• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಡವರು, ಮಧ್ಯಮ ವರ್ಗದವರ ಪರವಾಗಿ ಸರ್ಕಾರ ಇಲ್ಲ ಎಂಬುದಕ್ಕೆ ಈ ಬಜೆಟ್ ಸಾಕ್ಷಿ : ರಾಮಲಿಂಗಾ ರೆಡ್ಡಿ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
February 1, 2022
in ಕರ್ನಾಟಕ, ದೇಶ
0
ಬಿಜೆಪಿಯವರು ವಿಷಯಾಂತರ ಮಾಡುವುದರಲ್ಲಿ ನಿಸ್ಸಿಮರು: ರಾಮಲಿಂಗರೆಡ್ಡಿ
Share on WhatsAppShare on FacebookShare on Telegram

ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತರಾಮನ್ ಅವರು ಇಂದು ಬಜೆಟ್ ಮಂಡನೆ ಮಾಡಿದ್ದಾರೆ. 2 ವರ್ಷಗಳಿಂದ ಕರೋನಾದಿಂದ ಲಕ್ಷಾಂತರ ಜನ ಸತ್ತಿದ್ದು, ಕೋಟ್ಯಂತರ ಜನ ತೊಂದರೆ ಅನುಭವಿಸಿದ್ದಾರೆ. ಈ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಕೋವಿಡ್ ಸಂತ್ರಸ್ತರು ಹಾಗೂ ಸತ್ತವರಿಗೆ ಪರಿಹಾರ ನೀಡಲಿದೆ ಎಂಬ ನಿರೀಕ್ಷೆ ಮಾಡಿದ್ದೆವು. ಅವೆಲ್ಲವೂ ಸಂಪೂರ್ಣವಾಗಿ ಹುಸಿಯಾಗಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಕಿಡಿಕಾರಿದ್ದಾರೆ.

ADVERTISEMENT

ಇದು ಜನಸ್ನೇಹಿ ಬಜೆಟ್ ಅಲ್ಲವೇ ಅಲ್ಲ. ಬಡವರು ಹಾಗೂ ಮಧ್ಯಮ ವರ್ಗದವರ ಪರವಾಗಿ ಸರ್ಕಾರ ಇಲ್ಲ ಎಂಬುದಕ್ಕೆ ಈ ಬಜೆಟ್ ಸಾಕ್ಷಿ. ಆದಾಯ ತೆರಿಗೆ ಯಥಾಸ್ಥಿತಿ ಮುಂದುವರಿದಿದೆ. ಬಿಜೆಪಿಯ ಈ ಹಿಂದಿನ ಬಜೆಟ್ ಗಳ ರೀತಿಯಲ್ಲೇ ಈ ಬಜೆಟ್ ನಲ್ಲೂ ಅನುಕೂಲಸ್ಥರು, ಶ್ರೀಮಂತರಿಗೆ ತೆರಿಗೆ ಕಡಿಮೆ ಮಾಡಲಾಗಿದೆ. ಈ ಸರ್ಕಾರ ಬಡವರು ಹಾಗೂ ಮಧ್ಯಮವರ್ಗದವರಿಗಿಂತ ಶ್ರೀಮಂತರ ಪರವಾಗಿದೆ ಎಂಬುದು ಮತ್ತೊಮ್ಮೆ ಸಾಕ್ಷಿಯಾಗಿದೆ ಎಂದಿದ್ದಾರೆ.

25 ದೊಡ್ಡ ಉದ್ಯಮಿಗಳ 8 ಲಕ್ಷ ಕೋಟಿ ಮೊತ್ತದ ಎನ್ ಪಿಎ (ಕೆಟ್ಟ ಸಾಲ) ಮನ್ನಾ ಮಾಡಿದ ಸರ್ಕಾರ ಇದು. ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದ ಕೇಂದ್ರ ಸರ್ಕಾರ, ರೈತರು ಹಾಗೂ ಕಾರ್ಮಿಕರಿಗೆ ಯಾವುದೇ ಹೊಸ ಕಾರ್ಯಕ್ರಮಗಳನ್ನು ನೀಡಲಿಲ್ಲ. ಸ್ವಾತಂತ್ರ್ಯ ಬಂದಾಗಿನಿಂದ ಶ್ರೀಮಂತರ ಮೇಲೆ ತೆರಿಗೆ ಹಾಕಿ ಬಡವರು, ಬಿಪಿಎಲ್ ಕಾರ್ಡುಗಳ ಮೂಲಕ ಬಡವರಿಗೆ ಆಹಾರ ಪದಾರ್ಥದಿಂದ, ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯವಸ್ತುಗಳಲ್ಲಿ ಸಬ್ಸಿಡಿ ನೀಡುವ ಪದ್ಧತಿ ಇತ್ತು. ಆದರೆ ಇಂದು ಬಿಜೆಪಿ ಸರ್ಕಾರ ಶ್ರೀಮಂತರಿಗೆ ಅನುಕೂಲ ಮಾಡಿಕೊಟ್ಟು, ಬಡವರು ಹಾಗೂ ಮಧ್ಯಮವರ್ಗದವರನ್ನು ತುಳಿಯುವ ಕೆಲಸ ಮಾಡುತ್ತಿದ್ದಾರೆ. ಬಡವರು ಮತ್ತಷ್ಟು ಬಡವರಾಗಿ, ಶ್ರೀಮಂತರು ಮತ್ತಷ್ಟು ಶ್ರೀಮಂತರಾಗುವಂತೆ ಮಾಡುವುದೇ ಈ ಬಜೆಟ್ ತಿರುಳು ಎಂದು ಕಿಡಿಕಾರಿದ್ದಾರೆ.

ನರೇಂದ್ರ ಮೋದಿ ಅವರು 2014ರಲ್ಲಿ ಅಧಿಕಾರಕ್ಕೆ ಬರುವ ಮುನ್ನ ಅವರ ಪ್ರಣಾಳಿಕೆಯನ್ನು ಒದಿದ್ದರೋ ಇಲ್ಲವೋ, ಆದರೆ ಅವರ ಭರವಸೆಗಳನ್ನು ಮರೆತಿದ್ದಾರೆ. ಆಗ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದಿದ್ದರು. ಮುಂದಿನ ಮೇ ತಿಂಗಳಿಗೆ ಅವರು ಅಧಿಕಾರಕ್ಕೆ ಬಂದು 8 ವರ್ಷ ಪೂರ್ಣಗೊಳ್ಳುತ್ತದೆ. ಕನಿಷ್ಠ 15-16 ಕೋಟಿ ಉದ್ಯೋಗ ಸೃಷ್ಟಿಯಾಗಬೇಕಿತ್ತು. ಆದರೆ ದೇಶದಲ್ಲಿ ಕೋಟ್ಯಂತರ ಉದ್ಯೋಗಗಳು ನಷ್ಟವಾಗಿವೆ.

ಮನಮೋಹನ್ ಸಿಂಗ್ ಅವರ 10 ವರ್ಷಗಳ ಆಡಳಿತ ಕಾಲದಲ್ಲಿ 24 ಕೋಟಿ ಜನ ಬಡತನ ರೇಖೆಗಿಂತ ಮೇಲೆ ಬಂದಿದ್ದರು. ಇವರ ಆಡಳಿತ ಅವಧಿಯಲ್ಲಿ 22 ಕೋಟಿ ಜನ ಬಡತನ ರೇಖೆಗಿಂತ ಕೆಳಕ್ಕೆ ಕುಸಿದಿದ್ದಾರೆ. ಇದೇ ಮೋದಿ ಅವರ ಸರ್ಕಾರದ ಸಾಧನೆ.

ನದಿ ಜೋಡಣೆ ಮಾಡುತ್ತೇವೆ ಎಂದರೆ ಎಲ್ಲ ಪಕ್ಷಗಳು ಸ್ವಾಗತ ಮಾಡುತ್ತೇವೆ. ಎಲ್ಲ ರಾಜ್ಯಗಳ ಒಪ್ಪಿಗೆ ಅಗತ್ಯವಿದ್ದು, ಹೆಚ್ಚುವರಿ ನೀರು ಸಿಗುವಾಗ ಕುಡಿಯುವ ನೀರಿನ ಕೊರತೆ ನೀಗಿಸಲು ನೆರವಾಗುತ್ತದೆ. ನಮ್ಮ ದೇಶದಲ್ಲಿ ರಸ್ತೆಗಳ ಜೋಡಣೆಗೂ ಮುನ್ನ ನದಿಗಳ ಜೋಡಣೆ ಮಾಡಬೇಕು ಎಂಬ ಉದ್ದೇಶವಿತ್ತು. ಆದರೆ ವಾಜಪೇಯಿ ಅವರು ಹಾಗೂ ನಂತರದ ಸರ್ಕಾರ ರಸ್ತೆಗಳಿಗೆ ಆದ್ಯತೆ ನೀಡಿದ್ದವು. ಹೀಗಾಗಿ ಈ ನದಿ ಜೋಡಣೆ ನೆನೆಗುದಿಗೆ ಬಿದ್ದಿತ್ತು. ಈಗ ಅದನ್ನು ಕೈಗೆತ್ತಿಕೊಂಡರೆ ಸ್ವಾಗತಿಸುತ್ತೇವೆ.

ಈ ಬಜೆಟ್ ನಲ್ಲಿ ಒನ್ ನೇಷನ್ ಎಂಬುದ್ದೆಲ್ಲ ಇಲ್ಲ. ಇದರಲ್ಲಿ ಸರ್ವಾಧಿಕಾರಿ ಧೋರಣೆ ಎದ್ದು ಕಾಣುತ್ತಿದೆ. ಕೇಂದ್ರದವರು ರಾಜ್ಯಗಳಿಗೆ ಇದ್ದ ಅಧಿಕಾರವನ್ನು ಒಂದೊಂದಾಗಿ ಕಸಿಯುತ್ತಿದ್ದು, ಎಲ್ಲವೂ ತಮ್ಮ ನಿಯಂತ್ರಣದಲ್ಲೇ ಇರಬೇಕು ಎಂದು ವರ್ತಿಸುತ್ತಿದ್ದಾರೆ. ಐಎಎಸ್ ಅಧಿಕಾರಿಗಳ ವಿಚಾರ, ಜಿಎಸ್ ಟಿ, ಚುನಾವಣಾ ಆಯೋಗ, ಸಿಬಿಐ, ಆರ್ ಬಿಐನಂತಹ ಸ್ವಾಯತ್ತ ಸಂಸ್ಥೆಗಳು ಹಲ್ಲು ಕಿತ್ತ ಹಾವಿನಂತಾಗಿವೆ.

ಮುಂದೆ ಜಿಎಸ್ಟಿ ಹಣವನ್ನು ಕೇಂದ್ರ ಸರ್ಕಾರ ನೀಡುವುದಿಲ್ಲ. ಮೋದಿ ಅವರ ಆಡಳಿತ ಮುಂದುವರಿದರೆ ರಾಜ್ಯಗಳಿಗೆ ಚೆಂಬು ನೀಡುತ್ತಾರೆ ಎಂದು ಕಿಡಿಕಾರಿದ್ದಾರೆ.

Tags: BJPCongress PartyCovid 19ಕರೋನಾಕೋವಿಡ್-19ನರೇಂದ್ರ ಮೋದಿಬಡವರುಬಿಜೆಪಿಮಧ್ಯಮ ವರ್ಗರಾಮಲಿಂಗಾ ರೆಡ್ಡಿ
Previous Post

BUDGET REACTION | ದುಡಿಯುವ ಹಾಗೂ ಮಧ್ಯಮ ವರ್ಗದವರಿಗೆ ದ್ರೋಹ : ರಾಹುಲ್‌ ಗಾಂಧಿ

Next Post

ಬಜೆಟ್‌ ಪ್ರತಿಕ್ರಿಯೆ | ಜನರಿಗೆ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ  ಎನ್ನುವಂತಿದೆ ಈ ಬಜೆಟ್ :  ಹೆಚ್.ಡಿ.ಕುಮಾರಸ್ವಾಮಿ

Related Posts

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು
ಕರ್ನಾಟಕ

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

by ಪ್ರತಿಧ್ವನಿ
July 2, 2025
0

ಕೇಂದ್ರ ಸರ್ಕಾರದ ಬೆಲೆಯೇರಿಕೆಗೆ ರಾಜ್ಯದ ಬಿಜೆಪಿ ನಾಯಕರ ಮೌನ ಖಂಡನೀಯ ರೈತರಿಗೆ ನೆರವಾಗಲು ನಾವು ಹಾಲಿನ ದರ ಹೆಚ್ಚಳ ಮಾಡಿದಾಗ ಜನವಿರೋಧಿ ಎಂದು ಬೊಬ್ಬಿಟ್ಟಿದ್ದ ಬಿಜೆಪಿಯವರು ಈಗ...

Read moreDetails
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
Next Post
ಭಾರತ ವಿಶ್ವಗುರು ಆಗಬೇಕು ಎನ್ನುವ ಉನ್ನತ ಶಿಕ್ಷಣ ಸಚಿವರು ಮೊದಲು ಅತಿಥಿ ಉಪನ್ಯಾಸಕರ ಕಷ್ಟ ಆಲಿಸಲಿ : HDK

ಬಜೆಟ್‌ ಪ್ರತಿಕ್ರಿಯೆ | ಜನರಿಗೆ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ  ಎನ್ನುವಂತಿದೆ ಈ ಬಜೆಟ್ :  ಹೆಚ್.ಡಿ.ಕುಮಾರಸ್ವಾಮಿ

Please login to join discussion

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada