• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮಲೆನಾಡು ಭಾಗದಲ್ಲಿ ನೆಟ್ವರ್ಕ್ ಸಮಸ್ಯೆ- ಮರದಡಿ ಪಾಠಕ್ಕೂ ಅಡ್ಡಿಯಾದ ವರ್ಷಧಾರೆ..

ಪ್ರತಿಧ್ವನಿ by ಪ್ರತಿಧ್ವನಿ
June 17, 2021
in ಕರ್ನಾಟಕ
0
ಮಲೆನಾಡು ಭಾಗದಲ್ಲಿ ನೆಟ್ವರ್ಕ್ ಸಮಸ್ಯೆ- ಮರದಡಿ ಪಾಠಕ್ಕೂ ಅಡ್ಡಿಯಾದ ವರ್ಷಧಾರೆ..
Share on WhatsAppShare on FacebookShare on Telegram

ಮಲೆನಾಡು ಹಾಗು ಕರಾವಳಿ ಭಾಗದಲ್ಲಿ ಮಳೆರಾಯನ ಆರ್ಭಟ ಶುರುವಾಗಿದ್ದು, ಆನ್ಲೈನ್ ಕ್ಲಾಸಿಗಾಗಿ ನೆಟ್ವರ್ಕ್ ಹುಡುಕಿ ಗುಡ್ಡ, ಮಟ್ಟಿ, ಮರಗಳನ್ನೇರುತ್ತಿದ್ದ ವಿದ್ಯಾರ್ಥಿಗಳಿಗೆ ಎಡಬಿಡದೆ ಸುರಿಯುತ್ತಿರುವ ಮಳೆ ಅಡ್ಡಿಯಾಗಿದೆ. ನೆಟ್ವರ್ಕು ಸಿಗುತ್ತಿಲ್ಲ, ಪಾಠವು ಕೇಳಲಾಗುತ್ತಿಲ್ಲ. ಈಗಾಗಲೇ ಈ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದಕ್ಕೊಂದು ಪರ್ಯಾಯ ವ್ಯವಸ್ಥೆ ಮಾಡಬೇಕೆಂದು ನೆಟ್ಟಿಗರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ADVERTISEMENT

ಮಲೆನಾಡಿನ ಗ್ರಾಮೀಣ ಪ್ರದೇಶದಲ್ಲಿ ಕಳೆದ ಒಂದುವರೆ ವರ್ಷದಿಂದ ವಿದ್ಯಾರ್ಥಿಗಳ ಜತೆ ವರ್ಕ್ ಫ್ರಂ ಹೋಮ್ ಮಾಡುವವರು ನೆಟ್ವರ್ಕ್ ಸಮಸ್ಯೆ ಅನುಭವಿಸುತ್ತಿದ್ದು, ಸ್ವಂತ ವಾಹನವಿಟ್ಟುಕೊಂಡವರು ದಿನಾಲು ಪಟ್ಟಣಕ್ಕೆ ಹೋಗಿ ಕೆಲಸ ಮಾಡುವ ಪರಿಸ್ಥಿತಿ ಎದುರಾಗಿದೆ. ಮತ್ತೊಂದೆಡೆ ನೆಟ್ವರ್ಕ್ ಸಮಸ್ಯೆಯಿಂದಲೇ ಅದೆಷ್ಟೋ ಜನ ಕೆಲಸ ಬಿಟ್ಟ ಉದಾಹರಣೆಗಳು ಇವೆ.

ತೀರ್ಥಹಳ್ಳಿ ತಾಲ್ಲೂಕಿನ ಹಾರೋಗೊಳಿಗೆ ಸಮೀಪದ ವಿದ್ಯಾರ್ಥಿಗಳೆಲ್ಲ ಒಂದೆಡೆ ಸೇರಿ ನೆಟ್ವರ್ಕ್ ಸಿಗುತ್ತದೆ ಎಂಬ ಕಾರಣಕ್ಕೆ ಕಾಡ ಮಧ್ಯೆ ಚಿಕ್ಕ ಚಪ್ಪರ ಹಾಕಿಕೊಂಡು ಆನ್ಲೈನ್ ಕ್ಲಾಸ್ ಕೇಳುತ್ತಿದ್ದರು. ಇದೀಗ ಮಲೆನಾಡಿನಲ್ಲಿ ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಅದು ಇಲ್ಲದಂತಾಗಿದೆ. ಮಳೆಯ ಮಧ್ಯೆಯೇ ಕೆಲವು ವಿದ್ಯಾರ್ಥಿಗಳು ಛತ್ರಿ ಹಿಡಿದು ನೆಟ್ವರ್ಕ್ ಹುಡುಕುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಡಿಜಿಟಲೈಸೇಷನ್ ಎಂಬುವುದು ಕಳೆದ ಎರಡು ಮೂರು ವರ್ಷಗಳಿಂದ ನಗರ ಮತ್ತು ಗ್ರಾಮೀಣ ಪ್ರದೇಶದ ನಡುವಿನ ಶೈಕ್ಷಣಿಕ ಅಸಮಾನತೆ ವಿಪರೀತ ಹೆಚ್ಚುತ್ತಿದೆ ಎಂಬುದಕ್ಕೆ ಇದೊಂದು ಉದಾಹರಣೆಯಾಗಿದ್ದು, ಇನ್ನೂ ಬಹುತೇಕ ಹಳ್ಳಿಗಳಲ್ಲಿ ಇಂತದ್ದೆ ಪರಿಸ್ಥಿತಿಯಿದೆ.


ಮತ್ತೊಂದೆಡೆ ಗ್ರಾಮೀಣ ಪ್ರದೇಶಗಳಲ್ಲಿ ಕರೋನಾ ಸೋಂಕು ದಿನೇ-ದಿನೇ ಹೆಚ್ಚುತ್ತಿದ್ದು, ಸೋಂಕು ನಿಯಂತ್ರಣಕ್ಕೂ ಇದು ಸಮಸ್ಯೆಯಾಗಿ ಪರಿಣಮಿಸಿದೆ. ಫೋನ್ ಸಂಪರ್ಕಕ್ಕೆ ಸಿಗದ ಕಾರಣ ಗಂಭೀರ ಸ್ಥಿತಿಯಲ್ಲಿರುವ ಸೋಂಕಿತರನ್ನು ಆಸ್ಪತ್ರೆಗೆ ಸೇರಿಸುವುದು ಕಷ್ಟವಾಗುತ್ತಿದೆ. ಹಾಗೆಯೇ ಸೋಂಕು ಹೆಚ್ಚು ಉಲ್ಭಣಕ್ಕೂ ಕಾರಣವಾಗಿದೆ.

ಮಾರ್ಚ್ ನಲ್ಲಿ ನಡೆದ ರಾಜ್ಯ ವಿಧಾನಸಭೆ ಅಧಿವೇಶನದಲ್ಲಿಯೂ ಈ ವಿಚಾರ ಪ್ರಸ್ತಾಪವಾಗಿದ್ದು, ಪಶ್ಚಿಮಘಟ್ಟಗಳ 20-30 ತಾಲೂಕುಗಳಲ್ಲಿ ನೆಟ್‌ವರ್ಕ್ ಸಮಸ್ಯೆಯಿದ್ದು, ನೆಟ್‌ವರ್ಕ್ ಸಿಗದೆ ಮಕ್ಕಳ ಆನ್ಲೈನ್ ಪಾಠಕ್ಕೆ ತೊಂದರೆಯಾಗಿದೆ. ಪಡಿತರ, ಜಾತಿ ಪ್ರಮಾಣಪತ್ರ ಪಡೆಯಲು ಸಮಸ್ಯೆ ಎದುರಾಗಿದ್ದು, ಇಂತಹ ಭಾಗಗಳಲ್ಲಿ ಹೆಚ್ಚುವರಿ ಮೊಬೈಲ್ ಟವರ್‌ಗಳ ಅಳವಡಿಕೆ ಮಾಡಬೇಕೆಂದು ಶಾಸಕ ಹರತಾಳು ಹಾಲಪ್ಪ ಪ್ರಸ್ತಾಪಿಸಿದ್ದರು.

ಈ ಭಾಗದಲ್ಲಿ ಹೆಚ್ಚು ಮೊಬೈಲ್ ಟವರ್‌ಗಳ ಅಳವಡಿಕೆ ವಿಚಾರ ಸಂಬಂಧ ಸಿ.ಎಂ ಯಡಿಯೂರಪ್ಪ ಅವರು ಕೇಂದ್ರದ ದೂರ ಸಂಪರ್ಕ ಸಚಿವರಿಗೆ ಪತ್ರ ಬರೆದು ಮೊಬೈಲ್ ಟವರ್‌ಗಳನ್ನು ಅಳವಡಿಸುವಂತೆ ಮನವಿ ಮಾಡಿದ್ದಾರೆ. ಆದಷ್ಟೂ ಬೇಗ ಸಮಸ್ಯೆ ಬಗೆಹರಿಸುವುದಾಗಿ ಬೃಹತ್ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್ ತಿಳಿಸಿದ್ದರು. ಆದರೆ ಸಮಸ್ಯೆ ಮಾತ್ರಾ ಇನ್ನೂ ಬಗೆಹರಿದಿಲ್ಲ, ಇನ್ನಾದರು ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಸಮಸ್ಯೆ ಬಗೆಹರಿಸುವತ್ತ ಗಮನ ಹರಿಸಬೇಕು.

ಮಲೆನಾಡಿನ ಗುಡ್ಡಗಾಡು ಪ್ರದೇಶಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ತಕ್ಷಣಕ್ಕೆ ಪರ್ಯಾಯ ವ್ಯವಸ್ಥೆ ಮಾಡುವುದು ಅವಶ್ಯಕವಾಗಿದೆ. ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ ಖಾಲಿಯಿರುವ ಕಟ್ಟಡದಲ್ಲಿ ವೈಫೈ ಸೌಲಭ್ಯ ಒದಗಿಸುವುದರ ಮೂಲಕ ವಿದ್ಯಾರ್ಥಿಗಳ ಆನ್ಲೈನ್ ಕ್ಲಾಸ್ಗೆ ಅನುಕೂಲ ಮಾಡಿಕೊಡವುದು ಸೂಕ್ತವೆನಿಸುತ್ತದೆ ಎಂಬುವುದು ಹಲವರ ಅಭಿಪ್ರಾಯ ಕೂಡ.

Previous Post

ಅರುಣ್ ಸಿಂಗ್ ಅವರನ್ನು ಭೇಟಿಯಾಗದ ಬೆಲ್ಲದ್-ಯತ್ನಾಳ್: BSY ಪರ ಹೇಳಿಕೆ ದಾಖಲಿಸಿದ 35 ಶಾಸಕರು

Next Post

ಹೊಸ ಶಿಕ್ಷಣ ನೀತಿಯಿಂದ ಕನ್ನಡಕ್ಕೆ ಕುತ್ತು; ಎರಡೇ ಸೆಮಿಸ್ಟರ್‌ಗೆ ಸೀಮಿತವಾಯ್ತು ಮಾತೃಭಾಷೆ ಕನ್ನಡ.!

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
ಹೊಸ ಶಿಕ್ಷಣ ನೀತಿಯಿಂದ ಕನ್ನಡಕ್ಕೆ ಕುತ್ತು; ಎರಡೇ ಸೆಮಿಸ್ಟರ್‌ಗೆ ಸೀಮಿತವಾಯ್ತು ಮಾತೃಭಾಷೆ ಕನ್ನಡ.!

ಹೊಸ ಶಿಕ್ಷಣ ನೀತಿಯಿಂದ ಕನ್ನಡಕ್ಕೆ ಕುತ್ತು; ಎರಡೇ ಸೆಮಿಸ್ಟರ್‌ಗೆ ಸೀಮಿತವಾಯ್ತು ಮಾತೃಭಾಷೆ ಕನ್ನಡ.!

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada