• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ಮಾಡಿಟ್ಟ ಪಾಪವನ್ನು ತೊಳೆಯಲು ಕಾವೇರಿ ಮತ್ತು ಕೃಷ್ಣಾ ನದಿಗಳ ನೀರು ಸಾಲದು : ಸಿದ್ದರಾಮಯ್ಯ

Any Mind by Any Mind
May 6, 2023
in Top Story, ಇತರೆ / Others, ಇದೀಗ
0
ಬಿಜೆಪಿ ಮಾಡಿಟ್ಟ ಪಾಪವನ್ನು ತೊಳೆಯಲು ಕಾವೇರಿ ಮತ್ತು ಕೃಷ್ಣಾ ನದಿಗಳ ನೀರು ಸಾಲದು : ಸಿದ್ದರಾಮಯ್ಯ
Share on WhatsAppShare on FacebookShare on Telegram

ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಪಕ್ಷದ ಬಗ್ಗೆ ಮಾಡಿರುವ ಆರೋಪಗಳಿಗೆ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿ, ತಿರುಗೇಟು ನೀಡಿದ್ದಾರೆ.

ADVERTISEMENT

ಕಾಂಗ್ರೆಸ್ ಪಕ್ಷ ಮಾಧ್ಯಮಗಳ ಸುಳ್ಳು ಸಮೀಕ್ಷೆಗಳನ್ನು ಪ್ರಸಾರ ಮಾಡಿ ಬೆಂಬಲ ಗಳಿಸಲು ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೊಟ್ಟೆ ಉರ್ಕೊಳ್ಳುತ್ತಿರುವುದು ನೋಡಿದಾಗ ಕನಿಕರ ಹುಟ್ಟುತ್ತಿದೆ. ಏನಿದರ ಅರ್ಥ ಮೋದಿಯವರೇ? ನಿಮ್ಮನ್ನು ಹಾಡಿ ಹೊಗಳುತ್ತಿರುವ ಮಾಧ್ಯಮಗಳ ವಿಶ್ವಾಸಾರ್ಹತೆಯನ್ನು ನೀವೇ ಸಂಶಯಿಸುತ್ತಿದ್ದೀರಾ? ಮನುಷ್ಯ ಇಷ್ಟೊಂದು ಕೃತಘ್ನರಾಗಬಾರದು.

ನರೇಂದ್ರ ಮೋದಿಯವರು ರಾಜ್ಯ ಬಿಜೆಪಿಯ ಪ್ರಣಾಳಿಕೆಯನ್ನು ಸಂಕಲ್ಪಪತ್ರ ಎಂದು ಬಣ್ಣಿಸಿದ್ದಾರೆ. 2018ರ ತನ್ನ ಪ್ರಣಾಳಿಕೆಯ ಶೇಕಡಾ 90ರಷ್ಟು ಭರವಸೆಗಳನ್ನು ಬಿಜೆಪಿ ಸರ್ಕಾರ ಈಡೇರಿಸಿಲ್ಲ. 2013ರ ಕಾಂಗ್ರೆಸ್ ಪ್ರಣಾಳಿಕೆಯ 165 ಭರವಸೆಗಳಲ್ಲಿ 158 ಭರವಸೆಗಳನ್ನು ನಮ್ಮ ಸರ್ಕಾರ ಈಡೇರಿಸಿದೆ.
ನಿಮ್ಮ ಸಂಕಲ್ಪ ಪ್ರಾಮಾಣಿಕವಾದುದಾಗಿದ್ದರೆ 2013ರ ನಮ್ಮ ಪ್ರಣಾಳಿಕೆ ಮತ್ತು 2018ರ ನಿಮ್ಮ ಪ್ರಣಾಳಿಕೆಯನ್ನು ಮುಂದಿಟ್ಟು ಈಡೇರಿಸಿದ ಭರವಸೆಗಳ ಬಗ್ಗೆ ನನ್ನೊಡನೆ ಬಹಿರಂಗ ಚರ್ಚೆಗೆ ಬನ್ನಿ, ಸಿದ್ಧ ಇದ್ದೀರಾ? ನಿಮ್ಮದೇ ಸ್ಥಳ, ನಿಮ್ಮದೇ ಸಮಯ, ಉತ್ತರಕ್ಕಾಗಿ ಕಾಯುತ್ತಿರುವೆ.

ಬಿಜೆಪಿಯ ಡಬಲ್ ಎಂಜಿನ್ ಸರ್ಕಾರ ಮೂರುವರೆ ವರ್ಷಗಳ ಅಧಿಕಾರವಧಿಯಲ್ಲಿ ಹಿಂದಿನ ಸರ್ಕಾರದ ತಪ್ಪುಗಳನ್ನು ಸರಿಪಡಿಸವುದರಲ್ಲಿಯೇ ಕಳೆದುಹೋಯಿತು ಎಂದು ನರೇಂದ್ರ ಮೋದಿಯವರು ನೊಂದುಕೊಂಡಿದ್ದಾರೆ. ಮೂರುವರೆ ವರ್ಷಗಳಲ್ಲಿ ಡಬಲ್ ಎಂಜಿನ್ ಸರ್ಕಾರದ ಸಾಧನೆ ಭ್ರಷ್ಟಾಚಾರ, ಬೆಲೆ ಏರಿಕೆ, ನಿರುದ್ಯೋಗ ಮತ್ತು ಕೋಮುದ್ವೇಷವನ್ನಷ್ಟೇ ಡಬಲ್ ಮಾಡಿದೆ. ಬಿಜೆಪಿ ಮಾಡಿಟ್ಟ ಪಾಪವನ್ನು ತೊಳೆಯಲು ಕಾವೇರಿ ಮತ್ತು ಕೃಷ್ಣಾ ನದಿಗಳ ನೀರು ಸಾಲದು.

ರಾಜ್ಯದಲ್ಲಿರುವುದು ಡಬಲ್ ಎಂಜಿನ್ ಸರ್ಕಾರ ಅಲ್ಲ, ಟ್ರಿಪಲ್ ಎಂಜಿನ್ ಸರ್ಕಾರ. ಒಂದು ರಾಜ್ಯದಲ್ಲಿ, ಇನ್ನೊಂದು ದೆಹಲಿಯಲ್ಲಿ ಮತ್ತೊಂದು ನಾಗಪುರದಲ್ಲಿ. ಪ್ರಧಾನಿಯಿಂದ ಹಿಡಿದು ಮುಖ್ಯಮಂತ್ರಿ ಮತ್ತು ಸಚಿವರ ವರೆಗೆ ಎಲ್ಲರೂ ನಾಗಪುರದ ಗೊಂಬೆಯಾಟದವರ ಕೈಯಲ್ಲಿರುವ ಗೊಂಬೆಗಳು ಅಷ್ಟೆ. ಝಂಡಾ ಮಾತ್ರ ಪಕ್ಷದ್ದು ಅಜೆಂಡಾ ಆರ್.ಎಸ್.ಎಸ್ ನದ್ದು.

ಡಬಲ್ ಎಂಜಿನ ಸರ್ಕಾರ ಇದ್ದರೂ ಅರ್ಧ ಕರ್ನಾಟಕ ನೆರೆನೀರಿನಲ್ಲಿ ಮುಳುಗಿರುವಾಗ ನೆರವು ಹರಿದುಬರಲಿಲ್ಲ. ಕೇಂದ್ರಕ್ಕೆ ಕೊಟ್ಟ ಒಂದು ರೂಪಾಯಿಯಲ್ಲಿ ವಾಪಸ್ ರಾಜ್ಯಕ್ಕೆ ಬಂದದ್ದು ಕೇವಲ 16ಪೈಸೆ. ಮಹಾರಾಷ್ಟ್ರ ಸರ್ಕಾರ ಬೆಳಗಾವಿ ಗಡಿಪ್ರದೇಶಕ್ಕೆ ಅತಿಕ್ರಮಣ ಮಾಡಿದರೂ ಮಧ್ಯೆ ಪ್ರವೇಶ ಮಾಡಲಿಲ್ಲ. ಇಂಥ ಡಬ್ಬಲ್ ಇಂಜಿನ್ ಸರ್ಕಾರ ಯಾಕೆ ಬೇಕಿದೆ?

ಪ್ರಧಾನಿ ನರೇಂದ್ರ ಮೋದಿಯವರು ಕನ್ನಡದ ಕೆಲವು ಶಬ್ದಗಳನ್ನು ತಪ್ಪುತಪ್ಪಾಗಿಯಾದರೂ ಆಡುತ್ತಿರುವುದು ಸ್ವಾಗತಾರ್ಹ. ಆದರೆ ಈ ನಾಟಕದ ಮಾತುಗಳಿಂದ ಕೇಂದ್ರ ಬಿಜೆಪಿ ಸರ್ಕಾರ ಕನ್ನಡಿಗರಿಗೆ ಮಾಡಿರುವ ಅನ್ಯಾಯವನ್ನು ಮುಚ್ಚಿಡಲಾಗದು.
ನಿಜವಾದ ಕನ್ನಡಿಗನಾಗುವುದೆಂದರೆ ನಾಡಭಾಷೆ, ನಾಡಗೀತೆ ಮತ್ತು ನಾಡಧ್ವಜವನ್ನು ಒಪ್ಪಿಕೊಳ್ಳುವುದು. ಕರ್ನಾಟಕದ ನಾಡಧ್ವಜಕ್ಕೆ ಅಂಗೀಕಾರ ನೀಡಿ ನೀವು ನಿಜವಾದ ಕನ್ನಡಿಗರಾಗುವಿರಾ ಮೋದಿಯವರೇ?

ಭಯೋತ್ಪಾದನೆ ತಡೆಯಲು ಕಾಂಗ್ರೆಸ್ ಸರ್ಕಾರ ಸೋತಿತ್ತು ಎಂದು ಹೇಳಿರುವ ಪ್ರಧಾನಿ ಮೋದಿಯವರೇ, ಭಯೋತ್ಪಾದನೆಯನ್ನು ದಿಟ್ಟತನದಿಂದ ಎದುರಿಸಿ ಹುತಾತ್ಮರಾದ ಇಬ್ಬರು ಪ್ರಧಾನಿಗಳು ಯಾವ ಪಕ್ಷದವರು ಎನ್ನುವುದನ್ನು ನಿಮ್ಮ ಆತ್ಮಸಾಕ್ಷಿಯನ್ನೊಮ್ಮೆ ಕೇಳಿ ನೋಡಿ, ಉತ್ತರ ಸಿಗಬಹುದು.

ಕಳೆದ ಕೆಲವು ದಿನಗಳಿಂದ ಇಡೀ ಮಣಿಪುರ ಹೊತ್ತಿ ಉರಿಯುತ್ತಿದೆ. ದೇಶದ ಪ್ರಧಾನಮಂತ್ರಿ ಮತ್ತು ಗೃಹಸಚಿವರು ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಮಾಡುತ್ತಾ ಆರಾಮಾಗಿದ್ದಾರೆ, “ರೋಮ್ ಹೊತ್ತಿ ಉರಿಯುವಾಗ ದೊರೆ ನೀರೊ ಪಿಟೀಲು ಬಾರಿಸುತ್ತಿದ್ದನಂತೆ”, ಹಾಗಾಯಿತು ನಿಮ್ಮ ಕತೆ. ಚೀನಾದ ಗಡಿ ಅತಿಕ್ರಮಣವನ್ನು ಹಿಮ್ಮೆಟ್ಟಿಸಲಾಗಲಿಲ್ಲ, ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ನಿಯಂತ್ರಿಸಿ ಶಾಂತಿ ಸ್ಥಾಪಿಸಲಾಗಲಿಲ್ಲ. ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುವ ಯಾವ ನೈತಿಕತೆ ನಿಮಗಿದೆ ನರೇಂದ್ರ ಮೋದಿಯವರೇ? ಎಂದು ಕಿಡಿಕಾರಿದ್ದಾರೆ.

Tags: amithshahbjpvscongressbsyediyurappacmbommaidisqualifyrahulgandhiKarnataka CongressKarnataka PoliticsKPCClatest newsmallikarjunkhargemodivssiddaramaiahPMModiPriyanka Gandhisiddaramaiah
Previous Post

ಕಾಂಗ್ರೆಸ್ ಪಕ್ಷದಲ್ಲಿ ಲಿಂಗಾಯತ ನಾಯಕತ್ವ

Next Post

ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದೀರಾ ಎಂಬ ಪ್ರಶ್ನೆಗೆ ಹೀಗಿತ್ತು ಜಗದೀಶ್​ ಶೆಟ್ಟರ್​ ಉತ್ತರ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
Next Post
ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದೀರಾ ಎಂಬ ಪ್ರಶ್ನೆಗೆ ಹೀಗಿತ್ತು ಜಗದೀಶ್​ ಶೆಟ್ಟರ್​ ಉತ್ತರ

ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದೀರಾ ಎಂಬ ಪ್ರಶ್ನೆಗೆ ಹೀಗಿತ್ತು ಜಗದೀಶ್​ ಶೆಟ್ಟರ್​ ಉತ್ತರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada