ಬೆಂಗಳೂರು: ಮೂವರು ಯುವಕರು ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ.
![](https://pratidhvani.com/wp-content/uploads/2024/04/Kushalnagar-Train-Track-2.webp)
ಈ ಘಟನೆ ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಹತ್ತಿರ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು ಮೂಲದ ಶಶಿಕುಮಾರ್ (23) ಲೋಕೇಶ್ (25) ಹಾಗೂ ಮತ್ತೋರ್ವ ಯುವಕ ಸಾವನ್ನಪ್ಪಿರುವ ದುರ್ದೈವಿಗಳು. ಮೃತದೇಹಗಳನ್ನು ಕಂಡು ಸ್ಥಳೀಯ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.
![](https://pratidhvani.com/wp-content/uploads/2022/07/Death_Picture_suicide.jpg)
ಸ್ಥಳಕ್ಕೆ ರೈಲ್ವೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆದರೆ, ಮತ್ತೋರ್ವ ಯುವಕನ ಗುರುತು ಪತ್ತೆಯಾಗಿಲ್ಲ ಎನ್ಲನಾಗಿದೆ. ಮೂವರೂ ಯುವಕರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಕುರಿತು ತನಿಖೆ ನಡೆಯುತ್ತಿದೆ.