• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನದ ಮರ್ಯಾದೆಗೇಡು ಹತ್ಯೆ ನಡೆಯುತ್ತಿದೆ: ಕೆ.ವಿ.ಪ್ರಭಾಕರ್

ಪ್ರತಿಧ್ವನಿ by ಪ್ರತಿಧ್ವನಿ
August 30, 2025
in Top Story, ಕರ್ನಾಟಕ, ಜೀವನದ ಶೈಲಿ, ರಾಜಕೀಯ
0
ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನದ ಮರ್ಯಾದೆಗೇಡು ಹತ್ಯೆ ನಡೆಯುತ್ತಿದೆ: ಕೆ.ವಿ.ಪ್ರಭಾಕರ್
Share on WhatsAppShare on FacebookShare on Telegram

ವಿಗ್ರಹಗಳನ್ನು ಸ್ಥಾಪಿಸಿ ವಿಚಾರಗಳನ್ನು ಕೊಲ್ಲುವ ಅಪಾಯದ ಬಗ್ಗೆ ಎಚ್ಚರ: ಕೆ.ವಿ.ಪಿ

ADVERTISEMENT

ಮನುಸ್ಮೃತಿಯ ಘರ್ ವಾಪ್ಸಿಯನ್ನು ಸಂವಿಧಾನ ತಡೆದು ನಿಲ್ಲಿಸಿದೆ: ಕೆ.ವಿ.ಪಿ

ಚಿತ್ರದುರ್ಗ ಆ 30: ಜಾತಿ ಶ್ರೇಷ್ಠತೆಯ ವ್ಯಸನದ ಮನುಸ್ಮೃತಿಯ ಘರ್ ವಾಪ್ಸಿಗೆ ನಿರಂತರ ಷಡ್ಯಂತ್ರ ನಡೆಯುತ್ತಿದ್ದು ಇದು ಸಾಧ್ಯವಾಗದಂತೆ ತಡೆದು ನಿಲ್ಲಿಸಿರುವುದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನ. ಈ ಕಾರಣಕ್ಕೇ ಸಂವಿಧಾನದ ಕುತ್ತಿಗಿಗೇ ಕೈ ಹಾಕಲಾಗುತ್ತಿದೆ. ಇದಕ್ಕೆ ಸುದ್ದಿ ಮಾಧ್ಯಮ ಮೂಕಸಾಕ್ಷಿಯಾಗಿರುವುದು ಅಪಾಯಕಾರಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಪ್ರಚಾರ ಇಲಾಖೆ, SC/ST ಸಂಪಾದಕರ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ “ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನ” ವಿಚಾರಗೋಷ್ಠಿಯನ್ನು ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

Darshanputtannaiah : ಗ್ರಾಮ ಅಭಿವೃದ್ಧಿಗಾಗಿ  ಜನರನ್ನು ಒಂದು ಮಾಡಿದ ದರ್ಶನ್ ಪುಟ್ಟಣ್ಣಯ್ಯ #pratidhvani

ಈ ಹೊತ್ತಿನ ಬಹಳ ಪತ್ರಕರ್ತರ ಕೈಯಲ್ಲಿ ವಿಚಾರ, ವಿಮರ್ಷೆಗಿಂತ ಹೆಚ್ಚಾಗಿ ಪೆಟ್ರೋಲ್, ಬೆಂಕಿಪೊಟ್ಟಣವೇ ಹೆಚ್ಚಾಗಿದೆ. ಕಡ್ಡಿಗೀರುವ ಅವಕಾಶಕ್ಕಾಗಿ ಕಾಯುತ್ತಿರುವಂತೆ ಕಾಣುತ್ತಾರೆ. ಪ್ರಜಾಪ್ರಭುತ್ವದ ಪ್ರಾಣ ಪಕ್ಷಿ ಸುದ್ದಿ ಸಂಸ್ಥೆಗಳ ಕೈಯಲ್ಲಿದೆ. ಪ್ರಾಣ ಉಳಿಸುವುದು, ಬಿಡುವುದು ಇವರಿಗೇ ಬಿಟ್ಟಿದೆ ಎಂದು ವಿವರಿಸಿದರು.‌

ಸುದ್ದಿ ಮಾಧ್ಯಮದ ಆತ್ಮ ಆಗಿರುವ “ವಾಕ್ ಸ್ವಾತಂತ್ರ್ಯ ಮತ್ತು ಜಾತ್ಯತೀತತೆ ಹಾಗೂ ಸಾಮಾಜಿಕ ನ್ಯಾಯ”ವೇ ಅಂಬೇಡ್ಕರ್ ದೃಷ್ಟಿಕೋನದ ಆತ್ಮವೂ ಆಗಿದೆ. ಅಂಬೇಡ್ಕರ್ ಕೊಟ್ಟ ಸಂವಿಧಾನದ ಮೌಲ್ಯವೂ ಆಗಿದೆ ಎಂದು ಅಭಿಪ್ರಾಯಪಟ್ಟರು.

ಇವತ್ತಿನ‌ ಸುದ್ದಿ ಮಾಧ್ಯಮಗಳ ರಚನೆ ಮತ್ತು ಆಚರಣೆಯಲ್ಲಿ ಜಾತ್ಯತೀತತೆ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ, ಅಂಬೇಡ್ಕರ್ ದೃಷ್ಟಿಕೋನದ ಮರ್ಯಾದೆಗೇಡು ಹತ್ಯೆ ನಡೆಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ದೇಶದಲ್ಲಿ ಎರಡು ತದ್ವಿರುದ್ದವಾದ ಬೆಳವಣಿಗೆಗಳು ಅತೀ ವೇಗವಾಗಿ ನಡೆಯುತ್ತಿವೆ. ಒಂದು ಅಂಬೇಡ್ಕರ್ ಅವರ ವಿಗ್ರಹಗಳನ್ನು ಅತೀ ಹೆಚ್ಚು ನಿರ್ಮಿಸುತ್ತಲೇ ಅಂಬೇಡ್ಕರ್ ಅವರ ವಿಚಾರಗಳನ್ನು ಕೊಲ್ಲುವ ಪ್ರಕ್ರಿಯೆ ಕೂಡ ಹೆಚ್ಚು ವೇಗ ಪಡೆದುಕೊಂಡಿದೆ. ವಿಗ್ರಹಗಳನ್ನು ಸ್ಥಾಪಿಸಿ, ವಿಚಾರಗಳನ್ನು ಕೊಲ್ಲುವ ಈ ವಿದ್ಯಮಾನಕ್ಕೆ ಸುದ್ದಿ ಮಾಧ್ಯಮ ” ಮೂಕಸಾಕ್ಷಿ”ಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಇಡೀ ದೇಶದಲ್ಲಿ ಅತೀ ಹೆಚ್ಚು ಅಂಬೇಡ್ಕರ್ ವಿಗ್ರಹಗಳನ್ನು ಸ್ಥಾಪಿಸಲಾಗಿದೆ. ಆದರೆ, ವಿಶ್ವದಲ್ಲೇ ಅತೀ ಹೆಚ್ಚು ಮಾನ್ಯತೆ ಪಡೆದ ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೂಪಗೊಳಿಸುತ್ತಾ, ಸಂವಿಧಾನದ ತಲೆ ಕತ್ತರಿಸುವುದು, ಕೈ ಮುರಿಯುವುದು, ಮಸಿ ಬಳಿಯುವ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. ಸಂವಿಧಾನದಿಂದ “ಜಾತ್ಯತೀತ ಮತ್ತು ಸಮಾಜವಾದ” ಎನ್ನುವ ಮೌಲ್ಯವನ್ನು ಕೀಳಬೇಕು ಎನ್ನುವ ಕೂಗಿನ‌ ಹಿಂದೆ ಇರುವುದೂ ಕೂಡ ಅಂಬೇಡ್ಕರ್ ಪ್ರತಿಮೆಯನ್ನು ವಿರೂಪಗೊಳಿಸುವ ವಿಕೃತ ಮನಸ್ಥಿತಿಯೇ ಆಗಿದೆ ಎಂದು ವಿಶ್ಲೇಷಿಸಿದರು.

ತಮ್ಮ 65 ವರ್ಷಗಳ ಜೀವಿತಾವಧಿಯಲ್ಲಿ ಅರ್ಧಕ್ಕೂ ಹೆಚ್ಚು ಆಯಸ್ಸನ್ನು ಅಂಬೇಡ್ಕರ್ ಅವರು ಪತ್ರಕರ್ತರಾಗಿ, ಸಂಪಾದಕರಾಗಿ, ಲೇಖಕರಾಗಿ, ಬರಹಗಾರರಾಗಿ ಕಳೆದಿದ್ದಾರೆ.

*1920 ರಲ್ಲಿ “ಮೂಕನಾಯಕ”
*1927 ರಲ್ಲಿ “ಬಹಿಷ್ಕೃತ ಭಾರತ”
*1928 ರಲ್ಲಿ “ಸಮತಾ”
*1930 ರಲ್ಲಿ “ಜನತಾ”
*1943 ರಲ್ಲಿ ಪ್ರಬುದ್ಧ ಭಾರತ ಪತ್ರಿಕೆಗಳನ್ನು ಆರಂಭಿಸಿ ಮುನ್ನಡೆಸಿದರು.

ಸದ್ಯ ಸುಮಾರು 25000 ಪುಟದಷ್ಟು ಅಂಬೇಡ್ಕರ್ ಅವರ ಬರಹಗಳು ಲಭ್ಯವಿದೆ. ಸುಮಾರು ಐದು ವರ್ಷಗಳ ಕಾಲ ಜಗತ್ತಿನ ಎಲ್ಲಾ ಧಾರ್ಮಿಕ ಗ್ರಂಥಗಳನ್ನೂ ಅಭ್ಯಾಸ ಮಾಡಿ, ಅಧ್ಯಯನ‌ ನಡೆಸಿ “ಬುದ್ಧ ಮತ್ತು ಅವನ ಧರ್ಮ” ಕೃತಿಯನ್ನು ಬರೆಯುವಾಗಲೇ ತಾವು ಮಾಡಿಟ್ಟಿದ್ದ ನೋಟ್ಸ್ ಗಳ ರಾಶಿಯ ಮೇಲೇ ಕೊನೆಯುಸಿರೆಳೆದರು.

ತಮ್ಮ ಇಡೀ ಜೀವಮಾನವನ್ನು ಪ್ರಬುಧ್ಧ ಭಾರತದ ನಿರ್ಮಾಣಕ್ಕಾಗಿ ನಿರಂತರವಾಗಿ ನಿಷ್ಠುರ ಸಂಪಾದಕೀಯಗಳನ್ನು, ಲೇಖನಗಳನ್ನು ಬರೆದರು. ಆ ನಿಷ್ಠುರತೆ ಇವತ್ತಿನ ಸುದ್ದಿ ಮಾಧ್ಯಮಗಳಲ್ಲಿ ಅಳಿಸುತ್ತಿದೆ.

M lakshman: ಬಿಜೆಪಿಯವರು ಬಾನು ಮುಸ್ತಾಕ್ ದನದ ಮಾಂಸ ತಿಂತಾರೆ ಅಂತಿರಲ್ಲ ನೀವು ನೋಡಿದ್ರಾ..? #rashok #bjp

ಒಂದು ಕಡೆ ಮಾಧ್ಯಮಗಳಲ್ಲಿ ದಲಿತ ಸಮುದಾಯದ ಪ್ರತಿನಿಧ್ಯವೇ ಇಲ್ಲ ಎನ್ನುವ ಅಧ್ಯಯನ‌ ವರದಿಗಳು ಬಂದಿವೆ. ನಿರ್ಣಾಯಕ ಸ್ಥಾನಗಳಲ್ಲಿ ಮಹಿಳೆಯರಿಗೆ, ದಲಿತರಿಗೆ ಸುದ್ದಿ ಸಂಸ್ಥೆಗಳು ನಿಷೇದ ಹೇರಿವೆ ಎನ್ನುವ ವರದಿಗಳೂ ಇವೆ. ಈ ತಾರತಮ್ಯ ಸುದ್ದಿಗಳ, ಸಂಗತಿಗಳ ಆಯ್ಕೆಯ ಮೇಲೆ ಪರಿಣಾಮ ಬೀರುತ್ತವೆ. ಮಾತ್ರವಲ್ಲದೆ ಪತ್ರಿಕೆಗಳನ್ನು ರೂಪಿಸುವ ಮತ್ತು ಸುದ್ದಿಗಳನ್ನು ಗ್ರಹಿಸುವುದರಲ್ಲಿ ಮತ್ತು ಮಂಡಿಸುವುದರಲ್ಲೂ ಅಂಬೇಡ್ಕರ್ ದೃಷ್ಟಿಕೋನ ಕಾಣೆಯಾಗಿದೆ ಎಂದರು.

ಆದ್ದರಿಂದ ಅಂಬೇಡ್ಕರ್ ಅವರ ದೃಷ್ಟಿಕೋನದ ಮರುಸ್ಥಾಪನೆ ಮತ್ತು ಸುದ್ದಿ ಮಾಧ್ಯಮಗಳಲ್ಲಿ ನಾಪತ್ತೆಯಾಗಿರುವ ಕಾಳಜಿಗಳ ಮರು ಶೋಧನೆ ಆಗುವ ಅಗತ್ಯವಿದೆ.

2012 ರ ಏಪ್ರಿಲ್ 14ರಂದು ಅಂಬೇಡ್ಕರ್ ಜಯಂತಿಯನ್ನು ನೆಪವಾಗಿ ಇಟ್ಟುಕೊಂಡು ಪ್ರಜಾವಾಣಿ ಪತ್ರಿಕೆ ದೇವನೂರು ಮಹದೇವ ಅವರ ಅತಿಥಿ ಸಂಪಾದಕತ್ವದಲ್ಲಿ ಸಂಚಿಕೆ ಹೊರತಂದಿತ್ತು. ಈ ಸಂಚಿಕೆಯನ್ನು ನಾನು ಇವತ್ತಿಗೂ ಜೋಪಾನವಾಗಿ ಇಟ್ಟಿದ್ದೀನಿ. ಈ ಸಂಚಿಕೆ ಪತ್ರಿಕೋದ್ಯಮದಲ್ಲಿ ಮರ್ಯಾದೆಗೇಡು ಹತ್ಯೆಗೆ ಒಳಗಾಗಿರುವ ಅಂಬೇಡ್ಕರ್ ದೃಷ್ಟಿಕೋನಕ್ಕೆ ಮರು ಜೀವ ಕೊಡುವ ಅದ್ಭುತ ಪ್ರಯತ್ನವಾಗಿತ್ತು.

ಆ ಸಂಚಿಕೆಯ ಮುಖಪುಟದಲ್ಲಿ, ದೇವನೂರು ಮಹದೇವ ಅವರು ಬರೆದಿರುವ “ಸಮಾನತೆ ಕನಸನ್ನು ಮತ್ತೆ ಕಾಣುತ್ತಾ” ಎನ್ನುವ ಅತಿಥಿ ಸಂಪಾದಕೀಯ ಮತ್ತು ಇದರ ಪಕ್ಕದಲ್ಲೇ ಸಂಪಾದಕ ಶಾಂತಕುಮಾರ್ ಅವರು ಬರೆದಿರುವ “ಕಾಳಜಿಗಳ ಮರು ಶೋಧ..” ಎನ್ನುವ ಸಂಪಾದಕೀಯ ಎರಡೂ ಕನ್ನಡಿಗಳು.

ಈ ಸಂಪಾದಕೀಯದ ಕನ್ನಡಿಗಳಲ್ಲಿ ನಾವು ಪತ್ರಕರ್ತರು ನಮ್ಮನ್ನು ನಾವು ಮರು ಶೋಧಿಸಿಕೊಳ್ಳುವ ಅಗತ್ಯವಿದೆ. ಈ ಕನ್ನಡಿಗಳಲ್ಲಿ ಈ ಹೊತ್ತಿನ ಸುದ್ದಿ ಮಾಧ್ಯಮಗಳು ದರ್ಶನ ಪಡೆಯಲಿ ಎಂದು ಆಶಿಸಿದರು.

ವಿಧಾನ ಪರಿಷತ್ ಸದಸ್ಯರಾದ ನವೀನ್ ಉದ್ಘಾಟಿಸಿದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಡಿ.ಉಮಾಪತಿ‌ ಅವರು ಆಶಯ ಮಾತುಗಳನ್ನಾಡಿದರು. ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಆಯೆಷಾ ಖಾನುಂ ಅಧ್ಯಕ್ಷತೆ ವಹಿಸಿದ್ದರು. ಅಕಾಡೆಮಿಯ ಕಾರ್ಯದರ್ಶಿ ಸಹನಾ ಭಟ್, ಅಕಾಡೆಮಿ ಸದಸ್ಯರಾದ ಅಹೋಬಳಪತಿ ಸೇರಿ SC/ST ಸಂಪಾದಕರ ಸಂಘದ ಪದಾಧಿಕಾರಿಗಳು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Tags: BJPCongress PartyMediamedia advisor kv prabhakarmedia advisor.Media Bulletinಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ರಾಮಕೃಷ್ಣ ಹೆಗಡೆ ಅವರ ಹೆಸರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

Next Post

ಯುವ ರಾಜಕುಮಾರ್ ಅವರಿಂದ ಅನಾವರಣವಾಯಿತು “ಅರಸಯ್ಯನ ಪ್ರೇಮ ಪ್ರಸಂಗ” ಚಿತ್ರದ ಟ್ರೇಲರ್

Related Posts

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
April 12, 2026
0

ದಾವಣಗೆರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಪೈಪೋಟಿಯಷ್ಟೇ ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಜಗಳದ ವೇದಿಕೆಯಾಗಿಯೂ ಪರಿಣಮಿಸಿದೆ. ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಸಂಚು ರೂಪಿಸಿದ ಆರೋಪದ...

Read moreDetails
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
Next Post
ಯುವ ರಾಜಕುಮಾರ್ ಅವರಿಂದ ಅನಾವರಣವಾಯಿತು “ಅರಸಯ್ಯನ ಪ್ರೇಮ ಪ್ರಸಂಗ” ಚಿತ್ರದ ಟ್ರೇಲರ್

ಯುವ ರಾಜಕುಮಾರ್ ಅವರಿಂದ ಅನಾವರಣವಾಯಿತು "ಅರಸಯ್ಯನ ಪ್ರೇಮ ಪ್ರಸಂಗ" ಚಿತ್ರದ ಟ್ರೇಲರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada