• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ಮಾಡುತ್ತಿರುವವರೇ ದುಷ್ಟಶಕ್ತಿಗಳು:ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
October 12, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಮಡಿಕೇರಿ:”ಅನವಶ್ಯಕ ವಿಚಾರ ಇಟ್ಟುಕೊಂಡು ರಾಜ್ಯಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ಮಾಡುತ್ತಿರುವವರೇ ದುಷ್ಟಶಕ್ತಿಗಳು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.ಮಡಿಕೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು.

ADVERTISEMENT

ಶುಕ್ರವಾರ ಪ್ರತಿಕೆಗಳಿಗೆ ನೀಡಿರುವ ಸರ್ಕಾರದ ಜಾಹೀರಾತಿನಲ್ಲಿ ದುಷ್ಟಶಕ್ತಿಗಳು ಎಂದು ಹೇಳಿದ್ದು ಆ ದುಷ್ಟಶಕ್ತಿಗಳು ಯಾರು ಎಂದು ಕೇಳಿದಾಗ, ಈ ರೀತಿ ಉತ್ತರಿಸಿದರು. “ದುಃಖವನ್ನು ನಿವಾರಿಸುವ ದುರ್ಗಾ ದೇವಿ, ದುಷ್ಟರನ್ನು ದೂರಮಾಡಿ ಎಲ್ಲರಿಗೂ ಒಳ್ಳೆಯದನ್ನು ಮಾಡಿ ಹರಸಲಿ. ನಮ್ಮ ರಾಜ್ಯ ಶಾಂತಿಯ ತೋಟವಾಗಿ ಪರಿವರ್ತನೆ ಆಗಬೇಕೆಂದು ಪ್ರಾರ್ಥಿಸುತ್ತೇನೆ” ಎಂದು ತಿಳಿಸಿದರು.

ಹುಬ್ಬಳ್ಳಿಯಲ್ಲಿ ಪ್ರಹ್ಲಾದ್ ಜೋಶಿ ಅವರು ಕಾಂಗ್ರೆಸ್ ಪಕ್ಷವೇ ದುಷ್ಟಶಕ್ತಿಗೆ ಪ್ರಚೋದನೆ ನೀಡುತ್ತಿದೆ ಎನ್ನುವ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ವಿರೋಧ ಪಕ್ಷದವರಿಗೆ ಉತ್ತರ ನೀಡಲು ಬಯಸುವುದಿಲ್ಲ. ಸಕಾರಾತ್ಮಕ ವಿಚಾರದ ಬಗ್ಗೆ ಮಾತ್ರ ಮಾತನಾಡುತ್ತೇನೆ” ಎಂದು ತಿಳಿಸಿದರು.

ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧದ ಪ್ರಕರಣ ಹಿಂಪಡೆದಿರುವ ಬಗ್ಗೆ ಕೇಳಿದಾಗ, “ಬಿಜೆಪಿ ನಾಯಕರ ಮೇಲಿರುವ ಪ್ರಕರಣಗಳನ್ನು ನಾವು ಹಿಂದಕ್ಕೆ ಪಡೆದಿದ್ದೇವೆ. ಈ ಬಗ್ಗೆ ಗೃಹಸಚಿವರು ಹೆಚ್ಚಿನ ಮಾಹಿತಿ ನೀಡುತ್ತಾರೆ” ಎಂದರು.

ಬಿಜೆಪಿ ನಿಲುವೇನು?: ಜಾತಿ ಗಣತಿ ವಿಚಾರ ಇಟ್ಟುಕೊಂಡು ಕಾಂಗ್ರೆಸ್ ಬ್ರಿಟೀಷರಂತೆ ಒಡೆದು ಆಳುವ ನೀತಿ ಅನುಸರಿಸುತ್ತಿದೆಯೇ ಎಂದು ಕೇಳಿದಾಗ, “ಜಾತಿ ಗಣತಿ ವಿಚಾರದಲ್ಲಿ ತಮ್ಮ ನಿಲುವೇನು ಎಂದು ಬಿಜೆಪಿ ತಿಳಿಸಲಿ. ಆನಂತರ ಪ್ರತಿಕ್ರಿಯೆ ನೀಡುತ್ತೇನೆ” ಎಂದು ತಿಳಿಸಿದರು.

ಕಾಂಗ್ರೆಸ್ ನವರು ಸರ್ಕಾರವನ್ನು ಮೋಸದಿಂದ ಸ್ಥಿರಗೊಳಿಸಲು ಹೊರಟಿದ್ದಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮುಂದೆ ಚರ್ಚೆ ಮಾಡೋಣ, ದುರ್ಗಾ ಮಾತೇ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ” ಎಂದು ತಿಳಿಸಿದರು.

ಮೈಸೂರು ದಸರಾದಂತೆ ಮಡಿಕೇರಿ ದಸರಾ ಕೂಡ ಖ್ಯಾತಿ ಪಡೆಯಲಿ:

ನಮ್ಮ ಕೊಡಗಿನ ಸಂಸ್ಕೃತಿಯ ಸಂಕೇತ ಮಡಿಕೇರಿ ದಸರಾಕ್ಕೆ ಚಾಲನೆ ನೀಡಲು ಇಂದು ಮಡಿಕೇರಿಗೆ ಭೇಟಿ ನೀಡಿದ್ದೇನೆ. ಈ ವಿಶೇಷ ಸಂದರ್ಭ ಹಾಗೂ ನಮ್ಮ ಸಂಸ್ಕೃತಿಯ ಸಂಕೇತದ ಆಚರಣೆಗೆ ಪ್ರೋತ್ಸಾಹ ನೀಡಬೇಕು ಎಂದು ಬಂದಿದ್ದೇನೆ.ಜಿಲ್ಲಾ ನಾಯಕರು ಹಾಗೂ ಕಾರ್ಯಕರ್ತರು ನನಗೆ ಸ್ವಾಗತ ಕೋರಿದ್ದು, ಮೈಸೂರು ದಸರಾ ಮಾದರಿಯಲ್ಲೇ ಮಡಿಕೇರಿ ದಸರಾ ಕೂಡ ಖ್ಯಾತಿ ಪಡೆಯಬೇಕು. ಇದಕ್ಕಾಗಿ ಈ ಭಾಗದ ಜನರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ.

ಮೈಸೂರು ದಸರಾ ಹಾಗೂ ಮಡಿಕೇರಿಗೆ ಮೂರುವರೆ ಲಕ್ಷ ವಾಹನಗಳು ಬಂದಿವೆ ಎಂಬ ಅಂಕಿಅಂಶಗಳು ನಮಗೆ ಲಭ್ಯವಾಗಿವೆ.ಬರಗಾಲ ಹೋಗಿ ಉತ್ತಮ ಮಳೆಯಾಗುತ್ತಿದೆ.ಈ ಬಾರಿ ಕಾಫಿಗೆ ಉತ್ತಮ ಬೆಲೆ ಬಂದಿದೆ.ಕಾವೇರಿ ತುಂಬಿ ಹರಿಯುತ್ತಿದ್ದು, ನಾನು ಹಾಗೂ ಸಿಎಂ ಸಿದ್ದರಾಮಯ್ಯ ಅವರು ಸೇರಿ ಆ ತಾಯಿಗೆ ಬಾಗಿನ ಅರ್ಪಿಸಿದ್ದೇವೆ’ ಎಂದು ತಿಳಿಸಿದರು.

Tags: BJPCongress PartyDCM DK ShivakumarEvil spiritsI will only talk about positive issues..Prahlad Joshi
Previous Post

ತಮಿಳುನಾಡಿನಲ್ಲಿ ಆಗಸದಲ್ಲೇ ಹಾರಾಡಿದ ವಿಮಾನ..! 141 ಜೀವ ಸದ್ಯ ಸೇಫ್‌

Next Post

ಶಬರಿ ಮಲೆಯಲ್ಲಿ ಆನ್‌ಲೈನ್‌ ಬುಕಿಂಗ್‌ ಇಲ್ಲದೆ ಎಲ್ಲರಿಗೂ ಪ್ರವೇಶ ನೀಡಿದ ದೇವಾಲಯ ಮಂಡಳಿ

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
Next Post

ಶಬರಿ ಮಲೆಯಲ್ಲಿ ಆನ್‌ಲೈನ್‌ ಬುಕಿಂಗ್‌ ಇಲ್ಲದೆ ಎಲ್ಲರಿಗೂ ಪ್ರವೇಶ ನೀಡಿದ ದೇವಾಲಯ ಮಂಡಳಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada