• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಬಡವರು, ಮಧ್ಯಮವರ್ಗದ ಕುಟುಂಬಗಳಿಗೆ ಭವಿಷ್ಯ ಉಳಿಯಬೇಕಾದರೆ ಇದು ನಿರ್ಣಾಯಕ ಚುನಾವಣೆ. ಯೋಚಿಸಿ ನಿರ್ಧರಿಸಿ: ಸಿ.ಎಂ.ಸಿದ್ದರಾಮಯ್ಯ ಕರೆ

ಪ್ರತಿಧ್ವನಿ by ಪ್ರತಿಧ್ವನಿ
April 22, 2024
in ರಾಜಕೀಯ
0
ಬೆಂಗಳೂರಿನ ಕುಡಿಯುವ ನೀರಿನ ಮೇಕೆದಾಟು ಯೋಜನೆಗೆ ಅನುಮತಿ ಏಕೆ ಕೊಡುತ್ತಿಲ್ಲ ಮೋದಿಯವರೇ: ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ
Share on WhatsAppShare on FacebookShare on Telegram

ಇಂಡಿಯಾ ಶೈನಿಂಗ್ ಎನ್ನುವ ಸುಳ್ಳು ಪ್ರಚಾರ ಸೋತ ಹಾಗೆಯೇ ಮೋದಿಯವರ ವಿಕಸಿತ ಭಾರತ ಎನ್ನುವ ಸುಳ್ಳಿನ ಪ್ರಚಾರಕ್ಕೂ ಸೋಲಾಗುತ್ತದೆ: ಸಿಎಂ

ADVERTISEMENT

ಖಾಲಿ ಚೊಂಬಿಗೆ ಮತ ಹಾಕಿ ನಿಮ್ಮ ಮತದ ಘನತೆ ಕಳೆದುಕೊಳ್ಳುತ್ತೀರೋ? ದೇಶದ ಜನರ ಬದುಕಿಗೆ ಸ್ಪಂದಿಸುವ ಗ್ಯಾರಂಟಿಗಳಿಗೆ ಮತ ಹಾಕ್ತೀರೋ ನಿರ್ಧರಿಸಿ: ಸಿ.ಎಂ ಕರೆ

ತರೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿಗೆ ಒಂದು ಲಕ್ಷ ಮತ ಬೀಳುತ್ತದೆ: ಸಿ.ಎಂ ಭರವಸೆ

ಚಿಕ್ಕಮಗಳೂರು (ತರೀಕೆರೆ) ಏ 22: ವಾಜಪೇಯಿಯವರ ಇಂಡಿಯಾ ಶೈನಿಂಗ್ ಎನ್ನುವ ಸುಳ್ಳು ಪ್ರಚಾರ ಸೋತ ಹಾಗೆಯೇ ಮೋದಿಯವರ ವಿಕಸಿತ ಭಾರತ ಎನ್ನುವ ಸುಳ್ಳಿನ ಪ್ರಚಾರಕ್ಕೂ ಸೋಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಬೃಹತ್ ಪ್ರಜಾಧ್ವನಿ-2 ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು.

ಹತ್ತತ್ತು ವರ್ಷ ಪ್ರಧಾನಿಯಾಗಿ ಮೋದಿಯವರು ಭಾರತೀಯರಿಗೆ ಸರಣಿ ಸುಳ್ಳುಗಳನ್ನು ನಂಬಿಸಿ ವಂಚಿಸಿದರು. ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕ್ತೀವಿ ಎಂದು ನಂಬಿಸಿದರು. ಈಗ ನಂಬಿಕೆ ದ್ರೋಹ ಆಗಿದೆ.

ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸ್ತೀವಿ ಎಂದು ದೇಶದ ಯುವಕ/ ಯುವತಿಯರನ್ನು ನಂಬಿಸಿದರು. ವಿದ್ಯಾವಂತರು ಡಬ್ಬಲ್ ಡಿಗ್ರಿ ಪಡೆದು ಉದ್ಯೋಗ ಕೊಡಿ ಎಂದರೆ ಹೋಗಿ ಪಕೋಡ ಮಾರಾಟ ಮಾಡಿ ಎನ್ನುತ್ತಿದ್ದಾರೆ. ಇಂಥಾ ನಂಬಿಕೆ ದ್ರೋಹಗಳು ಪ್ರಧಾನಿ ಕುರ್ಚಿಗೆ ಘನತೆ ತರುತ್ತದೆಯೇ ಎಂದು ಪ್ರಶ್ನಿಸಿದರು.

ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ನಂಬಿಸಿ ರೈತರ ಖರ್ಚು ಮೂರು ಪಟ್ಟು ಮಾಡಿದರು. ಇದು ದೇಶದ ಇಡಿ ದೇಶದ ರೈತ ಕುಲಕ್ಕೆ ಬಗೆದ ನಂಬಿಕೆ ದ್ರೋಹ ಅಲ್ಲವೇ ಎಂದು ಪ್ರಶ್ನಿಸಿದರು.

ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ ಬೆಲೆ ಏರಿಕೆ ಸಂಪೂರ್ಣ ತಡೆಯುವುದಾಗಿ ನಂಬಿಸಿದರು. ಈಗ ಎಲ್ಲದರ ಬೆಲೆ ಆಕಾಶ ಮುಟ್ಟಿದೆ. ಇಂಥಾ ನಂಬಿಕೆ ದ್ರೋಹಗಳನ್ನು ಭಾರತೀಯರಿಗೆ ಬಗೆದಿದ್ದಾರಲ್ಲಾ ಇಂಥಾ ವ್ಯಕ್ತಿಯ ಮುಖ ನೋಡಿ ಮತ ಹಾಕಿದರೆ ನಿಮ್ಮ ಮತಕ್ಕೆ ಘನತೆ ಬರುತ್ತದಾ ಎಂದು ಪ್ರಶ್ನಿಸಿದರು.

ದೇವೇಗೌಡರ ಸುಳ್ಳು ಕೇಳಿ ನನಗೇ ನಾಚಿಕೆ ಆಯ್ತು

ಮೋದಿಯವರ ಜತೆ ಪೈಪೋಟಿಗೆ ಬಿದ್ದವರಂತೆ ದೇವೇಗೌಡರು ಹೇಳಿದ ಸುಳ್ಳುಗಳನ್ನು ಕೇಳಿ ನನಗೇ ನಾಚಿಕೆ ಆಯ್ತು. ದೇವೇಗೌಡರು ಮೋದಿಯವರ ಮಟ್ಟಕ್ಕೆ ಇಳಿದು ಸುಳ್ಳು ಹೇಳಿದ್ರಲ್ಲಾ ಅಂತ ನನಗೇ ನಾಚಿಕೆ ಆಯ್ತು.

ಮೋದಿಯವರು ರಾಜ್ಯದ ಜನತೆಗೆ ಕೊಟ್ಟ ಖಾಲಿ ಚೊಂಬನ್ನು ದೇವೇಗೌಡರು ಅಕ್ಷಯ ಪಾತ್ರೆ ಎಂದು ಸುಳ್ಳು ಹೇಳಿದ್ದಾರೆ. ಚೊಂಬು ಅಕ್ಷಯ ಪಾತ್ರೆ ಆಗಿದ್ದರೆ ರೈತರ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಕೊಡಲು ಏಕೆ ಸಾಧ್ಯವಾಗಲಿಲ್ಲ? ರೈತರ ಸಾಲ ಏಕೆ ಮನ್ನಾ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಇಡೀ ದೇಶದ ರೈತರ ಸಾಲ 76 ಸಾವಿರ ಕೋಟಿ ರೂಪಾಯಿಯನ್ನು ಒಂದೇ ಸಾರಿ ಮನ್ನಾ ಮಾಡಿದರು. ಮೋದಿಯವರು 15 ಲಕ್ಷ ಕೋಟಿ ಶ್ರೀಮಂತ ಉದ್ಯಮಿಗಳ ಸಾಲ ಮನ್ನಾ ಮಾಡಿದರು. ಹೀಗಾಗಿ ಮೋದಿಯವರು ರಾಜ್ಯದ, ದೇಶದ ಮಧ್ಯಮ ವರ್ಗ ಮತ್ತು ಬಡವರ ಕೈಗೆ ಖಾಲಿ ಚೊಂಬು ಕೊಟ್ಟರು. ಶ್ರೀಮಂತ ಉದ್ಯಮಿಗಳ ಪಾಲಿಗೆ ಅಕ್ಷಯ ಪಾತ್ರೆ ಆದರು. ಈ ಸತ್ಯ ದೇವೇಗೌಡರಿಗೆ ಗೊತ್ತಿದ್ದೂ ಏಕೆ ರಾಜ್ಯದ ಜನರಿಗೆ ಸುಳ್ಳು ಹೇಳಿದರು ಎಂದು ಪ್ರಶ್ನಿಸಿದರು.

ಪ್ರತೀ ಕುಟುಂಬದ ಹಣ ಉಳಿತಾಯ ಆಗುತ್ತಿದೆ

ನಾವು ನುಡಿದಂತೆ ನಡೆದು ಪ್ರತೀ ಕುಟುಂಬಗಳ ಖಾತೆಗೆ, ಜನರ ಜೇಬಿಗೆ ಹಣ ಹಾಕುತ್ತಿರುವ ನಮ್ಮ ಗ್ಯಾರಂಟಿಗಳಿಗೆ ಮತ ಹಾಕುತ್ತೀರೋ, ಸುಳ್ಳುಗಳ ಸರದಾರನ ಖಾಲಿ ಚೊಂಬಿಗೆ ಮತ ಹಾಕುತ್ತೀರೋ ಯೋಚಿಸಿ ಎಂದು ಕರೆ ನೀಡಿದರು.

ಒಂದೂಕಾಲ ಲಕ್ಷ ಬೇಕೋ- ಖಾಲಿ ಚೊಂಬು ಬೇಕಾ: ಯೋಚಿಸಿ

ರಾಜ್ಯ ಸರ್ಕಾರ ಮಹಿಳೆಯರಿಗೆ ಕೊಡುತ್ತಿರುವ ವಾರ್ಷಿಕ 24 ಸಾವಿರ ರೂಪಾಯಿ ಜತೆಗೆ ರಾಷ್ಟ್ರೀಯ ಕಾಂಗ್ರೆಸ್ ನಿಂದ ಮಹಿಳೆಯರಿಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿ ಕೊಡುವ ಘೋಷಣೆ ಮಾಡಿ ರಾಹುಲ್ ಗಾಂಧಿ,ಮಲ್ಲಿಕಾರ್ಜುನ ಖರ್ಗೆ ಸಹಿ ಹಾಕಿದ್ದಾರೆ.

ಜತೆಗೆ ಇಡೀ ದೇಶದ ರೈತರ ಸಾಲ ಸಂಪೂರ್ಣ ಮನ್ನಾ, ನಿರುದ್ಯೋಗಿ ಯುವಕರ ಖಾತೆಗೆ ಲಕ್ಷ ರೂಪಾಯಿ ಹಾಕುವ ಗ್ಯಾರಂಟಿಯನ್ನೂ ನಾವು ನೀಡಿದ್ದೇವೆ. ಹೀಗಾಗಿ ಖಾಲಿ ಚೊಂಬಿಗೆ ಮತ ಹಾಕಿ ಹಾಳು ಮಾಡಿಕೊಳ್ತೀರೋ, ನಿಮ್ಮ ಬದುಕಿಗೆ ಸ್ಪಂದಿಸಿ ನಿಮ್ಮ ಜೇಬಿಗೆ ಶಕ್ತಿ ತುಂಬುವ ಗ್ಯಾರಂಟಿ ಕಾಂಗ್ರೆಸ್ಸಿಗೆ ಮತ ಹಾಕ್ತೀರೋ ನಿರ್ಧರಿಸಿ ಎಂದು ಕರೆ ನೀಡಿದರು.

ಕುಮಾರಸ್ವಾಮಿ ಮಾತಿಗೆ ಸಿಎಂ ಆಕ್ರೋಶ

ಸರ್ಕಾರದ ಗ್ಯಾರಂಟಿಗಳನ್ನು ಪಡೆದು ರಾಜ್ಯದ ಮಹಿಳೆಯರು ಹಾದಿ ತಪ್ಪಿದ್ದಾರೆ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆಗೆ ಸಿಟ್ಟಾದ ಸಿಎಂ, ಅವರ ಮನೆಯಲ್ಲೂ ಹೆಣ್ಣುಮಕ್ಕಳಿದ್ದಾರೆ. ಇಂಥಾ ಮಾತು ಹೇಳೋಕೆ ಅವರಿಗೆ ನಾಚಿಕೆಯಾದ್ರೂ ಆಗಲಿಲ್ವಾ ಎಂದು ಖಾರವಾಗಿ ಪ್ರಶ್ನಿಸಿದರು.

ಅಡಿಕೆ ಆಮದು ದೊಡ್ಡ ದ್ರೋಹ

ಮೋದಿ ಸರ್ಕಾರ ಅಡಿಕೆಯನ್ನು ವಿದೇಶದಿಂದ ಆಮದು ಮಾಡಿಕೊಂಡು ರಾಜ್ಯದ ಅಡಿಕೆ ಬೆಳೆಗಾರರ ಕುಟುಂಬಕ್ಕೆ ದ್ರೋಹ ಬಗೆದಿದೆ. ಇದಕ್ಕೆ ತಕ್ಕ ಪಾಠ ಕಲಿಸಿ ಎಂದು ಕರೆ ನೀಡಿದರು.

Tags: BJPElectionLokasabhe Electionsiddaramaiahಬಿಜೆಪಿ
Previous Post

ಬಿಜೆಪಿ ಜಾಹಿರಾತಿಗೆ ಸಿಡಿಮಿಡಿಗೊಂಡ ಡಿಸಿಎಂ ಡಿಕೆಶಿ.. ಏನಂದ್ರು..?

Next Post

DK Shivakumar: ಏಕವಚನದಲ್ಲೇ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ ಡಿಕೆಶಿ #pratidhvani https://youtu.be/4HvcNVd01U8?si=yTDuj_4gojX2fFnp

Related Posts

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ
Top Story

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

by ಪ್ರತಿಧ್ವನಿ
May 13, 2026
0

ಬೆಂಗಳೂರು : ರಾಜ್ಯದ ಶಾಲಾ - ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ರಾಜ್ಯಾದ್ಯಂತ ಎಲ್ಲ...

Read moreDetails
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

May 13, 2026
ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

May 13, 2026
Next Post

DK Shivakumar: ಏಕವಚನದಲ್ಲೇ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ ಡಿಕೆಶಿ #pratidhvani https://youtu.be/4HvcNVd01U8?si=yTDuj_4gojX2fFnp

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada