• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Karnataka: ರಾಜ್ಯದಲ್ಲಿ ವಿದ್ಯುತ್ ಕೊರತೆಯಿಲ್ಲ: ಕೆಪಿಟಿಸಿಎಲ್ ಎಂಡಿ ಪಂಕಜ್ ಕುಮಾರ್ ಪಾಂಡೆ

ಪ್ರತಿಧ್ವನಿ by ಪ್ರತಿಧ್ವನಿ
March 24, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ವಿದ್ಯುತ್ ಸಂಗ್ರಹ ರಾಜ್ಯದಲ್ಲಿ ಚೆನ್ನಾಗಿ ಇದೆ. ರೈತರು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ, ಜನಕ್ಕೆ ಅನುಕೂಲ ಮಾಡಿಕೊಡಲು ಕ್ರಮ ಕೈಗೊಂಡಿದ್ದೇವೆ ಎಂಬುದಾಗಿ ಕೆಪಿಟಿಸಿಎಲ್ (KPTCL) ಎಂಡಿ ಪಂಕಜ್ ಕುಮಾರ್ ಪಾಂಡೆ (Pankaj Kumar Pandey) ಹೇಳಿದ್ದಾರೆ.

ADVERTISEMENT

ಬೆಸ್ಕಾಂನ (BESCOM) ಬೆಳಕು ಭವನದಲ್ಲಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ (Gowrav Gupta) ಅವರು ಇಂದು ಬೆಳಿಗ್ಗೆ 11 ಗಂಟೆಗೆ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ರಾಜ್ಯದ ಪ್ರಸ್ತುತ ವಿದ್ಯುತ್ ಪರಿಸ್ಥಿತಿ ಮತ್ತು ಇಂಧನ ಇಲಾಖೆಯ ಕಾರ್ಯ ಪ್ರಗತಿ, ಗ್ರ‍್ಯಾಚುಟಿ, ಪಿಂಚಣಿ ಹಣಕ್ಕಾಗಿ ವಿದ್ಯುತ್ ದರ ಏರಿಕೆ ಕುರಿತು ಚರ್ಚಿಸಲಾಯಿತು. ಸುದ್ದಿಗೋಷ್ಠಿಯಲ್ಲಿ ಕೆಪಿಟಿಸಿಎಲ್ ಎಂಡಿ ಪಂಕಜ್‌ಕುಮಾರ್ ಪಾಂಡೆ(KPTCL MD Pankaj Kumar Pande), ಬೆಸ್ಕಾಂ ಎಂಡಿ ಶಿವಶಂಕರ್ (BESCOM MD Shivashankar) ಭಾಗಿಯಾಗಿದ್ದರು

Assembly Session: ಸಿಟಿ ರವಿ ಮಾತಿಗೆ ರೊಚ್ಚಿಗೆದ್ದ ಸಭಾಪತಿ..! #ctravi #basavarajhoratti #kharge

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ 6 ತಿಂಗಳಿಂದ ವಿದ್ಯುತ್ ಬಳಕೆ ಪ್ರಮಾಣ ಹೆಚ್ಚಾಗಿದೆ, ಗೃಹಬಳಕೆ ಹಾಗೂ ಕೈಗಾರಿಕೆಗಳಲ್ಲಿ ಎಸಿ ಬಳಕೆ ಹೆಚ್ಚಳವಾಗಿದೆ. ಇನ್ನೂ ಏಪ್ರಿಲ್ ತಿಂಗಳಲ್ಲಿ 18,500 ಮೆಗಾ ವ್ಯಾಟ್ ಬಳಕೆ ಹೆಚ್ಚಳವಾಗಲಿದ್ದು, ಪಂಜಾಬ್, ಯುಪಿಯಿಂದ (Punjab and Uttar Pradesh) ವಿದ್ಯುತ್ ಪಡೆಯುತ್ತಿದ್ದೇವೆ ಎಂದರು.

ಈ ಮೊದಲು ವಿದ್ಯುತ್ ಬೇಡಿಕೆ 17,220 ಮೆಗಾವ್ಯಾಟ್‌ನಷ್ಟಿತ್ತು. ಆದರೆ ಈ ವರ್ಷ 18,500 ಮೆಗಾವ್ಯಾಟ್‌ಗೆ ಹೆಚ್ಚಿದೆ. ಕಳೆದ ವರ್ಷಕ್ಕಿಂತ ಈ ಬಾರಿ 15% ರಷ್ಟು ವಿದ್ಯುತ್ ಬೇಡಿಕೆ ಹೆಚ್ಚಿದೆ. ಕಳೆದ ನವಂಬರ್‌ನಲ್ಲಿ 14,856 ಮೆಗಾವ್ಯಾಟ್ ಇತ್ತು. ಇದೀಗ ಮಾರ್ಚ್ನಲ್ಲಿ ವಿದ್ಯುತ್ ಬೇಡಿಕೆ 18,395 ಮೆಗಾವ್ಯಾಟ್ ಇದೆ. ಏಪ್ರಿಲ್ – ಮೇನಲ್ಲಿ ವಿದ್ಯುತ್ ಬೇಡಿಕೆ ಇನ್ನೂ ಹೆಚ್ಚಾಗುತ್ತದೆ. ಇದೆಲ್ಲಕ್ಕಿಂತಲೂ ಹೆಚ್ಚಾಗಿ ರಾಜ್ಯದಲ್ಲಿ ವಿದ್ಯುತ್ ಸಂಗ್ರಹ ಚೆನ್ನಾಗಿ ಇದೆ. ಕೈಗಾರಿಕಾ ವಲಯದಲ್ಲಿ ಶೇ15% ರಷ್ಟು ವಿದ್ಯುತ್ ಬೇಡಿಕೆ ಇದೆ. ಮಳೆ ಚೆನ್ನಾಗಿ ಆಗಿರುವ ಕಾರಣಕ್ಕೆ ಕೃಷಿ ಚಟುವಟಿಕೆಗಳೂ ಜೋರಾಗಿದೆ. ಹೀಗಾಗಿ 20% ಹೆಚ್ಚಿನ ವಿದ್ಯುತ್ ಕೃಷಿ ಚಟುವಟಿಕೆಗಳಿಗೆ ನೀಡಬೇಕಾಗಬಹುದು. ಒಟ್ಟಾರೆ ಈ ಬೇಸಿಗೆಯಲ್ಲಿ ಕರೆಂಟ್ ಬಳಕೆ ಹೆಚ್ಚಾಗಲಿದ್ದು, ಅದಕ್ಕೆ ಬೇಕಾದ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

yatnal: ಪರೋಕ್ಷವಾಗಿ ಡಿಕೆಶಿ ವಿರುದ್ಧ ಗುಡುಗಿದ ಯತ್ನಾಳ್..!‌ #cd #honeytrapcase #dkshivakumar #cm

ಅದರ ಜೊತೆಗೆ ರೈತರಿಗೆ ತೊಂದರೆ ಆಗದಂತೆ ವಿದ್ಯುತ್ ಸರಬರಾಜು ಮಾಡಲಾಗುತ್ತದೆ. ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ವಿದ್ಯುತ್ ಕಡಿತಗೊಳಿಸದಂತೆ ಹಾಗೂ ವಿದ್ಯುತ್ ಕೊರತೆ ಆಗದಂತೆ ಕ್ರಮ ಕೈಗೊಂಡಿದ್ದೇವೆ. ಯಾವುದೇ ಸಮಸ್ಯೆ ಆಗದಂತೆ ವಿದ್ಯುತ್ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.

Mahima Patel EXCLUSIVE INTERVIEW : ಹನಿಟ್ರ್ಯಾಪ್ ಯಾವಾಗಿನಿಂದ ಶುರುವಾಯಿತು…!  #pratidhvani #honeytrapcase

ಇದೇ ವೇಳೆ ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅವರು ಮಾತನಾಡಿ, ಈ ವರ್ಷದಲ್ಲಿ ಅತಿ ಹೆಚ್ಚು ವಿದ್ಯುತ್ ಬೇಡಿಕೆ ನೋಡುತ್ತಿದ್ದೇವೆ. ಕೆಲ ಜಿಲ್ಲೆಗಳಲ್ಲಿ ಅತಿ ಹೆಚ್ಚು ವಿದ್ಯುತ್ ಬೇಡಿಕೆ ಇದೆ. ಜನವರಿಯಿಂದ ವಿದ್ಯುತ್ ಬೇಡಿಕೆ ಬಂದಿದ್ದು, ಈ ವರ್ಷ ಹಲವು ಪೂರ್ವ ಸಿದ್ಧತೆ ಮಾಡಿದ್ದೇವೆ. ತಾಪಮಾನ ಹೆಚ್ಚಿದ ಕಾರಣ ವಿದ್ಯುತ್ ಬೇಡಿಕೆ ಹೆಚ್ಚಾದ ಕಾರಣಕ್ಕೆ ಸೋಲಾರ್ ಬಳಕೆ ರಾಜ್ಯದಲ್ಲಿ ಜಾಸ್ತಿಯಾಗುತ್ತಿದೆ, ಹೀಗಾಗಿ ವಿದ್ಯುತ್ ಮಿತವಾಗಿ ಬಳಕೆ ಮಾಡಿ ಎಂದು ಮನವಿ ಮಾಡಿಕೊಂಡರು.

Tags: BescomBJPcongressDK ShivakumarGowrav GuptaKJ GeorgeKPTCLPankaj Kumar PandeyPunjabShivashankarsiddaramaiahUttar Pradesh
Previous Post

ಟ್ರೇಲರ್ ಬಿಡುಗಡೆ ಮಾಡಿ‌ “ಮನದ ಕಡಲಿ”ಗೆ ಮನತುಂಬಿ ಹಾರೈಸಿದ ರಾಕಿಂಗ್ ಸ್ಟಾರ್ ಯಶ್..

Next Post

ಸರ್ಕಾರ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Related Posts

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು
Top Story

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

by ಪ್ರತಿಧ್ವನಿ
May 21, 2026
0

ತಮಿಳುನಾಡಿನ ರಾಜಕೀಯದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಕೇವಲ ಆರು ಗಂಟೆಗಳ ಅವಧಿಯಲ್ಲಿ ನೀಡಲಾಗಿದ್ದ ₹17 ಲಕ್ಷ ಮೌಲ್ಯದ...

Read moreDetails
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

May 20, 2026
Next Post

ಸರ್ಕಾರ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada