ಮೈಸೂರು:ನಾನು ರಾಜೀನಾಮೆ ನೀಡುವುದಿಲ್ಲ (I will not resign) ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Chief Minister Siddaramaiah) ಸ್ಪಷ್ಟಪಡಿಸಿದರು.ಮುಡಾ ಹಗರಣ (Muda Scam)ಆರೋಪ ಹಾಗೂ ಬಿಜೆಪಿ ರಾಜೀನಾಮೆಗೆ ಆಗ್ರಹಿಸಿದೆ. ಈ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾಕೆ ರಾಜೀನಾಮೆ ಕೊಡಲಿ. ನಾನು ಏನು ತಪ್ಪು ಮಾಡಿದ್ದೇನೆ ಹೇಳಿ.
ನಾನು ಯಾವ ತಪ್ಪು ಮಾಡಿಲ್ಲ. ಹೀಗಾಗಿ ರಾಜೀನಾಮೆ ನೀಡುವ ಪ್ರಶ್ನೆಗಳೆ ಬರುವುದಿಲ್ಲ. ನನ್ನ ಕಂಡರೆ ವಿಪಕ್ಷಗಳಿಗೆ ಭಯ. ಹೀಗಾಗಿ ಪದೇ ಪದೇ ನನ್ನನ್ನೇ ಟಾರ್ಗೆಟ್ ಮಾಡುತ್ತಾರೆ. ಇದು ನನ್ನ ಜೀವನದ ರಾಜಕೀಯ ಸಂಬಂಧದ ಮೊದಲ ಕೇಸ್ ಎಂದು ಕಿಡಿಕಾರಿದರು.
ಕಾನೂನು ಹೋರಾಟವನ್ನು ನಮ್ಮ ವಕೀಲರು ಮಾಡುತ್ತಾರೆ. ಇವತ್ತು ಅಪಾರ ಸಂಖ್ಯೆಯಲ್ಲಿ ಬೆಂಬಲಿಗರ ನನ್ನ ಸ್ವಾಗತಕ್ಕೆ ಬಂದಿದ್ದಾರೆ. ನಾನು ಯಾರನ್ನೂ ಕರೆದಿಲ್ಲ, ಅವರೇ ಪ್ರೀತಿಯಿಂದ ಬಂದಿದ್ದಾರೆ. ನನಗೆ ಯಾವ ಭಯವೂ ಇಲ್ಲ. ನಾನು ಭಯಗೊಂಡ ರೀತಿಯಲ್ಲಿ ಕಾಣುತ್ತಿದ್ದೀನಾ ಎಂದು ಪ್ರಶ್ನಿಸಿದರು.
ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಎಸಿಬಿಯೇ ಇದೆ. ಇದಕ್ಕೆ ಯಾಕೆ ಕುಮಾರಸ್ವಾಮಿ ಮಾತನಾಡಲ್ಲ. ನಾನು ಲೋಕಾಯುಕ್ತವನ್ನು ಮುಚ್ಚಿಲ್ಲ. ಎಸಿಬಿ ರಚನೆ ಮಾಡಿದ್ದೇನೆ ಎಂದರು.
ಹೆಚ್ಡಿ ಕುಮಾರಸ್ವಾಮಿ ಅವರ ವಿರುದ್ಧ ಎಫ್ಐಆರ್ ದಾಖಲಾದೆ. ಆದರೆ ಜಾಮೀನಿನ ಮೇಲಿದ್ದಾರೆ. ನರೇಂದ್ರ ಮೋದಿ ಅವರು ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಅವರೇ ಮಾಡಿದ ರಾಜಕೀಯವಾಗಿದೆ. ಅಷ್ಟೇ ಅಲ್ಲದೇ ಅದಕ್ಕಾಗಿಯೇ ಅವರು ಆಪರೇಷನ್ ಕಮಲಕ್ಕೆ ಪ್ರಯತ್ನಿಸಿದರು. ಆದರೆ ಅವರು ಎರಡು ಬಾರಿ ಜನಾದೇಶವಿಲ್ಲದೆ ಸರ್ಕಾರವನ್ನು ರಚಿಸಿದ ಕಾರಣ ಅವರು ವಿಫಲರಾಗಿದ್ದಾರೆ ಎಂದು ಟೀಕಿಸಿದರು.
ಇದೇ ವೇಳೆ ಸಿಎಂ ಸಿದ್ದರಾಮಯ್ಯ ಪರ ಬೀದಿಗಿಳಿದ ಸಿದ್ದು ಅಭಿಮಾನಿಗಳು ನಿಮ್ಮೊಂದಿಗೆ ನಾವಿದ್ದೇವೆ ಎಂದು ಘೋಷಣೆ ಕೂಗಿದರು. ಮೈಸೂರಿನ ಜಿಲ್ಲಾ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಬಿಜೆಪಿ-ಜೆಡಿಸ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.