ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಮಾತನಾಡಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಾ ಮಂಜುನಾಥ್ ಈಗಾಗಲೇ ಲೀಡ್ನಲ್ಲಿದ್ದಾರೆ. ಮಧ್ಯಾಹ್ನ 1 ಗಂಟೆ ಆಗುವ ವೇಳೆಗೆ ಅದು ಮೂರು ಪಟ್ಟು ಜಾಸ್ತಿ ಆಗುತ್ತದೆ ಎಂದಿದ್ದಾರೆ.
ರಾಜರಾಜೇಶ್ವರಿ ನಗರ, ಬೆಂಗಳೂರು ದಕ್ಷಿಣದಲ್ಲಿ ನಮ್ಮ ಪಕ್ಷದ ಶಕ್ತಿ ಹೆಚ್ಚಿದೆ, ಅಲ್ಲಿ ಇನ್ನೂ ಎಣಿಕೆ ಆಗಬೇಕಿದೆ. ಈಗಾಗಲೇ ಅರ್ಧ ಮತ ಎಣಿಕೆ ಮುಗಿದಿದೆ. ಡಾ. ಮಂಜುನಾಥ್ 2 ಲಕ್ಷ ಮತಗಳ ಅಂತರದಿಂದ ಗೆಲ್ತಾರೆ ಎಂದಿದ್ದಾರೆ. ಕನಕಪುರದಲ್ಲಿ ಟೈಟ್ ಸೆಕ್ಯುರಿಟಿ ಮಾಡಲೇಬೇಕು. ಈ ಹಿಂದೆಯೇ ಚುನಾವಣಾ ಆಯೋಗಕ್ಕೆ ನಾವು ಮನವಿ ಮಾಡಿದ್ದೇವೆ ಅಂತಾನೂ ತಿಳಿಸಿದ್ದಾರೆ.