2024ರ ಲೋಕಸಭಾ ಚುನಾವಣೆಯ ದೃಷ್ಟಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜಸ್ಥಾನದ ಉದಯಪುರದಲ್ಲಿ ಮೂರು ದಿನಗಳ ಕಾಲ ಕಾಂಗ್ರೆಸ್ ಚಿಂತನ ಶಿಬಿರ ನಡೆಯಲಿದೆ. ಈ ಹಿನ್ನೆಲೆ ಶಿಬಿರದಲ್ಲಿ ಭಾಗಿಯಾಗಲು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ಮುಖಂಡರು ತೆರಳಿದ್ದಾರೆ.

ಒಟ್ಟು ಮೂರು ದಿನಗಳ ಕಾಲ ಶಿಬಿರ ನಡೆಯಲಿದ್ದು, ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಕ್ರಿಯಾತ್ಮಕ ನಿರ್ಧಾರಗಳನ್ನು ಕಾರ್ಯಗತಗೊಳಿಸುವ ಮೂಲಕ ಪಕ್ಷವನ್ನು ಮತ್ತೆ ಪುನಶ್ಚೇತನಗೊಳಿಸುವುದು ಈ ಚಿಂತನ ಶಿಬಿರದ ಉದ್ದೇಶವಾಗಿದೆ. ಸದ್ಯ ದೇಶದಲ್ಲಿ ಕೇವಲ ಎರಡು ಕಡೆಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇದೆ. ಈ ನಿಟ್ಟಿನಲ್ಲಿ ಈ ಶಿಬಿರ ಮಹತ್ವ ಪಡೆದುಕೊಂಡಿದೆ.






