
‘ಜೈಲೂಟ ಬೇಡ.. ಮನೆಯೂಟಕ್ಕೆ ಅವಕಾಶ ಕೊಡಿ’ ಎಂದು ಹೈಕೋರ್ಟ್ಗೆ ರಿಟ್ ಅರ್ಜಿ ಹಾಕಿದ್ದ ದರ್ಶನ್ ಆ ಬಳಿಕ ಹೈಕೋರ್ಟ್ ಸೂಚನೆಯಂತೆ ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಇದೀಗ ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ಅರ್ಜಿ ವಜಾ ಆದ ಬಳಿಕ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅದಕ್ಕೂ ಮೊದಲು ಹೈಕೋರ್ಟ್ನಲ್ಲಿದ್ದ ರಿಟ್ ಅರ್ಜಿಯನ್ನು ವಾಪಸ್ ಪಡೆದಿದ್ದರು. ಇದೀಗ ದರ್ಶನ್, ಬರೆದಿದ್ದ ಮೂರು ಪತ್ರಗಳು ಬಯಲಾಗಿವೆ. ಮನೆಯೂಟಕ್ಕಾಗಿ ದರ್ಶನ್ ನೇರ ಮನವಿ ಮಾಡಿದ್ದರು ಎನ್ನುವುದು ಬಯಲಾಗಿದೆ.

ಜೂನ್ 8ರಂದು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ನಡೆದ ಬಳಿಕ ಮೈಸೂರಿನಲ್ಲಿ ಜೂನ್ 11ರಂದು ದರ್ಶನ್ ಬಂಧನ ಮಾಡಲಾಗಿತ್ತು. ವಿಚಾರಣೆ ಬಳಿಕ ಜೂನ್ 22ರಂದು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಈ ನಡುವೆ ಜೈಲಿನ ಊಟ ನನಗೆ ಒಗ್ಗುತ್ತಿಲ್ಲ. ಮನೆಯೂಟಕ್ಕೆ ಅವಕಾಶ ಮಾಡಿಕೊಡಿ ಎಂದು ದರ್ಶನ್ ಕೋರ್ಟ್ಗೆ ಮನವಿ ಮಾಡಿದ್ದರು. ಅದಕ್ಕೂ ಮೊದಲು ದರ್ಶನ್ ಮೂವರಿಗೆ ಪತ್ರ ಬರೆದಿರುವುದು ಗೊತ್ತಾಗಿದೆ. ಕಾರಾಗೃಹ ಮತ್ತು ಸೇವೆಗಳ DG, ಜೈಲಿನ ಮುಖ್ಯ ವೈದ್ಯಾಧಿಕಾರಿ ಹಾಗು 24ನೇ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರಿಗೆ ದರ್ಶನ್ ಪತ್ರ ಬರೆದು ಮನೆಯೂಟ ನೀಡುವಂತೆ ಮನವಿ ಮಾಡಿದ್ದಾರೆ.
ದರ್ಶನ್ ಮನೆಯೂಟಕ್ಕಾಗಿ ಮೂರು ಪತ್ರ ಬರೆದಿದ್ದು, ಜೈಲು ಅಧಿಕಾರಿ ಮೂಲಕ ಕಾರಾಗೃಹ ಮತ್ತು ಸೇವೆಗಳ DG, ಜೈಲಿನ ಮುಖ್ಯ ವೈದ್ಯಾಧಿಕಾರಿ ಹಾಗು 24ನೇ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರಿಗೆ ಪತ್ರದ ಮೂಲಕ ಮನವಿ ಮಾಡಿಕೊಳ್ಳಲಾಗಿದೆ. ಜೂನ್ 22ರಂದು ನಾನು ಕೇಂದ್ರ ಕಾರಾಗೃಹಕ್ಕೆ ಬಂದಿದ್ದು, ದಿನನಿತ್ಯ ಮನೆಯಲ್ಲಿ ವ್ಯಾಯಾಮ ಮಾಡುತ್ತಿದ್ದೆ, ಅದರ ಜೊತೆಗೆ ಪೌಷ್ಠಿಕಾಂಶ ಉಳ್ಳ ಆಹಾರ ಸೇವಿಸುತ್ತಿದ್ದೆ. ಆದರೆ ಕೇಂದ್ರ ಕಾರಾಗೃಹದಲ್ಲಿ ನನಗೆ ಬೇಕಾದ ಆಹಾರದ ಕೊರತೆ ಎದುರಾಗಿದ್ದು, ನನ್ನ ದೇಹದ ತೂಕದಲ್ಲಿ ಸುಮಾರು 10 ಕೆಜಿಯಷ್ಟು ಇಳಿದಿದೆ. ಆದ ಕಾರಣ ಮನೆಯೂಟಕ್ಕೆ ಅವಕಾಶ ಮಾಡಿಕೊಡಿ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಕಾರಾಗೃಹ ಮತ್ತು ಸೇವೆಗಳ DG ಅವರಿಗೆ ಬರೆದ ಪತ್ರದಂತೆಯೇ ಮತ್ತೊಂದು ಪತ್ರವನ್ನು 24ನೇ ಅಪರ ಮುಖ್ಯ ಮಹಾನಗರ ದಂಡಾಧಿಕಾರಿಗಳಿಗೂ ಬರೆದಿದ್ದಾರೆ. ಜೈಲಿನ ವೈದ್ಯಾಧಿಕಾರಿಗಳಿಗೂ ದರ್ಶನ್ ಪತ್ರ ಬರೆದಿದ್ದು, ಕಾರಾಗೃಹದಲ್ಲಿ ನೀಡುತ್ತಿರುವ ಆಹಾರ ಸೇವಿಸಿ, ನನ್ನ ಆರೋಗ್ಯ ಮತ್ತು ದೇಹದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಹೀಗಾಗಿ ಎಕ್ಸ್ಟ್ರಾ ಪ್ರೋಟಿನ್ ಡಯಟ್ಗೆ ಅವಕಾಶ ಕೊಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಆದರೆ ಕಾನೂನು ಪ್ರಕಾರ ಇದೆಲ್ಲಾ ಸಾಧ್ಯವಿಲ್ಲ ಅನ್ನೋ ಕಾರಣಕ್ಕೆ ಮನವಿಯನ್ನು ತಳ್ಳಿ ಹಾಕಲಾಗಿತ್ತು. ಆ ಬಳಿಕ ಹೈಕೋರ್ಟ್ ರಿಟ್ ಹಾಗು ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಇದೀಗ ಮತ್ತೆ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲಾಗಿದೆ. ಮನೆಯೂಟ ಸಿಗುತ್ತಾ ಇಲ್ವಾ ಅನ್ನೋದು ಇನ್ನಷ್ಟೇ ತಿಳಿಯಬೇಕಿದೆ.
ಕೃಷ್ಣಮಣಿ