• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಾಗಮಂಗಲ ತಾಲೂಕಿನ ಚಿಕ್ಕವೀರಕೊಪ್ಪಲು ಗ್ರಾಮದ ಊರಹಬ್ಬದಲ್ಲಿ ಕೇಂದ್ರ ಸಚಿವರು ಭಾಗಿ

ಪ್ರತಿಧ್ವನಿ by ಪ್ರತಿಧ್ವನಿ
February 9, 2025
in ಕರ್ನಾಟಕ, ರಾಜಕೀಯ
0
ನಾಗಮಂಗಲ ತಾಲೂಕಿನ ಚಿಕ್ಕವೀರಕೊಪ್ಪಲು ಗ್ರಾಮದ ಊರಹಬ್ಬದಲ್ಲಿ ಕೇಂದ್ರ ಸಚಿವರು ಭಾಗಿ
Share on WhatsAppShare on FacebookShare on Telegram

ಮಂಡ್ಯ (ನಾಗಮಂಗಲ): ರಾಜಕೀಯ ಕಾರಣದಿಂದ ಹಳ್ಳಿಗಳಲ್ಲಿ ಮಾನವ ಸಂಬಂಧಗಳು, ರಕ್ತ ಸಂಬಂಧಗಳು ಹಾಳಾಗುವುದು ಬೇಡ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಳಕಳಿಯ ಮನವಿ ಮಾಡಿದರು.

ADVERTISEMENT

ನಾಗಮಂಗಲ ತಾಲೂಕಿನ ಚಿಕ್ಕವೀರಕೊಪ್ಪಲು ಗ್ರಾಮದಲ್ಲಿ ಊರಹಬ್ಬ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಸಚಿವರು; ಮಾನವ ಸಂಬಂಧಗಳು, ರಕ್ತ ಸಂಬಂಧಗಳು ಹಳ್ಳಿಗಳಲ್ಲಿ ಗಾಢವಾಗಿದ್ದವು. ನೆರೆಹೊರೆಯವರು ಚೆನ್ನಾ ಎಂಬ ಭಾವನೆ ಎಲ್ಲರಲ್ಲಿಯೂ ಇತ್ತು. ಈ ಕಾರಣದಿಂದ ಗ್ರಾಮಗಳು ನೆಮ್ಮದಿಯಾಗಿದ್ದವು. ಈಗ ಆ ನೆಮ್ಮದಿ ಸಂತೋಷ ದೂರವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಹಿಂದೆ ಹಳ್ಳಿಗಳು ಎಂದರೆ ನೆಮ್ಮದಿಯ ತಾಣಗಳು ಆಗಿದ್ದವು. ಯಾರದೇ ಮನೆಯಲ್ಲಿ ಶುಭ ಕಾರ್ಯಗಳು ನಡೆದರೆ ಇಡೀ ಊರಿಗೆ ಊರೇ ಸೇರುತ್ತಿತ್ತು. ಪಂಕ್ತಿ ಭೋಜನ ಇರುತ್ತಿತ್ತು. ಅಜ್ಜ, ಅಜ್ಜಿ, ತಂದೆ ತಾಯಿಯ ಜತೆ ಅಂತಹ ಶುಭ ಕಾರ್ಯಗಳಲ್ಲಿ ಪಾಲ್ಗೊಂಡ ನೆನಪು ನನಗಿನ್ನೂ ಹಚ್ಚ ಹಸಿರಾಗಿದೆ. ಹಾಗೆಯೇ ಯಾರಿಗೆ ಕಷ್ಟ ಬಂದರೂ ಇಡೀ ಊರೇ ಮಿಡಿಯುತ್ತಿತ್ತು. ಅಂತಹ ವಾತಾವರಣದಿಂದ ನಾವು ವಂಚಿತರಾಗಿದ್ದೇವೆ ಎಂದು ಸಚಿವರು ಬೇಸರ ವ್ಯಕ್ತಪಡಿಸಿದರು.

ಹಳ್ಳಿ ಹಬ್ಬಗಳು, ಜಾತ್ರೆಗಳು ಜನರನ್ನು ಒಂದು ಮಾಡುತ್ತವೆ. ಸಾಮರಸ್ಯ ಮೂಡಿಸುತ್ತಿವೆ. ನಿಮ್ಮಲ್ಲಿ ರಾಜಕೀಯ ಇರಲಿ, ಅದು ಚುಣಾವಣೆಗೆ ಸೀಮಿತವಾಗಿರಲಿ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಮಾಜಿ ಶಾಸಕರ ಸುರೇಶ್ ಗೌಡ, ಗ್ರಾಮದ ಹಿರಿಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದೇ ವೇಳೆ ಗ್ರಾಮಸ್ಥರು ಸಚಿವರನ್ನು ಆತ್ಮೀಯವಾಗಿ ಸನ್ಮಾನಿಸಿದರು.

ಇದಕ್ಕೂ ಮೊದಲು ಸಚಿವರು ಬೆಟ್ಟದಮಲ್ಲೇನಹಳ್ಳಿ ಗ್ರಾಮದ ಶ್ರೀ ಆದಿಶಕ್ತಿ ಹುಚ್ಚಮ್ಮದೇವಿ ದೇವಸ್ಥಾನಕ್ಕೆ ತೆರಳಿ ಅಮ್ಮನವರ ದರ್ಶನ ಪಡೆದರು.

Tags: ADGP chandrashekarCongress Governmentcorrupt ips officergovernor officeHD Kumaraswamyhr ranganathkannada newskannada news channelkumaraswamykumaraswamy latest newskumaraswamy newskumaraswamy today newsLokayukta IGPLokayukta investigationprobe governor gehlot's office staffPublic TVpublic tv kannadapublic tv kannada livepublic tv kannada newssiddaramaiah government
Previous Post

ಆಮ್‌ ಆದ್ಮಿಯ ಸೋಲೂ ಕಲಿಯಬೇಕಾದ ಪಾಠಗಳೂ

Next Post

ಇವಿಎಂ ಬಗ್ಗೆ ಮಾತನಾಡುವುದು ಫ್ಯಾಷನ್ ಆಗಿದೆ: ಬಸವರಾಜ ಬೊಮ್ಮಾಯಿ

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
Next Post
ಇವಿಎಂ ಬಗ್ಗೆ ಮಾತನಾಡುವುದು ಫ್ಯಾಷನ್ ಆಗಿದೆ: ಬಸವರಾಜ ಬೊಮ್ಮಾಯಿ

ಇವಿಎಂ ಬಗ್ಗೆ ಮಾತನಾಡುವುದು ಫ್ಯಾಷನ್ ಆಗಿದೆ: ಬಸವರಾಜ ಬೊಮ್ಮಾಯಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada