ದೇಶದಲ್ಲಿ ಈ ಬಾರಿಯ ಲೋಕಸಭಾ(Loka Saba) ಚುನಾವಣೆಯಲ್ಲಿ ಮತ್ತೊಮ್ಮೆ ಎನ್ಡಿಎ(NDA) ಮೈತ್ರಿಕೂಟ ಅಧಿಕಾರಕ್ಕೆ ಬರಲಿದ್ದು, ಈ ಮಾತನ್ನು ಇಂಡಿಯಾ(INDIA) ಮೈತ್ರಿಕೂಟದ ನಾಯಕರೇ ಹೇಳುತ್ತಿದ್ದಾರೆ ಎಂದು ಸಂಸದ ವಿ. ಶ್ರೀನಿವಾಸ ಪ್ರಸಾದ್(Srinivas Prasad) ಹೇಳಿದರು.
ಮೈಸೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು 25 ವರ್ಷ ಕಾಲ ಕಾಂಗ್ರೆಸ್(Congress) ನಲ್ಲಿದ್ದವನು. ಆಗ ಮುಂದೊಂದು ದಿನ ಕಾಂಗ್ರೆಸ್ ಗೆ ಇಂತಹ ದುಸ್ಥಿತಿ ಬರುತ್ತದೆ ಎಂದು ಊಯೆ ಕೂಡ ಮಾಡಿರಲಿಲ್ಲ. ತುರ್ತು ಪರಿಸ್ಥಿತಿ ಬಳಿಕ ಕಾಂಗ್ರೆಸ್ಗೆ ಪರ್ಯಾಯವಾಗಿ ಜನತಾ ಪಕ್ಷ(Janatha Party) ಉದಯವಾದರೂ ಅದು ಮುಂದೆ ಬೆಳೆಯಲಿಲ್ಲ. ಆದರೀಗ ಕಾಂಗ್ರೆಸ್ಗೆ ಪರ್ಯಾಯವಾಗಿ ಬಿಜೆಪಿ(BJP) ದೊಡ್ಡ ಪಕ್ಷವಾಗಿ ಬೆಳೆದಿದೆ. ಪರಿಣಾಮ ಕಾಂಗ್ರೆಸ್ ದುಸ್ಥಿತಿಗೆ ತಲುಪಿದ್ದು, ಕಾಂಗ್ರೆಸ್ ಗೆ ಇಂತಹ ದುಸ್ಥಿತಿ ಬರುತ್ತದೆಂದು ನಾನು ನಿರೀಕ್ಷಿಸಿರಲಿಲ್ಲ ಎಂದರು.
![](https://pratidhvani.com/wp-content/uploads/2024/02/WhatsApp-Image-2024-02-22-at-12.15.06-1024x712.webp)
ರಾಜ್ಯದಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಕುರಿತ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಸಂವಿಧಾನ ಜಾಗೃತಿ ಜಾಥಾ ಅಂಬೇಡ್ಕರ್ ಸಂವಿಧಾನ ಜಾಥಾ ಅಲ್ಲ, ರಾಜ್ಯದಲ್ಲಿ ನಡೆದದ್ದು ಕಾಂಗ್ರೆಸ್ ಪ್ರೇರಿತ ಸಂವಿಧಾನ ಜಾಥಾ. ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah), ಸಚಿವ ಡಾ.ಮಹದೇವಪ್ಪ(HC Mahadevappa) ಸಂವಿಧಾನ ಜಾಥಾ. ಐಕ್ಯತಾ ಸಮಾವೇಶದಲ್ಲಿ ಸಿದ್ದರಾಮಯ್ಯ ಆವೇಶಪೂರಿತ ಭಾಷಣ ಮಾಡಿದ್ದು ಸಂವಿಧಾನ ಜಾಗೃತಿ ಜಾಥಾನ? ಸಂವಿಧಾನ ಆಪತ್ತಿನಲ್ಲಿಲ್ಲ, ಕಾಂಗ್ರೆಸ್ ಪಕ್ಷವೇ ಆಪತ್ತಿನಲ್ಲಿದೆ ಎಂದು ಟೀಕಿಸಿದರು.
ಕೇವಲ ಓಟಿಗಾಗಿ ಸಂವಿಧಾನ ಆಪತ್ತಿನಲ್ಲಿದೆ ಎಂದು ಗಿಮಿಕ್ ಮಾಡುತ್ತಿದ್ದಾರೆ. ಸಂವಿಧಾನಕ್ಕೆ ಆಪತ್ತು ಬಂದರೇ ನಾವೆಲ್ಲಾ ಸುಮ್ಮನಿರುತ್ತೇವಾ?
ಸಂವಿಧಾನದ ಹೆಸರಿನಲ್ಲಿ ಕಾಂಗ್ರೆಸ್ ನವರು ರಾಜಕಾರಣ ಮಾಡುತ್ತಿದ್ದಾರೆ. ರಾಜಕೀಯ ಲಾಭಕ್ಕಾಗಿ ಸಂವಿಧಾನಕ್ಕೆ ಆಪತ್ತು ಬಂದಿದೆ ಎಂದು ಬಿಂಬಿಸುತ್ತಿದ್ದಾರೆ. ಸಂವಿಧಾನಕ್ಕೆ ಯಾವುದೇ ಅಪಾಯ ಬಂದಿಲ್ಲ ಎಂದರು.
#SrinivasPrasad #BJPMP #NDA #Congress #Siddaramaiah #HCMahadevappa