ಹುಬ್ಬಳ್ಳಿ : ಇದೇ ನನ್ನ ಕೊನೆಯ ಚುನಾವಣೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಇಂದು ಘೋಷಣೆ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಕರ ಪತ್ರ ಹಂಚಿ ಮತಪ್ರಚಾರ ನಡೆಸುತ್ತಿರುವ ಜಗದೀಶ ಶೆಟ್ಟರ್ ತಮ್ಮ ಚುನಾವಣಾ ನಿವೃತ್ತಿಯ ಬಗ್ಗೆ ಮಾಹಿತಿ ನೀಡಿದ್ದಾರೆ.

ಏಳನೇ ಬಾರಿಗೆ ನಾನು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ನಾಲ್ಕು ದಶಕಗಳ ಕಾಲ ಕಟ್ಟಿ ಬೆಳೆಸಿದ ಪಕ್ಷದ ತೊರೆಯುವುದು ನನಗೂ ಸುಲಭವಲ್ಲ. ಬೆವರು ಸುರಿಸಿ ಕಟ್ಟಿದ ಮನೆಯನ್ನು ತೊರೆಯೋದು ಸುಲಭವಲ್ಲ. ಆದರೆ ನಾನು ಈ ರೀತಿ ಮಾಡುವಂತಹ ಪರಿಸ್ಥಿತಿ ಸೃಷ್ಟಿ ಮಾಡಲಾಗಿತ್ತು ಎಂದು ತಿಳಿಸಿದ್ದಾರೆ.
ನನ್ನ ರಾಜಕೀಯ ಜೀವನ ಮುಗಿಸಲು ಷಡ್ಯಂತ್ರ ನಡೆದಿದೆ. ನನ್ನಂತ ಹಿರಿಯ ನಾಯಕನಿಗೆ ಮಾಡಿದ ಅವಮಾನಕ್ಕೆ ತಕ್ಕ ಉತ್ತರ ನೀಡಬೇಕಿದೆ. ಇದೇ ನನ್ನ ಕೊನೆಯ ಚುನಾವಣೆ ಎಂದು ಕರಪತ್ರದಲ್ಲಿ ತಿಳಿಸಿದ್ದಾರೆ.






