• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಒಕ್ಕಲಿಗರ ಕೋಟೆ ಗೆಲ್ಲುವುದಕ್ಕೆ ನಡೀತಿದೆ ಪೈಪೋಟಿ..! ಗೆಲ್ಲೋದ್ಯಾರು..?

Krishna Mani by Krishna Mani
April 16, 2024
in ರಾಜಕೀಯ
0
ನಿನ್ನೆ ಹೆಚ್.ಡಿ.ಕೆ ಸುಳ್ಳುಗಾರ ಎಂದ ಡಿಕೆ ಇಂದು ಯೂಟರ್ನ್ ! ಹೆಚ್‌ಡಿಕೆ ಮೇಲೆ ಅಪಾರ ಗೌರವವಿದೆ ಎಂದ ಡಿಸಿಎಂ !
Share on WhatsAppShare on FacebookShare on Telegram
ADVERTISEMENT

ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗರೇ ರಾಜಕೀಯವಾಗಿ ಪ್ರಾಬಲ್ಯವಾಗಿರುವ ಸಮುದಾಯ. ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ ಬೆಂಬಲಿಸಿದ ಕಾರಣಕ್ಕಾಗಿಯೇ ಜೆಡಿಎಸ್​ ಕೋಟೆ ಛಿದ್ರವಾಗಿತ್ತು. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್​ ಪಕ್ಷ ಹೀನಾಯವಾಗಿ ಸೋಲನ್ನಪ್ಪುವಂತಾಗಿತ್ತು. ಜೆಡಿಎಸ್​ ಒಕ್ಕಲಿಗರ ಮತಗಳ ಮೇಲೆ ರಾಜಕಾರಣ ಮಾಡುತ್ತಿದೆ ಎನ್ನುವ ಆರೋಪವನ್ನು ಸುಳ್ಳು ಮಾಡಿತ್ತು ಒಕ್ಕಲಿಗರ ಕೋಟೆ. ಕಾಂಗ್ರೆಸ್​ ಪರವಾಗಿ ಮತಚಲಾಯಿಸಿದ್ದ ಒಕ್ಕಲಿಗರು ಡಿ.ಕೆ ಶಿವಕುಮಾರ್​​ ನೇತೃತ್ವದಲ್ಲಿ ಕಾಂಗ್ರೆಸ್​ ಪಾರ್ಟಿಯನ್ನು ಬೆಂಬಲಿಸಿದ್ದರು. ಅದೇ ಕಾರಣಕ್ಕೆ ಕಾಂಗ್ರೆಸ್​ ಭರ್ಜರಿ ಜಯ ದಾಖಲಿಸಿ, ರಾಜ್ಯದಲ್ಲಿ ಆಡಳಿತ ನಡೆಸುವಂತಾಯ್ತು.

ದೇವೇಗೌಡರನ್ನು ಒಮ್ಮೆ ಮುಖ್ಯಮಂತ್ರಿ ಮಾಡಿದ್ದೀರಿ, ಕುಮಾರಸ್ವಾಮಿ ಅವರನ್ನು ಎರಡು ಬಾರಿ ಮುಖ್ಯಮಂತ್ರಿ ಮಾಡಿದ್ದೀರಿ, ನಾನು ಏನು ತಪ್ಪು ಮಾಡಿದ್ದೇನೆ..? ಎಂದು ಪ್ರಶ್ನೆ ಮಾಡಿದ್ದರು. ಅದರಲ್ಲೂ ಒಕ್ಕಲಿಗರ ಸಭೆ ಸಮಾರಂಭದಲ್ಲಿ ನಾನು ಏನು ತಪ್ಪು ಮಾಡಿದ್ದೇನೆ..? ನನಗೆ ಒಂದು ಅವಕಾಶ ಯಾಕೆ ಕೊಡಲ್ಲ ಎನ್ನುವ ಮೂಲಕ ಒಕ್ಕಲಿಗರು ಈ ಬಾರಿ ನಾನೇ ಮುಖ್ಯಮಂತ್ರಿ ಅನ್ನೋದನ್ನು ಬಿಂಬಿಸುತ್ತಾ ಸಾಗಿದರು. ಕನಕಪುರದಲ್ಲಿ ನಡೆದ ಸಭೆಯೊಂದರಲ್ಲಿ ಈ ಬಾರಿ ಪಕ್ಷ ಅಧಿಕಾರ ಬಂದರೆ ನಾನೇ ಮುಖ್ಯಮಂತ್ರಿ ಎಂದು ಸೂಚ್ಯವಾಗಿ ಹೇಳಿದ್ದರು. ಆ ಬಳಿಕ ಒಕ್ಕಲಿಗ ಜನಾಂಗ ಡಿ.ಕೆ ಶಿವಕುಮಾರ್​ ಮುಖ್ಯಮಂತ್ರಿ ಆಗಲಿ ಎನ್ನುವ ಕಾರಣಕ್ಕೆ ಒಕ್ಕಲಿಗರು ಒಗ್ಗಟ್ಟು ಪ್ರದರ್ಶನ ಮಾಡಿದರು ಆದರೆ ಅದು ಹುಸಿಯಾಯ್ತು.

ಲೋಕಸಭಾ ಚುನಾವಣೆಯಲ್ಲಿ ಮತ್ತೆ ಒಕ್ಕಲಿಗರ ಕೋಟೆ ಭೇದಿಸಲು ನಾಯಕರ ನಡುವೆ ಜಟಾಪಟಿ ಶುರುವಾಗಿದೆ. ಡಿ.ಕೆ ಶಿವಕುಮಾರ್​ ಹಾಗು ಕುಮಾರಸ್ವಾಮಿ ಒಕ್ಕಲಿಗ ಸಮುದಾಯನ ಅಗ್ರಗಣ್ಯ ನಾಯಕರಾಗಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಯಾರು ಯಾರನ್ನು ಮಣಿಸಿ ಯುದ್ಧ ಗೆಲ್ಲುತ್ತಾರೆ ಅನ್ನೋ ಕಾತುರತೆ ರಾಜಕೀಯ ವಿಶ್ಲೇಷಕರಲ್ಲೂ ಮನೆ ಮನೆ ಮಾಡಿದೆ. ಈ ಬಾರಿ ಕಾಂಗ್ರೆಸ್​ ಗ್ಯಾರಂಟಿ ಯೋಜನೆಗಳಿಗೆ ಜನರು ಮನ್ನಣೆ ಕೊಡುತ್ತಾರೆ ಅನ್ನೋ ನಂಬಿಕೆಯಲ್ಲಿದೆ. ಆದರೆ ಗ್ಯಾರಂಟಿ ಯೋಜನೆಗಳಿಂದ ಲಾಭವಿಲ್ಲ ಎನ್ನುವುದನ್ನು ಜನರಿಗೆ ಮನವರಿಕೆ ಮಾಡುವ ಯತ್ನದಲ್ಲಿ ಬಿಜೆಪಿ, ಜೆಡಿಎಸ್​ ನಾಯಕರಿದ್ದಾರೆ. ಫಲಿತಾಂಶ ಎಲ್ಲದಕ್ಕೂ ಉತ್ತರ ಕೊಡಲಿದೆ.

ಕಾಂಗ್ರೆಸ್​ ಒಕ್ಕಲಿಗರ ಕೋಟೆ ಭೇದಿಸಬಾರದು ಅನ್ನೋ ಕಾರಣಕ್ಕೇ ಬಿಜೆಪಿ ನಾಯಕರು ಜೆಡಿಎಸ್​ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದೆ. ಉತ್ತರ ಕರ್ನಾಟಕದಲ್ಲಿ ಲಿಂಗಾಯತ ನಾಯಕರು ಹೇಗಿದ್ದರೂ ಬಿಜೆಪಿ ಬಿಟ್ಟು ಕಾಂಗ್ರೆಸ್​ ಜೊತೆಗೆ ಹೋಗುವುದಿಲ್ಲ ಎನ್ನುವ ನಂಬಿಕೆಯಿಂದ ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್​ಗೆ ಬೆನ್ನೆಲುಬಾಗಿ ನಿಲ್ಲುವ ಮೂಲಕ ಕಾಂಗ್ರೆಸ್​ ಸರ್ಕಾರದ ಬೆನ್ನೆಲುಬು ಮುರಿಯುವ ಲೆಕ್ಕಾಚಾರ ಬಿಜೆಪಿ ಹೈಕಮಾಂಡ್​ ನಾಯಕರದ್ದು. ಇನ್ನು ಇದು ದೇಶದ ಚುನಾವಣೆ ಆಗಿರುವ ಕಾರಣಕ್ಕೆ ಜನರು ಬಿಜೆಪಿ ಬೆಂಬಲಿಸ್ತಾರೆ, ಕಾಂಗ್ರೆಸ್​ನಲ್ಲಿ ನಾಯಕತ್ವ ಡೋಲಾಯಮಾನ ಸ್ಥಿತಿಯಲ್ಲಿರುವುದು ಬಿಜೆಪಿ, ಜೆಡಿಎಸ್​ ಪಾಲಿಗೆ ಅನುಕೂಲ ಆಗುವ ಸಾಧ್ಯತೆ ಹೆಚ್ಚಿದೆ. ಈ ಚುನಾವಣೆಯಲ್ಲಿ ಡಿ.ಕೆ ಶಿವಕುಮಾರ್​ ಮಣಿಸಿ ಕುಮಾರಸ್ವಾಮಿ ಮೇಲುಗೈ ಸಾಧಿಸಿದರೆ ಅನ್ನೋ ಭಯ ಕಾಂಗ್ರೆಸ್​ ನಾಯಕತ್ವವನ್ನು ಕಾಡುತ್ತಿದೆ ಎನ್ನುವುದು ಸತ್ಯ.

ಕೃಷ್ಣಮಣಿ

DCM DK Shivakumar : ಅರಗ ಜ್ಞಾನೇಂದ್ರಗೆ ಜ್ಞಾನ ಇಲ್ಲ | Shivamogga | #pratidhvani
Tags: ‌ ಹೆಚ್‌ಡಿ ಕುಮಾರಸ್ವಾಮಿDK Shivakumarಒಕ್ಕಲಿಗರುಗೆಲುವುಪ್ರಾಬಲ್ಯ
Previous Post

ಹೆಬ್ಬಾಳ ಕಡೆ ಓಡಾಡೋ ಸವಾರರೆ ನಾಳೆಯಿಂದ ಹುಷಾರ್..!

Next Post

ಧಾರವಾಡ ಲೋಕಸಭೆ: ಕಾಂಗ್ರೆಸ್‌ ವಿನೋದ್‌ ಅಸೂಟಿ ನಾಮಪತ್ರ ಸಲ್ಲಿಕೆ

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
Next Post
ಧಾರವಾಡ ಲೋಕಸಭೆ: ಕಾಂಗ್ರೆಸ್‌ ವಿನೋದ್‌ ಅಸೂಟಿ ನಾಮಪತ್ರ ಸಲ್ಲಿಕೆ

ಧಾರವಾಡ ಲೋಕಸಭೆ: ಕಾಂಗ್ರೆಸ್‌ ವಿನೋದ್‌ ಅಸೂಟಿ ನಾಮಪತ್ರ ಸಲ್ಲಿಕೆ

Please login to join discussion

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada