ಶಿವಮೊಗ್ಗ : ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಾಗ ರಾಜಕೀಯ ನಾಯಕರಿಗೆ ಮತದಾರರ ಮೇಲೆ ಇನ್ನಿಲ್ಲದ ಒಲವು ಶುರುವಾಗುತ್ತೆ. ಅಸ್ತಿತ್ವದಲ್ಲಿರುವ ಸರ್ಕಾರಗಳಂತೂ ಮನಸ್ಸಿಗೆ ಬಂದ ಯೋಜನೆಗಳನ್ನು ಘೋಷಿಸುವ ಮೂಲಕ ಮತದಾರರ ವಿಶ್ವಾಸಗಳಿಸಿಕೊಳ್ಳಲು ಕೊನೆಯ ಹಂತದ ಪ್ರಯತ್ನ ಮಾಡುತ್ತವೆ. ಆದರೆ ಈ ರೀತಿಯ ಯೋಜನೆಗಳನ್ನು ಘೋಷಿಸುವ ಭರದಲ್ಲಿ ಸರ್ಕಾರದ ಬೊಕ್ಕಸಕ್ಕೆ ಎಷ್ಟು ದೊಡ್ಡ ಮಟ್ಟದ ಹೊಡೆತ ಬೀಳುತ್ತೆ ಅನ್ನೋದನ್ನು ಅಂದಾಜಿಸುವುದಿಲ್ಲ.
ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣವನ್ನು ಉದ್ಘಾಟನೆಗೊಳಿಸಲಾಗಿದೆ. ಶೀಘ್ರದಲ್ಲಿಯೇ ಶಿವಮೊಗ್ಗದಿಂದ ಬೆಂಗಳೂರಿಗೆ ವಿಮಾನ ಹಾರಾಟ ಕೂಡ ಆರಂಭಗೊಳ್ಳಲಿದೆ. ಆದರೆ ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುವ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ಬಂಪರ್ ಆಫರ್ವೊಂದನ್ನು ನೀಡಿದೆ.
ಹೌದು..! ಶಿವಮೊಗ್ಗದಿಂದ ಬೆಂಗಳೂರಿಗೆ ಇಂಡಿಗೋ ಏರ್ಲೈನ್ಸ್ನಲ್ಲಿ ಪ್ರಯಾಣ ಬೆಳೆಸುವವರಿಗೆ ಸರ್ಕಾರದಿಂದ 500 ರೂಪಾಯಿಗಳ ಸಬ್ಸಿಡಿ ಸಿಗಲಿದೆ. ಇದರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಪ್ರತಿನಿತ್ಯ 75 ಸಾವಿರ ರೂಪಾಯಿಗಳ ಹೊರೆ ಬೀಳಲಿದೆ ಎಂದು ಆರ್ಥಿಕ ತಜ್ಞರು ಅಂದಾಜಿಸಿದ್ದಾರೆ. ಆರಂಭಿಕ ದಿನಗಳಲ್ಲಿ ಮಾತ್ರ ಈ ಸಬ್ಸಿಡಿ ಇರಲಿದೆ ಎಂದು ಸರ್ಕಾರ ಹೇಳಿದ್ದು ಮುಂದೆನಾಗುತ್ತೆ ಅಂತಾ ಕಾದು ನೋಡಬೇಕಿದೆ.