• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸ್ನೇಹದ ಮಹತ್ವ ಸಾರುವ ಈ ಚಿತ್ರ ಫೆಬ್ರವರಿ 14 ರಂದು ತೆರೆಗೆ.

ಪ್ರತಿಧ್ವನಿ by ಪ್ರತಿಧ್ವನಿ
January 6, 2025
in Top Story, ಇತರೆ / Others, ಕರ್ನಾಟಕ
0
ಸ್ನೇಹದ ಮಹತ್ವ ಸಾರುವ ಈ ಚಿತ್ರ ಫೆಬ್ರವರಿ 14 ರಂದು ತೆರೆಗೆ.
Share on WhatsAppShare on FacebookShare on Telegram

ಚಾಮುಂಡೇಶ್ವರಿ ಪಿಕ್ಚರ್ಸ್ ಲಾಂಛನದಲ್ಲಿ ನಾಗರತ್ನಮ್ಮ ಅವರು ನಿರ್ಮಿಸಿರುವ, ಮೈಸೂರು ರಾಜು ನಿರ್ದೇಶನದ “ಕುಚುಕು” ಚಿತ್ರದ ಟೀಸರ್ ಹಾಗೂ ಹಾಡುಗಳು ಬಿಡುಗಡೆಯಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷರಾದ ಎಂ.ಎನ್ ಕುಮಾರ್, ನಿರ್ಮಾಪಕ ಎಂ.ಡಿ.ಪಾರ್ಥಸಾರಥಿ, ನೃತ್ಯ ನಿರ್ದೇಶಕ ಜಗ್ಗು ಮಾಸ್ಟರ್ ಮುಂತಾದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಸ್ನೇಹದ ಮಹತ್ವ ಸಾರುವ ಈ ಚಿತ್ರ ಫೆಬ್ರವರಿ 14ರ ಪ್ರೇಮಿಗಳ ದಿನದಂದು ಬಿಡುಗಡೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ಚಿತ್ರದಲ್ಲಿ ಖಳನಾಯಕನಾಗಿ ನಟಿಸಿರುವ ಶಿವಾಜಿ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಟೀಸರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ADVERTISEMENT

ನಾನು 26ವರ್ಷಗಳಿಂದ ಡ್ಯಾನ್ಸರ್ ಹಾಗೂ ಡ್ಯಾನ್ಸ್ ಮಾಸ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಹಿಂದೆ “ನೃತ್ಯಂ” ಚಿತ್ರ ನಿರ್ದೇಶಿಸಿದ್ದೆ. ಇದು ಎರಡನೇ ಚಿತ್ರ. ಸ್ನೇಹದ ಮಹತ್ವ ಸಾರುವ ಕಥಾಹಂದರದ ಜೊತೆಗೆ ಸೆಂಟಿಮೆಂಟ್ ಸನ್ನಿವೇಶಗಳು ಪ್ರೇಕ್ಷಕರ ಮನಸ್ಸಿಗೆ ಹತ್ತಿರವಾಗಲಿದೆ. ಮೈಸೂರು ಸುತ್ತಮುತ್ತ ಚಿತ್ರೀಕರಣ ಮಾಡಿದ್ದೇವೆ. ಚಿತ್ರ ತೆರೆಗೆ ಬರಲು ಸಿದ್ದವಾಗಿದೆ ಎಂದು ತಿಳಿಸಿದರು.

ಗುಲ್ಬರ್ಗ ಮೂಲದವನಾದ ನಾನು ಮೂಲತಃ ರಂಗಭೂಮಿ ಕಲಾವಿದ. ಈ‌ ಚಿತ್ರದಲ್ಲಿ ನಾನು ಹಾಗೂ ಅರ್ಜುನ್ “ಕುಚುಕು”ಗಳಾಗಿ‌ ನಟಿಸಿದ್ದೇವೆ ಎನ್ನುತ್ತಾರೆ ಮತ್ತೊಬ್ಬ ನಾಯಕ ಬಸವರಾಜ್ ಕುಮಾರ್.ಈ ಚಿತ್ರದಲ್ಲಿ ನಾಯಕ ಮತ್ತು ವಿಲನ್ ನಡುವೆ. ಒಂದು ಫೈಟಿಂಗ್ ಸಂದರ್ಭದಲ್ಲಿ ನಾಯಕನಟ ಶೂಟಿಂಗ್ ಸ್ಥಳದಲ್ಲಿ ಅಪ್ಪು ಸರ್ ರವರ ಪೋಸ್ಟರ್ ಅನ್ನು ನೋಡಿ ಜೋಷಿನಿಂದ ವಿಲನ್ ಗೆ ತಳಿಸಿರುತ್ತಾನೆ.ಈ ಚಿತ್ರದಲ್ಲಿರುವ ಬಹುತೇಕರು ಮೈಸೂರಿನವರು. ನಾನು ಕೂಡ ಮೈಸೂರಿನವನು. ಈ ಚಿತ್ರದಲ್ಲಿ ವಿಲನ್ ಪಾತ್ರ ನಿರ್ವಹಿಸಿದ್ದೇನೆ.

Siddaramaiah : ಕುರುಬರ ವಿರುದ್ಧ ಗುಡುಗಿದ ಸಿದ್ದರಾಮಯ್ಯ..! #pratidhvani #siddaramaiah

ಈ ಚಿತ್ರದಲ್ಲಿ ಅಭಿನಯಿಸಿದ ನಂತರ. KD ಸಿನಿಮಾ ಹಾಗೂ ಆರ್ ಚಂದ್ರು ರವರ ಫಾದರ್ ಸಿನಿಮಾ ಮತ್ತು ಕುಂಟೆಬಿಲ್ಲೆ, A1. ಸಿನಿಮಾ. ಮಂಡಲ್ ಪಂಚಾಯಿತಿ ಮುಂತಾದ ಚಿತ್ರಗಳಲ್ಲಿ ನನಗೆ ನಟಿಸಲು ಅವಕಾಶ ಸಿಕ್ಕಿದೆ ಎಂದರು ನಟ ವಿಲನ್ ಶಿವಾಜಿ. ನಮ್ಮ ಚಿತ್ರದ ನಿರ್ಮಾಪಕಿ ನಾಗರತ್ನಮ್ಮ ಅವರು ದೊಡ್ಡ ಮನಸ್ಸು ಮಾಡಿ ಹೊಸಬರ ಮೇಲೆ ಬಂಡವಾಳವನ್ನು ಹೂಡಿರುತ್ತಾರೆ ಮತ್ತು ಒಂದು ಚಲನಚಿತ್ರ ತಯಾರಾಗಬೇಕಾದರೆ ನಿರ್ಮಾಪಕರ ಹಿಂದೆ ಬೆನ್ನೆಲುಬಾಗಿ ನಿಂತಿರುವ ಕುಟುಂಬ ವರ್ಗದ ಎಲ್ಲಾ ಮಹಿಳೆಯರು ಅನ್ನಪೂರ್ಣೇಶ್ವರಿಯರು ಎಂದು ಹೇಳುತ್ತಾ ಅವರಿಗೆ ಸಾಷ್ಟಾಂಗ ನಮಸ್ಕಾರಗಳನ್ನು ತಿಳಿಸಿದ ಶಿವಾಜಿ ರವರು, ಒಂದು ಚಿತ್ರ ಗೆಲ್ಲಬೇಕು ಅಂದರೆ ನಿರ್ದೇಶಕ, ನಿರ್ಮಾಪಕರ ಜೊತೆಗೆ ಚಲನಚಿತ್ರದಲ್ಲಿ ಅಭಿನಯಿಸಿರುವ ಎಲ್ಲಾ ಕಲಾವಿದರು ಕೂಡ ಪ್ರಚಾರದಲ್ಲಿ ತೊಡಗಬೇಕು.ಆದರೆ ಇತ್ತೀಚಿನ ದಿನಗಳಲ್ಲಿ ಕೆಲವರು ಪ್ರಚಾರಕ್ಕೆ ಬರುವುದಿಲ್ಲ.

ನಿರ್ದೇಶಕ ನಿರ್ಮಾಪಕರು ಕೇಳಿದರೆ ನಮಗೆ ಶೂಟಿಂಗ್ ಇದೆ ಎಂದು ನೆಪ ಹೇಳುತ್ತಾರೆ ಮತ್ತು ಬಲವಂತ ಮಾಡಿ ಕರೆದರೆ. ನಮಗೆ ಹೋಗುವ ಬರುವ ಖರ್ಚುಗಳು ಸಂಭಾವನೆ ಕೊಡಬೇಕೆಂದು ಕೇಳುತ್ತಾರೆ. ಈ ರೀತಿ ಆದರೆ, ಚಲನಚಿತ್ರ ನಿರ್ಮಾಪಕ, ನಿರ್ದೇಶಕರಿಗೆ ತುಂಬಾ ನೋವಾಗುತ್ತದೆ ಎಂದು ಶಿವಾಜಿ ಎಂ ಎನ್ ಕುಮಾರ್ ಅವರ ಬಳಿ ವೇದಿಕೆ ಮೇಲೆ ಹೇಳಿಕೊಂಡರು. ಆ ಸಂದರ್ಭದಲ್ಲಿ ಎಂ ಎನ್ ಕುಮಾರ್ ಅವರು ಮಾತನಾಡಿ, ಚಿತ್ರೀಕರಣದ ಮೊದಲು ನಿರ್ದೇಶಕರು, ನಿರ್ಮಾಪಕರು, ಕಲಾವಿದರೊಂದಿಗೆ ಪ್ರಚಾರದ ಸಮಯದಲ್ಲಿ ಬರಬೇಕೆಂದು ಅಗ್ರಿಮೆಂಟ್ ಕರಾರು ಮಾಡಿಕೊಳ್ಳುವುದು ಸೂಕ್ತ ಎಂದು ಸಲಹೆ ನೀಡಿದರು. ಅಂತ ಸಂದರ್ಭದಲ್ಲಿ ಪ್ರಚಾರಕ್ಕೆ ಕಲಾವಿದರು ಬರಲಿಲ್ಲವೆಂದರೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ. ದೂರನ್ನು ಕೊಡಬಹುದು ಎಂದು ಸಲಹೆ ಸಹ ಕೊಟ್ಟಿರುತ್ತಾರೆ..

ಸಿನಿಮಾ ಮೇಲಿನ ಪ್ರೀತಿಯಿಂದ ಕಷ್ಟಪಟ್ಟು ಈ ಚಿತ್ರ ನಿರ್ಮಾಣ ಮಾಡಿರುವುದಾಗಿ ನಿರ್ಮಾಪಕಿ ನಾಗರತ್ನಮ್ಮ ಹೇಳಿದರು. ಚಿತ್ರದಲ್ಲಿ ಐದು ಸುಮಧುರ ಹಾಡುಗಳಿರುವುದಾಗಿ ಸಂಗೀತ ನಿರ್ದೇಶಕ ಎ.ಟಿ.ರವೀಶ್ ತಿಳಿಸಿದರು.ತಮ್ಮ ಪಾತ್ರದ ಕುರಿತು ನಾಯಕಿ ಪ್ರಿಯದರ್ಶಿನಿ ಮಾತನಾಡಿದರು.

Tags: Choreographer Jaggu Master.Dignitaries like MN Kumardirected by Mysuru RajuFebruary 14Produced by NagaratnammaProducer MD ParthasarathyShivaji told MN Kumarsongs of "Kuchuku"Sri Chamundeshwari Pictures bannerTeaservalentines dayVice President of Karnataka Board of Film Commerce
Previous Post

ದುಬೈನಿಂದ ಬಂದಿಳಿದ ಪಿಎಫ್‌ಐ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

Next Post

ಪ್ರಿಯಾಂಕಾ ಕೆನ್ನೆ ರೀತಿ ರಸ್ತೆ;ಅನುಚಿತ ಮಾತಿಗೆ ವಿಷಾದ ವ್ಯಕ್ತಪಡಿಸಿದ ಬಿಜೆಪಿ ನಾಯಕ

Related Posts

ಮಾಜಿ ರೌಡಿಶೀಟರ್ ಯಶ್ವಸಿನಿ ಬಂಧನ
ಇತರೆ / Others

ಮಾಜಿ ರೌಡಿಶೀಟರ್ ಯಶ್ವಸಿನಿ ಬಂಧನ

by ಪ್ರತಿಧ್ವನಿ
February 6, 2026
0

ಬೆಂಗಳೂರು: ಉದ್ಯಮಿ ಮನೋಜ್ ಎಂಬಾತನ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ರೌಡಿ ಶೀಟರ್ ಯಶಸ್ವಿನಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಟ, ನಿರ್ದೇಶಕ ನಂದಕಿಶೋರ್ ಗೆ ಉದ್ಯಮಿ ಮನೋಜ್ ಕುಮಾರ್‌...

Read moreDetails
Bengaluru: ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!

Bengaluru: ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!

February 6, 2026
WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

February 6, 2026
Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

February 6, 2026
ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

February 6, 2026
Next Post
ಪ್ರಿಯಾಂಕಾ ಕೆನ್ನೆ ರೀತಿ ರಸ್ತೆ;ಅನುಚಿತ ಮಾತಿಗೆ ವಿಷಾದ ವ್ಯಕ್ತಪಡಿಸಿದ ಬಿಜೆಪಿ ನಾಯಕ

ಪ್ರಿಯಾಂಕಾ ಕೆನ್ನೆ ರೀತಿ ರಸ್ತೆ;ಅನುಚಿತ ಮಾತಿಗೆ ವಿಷಾದ ವ್ಯಕ್ತಪಡಿಸಿದ ಬಿಜೆಪಿ ನಾಯಕ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada