣ ಮಾಡಿ ಮಗನ ಚಿತ್ರಕ್ಕೆ ಶುಭ ಕೋರಿದರು‌. ಹಿರಿಯ ನಿರ್ಮಾಪಕ ಎಸ್‌‌ ಎ ಚಿನ್ನೇಗೌಡ, ಡಾ||ರಾಜಕುಮಾರ್ ಪುತ್ರಿ ಪೂರ್ಣಿಮಾ ರಾಮಕುಮಾರ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ವಿ.ಮಾದೇಶ್ ನಿರ್ಮಾಣದ, ಅಶೋಕ್ ಕಡಬ ನಿರ್ದೇಶಿಸಿರುವ ಈ ಚಿತ್ರ ಏಪ್ರಿಲ್ 4 ರಂದು ಬಿಡುಗಡೆಯಾಗಲಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

“ನಿಂಬಿಯಾ ಬನದ‌ ಮ್ಯಾಗ” ನಾನು ನಾಯಕನಾಗಿ ಅಭಿನಯಿಸಿರುವ ಮೊದಲ ಚಿತ್ರ ಎಂದು ಮಾತನಾಡಿದ ನಾಯಕ ಷಣ್ಮುಖ,‌ “ನಿಂಬಿಯಾ ಬನದ ಮ್ಯಾಗ” ಚಿತ್ರ ಮಲೆನಾಡಿನ ಮಡಿಲಲ್ಲಿ ನಡೆಯುವ ಸುಂದರ ದೃಶ್ಯ ಕಾವ್ಯ. ಅಮ್ಮ‌ – ಮಗನ ಬಾಂಧವ್ಯದ ಕಥೆ. ಅಶೋಕ್ ಕಡಬ ನಿರ್ದೇಶನ, ವಿ.ಮಾದೇಶ ಅವರ ನಿರ್ಮಾಣ ಹಾಗೂ ಇಡೀ ಚಿತ್ರತಂಡದ ಸಹಕಾರದಿಂದ ನಮ್ಮ ಚಿತ್ರ ಚೆನ್ನಾಗಿ ಮೂಡಿಬಂದಿದೆ. ನನ್ನ ತಂದೆ, ತಾಯಿ, ದೊಡ್ಡಪ್ಪ,‌ ಚಿಕ್ಕಮ್ಮ‌ ಹಾಗೂ ನನ್ನ ಪತ್ನಿ ಸೇರಿದಂತೆ ಅನೇಕ ಕುಟುಂಬ ಸದಸ್ಯರು ಇಂದಿನ ಸಮಾರಂಭಕ್ಕೆ ಆಗಮಿಸಿದ್ದಾರೆ. ನನ್ನ ಸೋದರಮಾವಂದಿರಾದ ಶಿವರಾಜಕುಮಾರ್, ರಾಘವೇಂದ್ರ ರಾಜಕುಮಾರ್,‌ ಗೀತಾ ಶಿವರಾಜಕುಮಾರ್,‌ ಮಂಗಳಾ ರಾಘವೇಂದ್ರ ರಾಜಕುಮಾರ್, ಅಶ್ವಿನಿ ಪುನೀತ್ ರಾಜಕುಮಾರ್,‌ ಶ್ರೀಮುರಳಿ ಹೀಗೆ ಕುಟುಂಬ ಸದಸ್ಯರೆಲ್ಲರು ನನ್ನ ಚಿತ್ರಕ್ಕೆ ಶುಭ ಕೋರಿದ್ದಾರೆ. ನಿಮ್ಮೆಲ್ಲರಿಗೂ ಧನ್ಯವಾದ ಎಂದರು.

ಮಲೆನಾಡ ಭಾಗದ ಬೆಂಗಾಡಿಯಲ್ಲಿ ಮೇಲ್ ಬೈಲ್ ದೊಡ್ಡ ಮನೆಯ ನಾಲ್ಕು ವರ್ಷದ ಮಗು ಅಚ್ಚು ( ಅಚ್ಚಣ್ಣ ) ಕಾಣೆಯಾಗಿದೆ. ಆ ತಾಯಿ ಇಂದಲ್ಲ ನಾಳೆ ಮಗು ಬಂದೆ ಬರುತ್ತೆ ಅನ್ನೋ ನಂಬಿಕೆಯಲ್ಲೇ ಕಾಯುತ್ತಿದ್ದಾಳೆ.
ಕಾಲ ಉರುಳಿದಂತೆ 25 ವರ್ಷದ ನಂತರ ಮೇಲ್ ಬೈಲ್ ದೊಡ್ಡಮನೆಯಲ್ಲಿ ಸಂತೋಷದ ವಾತಾವರಣ. ಕಾರಣ ಕಳೆದು ಹೋದ ಮಗ ಅಚ್ಚಣ್ಣ ಬಂದಿದ್ದಾನೆ. ಮುಂದೆ ಏನೂ ಎಂಬುದು ” ನಿಂಬಿಯಾ ಬನಾದ ಮ್ಯಾಗ – ಪೇಜ್ – 1″ ಚಿತ್ರದ ಕಥಾ ಸಾರಾಂಶ . ಭಾಗ 2. ಸಹ ಬರಲಿದೆ. ಷಣ್ಮುಖ ಅವರು ಮೊದಲ ಬಾರಿಗೆ ನಾಯಕನಾಗಿ‌ ನಟಿಸಿದ್ದಾರೆ. ತನುಶ್ರೀ ಈ ಚಿತ್ರದ ನಾಯಕಿ. 25 ವರ್ಷಗಳ ನಂತರ “ಮೇಘಮಾಲೆ” ಖ್ಯಾತಿಯ ಸುನಾದ್ ರಾಜ್ ಸಹ ಇದರಲ್ಲಿ ಅಭಿನಯಿಸಿದ್ದಾರೆ. ಆರೋನ್ ಕಾರ್ತಿಕ್ ಸಂಗೀತ ನೀಡಿರುವ ನಾಲ್ಕು ಹಾಡುಗಳು ಈ ಚಿತ್ರದಲ್ಲಿದೆ. ಪಳನಿ ಡಿ ಸೇನಾಪತಿ ಹಿನ್ನೆಲೆ ಸಂಗೀತ ನೀಡಿದ್ದಾರೆ. ಸಿದ್ದು ಕಾಂಚನಹಳ್ಳಿ ಛಾಯಾಗ್ರಹಣ, ರವಿತೇಜ ಸಂಕಲನ ಹಾಗೂ ಮದನ್ ಹರಿಣಿ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಏಪ್ರಿಲ್ 4 ನಮ್ಮ ಚಿತ್ರ ಬಿಡುಗಡೆಯಾಗಲಿದೆ ಎಂದರು ನಿರ್ದೇಶಕ ಅಶೋಕ್ ಕಡಬ.‌

ನಿರ್ಮಾಪಕ ವಿ.ಮಾದೇಶ್, ನಾಯಕಿ ತನುಶ್ರೀ, ಚಿತ್ರದಲ್ಲಿ ನಟಿಸಿರುವ “ಮೇಘಮಾಲೆ” ಖ್ಯಾತಿಯ ಸುನಾದ್‌ರಾಜ್, ಸಂದೀಪ್ ಮಲಾನಿ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

Tags: kannada movie reviewnimbiya banada myaganimbiya banada myaga first looknimbiya banada myaga kannada movienimbiya banada myaga kannada movie official trailernimbiya banada myaga kannada movie teaser and trailernimbiya banada myaga movienimbiya banada myaga official teasernimbiya banada myaga page 1 official trailer and teasernimbiya banada myaga teasernimbiya banda myaga movie teasershanmukha govindraj
Previous Post

ಯಶಸ್ವಿ 50 ದಿನಗಳನ್ನು ಪೂರೈಸಿ ಶತದಿನೋತ್ಸವದತ್ತ ಜನ ಮೆಚ್ಚಿದ “ಫಾರೆಸ್ಟ್” .

Next Post

ಬಿಜೆಪಿಯವರು ಮೊದಲು ಕೇಂದ್ರದ ವಿರುದ್ಧ ಪ್ರತಿಭಟಿಸಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್..!

Related Posts

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?
Top Story

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

by ಪ್ರತಿಧ್ವನಿ
February 14, 2026
0

ಬೆಂಗಳೂರು : ಕಳೆದ ಜನವರಿ 30-2026 ರಂದು ಯುಎಸ್ ನ್ಯಾಯಾಂಗ ಇಲಾಖೆಯಿಂದ ಜೆಫ್ರಿ ಎಪ್ಸ್ಟೀನ್ ತನಿಖೆಗೆ ಸಂಬಂಧಿಸಿದ ದಾಖಲೆಗಳನ್ನು ಅಮೆರಿಕದ ನ್ಯಾಯಾಲಯ ಬಿಡುಗಡೆ ಮಾಡಿದೆ. ಅದು ಸದ್ಯ...

Read moreDetails
ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

February 14, 2026
IND vs Pak: ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

IND vs Pak: ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

February 14, 2026
Next Post

ಬಿಜೆಪಿಯವರು ಮೊದಲು ಕೇಂದ್ರದ ವಿರುದ್ಧ ಪ್ರತಿಭಟಿಸಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada