• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸರ್ಕಾರಿ, ಖಾಸಗಿ ಉತ್ಪನ್ನಗಳ ಮಾರಾಟ, ಖರೀದಿಗೆ ನೆರವಾಗಲಿದೆ ಈ ಪೋರ್ಟಲ್ ಎಂ.ಬಿ.ಪಾಟೀಲ.

ಪ್ರತಿಧ್ವನಿ by ಪ್ರತಿಧ್ವನಿ
March 29, 2025
in Top Story, ಇತರೆ / Others, ಇದೀಗ, ಕರ್ನಾಟಕ, ಜೀವನದ ಶೈಲಿ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

*ಸರ್ಕಾರಿ, ಖಾಸಗಿ ಉತ್ಪನ್ನಗಳ ಮಾರಾಟ, ಖರೀದಿಗೆ ನೆರವಾಗಲಿದೆ ಈ ಪೋರ್ಟಲ್‌**ಇ-ಕಾಮರ್ಸ್‌ಗೂ ಎಂಎಸ್‌ಐಎಲ್‌ ಸಿದ್ಧತೆ: ಎಂ.ಬಿ.ಪಾಟೀಲ*ಬೆಂಗಳೂರು:ಸರಕಾರಿ ಸ್ವಾಮ್ಯದ ಎಂಎಸ್ಐಲ್, ವಿವಿಧ ಉತ್ಪನ್ನಗಳ ಮಾರಾಟಕ್ಕೆ ಇ-ಕಾಮರ್ಸ್ ಪೋರ್ಟಲ್‌ ತೆರೆಯಲು ಸಿದ್ಧತೆ ನಡೆಸಿದೆ. ಕೇಂದ್ರ ಸರ್ಕಾರದ ಜೆಮ್‌ ಪೋರ್ಟಲ್‌ ಮಾದರಿಯಲ್ಲಿ ರಾಜ್ಯ ಸರ್ಕಾರಿ ಸೇರಿದಂತೆ ಖಾಸಗಿ ಒಡೆತನದ ವಿವಿಧ ಉತ್ಪನ್ನಗಳ ಮಾರಾಟದ ಜತೆಗೆ ಖರೀದಿ ವ್ಯವಸ್ಥೆಗೂ ಇದು ವೇದಿಕೆಯಾಗಲಿದೆ.

ADVERTISEMENT

ಈ ಸಂಬಂಧ ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಶನಿವಾರ ಎಂಎಸ್‌ಐಎಲ್‌ನ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ವಿಸ್ತೃತವಾಗಿ ಚರ್ಚಿಸಿದರು. ಇದೊಂದು ಉತ್ತಮ ಕಾರ್ಯಕ್ರಮವಾಗಿದ್ದು, ಜಾರಿಗೆ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಇದರ ಕಾರ್ಯಾಚರಣೆಯನ್ನು ನಾಲ್ಕು ಹಂತಗಳಲ್ಲಿ ಅಭಿವೃದ್ಧಿಪಡಿಸಲಾಗುವುದು. ಇದು ಕಾರ್ಯರೂಪಕ್ಕೆ ಬಂದರೆ ಸರಕಾರಿ ಇಲಾಖೆಗಳು ಯಾವುದೇ ಟೆಂಡರ್ ಇಲ್ಲದೆ ತಮ್ಮ ಇಲಾಖೆಗೆ ಬೇಕಾಗುವ ಸಾಮಗ್ರಿಗಳನ್ನು ಇದರ ಮೂಲಕವೇ ಖರೀದಿಸಬಹುದು. ಹಾಗೆಯೇ, ಮಾರಾಟ ಕೂಡ ಮಾಡಬಹುದು. ಕೇಂದ್ರ ಸರಕಾರದ ಮಟ್ಟದಲ್ಲಿ ಟೆಂಡರ್ ಇಲ್ಲದೆ ನೇರವಾಗಿ ಖರೀದಿಸಲು ಜೆಮ್ ಪೋರ್ಟಲ್ ಇದ್ದು, ಅದೇ ಮಾದರಿಯಲ್ಲಿ ಇದು ಕೂಡ ಕೆಲಸ ಮಾಡಲಿದೆ ಎಂದು ಸಚಿವ ಪಾಟೀಲ ವಿವರಿಸಿದರು.ಮೊದಲ ಹಂತದಲ್ಲಿ ಕೇವಲ ಎಂಎಸ್‌ಐಎಲ್‌ ಉತ್ಪನ್ನಗಳನ್ನು ಮಾರಾಟ ಮಾಡುವುದು. ಎರಡನೇ ಹಂತದಲ್ಲಿ ಮೈಸೂರು ಸ್ಯಾಂಡಲ್‌ ಸೋಪು, ಲಿಡ್ಕರ್‌ ಉತ್ಪನ್ನ, ಮೈಸೂರು ರೇಷ್ಮೆ ಬಟ್ಟೆ, ಕಾವೇರಿ ಎಂಪೋರಿಯಂ ಉತ್ಪನ್ನ, ನಂದಿನಿ ಉತ್ಪನ್ನ ಇತ್ಯಾದಿ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಉತ್ಪನ್ನಗಳನ್ನು ಮಾರಾಟ ಮಾಡಲಾಗುವುದು. ಇದರಲ್ಲಿ ಎಂಎಸ್‌ಎಂಇ ಉತ್ಪನ್ನಗಳು ಹಾಗೂ ಮಹಿಳಾ ಸ್ವಸಹಾಯ ಸಂಘಗಳು ತಯಾರಿಸುವ ಉತ್ಪನ್ನಗಳಿಗೂ ವೇದಿಕೆ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದರು.ಮೂರನೇ ಹಂತದಲ್ಲಿ ಗ್ರಾಹಕ ಉತ್ಪನ್ನಗಳು ಮತ್ತು ಎಲೆಕ್ಟ್ರಾನಿಕ್ ಉತ್ಪನ್ನಗಳು ಹಾಗೂ ನಾಲ್ಕನೇ ಹಂತದಲ್ಲಿ ತಾಜಾ ಉತ್ಪನ್ನಗಳನ್ನು ಇ-ಕಾಮರ್ಸ್ ಮೂಲಕ ಮಾರಾಟ ಮಾಡುವ ಉದ್ದೇಶ ಇದೆ ಎಂದು ಅವರು ಹೇಳಿದ್ದಾರೆ.ದೇಶದ ಇ-ಕಾಮರ್ಸ್ ವಹಿವಾಟು ಈಗ ವಾರ್ಷಿಕ 75 ಬಿಲಿಯನ್ ಡಾಲರ್ ಇದೆ.

2030ರ ಹೊತ್ತಿಗೆ ಇದು 350 ಬಿಲಿಯನ್ ಡಾಲರ್ ಮುಟ್ಟಲಿದೆ ಎಂದು ಅಂದಾಜಿಸಲಾಗಿದೆ. ನಮ್ಮಲ್ಲಿ ಈಗ 900 ಮಿಲಿಯನ್ ಇಂಟರ್ನೆಟ್ ಬಳಕೆದಾರರು ಇದ್ದಾರೆ.

ಇವೆಲ್ಲವೂ ಇ-ಕಾಮರ್ಸ್ ಬೆಳವಣಿಗೆಗೆ ಪೂರಕವಾಗಿ ಒದಗಿ ಬರಲಿವೆ ಎಂದು ಪಾಟೀಲ ಹೇಳಿದ್ದಾರೆ.ಎಂಎಸ್‌ಐಎಲ್‌ ವ್ಯವಸ್ಥಾಪಕ ನಿರ್ದೇಶಕ ಮನೋಜಕುಮಾರ್, ನಿರ್ದೇಶಕ ಚಂದ್ರಪ್ಪ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Tags: Basanagowda Patil Yatnalbasangouda patil yatnal newsbijapur mb patil newsbm patil bijapurCC Patilcongress mb patilM B Patilm b patil newsMB Patilmb patil bijapurmb patil congressmb patil interviewmb patil newsmb patil news todaymb patil on waqf boardmb patil press conferencemb patil press meetmb patil speechmb patil today newsmb patil vs yatnalShivanand Patilvijugouda patil
Previous Post

ಏಪ್ರಿಲ್ 4 ರಂದು ಮೈಸೂರಿನ ಶಿವಾಜಿ ನಿರ್ಮಾಣ, ನಟನೆ ಹಾಗೂ ನಿರ್ದೇಶನದ “ಬೆಂಕಿಯ ಬಲೆ ಪ್ರೀತಿಯ ಕೊಲೆ” ಬಿಡುಗಡೆ*

Next Post

ಹೊಸ ವರುಷ-  ಹಳೆ ನೆನಪು – ಅಮ್ಮನ ಮಡಿಲು

Related Posts

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
0

ಸರ್ಕಾರಿ ಶಾಲಾ ಕಾಲೇಜು ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ...

Read moreDetails

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025
Next Post
ಹೊಸ ವರುಷ-  ಹಳೆ ನೆನಪು – ಅಮ್ಮನ ಮಡಿಲು

ಹೊಸ ವರುಷ-  ಹಳೆ ನೆನಪು - ಅಮ್ಮನ ಮಡಿಲು

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada