• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಸೆಲ್ಫಿ ತೆಗೆದುಕೊಳ್ಳುವಾಗ ಗಂಗಾ ನದಿಗೆ ಬಿದ್ದು ಮೂವರು ಸಾವು

ಪ್ರತಿಧ್ವನಿ by ಪ್ರತಿಧ್ವನಿ
August 26, 2024
in Uncategorized
0
Share on WhatsAppShare on FacebookShare on Telegram

ವಾರಣಾಸಿ: ಸಾಮಾಜಿಕ ಜಾಲತಾಣಗಳಲ್ಲಿ ಸೆಲ್ಫಿಯ ಕ್ರೇಜ್ ಅನೇಕ ಅಪಘಾತಗಳಿಗೆ ಕಾರಣವಾಗಿದೆ.ಈ ಸೆಲ್ಫಿ ವ್ಯಾಮೋಹದಿಂದ ನಿನ್ನೆ ಮೂವರು ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ.ಉತ್ತರ ಪ್ರದೇಶದ ವಾರಣಾಸಿಯಲ್ಲಿ ಭಾನುವಾರ ಬೆಳಗ್ಗೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಮೂವರು ವಿದ್ಯಾರ್ಥಿಗಳು ಗಂಗಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಅಘಾತಕರ ಘಟನೆ ನಡೆದಿದೆ.ಗಂಗಾ ನದಿಯ ಘಾಟಿಯಲ್ಲಿ ವಿದ್ಯಾರ್ಥಿನಿಯೊಬ್ಬಳು ಮೊಬೈಲ್‌ನಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದಳು.ಆಗ ಆಕೆ ಕಾಲು ಜಾರಿ ನದಿಗೆ ಬಿದ್ದಳು ಬಾಲಕಿಯನ್ನು ರಕ್ಷಿಸಲು ಇಬ್ಬರು ಅಪ್ರಾಪ್ತರು ನದಿಗೆ ಹಾರಿದ್ದಾರೆ, ಆದರೆ ಮೂವರು ವಿದ್ಯಾರ್ಥಿಗಳು ನದಿಯಲ್ಲಿ ಮುಳುಗಿದ್ದಾರೆ.

ADVERTISEMENT

ಈ ಘಟನೆಯ ಬಳಿಕ ಶೋಧ ಕಾರ್ಯ ಆರಂಭಿಸಲಾಗಿದ್ದು, ಬಾಲಕಿಯ ಶವ ಪತ್ತೆಯಾಗಿದೆ. ಎನ್‌ಡಿಆರ್‌ಎಫ್ ಮತ್ತು ಜಲಸಂಪನ್ಮೂಲ ಪೊಲೀಸರು ಬಾಲಕಿ ಹಾಗೂ ಮತ್ತೊಬ್ಬ ಬಾಲಕನಿಗಾಗಿ ಹುಡುಕಾಟ ನಡೆಸಿ ಶವ ಪತ್ತೆ ಹಚ್ಚಿದ್ದಾರೆ. ಶನಿವಾರ (ಆಗಸ್ಟ್ 24) ಬೆಳಗಿನ ಜಾವ 1.30ರ ಸುಮಾರಿಗೆ ಗಂಗಾ ನದಿಯ ಘಾಟಿಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳನ್ನು ರಿಷಿ (21) ಮತ್ತು ಸೋನಾ ಸಿಂಗ್ (19) ಎಂದು ಗುರುತಿಸಲಾಗಿದ್ದು, ಫಿಸಿಯೋಥೆರಪಿ ವಿದ್ಯಾರ್ಥಿಗಳಾಗಿದ್ದು, ವಾರಣಾಸಿಯ ಪವಿತ್ರ ಘಾಟ್‌ಗಳಿಗೆ ಭೇಟಿ ನೀಡಲು ತೆರಳಿದ್ದರು.

ಈ ದುರಂತ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ನಂತರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ರಕ್ಷಣಾ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ತಜ್ಞ ಡೈವರ್‌ಗಳು ಶೋಧ ಕಾರ್ಯ ಆರಂಭಿಸಿದ್ದು, ಸುದೀರ್ಘ ಶೋಧ ಕಾರ್ಯಾಚರಣೆಯ ಮೂವರ ಮೃತ ದೇಹ ಪತ್ತೆಯಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ. ಮುಘಲ್‌ಸರಾಯ್‌ನಿಂದ ವಾರಣಾಸಿಯ ಸಮನೆ ಘಾಟ್‌ಗೆ ಮುಂಜಾನೆ 1.30 ರ ಸುಮಾರಿಗೆ ಮೂವರು ಹುಡುಗರು ಮತ್ತು ಮೂವರು ಹುಡುಗಿಯರು ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Tags: #police departmentMinistry of EnvironmentSlider
Previous Post

ದೆಹಲಿಯಲ್ಲಿ ಆಪ್‌ ತೊರೆದು ಬಿಜೆಪಿ ಸೇರಿದ ಐವರು ನಗರಪಾಲಿಕೆ ಸದಸ್ಯರು

Next Post

ಸುಳ್ಳು ಹೇಳಿ ಸಿಕ್ಕಿ ಬಿದ್ರಾ ಕಾಂಗ್ರೆಸ್‌ ಶಾಸಕ ಗಣಿಗ..?

Related Posts

ನೂತನ ನಾಯಕನಿಂದ ಬಾಂಗ್ಲಾದಲ್ಲಿ ಹೊಸ ರಾಜಕೀಯ ಶಕೆ ಆರಂಭ : ತಾರಿಕ್‌ ರೆಹಮಾನ್‌ಗೆ ಮೋದಿ ಶುಭಹಾರೈಕೆ
Top Story

ನೂತನ ನಾಯಕನಿಂದ ಬಾಂಗ್ಲಾದಲ್ಲಿ ಹೊಸ ರಾಜಕೀಯ ಶಕೆ ಆರಂಭ : ತಾರಿಕ್‌ ರೆಹಮಾನ್‌ಗೆ ಮೋದಿ ಶುಭಹಾರೈಕೆ

by ಪ್ರತಿಧ್ವನಿ
February 13, 2026
0

ನವದೆಹಲಿ  : ಬಾಂಗ್ಲಾ ದೇಶದ ನೂತನ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧವಾಗಿರುವ ತಾರಿಕ್‌ ರೆಹಮಾನ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಹಾರೈಸಿದ್ದಾರೆ. https://youtu.be/RGk2Tr-x8Io?si=HPPegrJ0MkDCTxgq ಹಲವು ವರ್ಷಗಳ...

Read moreDetails
ಭಾರತದ ಅತ್ಯಂತ ಶ್ರೀಮಂತ ಗಾಯಕಿ ಯಾರು?

ಭಾರತದ ಅತ್ಯಂತ ಶ್ರೀಮಂತ ಗಾಯಕಿ ಯಾರು?

February 8, 2026
ಕೈ ಪಾಳಯದಲ್ಲಿ ಸಂಚಲನ!: ದಲಿತ, ಲಿಂಗಾಯತ ನಾಯಕರ ರಹಸ್ಯ ಸಭೆಯಲ್ಲಿ ಚರ್ಚೆಯಾಗಿದ್ದೇನು..?

ಕೈ ಪಾಳಯದಲ್ಲಿ ಸಂಚಲನ!: ದಲಿತ, ಲಿಂಗಾಯತ ನಾಯಕರ ರಹಸ್ಯ ಸಭೆಯಲ್ಲಿ ಚರ್ಚೆಯಾಗಿದ್ದೇನು..?

February 6, 2026
ಮಹಾವೀರ ಜಯಂತಿಯಂದು ಬ್ಯಾಂಕ್ ರಜೆ ರದ್ದು: ಆರ್ ಬಿ ಐ ಮಹತ್ವದ ತೀರ್ಮಾನ 

ಮಹಾವೀರ ಜಯಂತಿಯಂದು ಬ್ಯಾಂಕ್ ರಜೆ ರದ್ದು: ಆರ್ ಬಿ ಐ ಮಹತ್ವದ ತೀರ್ಮಾನ 

February 4, 2026
ಮತ್ತೆ ಅಲರ್ಟ್ ಆಯ್ತಾ ಡಿಕೆ ಟೀಂ..? : ಸಿದ್ದರಾಮಯ್ಯ ಬಜೆಟ್‌ಗೂ ಅಡಚಣೆ..?

ಮತ್ತೆ ಅಲರ್ಟ್ ಆಯ್ತಾ ಡಿಕೆ ಟೀಂ..? : ಸಿದ್ದರಾಮಯ್ಯ ಬಜೆಟ್‌ಗೂ ಅಡಚಣೆ..?

February 4, 2026
Next Post

ಸುಳ್ಳು ಹೇಳಿ ಸಿಕ್ಕಿ ಬಿದ್ರಾ ಕಾಂಗ್ರೆಸ್‌ ಶಾಸಕ ಗಣಿಗ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada