ತುಮಕೂರು : ತಂದೆ ಯಡಿಯೂರಪ್ಪರಿಗೆ ರಾಜಕೀಯವಾಗಿ ಜನ್ಮ ನೀಡಿದ ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿರುವ ಪುತ್ರ ಬಿ.ವೈ ವಿಜಯೇಂದ್ರ ಇಂದು ಕುಟುಂಬದ ಸಮೇತರಾಗಿ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದಾರೆ. ಡಾ. ಶಿವಕುಮಾರ್ ಶ್ರೀಗಳ ಗದ್ದುಗೆ ದರ್ಶನ ಪಡೆದ ವಿಜಯೇಂದ್ರ ಮಾಧ್ಯಮಗಳ ಜೊತೆ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತನಾಡಿದ್ರು.
![](https://pratidhvani.com/wp-content/uploads/2023/05/99547247-1024x576.jpg)
ಸಿದ್ದರಾಮಯ್ಯ ಹಾಗೂ ಡಿ. ಕೆ ಶಿವಕುಮಾರ್ ಇವರಿಬ್ಬರಲ್ಲಿ ರಾಜ್ಯದ ಹಿತದೃಷ್ಠಿಯಿಂದ ಯಾರು ಸಿಎಂ ಆಗಬೇಕು ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸದೇ ವಿಜಯೇಂದ್ರ ಮೊದಲು ಮೌನವಾಗಿದ್ದಾರೆ. ಪ್ರಶ್ನೆ ಮತ್ತೊಮ್ಮೆ ಪುನರಾವರ್ತನೆಯಾದಾಗ ನಾನೇಕೆ ಈ ಬಗ್ಗೆ ಯೋಚನೆ ಮಾಡಲಿ..? ಅದು ಕಾಂಗ್ರೆಸ್ಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ.