ಕಾಂಗ್ರೆಸ್ ಹಾಗೂ ಬಿಜೆಪಿಯ ನಡುವೆ ಸೈದ್ಧಾಂತಿಕ ಸಂಘರ್ಷ ಕಳೆದ ಹಲವು ದಶಕಗಳಿಂದ ಮುಂದುವರೆದುಕೊಂಡು ಬಂದಿದೆ. ಅದರಲ್ಲೂ ಕಾಂಗ್ರೆಸ್ನ ಪ್ರಮುಖ ನಾಯಕರನ್ನು ಬಿಜೆಪಿ ಹೀನಮಾನವಾಗಿ ಟೀಕೆ ಮಾಡುವುದು ಮತ್ತು ಬಿಜೆಪಿಯ ಪ್ರಮುಖ ನಾಯಕರನ್ನು ಕಾಂಗ್ರೆಸ್ ಹಿಯಾಳಿಸುವುದು ಸರ್ವೇ ಸಾಧಾರಣವಾಗಿ ಹೋಗಿದೆ. ಅದರಲ್ಲೂ ತಮ್ಮ ಪಕ್ಷ ಮತ್ತು ತಾವಿಂದು ನಂಬಿರುವ ಸಿದ್ಧಾಂತಕ್ಕೆ ಕಾರಣರದ ಮೂಲ ವ್ಯಕ್ತಿಗಳನ್ನ ಟೀಕೆ ಮಾಡುವ ಮೂಲಕ ಸಾಮಾಜಿಕವಾಗಿ ಕೂಡ ಈ ಎರಡೂ ಪಕ್ಷಗಳು ಬಹುದೊಡ್ಡ ವಿವಾದಗಳನ್ನು ಸೃಷ್ಟಿಸಿ ಬಿಡುತ್ತವೆ

ಇದೀಗ ಅಂತಹದ್ದೇ ವಿವಾದವನ್ನ ಕಾಂಗ್ರೆಸ್ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಅವರು ಸೃಷ್ಟಿಸಿದ್ದಾರೆ. ಬ್ರಿಟಿಷರ ಕ್ಷಮಾಪಣೆ ಕೇಳಿದ ನಕಲಿ ಸ್ವಾತಂತ್ರ್ಯ ಹೋರಾಟಗಾರರಿಗೆಲ್ಲಾ ಮನ್ನಣೆ ನೀಡಲು ಸಾಧ್ಯವಿಲ್ಲ.ಆರೆಸ್ಸೆಸ್ ಸಂಸ್ಥಾಪಕ ಹೆಡಗೇವಾರ್ ತರಹದ ಹೇಡಿಗಳನ್ನ ನಮ್ಮ ಮಕ್ಕಳ ಪಠ್ಯದಲ್ಲಿರಲು ಬಿಡುವುದಿಲ್ಲ’ ಅಂತ ಹೇಳುವ ಮೂಲಕ ಇದೀಗ ಹೊಸ ವಿವಾದಕ್ಕೆ ದಾರಿ ಮಾಡಿಕೊಟ್ಟಿದ್ದಾರೆ. ಸಂಘ ಪರಿವಾರದ ಸಿದ್ಧಾಂತಗಳು ಯಾವುದೇ ಇಲಾಖೆಯಲ್ಲಿ ತೂರಲು ಬಿಡೋದಿಲ್ಲ. ಹೆಡ್ಗೇವಾರ್ ತರಹದ ರಣಹೇಡಿಗಳ ಪಠ್ಯ ಇರೋದಿಲ್ಲ’ ಅಂತ ಕಿಡಿಕಾರಿದ್ದರು.
ಕೇಶವ್ ಬಲಿರಾಮ್ ಹೆಡಗೇವಾರ್ ವಿರುದ್ಧ ವ್ಯಾಪಕವಾದ ಟೀಕೆ ಮಾಡಿರುವ ಬಿ.ಕೆ ಹರಿಪ್ರಸಾದ್ ”ಕೇಶವ್ ಬಲಿರಾಮ್ ಹೆಡಗೇವಾರ್ ಸ್ವಾತಂತ್ರ್ಯ ಹೋರಾಟಗಾರ ಎಂದು ಸಾಬೀತು ಮಾಡಲಿ, ಬ್ರಿಟೀಷರ ಕ್ಷಮಾಪಣೆ ಕೇಳಿದ ನಕಲಿ ಸ್ವಾತಂತ್ರ್ಯ ಹೋರಾಟಗಾರಿಗೆಲ್ಲಾ ಮನ್ನಣೆ ನೀಡಲು ಸಾಧ್ಯವಿಲ್ಲ. ಯಾರೋ ಹೇಳಿಕೆ ನೀಡಿ ನಾಥುರಾಮ್ ಗೋಡ್ಸೆ ಕೂಡ ಸ್ವಾತಂತ್ರ್ಯ ಹೋರಾಟಗಾರ ಎಂದಿದ್ದಾರೆ. ಇವರ ಸ್ವಾತಂತ್ರ್ಯ ಹೋರಾಟಗಾರರಿಗೆ ನಮಗೂ ವ್ಯತ್ಯಾಸವಿದೆ. ಎಂದು ಟೀಕೆಯನ್ನು ಮಾಡಿದ್ದಾರೆ
ಸದ್ಯಕ್ಕೆ ಕರ್ನಾಟಕದಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ವಿವಾದ ಭುಗಿಲೆಳುವ ಸಾಧ್ಯತೆ ಇದೆ ಇದೀಗ ಇದಕ್ಕೆ ಪೂರಕ ಎನ್ನುವ ಹಾಗೆ ಬಿಕೆ ಹರಿಪ್ರಸಾದ್ ಅವರು ಹೆಗಡೆವರ್ ಅಂಥವರ ಪಾಠಗಳನ್ನ ಪಠ್ಯಪುಸ್ತಕಕ್ಕೆ ಸೇರಿಸಲು ಬಿಡುವುದಿಲ್ಲ ಎಂಬ ಹೇಳಿಕೆಯನ್ನು ನೀಡಿದ್ದಾರೆ ಹೀಗಾಗಿ ಕೇಶವ ಬಲಿರಾಮ ಹೆಡಗೇವಾರ್ ಅವರ ಪಠ್ಯಗಳನ್ನು ಕೈಬಿಡುವುದು ಬಹುತೇಕ ಖಚಿತ ಅನ್ನೋದನ್ನ ಬಿ.ಕೆ ಹರಿಪ್ರಸಾದ್ ಅವರು ಪರೋಕ್ಷವಾಗಿ ಹೇಳಿಕೆ ನೀಡಿದ್ದಾರೆ






