• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಪ್ರಧಾನಿ ಮೋದಿ ಬಗ್ಗೆ ಟೀಕೆ ಮಾಡುವವರು ಉದ್ಧಾರ ಆಗಲ್ಲ: ಕೆ.ಎಸ್.ಈಶ್ವರಪ್ಪ

Any Mind by Any Mind
April 28, 2023
in ರಾಜಕೀಯ
0
ಪ್ರಧಾನಿ ಮೋದಿ ಬಗ್ಗೆ ಟೀಕೆ ಮಾಡುವವರು ಉದ್ಧಾರ ಆಗಲ್ಲ: ಕೆ.ಎಸ್.ಈಶ್ವರಪ್ಪ
Share on WhatsAppShare on FacebookShare on Telegram

ರಾಜ್ಯದಲ್ಲಿ ಚುನಾವಣಾ ರಣಕಣ ರಂಗೇರುತ್ತಿದೆ. 2023ರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ, ಪಕ್ಷದ ನಾಯಕರು, ಮುಖಂಡರು ರಾಜ್ಯದ ಮೂಲೆ ಮೂಲೆಗೂ ತಿರುಗಿ ಭರ್ಜರಿ ಮತ ಪ್ರಚಾರ ನಡೆಸುತ್ತಿದ್ದಾರೆ. ಇಂದು ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತ್ನಾಡಿದ ಕೆ.ಎಸ್‌.ಈಶ್ವರಪ್ಪ, ʻವರುಣಾದ ಸಿದ್ದರಾಮನಹುಂಡಿಯಲ್ಲಿ ನಡೆದ ಘಟನೆ ಕಾಂಗ್ರೆಸ್-ಬಿಜೆಪಿ ನಡುವೆ ನಡೆದ ಘಟನೆ ಅಲ್ಲ. ಅದು ಕಾಂಗ್ರೆಸ್ ಗೂಂಡಾಗಿರಿ ಎಂದರು. ನಮ್ಮ ಪಕ್ಷದ ಕಾರ್ಯಕರ್ತರು ಚುನಾವಣಾ ಪ್ರಚಾರದ ವೇಳೆ ಮನೆ ಮನೆಗೆ ಹೋಗುವ ಸಂದರ್ಭದಲ್ಲಿ ಕಾಂಗ್ರೆಸ್ ಕಿಡಿಗೇಡಿಗಳು  ಬಕೆಟ್ ನಲ್ಲಿ ಕಲ್ಲು ತಡೆದುಕೊಂಡು ಬಂದು ಹೊಡೆದಿದ್ದಾರೆ. ಈಗಾಗಲೇ ಈ ಕುರಿತು ಪೊಲೀಸ್ ದೂರು ದಾಖಲಾಗಿದೆ. ಕಾಂಗ್ರೆಸ್ ಸೋಲಿನ ಹತಾಶೆಯಲ್ಲಿ ಮಾಡಬಾರದ ಕೆಲಸಗಳನ್ನು ಮಾಡಿಸುತ್ತಿದೆ. ಜನರ ಮನಸ್ಸಿಗೆ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಅವರ ಹೇಳಿಕೆಗಳು ತುಂಬಾ ನಿಕೃಷ್ಟವಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ರಾಜ್ಯದಲ್ಲಿ ಗೂಂಡಾಗಿರಿ ನಿಲ್ಲಿಸಬೇಕು. ಇಲ್ಲವಾದರೆ ಬಿಜೆಪಿ ತಕ್ಕ ಉತ್ತರ ಕೊಡುತ್ತದೆ ಅಂತ ಹೇಳಿದ್ರು.

ADVERTISEMENT

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ಕುರಿತು ವಿಷ ಸರ್ಪದ ಹೋಲಿಕೆ ತೀರಾ ಕನಿಷ್ಠ ಹಾಗೂ ಖರ್ಗೆ ಈ ತರಹ ಮಾತನಾಡಿದ್ದಾರಾ ಎಂಬ ಅನುಮಾನ ನನಗೆ ಬಂತು ಎಂದು ಈಶ್ವರಪ್ಪ ಹೇಳಿದರು. ಮಲ್ಲಿಕಾರ್ಜುನ ಖರ್ಗೆ ಅವರನ್ನು ತಂದೆ ಸ್ಥಾನದಲ್ಲಿ ಇಟ್ಟಿದ್ದೆವು. ಕಾಂಗ್ರೆಸ್ ಪಕ್ಷದ ಹೀರೋ ಅಂದುಕೊಂಡಿದ್ದೆ ಆದರೆ ಜನಸಾಮಾನ್ಯರಿಗೆ ವಿಲನ್ ಆಗಿದ್ದಾರೆ. ಇಂತಹ ನೀತಿಗೆಟ್ಟ ಮಾತನ್ನು ಆಡುತ್ತಾರೆ ಎಂದು ನಾವು ನಂಬಿರಲಿಲ್ಲ. ನರೇಂದ್ರ ಮೋದಿ ಅವರು ಕೊರೋನಾ ಹಾಗೂ ಯುದ್ಧ ಸಮಯದಲ್ಲಿ ನಡೆದುಕೊಂಡ ರೀತಿಗೆ ಪ್ರಪಂಚವೇ ಶ್ಲಾಘಿಸಿದೆ. ಮಲ್ಲಿಕಾರ್ಜುನ ಖರ್ಗೆ ವಿಷ ಸರ್ಪ ಎಂದು ಹೇಳಿಕೆ ನೀಡಿರುವುದು ದುರದೃಷ್ಟಕರ. ಸೋನಿಯಾ ಗಾಂಧಿ ರಾಹುಲ್ ಗಾಂಧಿ ಮೆಚ್ಚಿಸಿ ಅಧ್ಯಕ್ಷ ಗಾದಿ ಹಿಡಿದ ಮಲ್ಲಿಕಾರ್ಜುನ ಖರ್ಗೆ ಹಾಗೆಯೇ ನಡೆದುಕೊಳ್ಳುತ್ತಿದ್ದಾರೆ. ಹೇಳಿಕೆ ನೀಡಿ, ಯಾರಿಗಾದರೂ ನೋವಾಗಿದ್ದರೆ ಕ್ಷಮಿಸಿ ಬಿಡಿ ಎಂದು ಹೇಳಲು ಸಾಧ್ಯವಿಲ್ಲ. ನಾವು ಕೂಡ ಹಾಗೆ ಮಾಡಬಹುದಾ ಅವರು ರಾಷ್ಟ್ರೀಯ ನಾಯಕರಾಗಿರುವುದೇ ದುರಂತ. ಕಾಂಗ್ರೆಸ್ ಪಕ್ಷಕ್ಕೂ ಕೂಡ ಅವಮಾನ. ಈಗಾಗಲೇ ಪಕ್ಷ ಎಲ್ಲೆಡೆ ನಿರ್ನಾಮ ಆಗಿದೆ ಇಲ್ಲೂ ಕೂಡ ನಿರ್ನಾಮವಾಗುತ್ತದೆ.  ಬಾಯಿಗೆ ಬಂತು ಎಂದು ಹೇಳುವುದು ಬಾಲಿಶ, ಖರ್ಗೆ ಅವರಿಗೆ ಮೌಲ್ಯ ಇತ್ತು ನರೇಂದ್ರ ಮೋದಿಯವರನ್ನ ಟೀಕೆ ಮಾಡುವವರು ಯಾರು ಉದ್ದಾರ ಆಗೋದಿಲ್ಲ. ಮೋದಿಗೆ ಸಹಕಾರ ಕೊಡಿ, ದೇಶ ನಡೆಸಲು ಅನುಕೂಲವಾಗುವುದು ಎಂದರು.

ರಾಷ್ಟ್ರ ನಾಯಕರು ಹುಬ್ಬಳ್ಳಿಗೆ ಬಂದು ನನ್ನನ್ನು ಸೋಲಿಸಲು ಪಣತೊಟ್ಟಿದ್ದಾರೆ ಎಂದು ಹೇಳಿಕೆ ನೀಡಿದ್ದರ ಕುರಿತು ಪ್ರತಿಕ್ರಿಯೆ ನೀಡಿದ ಈಶ್ವರಪ್ಪ ಎಲ್ಲರೂ ಎಲ್ಲಾ ಕಡೆ ಓಡಾಡುತ್ತಿದ್ದಾರೆ. ಅಮಿತ್ ಶಾ, ನಡ್ದಾ, ಸಂತೋಷ್ ಜೀ, ಎಲ್ಲರೂ ಕೂಡ ಎಲ್ಲಾ ಕಡೆ ಪ್ರಚಾರ ಮಾಡುತ್ತಿದ್ದಾರೆ. ಜಗದೀಶ್ ಶೆಟ್ಟರ್ ಮಾತ್ರ ಭ್ರಮೆಯಲ್ಲಿದ್ದಾರೆ. ಜಗದೀಶ್ ಶೆಟ್ಟರ್ ಕ್ಷೇತ್ರದಲ್ಲಿ ಮಾತ್ರ ನಾವು ಪ್ರಚಾರ ಮಾಡುತ್ತಿದ್ದೇವೆ ಎಂದು ಹೇಳೋದಕ್ಕೆ ಶೆಟ್ಟರ್ ಏನು ಇಂಟರ್ನ್ಯಾಷನಲ್ ಲೀಡರ್..? ಎಂದು ಈಶ್ವರಪ್ಪ ಪ್ರಶ್ನಿಸಿದರು. ಏಕವಚನದಲ್ಲಿ ಸಂಬೋಧಿಸಿ, ನಿನ್ನ ಎಲ್ಲಿ ಎಲ್ಲಿಂದ ಎಲ್ಲಿಗೆ ತೆಗೆದುಕೊಂಡು ಆದರೂ ಸಹ ಬೆಲೆ ಕೊಡಲಿಲ್ಲ. ಹುಬ್ಬಳ್ಳಿಯೇನೂ ಪಾಕಿಸ್ತಾನ ಅಲ್ಲ. ಎಲ್ಲಾ ಕಡೆ ಪ್ರಚಾರ ಮಾಡುವಂತೆ ಅಲ್ಲೂ ಮಾಡುತ್ತಿದ್ದೇವೆ. ಹುಬ್ಬಳ್ಳಿ ರಾಜ್ಯದ ಒಂದು ಅಂಗ ಅಷ್ಟೇ ಎಂದರು. ನಾನು ಮುಸ್ಲಿಂ ವೋಟ್ ಗಳು ಬೇಡ ಎಂದಿಲ್ಲ. ಆದರೆ ರಾಷ್ಟ್ರ ದ್ರೋಹಿ ಮುಸಲ್ಮಾನ ವೋಟುಗಳು ಬೇಡ ಎಂದಿದ್ದೇನೆ ಅಷ್ಟೇ. ಪ್ರತಿ ಪತ್ರಿಕಾಗೋಷ್ಠಿಯಲ್ಲಿ ನಾನಿದನ್ನ ಹೇಳಿದ್ದೇನೆ. ರಾಷ್ಟ್ರದ್ರೋಹಿ ಮುಸಲ್ಮಾನರನ್ನ ನಾನು ಯಾವಾಗಲೂ ದೋಷಿಸುತ್ತೇನೆ ಅಂತ ಕೆ.ಎಸ್‌.ಈಶ್ವರಪ್ಪ ಹೇಳಿದ್ರು.

Tags: #bjp#congress#election2023#karnataka#karnatakaassemblyelection#kseshwarappa#narendramodi#pratidhvani#pratidhvanidigital#pratidhvaninews#statement
Previous Post

ʻಧಮ್ ಇದ್ರೆ ಮೀಸಲಾತಿಯನ್ನು ಮುಟ್ಟಿ ನೋಡಿʼ: ಕಾಂಗ್ರೆಸ್‌ಗೆ ಬೊಮ್ಮಾಯಿ ಚಾಲೆಂಜ್..!‌

Next Post

ಶಿವಾಜಿ ಸುರತ್ಕಲ್‌ -2 ಸಕಸ್ಸ್‌: 3ನೇ ವಾರಕ್ಕೆ ಕಾಲಿಟ್ಟ The Mysterious Case of ಮಾಯಾವಿ..!

Related Posts

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
0

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ರದ್ಧತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಕಾಯ್ದಿರಿಸಿದೆ....

Read moreDetails
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

October 23, 2025
Home Minister G. Parameshwar: ಸತೀಶ್ ಜಾರಕಿಹೊಳಿ ನಾಯಕತ್ವ ಮಾತು : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

Home Minister G. Parameshwar: ಸತೀಶ್ ಜಾರಕಿಹೊಳಿ ನಾಯಕತ್ವ ಮಾತು : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

October 23, 2025
Next Post
ಶಿವಾಜಿ ಸುರತ್ಕಲ್‌ -2 ಸಕಸ್ಸ್‌: 3ನೇ ವಾರಕ್ಕೆ ಕಾಲಿಟ್ಟ The Mysterious Case of ಮಾಯಾವಿ..!

ಶಿವಾಜಿ ಸುರತ್ಕಲ್‌ -2 ಸಕಸ್ಸ್‌: 3ನೇ ವಾರಕ್ಕೆ ಕಾಲಿಟ್ಟ The Mysterious Case of ಮಾಯಾವಿ..!

Please login to join discussion

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada