ಈ ಸರ್ಕಾರ ನಡೆಯುತ್ತಿಲ್ಲ ಕಣಪ್ಪ, ಚುನಾವಣೆಗೆ ಏಳೆಂಟು ತಿಂಗಳು ಇದೆ ಅಂತ ಮ್ಯಾನೇಜ್ ಮಾಡುತ್ತಿದ್ದೇವೆ ಎಂದು ರಾಜ್ಯ ಬಿಜೆಪಿ ಆಡಳಿತ ಕುರಿತು ಕಾನೂನು ಸಚಿವ ಮಾಧುಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆನ್ನಲಾದ ಆಡಿಯೋ ವೈರಲ್ ಆಗಿದೆ.
ಹೌದು, ಸಹಕಾರ ಬ್ಯಾಂಕ್ಗಳಲ್ಲಿ ಹಣ ವಸೂಲಿ ಬಗ್ಗೆ ಸಚಿವರಿಗೆ ಸಾಮಾಜಿಕ ಹೋರಾಟಗಾರ ಭಾಸ್ಕರ್ ಕರೆ ಮಾಡಿದ್ದು, ಈ ವೇಳೆ ರಾಜ್ಯ ಬಿಜೆಪಿ ಆಡಳಿತದ ಬಗ್ಗೆ ಸಚಿವ ಮಾಧುಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆನ್ನಲಾಗುತ್ತಿದೆ.
ಈ ವೇಳೆ ರೈತರ ಸಮಸ್ಯೆ ಬಗೆಹರಿಸಲಾಗುವುದಿಲ್ಲ. ಸಹಕಾರ ಸಚಿವರ ಗಮನಕ್ಕೆ ತಂದರೂ ಅವರು ಏನು ಕ್ರಮ ಕೈಗೊಂಡಿಲ್ಲ ಏನು ಮಾಡೋಣ ಎಂದು ಮಾಧುಸ್ವಾಮಿ ಹೇಳಿದ್ದು, ಈ ಸರ್ಕಾರ ಏನೂ ನಡೆಯುತ್ತಿಲ್ಲ, ಏಳೆಂಟು ತಿಂಗಳಿದೆ ಎಂದು ಮ್ಯಾನೇಜ್ ಮಾಡುತ್ತಿದ್ದೇವೆ ಎಂದು ಸರ್ಕಾರದ ಬಗ್ಗೆ ಮಾಧುಸ್ವಾಮಿ ಮಾತಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಮೂರು ದಿನದ ಹಿಂದೆ ಈ ಸಂಭಾಷಣೆ ನಡೆದಿದೆ ಎನ್ನಲಾಗುತ್ತಿದೆ.

ರೈತರಿಂದ ಬ್ಯಾಂಕ್ನವರು ಹೆಚ್ಚುವರಿಯಾಗಿ ಹಣ ಪಡೆಯುತ್ತಿದ್ದಾರೆ. ರೈತರ ಹೆಸರಲ್ಲಿ ಬ್ಯಾಂಕ್ನವರೆ ಸಾಲ ಪಡೆಯುತ್ತಿದ್ದಾರೆ. ಈ ಬಗ್ಗೆ ಸಚಿವರಿಗೆ ದೂರು ನೀಡಿದಾಗ ದುಡ್ಡು ನಾನೇ ಕಟ್ಟಿದ್ದೀನಿ ಅಂತಾ ಅಸಹಾಯಕ ಹೇಳಿಕೆ ನೀಡಿದ್ದಾರೆ. ಸರ್ಕಾರ ನಡಿತ್ತಿಲ್ಲ ಅಂತಾ ಅವರೆ ಒಪ್ಪಿಕೊಂಡಿದ್ದು, ಸಹಕಾರಿ ಬ್ಯಾಂಕ್ಗಳ ಎಂ.ಡಿ ಗೆ ದೂರು ನೀಡಿದರೆ ಗಲಾಟೆ ಮಾಡಿ ಅಂತಿದ್ದಾರೆ ಎಂದು ಈ ಆಡಿಯೋದಲ್ಲಿ ಹೇಳಿದ್ದಾರೆ.