• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ ಅಭಿಮತ

ದೊರೆಸ್ವಾಮಿ ದೈಹಿಕವಾಗಿ ನಮ್ಮೊಂದಿಗೆ ಇಲ್ಲವಾದರೂ, ಅವರ ಆದರ್ಶಗಳು ಸಮಾಜದ ಎಲ್ಲಾ ವರ್ಗದ ಜನರಿಗೆ ದಾರಿ ದೀಪವಾಗಲಿದೆ -ವಿ ಗೋಪಾಲಗೌಡ

Any Mind by Any Mind
May 31, 2021
in ಅಭಿಮತ
0
ದೊರೆಸ್ವಾಮಿ ದೈಹಿಕವಾಗಿ ನಮ್ಮೊಂದಿಗೆ ಇಲ್ಲವಾದರೂ, ಅವರ ಆದರ್ಶಗಳು ಸಮಾಜದ ಎಲ್ಲಾ ವರ್ಗದ ಜನರಿಗೆ ದಾರಿ ದೀಪವಾಗಲಿದೆ -ವಿ ಗೋಪಾಲಗೌಡ
Share on WhatsAppShare on FacebookShare on Telegram

ಎಚ್.ಎಸ್. ದೊರೆಸ್ವಾಮಿ ಒಬ್ಬ ಶತಾಯುಶಿ ಮತ್ತು ಸ್ವಾತಂತ್ರ್ಯ ಹೋರಾಟಗಾರ. ಸರಳತೆ, ನಮ್ರತೆ, ಸಮಗ್ರತೆ ಮತ್ತು ಸಮಾಜಿಕ ಬದ್ಧತೆಗೆ ಅವರು ಹೆಸರುವಾಸಿಯಾದವರು.

ADVERTISEMENT

ಅವರ ಸಾವು ದೇಶಕ್ಕೆ ತುಂಬಲಾರದ ನಷ್ಟ. ಅವರು ಯಾವತ್ತೂ ಜನತೆಯ ಪರ ನಿಂತವರು. ದೈಹಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ ಅವರ ಆಲೋಚನೆಗಳು, ಅರ್ಧ ಮುಗಿಸಿದ ಕೆಲಸಗಳೊಂದಿಗೆ ಅವರು ಈ ದೇಶದ ಜನತೆಯ ಹೃದಯದಲ್ಲಿರುತ್ತಾರೆ. ಅವರ ಇಡೀ ಬದುಕನ್ನು ಸಮಾಜದ ದುರ್ಬಲ ವಿಭಾಗದ ಅಂದರೆ ಶೋಷಿತ ಸಮುದಾಯ, ಹಿಂದುಳಿದ ಜನರ ಒಳಿತಿಗೆ, ಹೋರಾಟಕ್ಕಾಗಿಯೇ ಕಳೆದಿದ್ದಾರೆ. ಅವರಿಗೆ ಸಾಮಾಜಿಕ, ಆರ್ಥಿಕ, ರಾಜಕೀಯ ಸವಲತ್ತುಗಳನ್ನು ಒದಗಿಸಿಕೊಡಲು ಹೋರಾಡಿದ್ದಾರೆ. ಸಮಾಜದ ಎಲ್ಲಾ ವರ್ಗದ ಜನರಿಗೂ ಸಮಾನತೆಯನ್ನು ಕಲ್ಪಿಸುವುದು ಅವರ ಕನಸಾಗಿತ್ತು.

ರಾಷ್ಟ್ರಪಿತ ಮಹಾತ್ಮಾಗಾಂಧಿಯವರಿಂದ ಪ್ರೇರಣೆಗೊಂಡ ಅವರು ಸ್ವಾತಂತ್ರ್ಯ ಚಳವಳಿಗಳಲ್ಲಿ ಭಾಗವಹಿಸಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಅವರು ಒಂದು ವರ್ಷಕ್ಕಿಂತಲೂ ಹೆಚ್ಚು ಕಾಲ ಜೈಲು ಶಿಕ್ಷೆ ಅನುಭವಿಸಿದ್ದರು. ಅಲ್ಲದೆ ಸ್ವಾತಂತ್ರ್ಯಾನಂತರ ತುರ್ತು ಪರಿಸ್ಥಿತಿಯ ಕಾಲದಲ್ಲೂ ಸರ್ಕಾರವನ್ನು ಪ್ರಶ್ನೆ ಮಾಡಿದ ಕಾರಣಕ್ಕೆ ಜೈಲು ಶಿಕ್ಷೆ ಅನುಭವಿಸಿದ್ದಾರೆ.

ಅವರು‌ ಇಲ್ಲವಾದರೂ ಅವರ ಆದರ್ಶಗಳು ಯುವಕರಿಗೆ, ರೈತರಿಗೆ, ಹೋರಾಟಗಾರರಿಗೆ, ಕಾರ್ಮಿಕರಿಗೆ, ಬುದ್ಧಿಜೀವಿಗಳಿಗೆ, ಬರಹಗಾರರಿಗೆ ಮತ್ತು ಸಮಾಜದ ಎಲ್ಲಾ ವರ್ಗದ ಜನರಿಗೆ ದಾರಿದೀಪವಾಗಲಿವೆ.

ಅನ್ಯಾಯದ ವಿರುದ್ಧ ಸಮಾಜದ ಜನರನ್ನು ಜಾಗೃತಗೊಳಿಸುವ ಅವರ ಒರಟಾದ ಆದರೆ ನಿಜವಾದ ಮತ್ತು ಗಂಭೀರ ಪ್ರಯತ್ನಗಳಿಗೆ ನಾನೇ ಸಾಕ್ಷಿ.

ಎಲ್ಲಾ ಕಾರ್ಯಕರ್ತರಿಗೆ ಕೇಂದ್ರ, ರಾಜ್ಯ ಮತ್ತು ಸ್ಥಳೀಯ ಸರ್ಕಾರಗಳಿಂದ ಪಟ್ಟುಬಿಡದೆ ಉತ್ತಮ ಆಡಳಿತವನ್ನು ಪಡೆಯಲು ಅವರು ಪ್ರೇರಣೆ ಮತ್ತು ಶಕ್ತಿಯನ್ನು ತಮ್ಮ ಜೀವನದುದ್ದಕ್ಕೂ ನೀಡುತ್ತಿದ್ದರು.

ಗೌರವಾನ್ವಿತ ಸುಪ್ರೀಂ ಕೋರ್ಟ್ ನಿಂದ ನಿವೃತ್ತಿಯನ್ನು ಪಡೆದ ನಂತರ ನಿರಂತರವಾಗಿ ನಾನು ಅವರೊಂದಿಗೆ ಸಂಪರ್ಕದಲ್ಲಿದ್ದೆ. ಅವರನ್ನು ಹಲವಾರು ಸಂದರ್ಭಗಳಲ್ಲಿ ಭೇಟಿಯಾಗುವ ಮತ್ತು ದೇಶದ ಜನರ ಬಗ್ಗೆ ,ಅನೇಕ ವಿಷಯಗಳ ಬಗ್ಗೆ ದೀರ್ಘವಾಗಿ ಚರ್ಚಿಸುವ ಅವಕಾಶ ನನಗೆ ದೊರಕಿತ್ತು. ಕಾಲಕಾಲಕ್ಕೆ ಅವರ ಆರೋಗ್ಯದ ಬಗ್ಗೆಯೂ ವಿಚಾರಿಸುತ್ತಿದ್ದೆ. ಅವರು ಸ್ವಾತಂತ್ರ್ಯ ಹೋರಾಟಗಾರನಲ್ಲ ಎಂದು ಪಟ್ಟಭದ್ರ ಹಿತಾಸಕ್ತಿಯ ರಾಜಕಾರಣಿಗಳು ಅವರ ರುಜುವಾತುಗಳ ಬಗ್ಗೆ ಪ್ರಶ್ನಿಸಿದಾಗ ನಾನು ಖಂಡಿಸಿದ್ದೇನೆ.

ಅವರ 104 ನೇ ಜನ್ಮದಿನದಂದು ಅವರ ಸ್ನೇಹಿತರು ಮತ್ತು ಬೆಂಬಲಿಗರು ವೆಬ್‌ನಾರ್ ಆಯೋಜಿಸಿದ್ದರು. ಅದರ ಅಧ್ಯಕ್ಷತೆ ವಹಿಸಲು ಮತ್ತು ಅವರ ಉತ್ತಮ ಆರೋಗ್ಯಕ್ಕಾಗಿ ಹಾರೈಸಲು ನನಗೆ ಅವಕಾಶ ದೊರಕಿತ್ತು. ದೇಶವನ್ನು ಸರಿಯಾದ ಹಾದಿಯಲ್ಲಿ ಸಾಗಿಸಲು, ದೇಶದ ಜನರಿಗೆ ಮಾರ್ಗದರ್ಶಕ ಶಕ್ತಿಯಾಗಿ ಇರಲು ಅವರಿಗೆ ದೀರ್ಘಾಯುಷ್ಯವನ್ನು ಪ್ರಾರ್ಥಿಸಿದೆ.
ಅವರು ರಾಷ್ಟ್ರದ ಜನರಿಗೆ, ವಿಶೇಷವಾಗಿ ಯುವಕರಿಗೆ, ಸಾಮಾಜಿಕ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡುವುದನ್ನು ಮುಂದುವರೆಸುತ್ತಾ ದೀರ್ಘಕಾಲ ಆರೋಗ್ಯಕರವಾಗಿ ಮತ್ತು ದೃಢವಾಗಿ ಇರಬೇಕೆಂದು ನಾನು ಬಯಸಿದ್ದೆ.

ಇದೀಗ ಇಲ್ಲವಾಗಿರುವ ಅವರ ಬಗ್ಗೆ ನಾನು ಹಂಚಿಕೊಳ್ಳಬಯಸುವ ಅಚ್ಚುಮೆಚ್ಚಿನ ಸ್ಮರಣೆ ಇದು. ಅವರು ಕೇವಲ ಕೇಂದ್ರ ಮತ್ತು ರಾಜ್ಯ ಮಟ್ಟಗಳಲ್ಲಿ ಜನರ ಪರ ಸರ್ಕಾರವನ್ನು ಹೊಂದಲು ಮಾತ್ರ ಯುವಕರು, ವಿದ್ಯಾರ್ಥಿಗಳು ಮತ್ತು ಜನರ ಪರ ಗುಂಪುಗಳ ಆಂದೋಲನವನ್ನು ಬೆಂಬಲಿಸಿದ್ದಲ್ಲ. ಬದಲಾಗಿ ದೇಶದ ಜನರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಸಮಾನತೆಯನ್ನು ಸಾಧಿಸಲು ಪ್ರಯತ್ನಿಸಿದರು.
ಸಮಾಜದ ಪ್ರತಿ ವಿಭಾಗವು ಅವರ ನಿಧನಕ್ಕೆ ಗೌರವ ಸಲ್ಲಿಸುತ್ತದೆ ಮತ್ತು ತಮ್ಮ ಹೃದಯದ ಸಂತಾಪವನ್ನು ವ್ಯಕ್ತಪಡಿಸುತ್ತದೆ ಹಾಗೂ ಅವರ ಆತ್ಮಕ್ಕೆ ಶಾಂತಿಯನ್ನು ಕೋರುತ್ತದೆ

ನ್ಯಾಯಮೂರ್ತಿ ವಿ ಗೋಪಾಲಗೌಡ
ಭಾರತದ ಸುಪ್ರೀಂ ಕೋರ್ಟ್

Previous Post

ಡಿ.ಕೆ. ಶಿವಕುಮಾರ್ ಮನವಿಗೆ ತೆಲಂಗಾಣ ಸರ್ಕಾರ ಸ್ಪಂದನೆ; ಮಂಡ್ಯ ವ್ಯಕ್ತಿಯ ಮೃತದೇಹ ಹಸ್ತಾಂತರಿಸಿದ ಹೈದರಾಬಾದ್ ಆಸ್ಪತ್ರೆ

Next Post

ರಾಜ್ಯದ ಯುವ ರಂಗಕಲಾವಿದರಿಗೆ ಸೂಕ್ತ ಆರ್ಥಿಕ ನೆರವು ನೀಡಿ – ಸರ್ಕಾರಕ್ಕೆ ಪತ್ರ ಬರೆದ ಯೂತ್ ಆರ್ಟಿಸ್ಟ್ ಗಿಲ್ಡ್

Related Posts

ಚಿತ್ತಾಪುರ RSS ಪಥಸಂಚಲನ: ಒಂದು ವಾರದಲ್ಲಿ ಸರ್ಕಾರದ ನಿರ್ಧಾರ
ಅಭಿಮತ

ಚಿತ್ತಾಪುರ RSS ಪಥಸಂಚಲನ: ಒಂದು ವಾರದಲ್ಲಿ ಸರ್ಕಾರದ ನಿರ್ಧಾರ

by ಪ್ರತಿಧ್ವನಿ
November 7, 2025
0

  https://youtu.be/iZY7Q0JnGnY ಬೆಂಗಳೂರು: ಹೈಕೋರ್ಟ್ ನಲ್ಲಿಂದು ಮತ್ತೆ ಚಿತ್ತಾಪುರ ಪಥಸಂಚಲನ ಕುರಿತ ಅರ್ಜಿ ವಿಚಾರಣೆ ನಡೆದಿದೆ. ೮ ವೇಳೆ ಅರ್ಜಿದಾರರಿಗೆ ಅನುಮತಿ ಮಂಜೂರು ಮಾಡಲು ಸರ್ಕಾರಕ್ಕೆ ನವೆಂಬರ್...

Read moreDetails

ಸಿಬಿಎಸ್‌ಇ 2025: 10ನೇ ಮತ್ತು 12ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

January 12, 2025

ಹಿರಿಯ ಸಾಹಿತಿ ನಾಡೋಜಾ ನಾ. ಡಿಸೋಜಾ ನಿಧನ..

January 6, 2025

ಅಭಿಮಾನಿಗಳ ಹಾಗೂ ಚಿತ್ರತಂಡದವರ ಗೆಲುವಿನ ನಗುವನ್ನು ನೋಡಿ ನಾನು ಸಂಭ್ರಮಿಸುತ್ತಿದ್ದೇನೆ .

December 31, 2024

Central Govt: ಕೇಂದ್ರ ಸರ್ಕಾರದಿಂದ ರೈತರಿಗೆ ಸಂತಸದ ಸುದ್ದಿ.. ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಣೆ..!!

December 6, 2024
Next Post
ರಾಜ್ಯದ ಯುವ ರಂಗಕಲಾವಿದರಿಗೆ ಸೂಕ್ತ ಆರ್ಥಿಕ ನೆರವು ನೀಡಿ – ಸರ್ಕಾರಕ್ಕೆ ಪತ್ರ ಬರೆದ ಯೂತ್ ಆರ್ಟಿಸ್ಟ್ ಗಿಲ್ಡ್

ರಾಜ್ಯದ ಯುವ ರಂಗಕಲಾವಿದರಿಗೆ ಸೂಕ್ತ ಆರ್ಥಿಕ ನೆರವು ನೀಡಿ - ಸರ್ಕಾರಕ್ಕೆ ಪತ್ರ ಬರೆದ ಯೂತ್ ಆರ್ಟಿಸ್ಟ್ ಗಿಲ್ಡ್

Please login to join discussion

Recent News

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
Top Story

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
November 18, 2025
Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
Top Story

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

by ಪ್ರತಿಧ್ವನಿ
November 18, 2025
Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada